ರಾಜ್ಯ

ಸಿಇಟಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬೆಳಿಗ್ಗೆ 11:30 ಕ್ಕೆ ಕೆಇಎ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ಫಲಿತಾಂಶದ ಲಿಂಕ್ ಗಳು ಮಧ್ಯಾಹ್ನ 2 ಗಂಟೆಯ ನಂತರ ಲೈವ್ ಆಗುತ್ತವೆ. https://cetonline.Karnataka.gov.in/ugcetrank2025/rank2025/checkresult.aspx & https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ಅಧಿಕೃತ ಜಾಲತಾಣ cetonline.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು.-ಕೆಸಿಇಟಿ ಫಲಿತಾಂಶ […]

ಸಿಇಟಿ ಫಲಿತಾಂಶ ಪ್ರಕಟ Read More »

ಕಾರ್ಕಳ: ಶಾಸಕ ಸುನಿಲ್ ಸಹೋದರ ನಿಧನ

ಸಮಗ್ರ ನ್ಯೂಸ್: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕಾರ್ಕಳ: ಶಾಸಕ ಸುನಿಲ್ ಸಹೋದರ ನಿಧನ Read More »

ಬೆಳಗ್ಗೆ ಮದುವೆ ಕ್ಯಾನ್ಸಲ್| ಸಂಜೆ ಪ್ರಿಯಕರನ ಕೈಹಿಡಿದ ವಧು

ಸಮಗ್ರ ನ್ಯೂಸ್: ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ ನಡೆಯಬೇಕಿದ್ದ ಮದುವೆಯೊಂದು ಕೊನೆ ಕ್ಷಣದಲ್ಲಿ ರದ್ದಾದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ, ಸಂಜೆಯ ವೇಳೆಗೆ ಆ ದಿನವೇ ಗಣೇಶನ ದೇವಸ್ಥಾನದಲ್ಲಿ ಪಲ್ಲವಿ ಎಂಬ ಯುವತಿ ತನ್ನ ಪ್ರಿಯಕರ ರಘುವಿನ ಜೊತೆ ಹಸೆಮಣೆ ಏರಿದ ಘಟನೆ ಎಲ್ಲರ ಗಮನ ಸೆಳೆಯಿತು. ಬೆಳಗ್ಗೆ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಪಲ್ಲವಿಯ ಮದುವೆ ಒಂದು ಯುವಕನ ಜೊತೆ ಆಗಬೇಕಿತ್ತು. ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಎಲ್ಲ ಸಿದ್ಧತೆಗಳು ನಡೆದಿದ್ದವು. ತಳಿರು ತೋರಣಗಳಿಂದ ಮಂಟಪವನ್ನು

ಬೆಳಗ್ಗೆ ಮದುವೆ ಕ್ಯಾನ್ಸಲ್| ಸಂಜೆ ಪ್ರಿಯಕರನ ಕೈಹಿಡಿದ ವಧು Read More »

ಮುಂದಿನ 24 ಗಂಟೆಗಳಲ್ಲಿ ಕೇರಳ ಪ್ರವೇಶಿಸಲಿರುವ ಮುಂಗಾರು| ಅವಧಿಗಿಂತ ಮೊದಲೇ ಮಾನ್ಸೂನ್ ಮಳೆ

ಸಮಗ್ರ ನ್ಯೂಸ್: ಈ ಬಾರಿ ಮುಂಗಾರು ಪ್ರವೇಶ ಮಾಮೂಲಿಗಿಂತ ಮೊದಲೇ ಆಗಲಿದೆ. ಮುಂದಿನ 24 ಗಂಟೆಯೊಳಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ 16 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಕೇರಳದಲ್ಲಿ ಅವಧಿಗಿಂತ ಮೊದಲೇ ಮಾನ್ಸೂನ್‌ ಪ್ರವೇಶಿಸಲಿದೆ. ಮಾನ್ಸೂನ್ ಆರಂಭಕ್ಕೆ ಎಲ್ಲಾ ಅನುಕೂಲಕರ ಪರಿಸ್ಥಿತಿಗಳು ರಾಜ್ಯದಲ್ಲಿ ಅಭಿವೃದ್ಧಿಗೊಂಡಿದ್ದು, ಕಳೆದ ಎರಡು ದಿನಗಳಿಂದ ಕಡಿಮೆ ಒತ್ತಡದ ಪ್ರದೇಶ ಮತ್ತು ಮುಂದುವರಿಯುತ್ತಿರುವ ಮಾನ್ಸೂನ್ ವ್ಯವಸ್ಥೆಯ ಸಂಯೋಜನೆಯಿಂದಾಗಿ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕೇರಳ ಪ್ರವೇಶಿಸಲಿರುವ ಮುಂಗಾರು| ಅವಧಿಗಿಂತ ಮೊದಲೇ ಮಾನ್ಸೂನ್ ಮಳೆ Read More »

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ ತಿದ್ದುಪಡಿ ಮಸೂದೆ ರಾಷ್ಟ್ರಪತಿ ಅಂಗಳಕ್ಕೆ

