ರಾಜ್ಯ

Weather report| ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಹವಾಮಾನ ಇಲಾಖೆಯಿಂದ ಈ ಕುರಿತಾಗಿ ಮುನ್ಸೂಚನೆ ನೀಡಲಾಗಿದ್ದು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ರಾಮನಗರ, ವಿಜಯನಗರ, ಕೋಲಾರ, ಕೊಡಗು, ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸೋಮವಾರ ಗುಡುಗು ಸಹಿತ ಮಳೆಯಾಗುವ

Weather report| ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆ Read More »

ಇಂದಿನಿಂದ ಮೂರು ದಿನ‌ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ

ಸಮಗ್ರ ನ್ಯೂಸ್: ಇಂದಿನಿಂದ (ಮೇ.22ರಿಂದ 24) ಮೂರು ದಿನ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆ ದಿನ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್​ ಆಗಿ ಆಯ್ಕೆಯಾಗಿರುವ ಆರ್​.ವಿ ದೇಶಪಾಂಡೆಯವರು ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ. ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಿದ್ದು, ಈ ತಿಂಗಳು 23ರರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕು.

ಇಂದಿನಿಂದ ಮೂರು ದಿನ‌ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ Read More »

ವೈರಲ್ ಆಯ್ತು ಶಾಸಕಿ ನಯನಾ ಮೋಟಮ್ಮ ಫೋಟೋಸ್| ಅವಿವೇಕಿಗಳಿಗೆ ಉತ್ತರ ಎಂದ ನಯನಾ

ಸಮಗ್ರ ನ್ಯೂಸ್: ರಾಜಕಾರಣಿಗಳನ್ನು ಜನ ಇರುವ ಹಾಗೆಯೇ ನೋಡೋದಕ್ಕೆ ಇಷ್ಟಪಡುತ್ತಾರೆ. ಜನಸಾಮಾನ್ಯರ ಪಾಲಿಗೆ ಉತ್ತಮ ರಾಜಕಾರಣಿಯ ಗುಣಲಕ್ಷಣಗಳಿವು. ಆದರೆ ವಾಸ್ತವದಲ್ಲಿ ನೋಡುವುದಾದರೆ ರಾಜಕಾರಣಿಗಳು ಮನುಷ್ಯರಲ್ವಾ, ಅವ್ರಿಗೂ ಎಲ್ಲರಂತ ಹಲವು ಕನಸುಗಳಿರೋದಲ್ವಾ. ಹೊಸ ಸ್ಥಳಗಳನ್ನು ಸುತ್ತಾಡೋದು, ಟ್ರೆಂಡೀ ಡ್ರೆಸ್ ತರೋದು ಇದೆಲ್ಲಾ ಅವರಿಗೆ ನಿಷಿದ್ಧವಾಗಿಲ್ಲ. ಆದರೂ ರಾಜಕಾರಣಿಗಳು ಹೀಗೆಲ್ಲಾ ಮಾಡಿದರೆ ಯಾಕೆ ಅಪರಾಧಿಯಂತೆ ನೋಡಲಾಗುತ್ತದೆ. ಈ ಬಗ್ಗೆ ಚಿಕ್ಕಮಗಳೂರಿನ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿರುವ ನಯನ ಮೋಟಮ್ಮ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ನಯನಾ ಮೋಟಮ್ಮ ಅವರ

ವೈರಲ್ ಆಯ್ತು ಶಾಸಕಿ ನಯನಾ ಮೋಟಮ್ಮ ಫೋಟೋಸ್| ಅವಿವೇಕಿಗಳಿಗೆ ಉತ್ತರ ಎಂದ ನಯನಾ Read More »

ಝೀರೋ ಟ್ರಾಫಿಕ್, ಹಾರ ತುರಾಯಿಗೆ ಗುಡ್ ಬೈ ಹೇಳಿದ ಸಿಎಂ| ಸನ್ಮಾನದ ಬದಲು ಪುಸ್ತಕ ಕೊಡಿ ಎಂದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಸಿಎಂ ಸೇರಿದಂತೆ ಸರ್ಕಾರದ ಸಚಿವರು ಪ್ರಯಾಣಿಸುವಾಗ ವಾಹನ ದಟ್ಟಣೆಯಿಂದ ಆಗುವ ಕಿರಿಕಿರಿ ತಪ್ಪಿಸಲು ಝೀರೋ ಟ್ರಾಫಿಕ್ ಪಡೆಯುತ್ತಿದ್ದರು. ಆದರೆ,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಗೆ ಈ ಝೀರೋ ಟ್ರಾಫಿಕ್ ಬೇಡ. ಇದರಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರಿಗೆ ತಿಳಿಸಿದ್ದರು. ಈ ಕುರಿತು ಸ್ವತಃ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್

ಝೀರೋ ಟ್ರಾಫಿಕ್, ಹಾರ ತುರಾಯಿಗೆ ಗುಡ್ ಬೈ ಹೇಳಿದ ಸಿಎಂ| ಸನ್ಮಾನದ ಬದಲು ಪುಸ್ತಕ ಕೊಡಿ ಎಂದ ಸಿದ್ದರಾಮಯ್ಯ Read More »

