ರಾಜ್ಯ

ಸ್ಪೀಕರ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಖಾದರ್ ಗೆ ಒಲಿಯುತ್ತಾ ಸಭಾಧ್ಯಕ್ಷ ಸ್ಥಾನ?

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ರಾಷ್ಟ್ರೀಯ ಪ್ರಧಾನ್ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಖಾದರ್ ಅವರನ್ನು ಕರೆದು ಮಾತನಾಡಿದ್ದು ಅಲ್ಪಸಂಖ್ಯಾತರಿಗೆ ಪ್ರಮುಖ ಹುದ್ದೆ ನೀಡಬೇಕು ಎಂದು ರಾಹುಲ್ ಗಾಂಧಿ ತೀರ್ಮಾನಿಸಿದ್ದು ಸ್ಪೀಕರ್ ರಂತಹ ಪ್ರತಿಷ್ಠಿತ ಹಾಗು ಅತ್ಯಂತ ಜವಾಬ್ದಾರಿಯುತ ಹುದ್ದೆಗೆ ನೀವೇ ಸೂಕ್ತ ಎಂದು

ಸ್ಪೀಕರ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಖಾದರ್ ಗೆ ಒಲಿಯುತ್ತಾ ಸಭಾಧ್ಯಕ್ಷ ಸ್ಥಾನ? Read More »

ಬೆಂಗಳೂರು: ಮಳೆಗೆ ಕೊಚ್ಚಿ ಹೋದ ಚಿನ್ನ|2.5 ಕೋಟಿ ರೂಪಾಯಿ ನಷ್ಟ

ಸಮಗ್ರ ನ್ಯೂಸ್: ಮೇ.21ರಂದು ಸುರಿದ ಭಾರಿ ಮಳೆಗೆ ಚಿನ್ನಾಭರಣ ಅಂಗಡಿಗೆ ನೀರು ನುಗ್ಗಿ ಚಿನ್ನವನ್ನು ಕೊಚ್ವಿಕೊಂಡ ಹೋದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ನಿಹಾನ್ ಆಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದ್ದು, ಈ ವೇಳೆ ಮಳಿಗೆಯಲ್ಲಿದ್ದ ಅಪಾರ ಪ್ರಮಾಣದ ಚಿನ್ನಾಭರಣಗಳು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಈ ವೇಳೆ ಸಿಬ್ಬಂದಿ ಇದ್ದರಾದರೂ ಆಭರಣಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗದಂತೆ ತಡೆಯಲೆತ್ನಿಸಿದ್ದಾರೆ.ಆದರೂ ಸುಮಾರು 2.5 ಕೋಟಿ ನಷ್ಟ ಉಂಟಾಗಿರುವ ಬಗ್ಗೆ ಮಾಲೀಕರು ತಿಳಿಸಿದ್ದಾರೆ.

ಬೆಂಗಳೂರು: ಮಳೆಗೆ ಕೊಚ್ಚಿ ಹೋದ ಚಿನ್ನ|2.5 ಕೋಟಿ ರೂಪಾಯಿ ನಷ್ಟ Read More »

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಹೆಸರಲ್ಲಿ ನಕಲಿ ಪೋಸ್ಟರ್ ಹಂಚಿಕೆ| ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶದ ವಿರುದ್ದ ದೂರು

ಸಮಗ್ರ ನ್ಯೂಸ್: ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಮೇ 22 ರಂದು ಬೆಳ್ತಂಗಡಿ ನಗರ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದೂರು ದಾಖಲಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪದಾಧಿಕಾರಿಗಳು, ತಾಲೂಕು ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ದೂರು ಸ್ವೀಕರಿಸಿದ ಬೆಳ್ತಂಗಡಿ ಠಾಣಾ ಪೊಲೀಸರು ಕಾನೂನು ಕ್ರಮದ ಭರವಸೆ ನೀಡಿದ್ದಾರೆ.

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಹೆಸರಲ್ಲಿ ನಕಲಿ ಪೋಸ್ಟರ್ ಹಂಚಿಕೆ| ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶದ ವಿರುದ್ದ ದೂರು Read More »

ರಾ.ಸ್ವ.ಸೇ ಸಂಘದ ಹಿರಿಯ ಕೊಂಡಿ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಇನ್ನಿಲ್ಲ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಸದಾ ನಗುಮುಖ ಗಂಭೀರ ವ್ಯಕ್ತಿತ್ವ, ನೇರ ನಡೆ ನುಡಿಯವರಾಗಿದ್ದ ಕಾಂತಪ್ಪ ಶೆಟ್ಟಿಯವರು ಹೃದಯ ವೈಶಾಲ್ಯತೆಯುಳ್ಳವರಾಗಿದ್ದರು. ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ. ರಾ.ಸ್ವ.ಸೇ.ಸಂಘದಲ್ಲಿ ಮಾತ್ರವಲ್ಲ ಭಾರತೀಯ ಜನತಾಪಕ್ಷದಲ್ಲು ಗುರುತಿಸಿಕೊಂಡಿದ್ದ ಅವರು ಒಂದುಬಾರಿ ಪುದು ಜಿ.ಪಂ.ಚುನಾವಣೆಗೆ ಸ್ಪರ್ಧಿ ಸೋಲನ್ನನುಭವಿಸಿದ

