ಉಡುಪಿ: ʻಮೆಸ್ಕಾಂನವರೇ ಕ್ಷಮಿಸಿ ನಮಗೆ ಕರೆಂಟ್ ಬಿಲ್ ಕೊಡ್ಬೇಡಿ ನಾವು ಕಟ್ಟಲ್ಲʼ ಮೀಟರ್ ಬೋರ್ಡಿನಲ್ಲಿ ಫಲಕ ಅಳವಡಿಕೆ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆ ಮಾಡಿತ್ತು. ಸದ್ಯ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ನಾವು ಕರೆಂಟ್ ಬಿಲ್ ಕಟ್ಟಲ್ಲವೆಂದು ಜನ ಪಟ್ಟು ಹಿಡಿದಿದ್ದಾರೆ. ಇದೇ ರೀತಿ ʻಮೆಸ್ಕಾಂನವರೇ ಕ್ಷಮೀಸಿ ನಮಗೆ ಕರೆಂಟ್ ಬಿಲ್ ಕೊಡ್ಬೇಡಿ ನಾವು ಕಟ್ಟಲ್ಲʼ ಎಂದು ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಎಂಬುವವರು ಮನೆಯಲ್ಲಿ ಬೋರ್ಡ್ ಅಳವಡಿಸಿದ್ದಾರೆ.