ಅವರಿವರಂತೆ ಗ್ಯಾರಂಟಿ ಬಗ್ಗೆ ನಾನು ಟೀಕೆ ಮಾಡಲ್ಲ – ಯಡಿಯೂರಪ್ಪ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಗ್ಯಾರಂಟಿ ಜಾರಿ ಬಗ್ಗೆ ನನಗೆ ಗ್ಯಾರಂಟಿ ಇದೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಭರವಸೆಗಳು ನಮ್ಮ ಹಿನ್ನಡೆಗೆ ಬಹುಮುಖ್ಯ ಕಾರಣವಾಗಿದೆ. ಅವರು ಅದನ್ನು ಅನುಷ್ಠಾನಕ್ಕೆ ತರಲಿ. ಒಟ್ಟಾರೆಯಾಗಿ ಜನರಿಗೆ ಒಳ್ಳೆಯದಾಗಲಿ ಯಡಿಯೂರಪ್ಪ ಹೇಳಿದರು. ಕಾಂಗ್ರೆಸ್‌ನವರ ಗ್ಯಾರಂಟಿ ಯೋಜನೆಗಳ ಬಗ್ಗೆ ನಾನು ಅನಗತ್ಯವಾಗಿ ಟೀಕೆ ಮಾಡಲು ಹೋಗುವುದಿಲ್ಲ. ಬೇರೆಯವರು ಮಾತನಾಡಿದಂತೆ ನಾನು ಮಾತನಾಡಲ್ಲ ಎಂದು ಬಿ.ಎಸ್.‌ ಯಡಿಯೂರಪ್ಪ ಅವರು

ಅವರಿವರಂತೆ ಗ್ಯಾರಂಟಿ ಬಗ್ಗೆ ನಾನು ಟೀಕೆ ಮಾಡಲ್ಲ – ಯಡಿಯೂರಪ್ಪ Read More »

ಪ್ರಧಾನಿ ಮೋದಿ ಕಾಲಿಗೆರಗಿ ಸ್ವಾಗತಿಸಿದ ಪಪುವಾ ನ್ಯೂಗಿನಿಯಾದ ಪ್ರಧಾನಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮೂರು ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ಜಪಾನ್‌ನಲ್ಲಿ ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡ ಮಂದಿ ಇದೀಗ ಪಪುವಾ ನ್ಯೂಗಿನಿಯಾಗೆ ಬಂದಿಳಿದಿದ್ದಾರೆ. ಮೋದಿ ಆಗಮನದಿಂದ ಪಪುವಾ ನ್ಯೂಗಿನಿಯಾ ಪುಟ್ಟ ದೇಶ ಪುಳಕಿತಗೊಂಡಿದೆ. ಶಿಷ್ಟಾಚಾರ ಬದಿಗೊತ್ತಿ ಪ್ರಧಾನಿ ಮೋದಿಗೆ ಪಪುವಾ ನ್ಯೂಗಿನಿಯಾ ಭರ್ಜರಿ ಸ್ವಾಗತ ನೀಡಿದೆ. ವಿಮಾನದಿಂದ ಇಳಿದು ಬಂದ ಮೋದಿಯನ್ನು ಸ್ವಾಗತಿಸಿದ ಪಪುವಾ ಪ್ರಧಾನಿ ಜೇಮ್ಸ್ ಮರಾಪೆ, ಮೋದಿ ಕಾಲಿಗೆರಗಿದ ಘಟನೆ ನಡೆದಿದೆ. ಈ ವಿಡಿಯೋ ಭಾರಿ ವೈರಲ್ ಆಗಿದ್ದು, ಮೋದಿ ಜನಪ್ರೀಯತೆ ಹಾಗೂ ಮೋದಿ

ಪ್ರಧಾನಿ ಮೋದಿ ಕಾಲಿಗೆರಗಿ ಸ್ವಾಗತಿಸಿದ ಪಪುವಾ ನ್ಯೂಗಿನಿಯಾದ ಪ್ರಧಾನಿ Read More »

ಚಿಕ್ಕಮಗಳೂರು: ಮಲೆನಾಡಲ್ಲಿ ಧಾರಾಕಾರ ಆಲಿಕಲ್ಲು ಮಳೆ| ಧರೆಗುರುಳಿದ ಮರ, ಟ್ರಾಫಿಕ್ ಜಾಮ್

ಸಮಗ್ರ ನ್ಯೂಸ್: ಕಾದ ಕಾವಲಿಯಂತಾಗಿದ್ದ ಜಿಲ್ಲೆಯ ಮಲೆನಾಡು ಭಾಗಕ್ಕೆ ವರುಣದೇವ ಕೃಪೆ ತೋರಿದ್ದು, ಕಳೆದೊಂದು ಗಂಟೆಯಿಂದ ಮೂಡಿಗೆರೆ ತಾಲೂಕಿನ ಸುತ್ತಮುತ್ತ ಧಾರಾಕಾರವಾಗಿ ಆಲಿಕಲ್ಲು ಮಳೆ ಸುರಿಯುತ್ತಿತ್ತು ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.‌ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಬಾಳೂರು, ಹೊರಟ್ಟಿ, ಸಬ್ಬೇನಹಳ್ಳಿ ಸೇರಿದಂತೆ ಸುತ್ತಮುತ್ತ ಆಲಿಕಲ್ಲು ಸಮೇತ ಭಾರೀ ಮಳೆ ಸುರಿಯುತ್ತಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿದೆ. ಭಾರಿ ಮಳೆ-ಗಾಳಿಯಿಂದ ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ವಾಹನದಟ್ಟಣೆ ಕೂಡ