ರಾ.ಸ್ವ.ಸೇ ಸಂಘದ ಹಿರಿಯ ಕೊಂಡಿ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಇನ್ನಿಲ್ಲ Read More »

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಮೇ 22, ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ನಡೆದಿದೆ. ಶೇಖಮಲೆಯ ಜಾರತ್ತಾರು ನಿವಾಸಿ ಆನಂದ ರವರ ಪುತ್ರ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಇಂದು ಮಧ್ಯಾಹ್ನ ಮನೆಯ ಪಕ್ಕದಲ್ಲಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಈತ ಪುತ್ತೂರಿನ ಜಿಡೆಕಲ್ಲು ಸರಕಾರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಕಾಲೇಜಿನ ಸಹಪಾಠಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಎಂದು ಅವನ ಸ್ನೇಹಿತರಿಂದ ತಿಳಿದು ಬಂದಿದೆ. ಹದಿನೆಂಟರ ಹರೆಯದ ರಿತೇಶ್

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಚಿಕ್ಕಮಗಳೂರು : ಕಾಲುವೆಯಲ್ಲಿ ಮುಳುಗಿ ಮೂವರ ಸಾವು

ಸಮಗ್ರ ನ್ಯೂಸ್: ಕಾಲುವೆಯಲ್ಲಿ ಮುಳುಗಿ ಮೂವರ ಸಾವನಪ್ಪಿದ ಘಟನೆ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪತಪ್ಪಿ ಕಾಲುವೆಯಲ್ಲಿ ಸಂಭವಿಸಿದೆ. ರವಿ (31), ಅನನ್ಯ (17), ಶಾಮವೇಣಿ (16) ಮೃತ ದುರ್ದೈವಿಗಳು.ರವಿ ಮೂಲತಃ ಲಕ್ಕವಳ್ಳಿ ನಿವಾಸಿ, ಅನನ್ಯ, ಶಾಮವೇಣಿ ರವಿಯ ಸಹೋದರಿಯರ ಮಕ್ಕಳು ಮತ್ತು ಅನನ್ಯ ಮೂಲತಃ ಶಿವಮೊಗ್ಗ, ಶಾಮವೇಣಿ ನಂಜನಗೂಡಿನವರಾಗಿದ್ದಾರೆ. ಇವರು ಸಂಬಂಧಿ ಮನೆ ಲಕ್ಕವಳ್ಳಿಗೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುವಾಗ ಆಯಾ ತಪ್ಪಿ ಬಿದ್ದು ಸಾವನಪ್ಪಿದ್ದಾರೆ. ಘಟನೆಯಾದಗ ಒಬ್ಬರ ರಕ್ಷಣೆಗೆ ಮತ್ತೊಬ್ಬರು ತೆರಳಿದಾಗ ಮೂವರು

ಚಿಕ್ಕಮಗಳೂರು : ಕಾಲುವೆಯಲ್ಲಿ ಮುಳುಗಿ ಮೂವರ ಸಾವು Read More »

ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಧಿವೇಶನಕ್ಕೆ ತೆರಳಿದ ಸುಳ್ಯ ಶಾಸಕಿ ಭಾಗೀರಥಿ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಭಾಗಿರಥಿ ಮುರುಳ್ಯ ಅವರು ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಧಿವೇಶನಕ್ಕೆ ತೆರಳಿದ ಪ್ರಸಂಗ ಇಂದು ನಡೆದಿದೆ. ಇಂದು ನೂತನ ಶಾಸಕರಿಗೆ ಮೊದಲ ಅಧಿವೇಶನ ಅಗಿದ್ದು ರಾಜ್ಯದ ಎಲ್ಲಾ ತಾಲೂಕುಗಳ ಶಾಸಕರು ಅಧಿವೇಶನಕ್ಕೆ ತೆರಳಿದ್ದಾರೆ. ಇದೇ ರೀತಿ ಸುಳ್ಯ ಶಾಸಕಿ ಮೊದಲ ಬಾರಿಗೆ ಅಧಿವೇಶನಕ್ಕೆ ತೆರಳುತ್ತಿರುವ ಕಾರಣ ಸರ್ಕಾರದ ಕೆಲಸ ದೇವರ ಕೆಲಸ ಎಂಬಂತೆ ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಗೆ ಭಾಗಿರಥಿ ಮುರುಳ್ಯ ಅವರು ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಮುಂದಕ್ಕೆ

ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಧಿವೇಶನಕ್ಕೆ ತೆರಳಿದ ಸುಳ್ಯ ಶಾಸಕಿ ಭಾಗೀರಥಿ Read More »

ಕಾಗವಾಡ:ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಅಪಘಾತವಾಗಿ ಕಾರು ನಜ್ಜುಗುಜ್ಜಾದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದ ಹೊರವಲಯದಲ್ಲಿರುವ ಬಿಡ್ಜ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜನರಿಗೆ ಗಂಭಿರ ಗಾಯಗಳಾಗಿದ್ದು ಎರಡು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರ ರಾಜ್ಯದ ಮಿರಜ್ ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸ್ ಮಹಾರಾಷ್ಟ್ರ ರಾಜ್ಯದ ಕೋಲ್ಲಾಪುರದಿಂದ ಇಳಕಲ್ ಕಡೆಗೆ ಸಂಚುರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ

ಕಾಗವಾಡ:ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ Read More »

ಆ ಕಹಿ ಘಟನೆಗೆ 13 ವರ್ಷ| ಜಗತ್ತನ್ನೇ ತಲ್ಲಣಗೊಳಿಸಿದ್ದ ಮಂಗಳೂರು ವಿಮಾನ ದುರಂತ

ಸಮಗ್ರ ಡಿಜಿಟಲ್ ಡೆಸ್ಕ್: ಜಗತ್ತನ್ನೇ ತಲ್ಲಣಗೊಳಿಸಿದ್ದ ಮಂಗಳೂರು ಏರ್‌ ಪೋರ್ಟ್‌ ನಲ್ಲಿ ನಡೆದ ವಿಮಾನ ದುರಂತಕ್ಕೆ ಇಂದಿಗೆ 13 ವರ್ಷ. 2010ರ ಮೇ 22ರಂದು ಈ ಭೀಕರ ದುರಂತ ಸಂಭವಿಸಿದ್ದು, ವಿಮಾನದಲ್ಲಿದ್ದ 158 ಮಂದಿ ಮೃತಪಟ್ಟು ಕೇವಲ 8 ಮಂದಿ ಮಾತ್ರ ಬದುಕಿ ಉಳಿದಿದ್ದರು. ದುರಂತದಲ್ಲಿ ಮೃತಪಟ್ಟವರಲ್ಲಿ ಅನೇಕರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ಸಂಸ್ಕಾರ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್ ನಿರ್ಮಿಸಲಾಗಿದೆ. ಮೇ 22ರಂದು ಬೆಳಗ್ಗೆ

ಆ ಕಹಿ ಘಟನೆಗೆ 13 ವರ್ಷ| ಜಗತ್ತನ್ನೇ ತಲ್ಲಣಗೊಳಿಸಿದ್ದ ಮಂಗಳೂರು ವಿಮಾನ ದುರಂತ Read More »

ಹೊಸದೊಂದು ಸಂಘಟನೆ ಕಟ್ಟಿದ ಅರುಣ್ ಕುಮಾರ್ ಪುತ್ತಿಲ| ಬಿಜೆಪಿಗೆ ಸೆಡ್ಡು ಹೊಡೆದು ಲೋಕಾರ್ಪಣೆಗೊಂಡ ‘ಪುತ್ತಿಲ ಪರಿವಾರ’

ಸಮಗ್ರ ನ್ಯೂಸ್: ಬಿಜೆಪಿಯಿಂದ ಬಂಡಾಯ ಎದ್ದು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮೂರನೇ ಸ್ಥಾನಕ್ಕೆ ಕಳುಹಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಇದೀಗ ಸಂಘ ಪರಿವಾರಕ್ಕೆ ಸಡ್ಡು ಹೊಡೆಯಲು ಮತ್ತೊಂದು ಸಂಘಟನೆ ರೂಪುಗೊಂಡಿದೆ. ಪುತ್ತಿಲ ಪರಿವಾರ ಹೆಸರಿನಲ್ಲಿ ಹೊಸ ಸಂಘಟನೆ ಇಂದು ಲೋಕಾರ್ಪಣೆಗೊಂಡಿದೆ. ಇಂದು ನಡೆದ ಪುತ್ತಿಲ ಬೆಂಬಲಿಗರ ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಪಾದಯಾತ್ರೆ ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಈ ಹೊಸ ಸಂಘಟನೆ ಹುಟ್ಟುಕೊಂಡಿದೆ.

ಹೊಸದೊಂದು ಸಂಘಟನೆ ಕಟ್ಟಿದ ಅರುಣ್ ಕುಮಾರ್ ಪುತ್ತಿಲ| ಬಿಜೆಪಿಗೆ ಸೆಡ್ಡು ಹೊಡೆದು ಲೋಕಾರ್ಪಣೆಗೊಂಡ ‘ಪುತ್ತಿಲ ಪರಿವಾರ’ Read More »