ಚಿಕ್ಕಮಗಳೂರು: ಮಲೆನಾಡಲ್ಲಿ ಧಾರಾಕಾರ ಆಲಿಕಲ್ಲು ಮಳೆ| ಧರೆಗುರುಳಿದ ಮರ, ಟ್ರಾಫಿಕ್ ಜಾಮ್ Read More »

ಚಿಕ್ಕಮಗಳೂರು : ಬೈಕ್ ಮೇಲೆ ಬಿದ್ದ ಮರ| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್:‌ ಬೈಕ್ ಮೇಲೆ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ಸಂಭವಿಸಿದೆ. ವೇಣುಗೋಪಾಲ್ (45) ಮೃತ ದುರ್ದೈವಿ. ಮೂಲತಃ ಉತ್ತರ ಕರ್ನಾಟಕದವರಾದ ಇವರು ಚಿಕ್ಕಹಳ್ಳ ಗ್ರಾಮದಲ್ಲಿ ಹೋಂ ಸ್ಟೇ ಜೊತೆಗೆ ಮೂಡಿಗೆರೆಯಲ್ಲಿ ಬಳೆ ಅಂಗಡಿ ನಡೆಸುತ್ತಿದ್ದರು. ಈ ಕಾರಣ ಇವರು ತನ್ನ ಹೋಂ ಸ್ಟೇಯಿಂದ ಮನೆಗೆ ತೆರಳುತ್ತಿದ್ದಾಗ ಹೋಂ ಸ್ಟೇಯ ತುಸು ದೂರದಲ್ಲಿ ಒಂದರ ಹಿಂದೆ ಒಂದರಂತೆ ಒಂದೇ ಕಾಲಕ್ಕೆ ಮೂರು ಮರಗಳು ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಚಿಕ್ಕಮಗಳೂರು : ಬೈಕ್ ಮೇಲೆ ಬಿದ್ದ ಮರ| ಸವಾರ ಸ್ಥಳದಲ್ಲೇ ಸಾವು Read More »

ಬೆಂಗಳೂರಿನಲ್ಲಿ ಮರಣ ಮಳೆ| ಮೃತ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ‌ ಘೋಷಣೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದರ ಇನ್ಫೋಸಿಸ್‌ ಉದ್ಯೋಗಿಯಾಗಿದ್ದ ಭಾನುರೇಖಾ ಎಂಬ ಮಹಿಳೆ ಭಾರೀ ಮಳೆಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಮೃತಪಟ್ಟ ಮಹಿಳೆಯ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ

ಬೆಂಗಳೂರಿನಲ್ಲಿ ಮರಣ ಮಳೆ| ಮೃತ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ‌ ಘೋಷಣೆ Read More »

ಬೆಂಗಳೂರು – ಚಿಕ್ಕಮಗಳೂರು ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ

ಸಮಗ್ರ ನ್ಯೂಸ್: ಪರಿಸರ ಸ್ನೇಹಿ ಸಾರಿಗೆ ಸೇವೆಗೆ ಆದ್ಯತೆ ನೀಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಹೊಸದಾಗಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ 6 ಇವಿ ಪವರ್‌ ಪ್ಲಸ್‌ ಎಂಬ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನು ಮೇ 19 ರಿಂದ ಆರಂಭಿಸಿದೆ. ಈ ಮೂಲಕ ಬೆಂಗಳೂರು- ಚಿಕ್ಕಮಗಳೂರು ಸಂಪರ್ಕದ ನಡುವೆ ಬರುವ ಹಾಸನ-ಬೇಲೂರು ಪ್ರಯಾಣಿಕರಿಗೂ ಸುಖಾಸೀನ ಎಲೆಕ್ಟ್ರಿಕ್‌ ಬಸ್‌ ಪ್ರಯಾಣದ ಅನುಕೂಲ ಸಿಕ್ಕಂತಾಗಿದೆ. ಬೆಂಗಳೂರಿನಿಂದ ನಿತ್ಯ ಬೆಳಿಗ್ಗೆ 5 ಗಂಟೆಯಿಂದ ಸಂಚಾರ ಆರಂಭವಾಗಲಿದ್ದು, ಬೆಳಿಗ್ಗೆ 6 ಗಂಟೆ, 8

ಬೆಂಗಳೂರು – ಚಿಕ್ಕಮಗಳೂರು ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ Read More »