ಸಮಗ್ರ ನ್ಯೂಸ್: ಮುಜರಾಯಿ ಇಲಾಖೆಯ ವ್ಯಾಪ್ತಿಯ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಆದಾಯದಲ್ಲಿ ಒಂದು ಪಾಲನ್ನು ‘ಸಾಮಾನ್ಯ ಸಂಗ್ರಹಣಾ ನಿಧಿ’ಗೆ ವರ್ಗಾಯಿಸಲು ಅವಕಾಶ ಮಾಡಿಕೊಡುವ ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ’ಯನ್ನು ರಾಷ್ಟ್ರಪತಿಯ ಅಂಕಿತಕ್ಕೆ ಕಾಯ್ದಿರಿಸಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ವಾಪಸ್‌ ಕಳುಹಿಸಿದ್ದಾರೆ. ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ- 1997’ರ ತಿದ್ದುಪಡಿಗಾಗಿ ‌ಉಭಯ ಸದನಗಳ ಅನುಮೋದನೆ ಪಡೆಯಲಾಗಿತ್ತು. ಆದರೆ, ಕೆಲವು ಸ್ಪಷ್ಟೀಕರಣ ಕೇಳಿ ರಾಜ್ಯಪಾಲರು ವಾಪಸ್‌ ಕಳುಹಿಸಿದ್ದರು.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ ತಿದ್ದುಪಡಿ ಮಸೂದೆ ರಾಷ್ಟ್ರಪತಿ ಅಂಗಳಕ್ಕೆ Read More »

ರಾಜ್ಯದಲ್ಲಿ ಜನೌಷಧಿ ಕೇಂದ್ರಗಳು ಸಂಪೂರ್ಣ ಸ್ಥಗಿತಗೊಳ್ಳುತ್ತವೆಯೇ? ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗುತ್ತದೆ‌ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನ ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರವೇ ಉಚಿತವಾಗಿ ಔಷಧಿಗಳನ್ನು ನೀಡುವಾಗ, ಆಸ್ಪತ್ರೆಗಳಲ್ಲಿ ಔಷಧಿಗಳ ಮಾರಾಟ

ರಾಜ್ಯದಲ್ಲಿ ಜನೌಷಧಿ ಕೇಂದ್ರಗಳು ಸಂಪೂರ್ಣ ಸ್ಥಗಿತಗೊಳ್ಳುತ್ತವೆಯೇ? ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು? Read More »

ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು| ಕಣ್ಣೀರು ಹಾಕಿದ ವರ

ಸಮಗ್ರ ನ್ಯೂಸ್: ತಾಳಿ ಕಟ್ಟುವ ವೇಳೆ ವಧು ತಲೆ ಅಲ್ಲಾಡಿಸಿ ನನಗೆ ಈ ಮದುವೆ ಬೇಡ ಎಂದ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ತಾಳಿ ಕಟ್ಟೋ ಮುಹೂರ್ತಕ್ಕೂ ಮುನ್ನ ಯುವತಿಗೆ ಒಂದು ಫೋನ್ ಕರೆ ಬಂದಿದೆ. ಆಗ ವಧು ತಕ್ಷಣವೇ ನನಗೆ ಈ ಮದುವೆ ಬೇಡ ಎಂದು ವಧು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೆತ್ತವರು, ಸಂಬಂಧಿಕರು ಯಾರು ಏನೇ ಹೇಳಿದರು ಕೇಳದ ವಧು ರೂಂಗೆ ಹೋಗಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾರೆ.

ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು| ಕಣ್ಣೀರು ಹಾಕಿದ ವರ Read More »

ಮಡೆನೂರು ಮನು ವಿರುದ್ದ ಅತ್ಯಾಚಾರ ಆರೋಪ ಪ್ರಕರಣ| ಉಲ್ಟಾ ಹೊಡೆದ ಸಂತ್ರಸ್ತೆ

ಸಮಗ್ರ ನ್ಯೂಸ್: ತನ್ನ ಮೇಲೆ ಮಡೆನೂರು ಮನು ಅತ್ಯಾಚಾರವೆಸಗಿದ್ದಾನೆ, ಗರ್ಭಪಾತ ಮಾಡಿಸಿದ್ದಾನೆ ಎಂದೆಲ್ಲಾ ಪೊಲೀಸ್ ಠಾಣೆ ಮಟ್ಟಿಲೇರಿದ್ದ ಕಿರುತೆರೆ ನಟಿ ಈಗ ಉಲ್ಟಾ ಹೊಡೆದಿದ್ದಾಳೆ. ಇದೀಗ ನಟಿ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾಳೆ. ಮಡೆನೂರು ಮನು ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ, ಬಲವಂತದಿಂದ ತಾಳಿ ಕಟ್ಟಿದ್ದಾನೆ, ಎರಡು ಬಾರಿ ಗರ್ಭಪಾತ ಮಾಡಿಸಿದ್ದಾನೆ ಎಂದು ನಟಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಅದರಂತೆ ಪೊಲೀಸರು ಮಡೆನೂರು ಮನುವನ್ನು ವಶಕ್ಕೆ ಪಡೆದಿದ್ದರು. ಇಂದು ಮಡೆನೂರು ಅಭಿನಯದ ಚೊಚ್ಚಲ ಸಿನಿಮಾ

ಮಡೆನೂರು ಮನು ವಿರುದ್ದ ಅತ್ಯಾಚಾರ ಆರೋಪ ಪ್ರಕರಣ| ಉಲ್ಟಾ ಹೊಡೆದ ಸಂತ್ರಸ್ತೆ Read More »

ಸುಳ್ಯ ಜೇನು ವ್ಯವಸಾಯಗಾರರ ನೂತನ ಕಟ್ಟಡ, ಆಧುನಿಕ ಸಂಸ್ಕರಣಾ ಘಟಕ, ಜೇನು ಚಾಕಲೇಟ್ ಇದರ ಲೋಕಾರ್ಪಣೆ| ಜಿಲ್ಲೆಯ ಉತ್ಪನ್ನಗಳು ವಿಶ್ವವ್ಯಾಪಿಯಾಗಲಿ – ಶೋಭಾ ಕರಂದ್ಲಾಜೆ

ಸುಳ್ಯ: ‘ಸುಳ್ಯದ ಪರಿಸರದಲ್ಲಿ ಭಾರಿ ದೊಡ್ಡ ಉದ್ಯಮ ಇಲ್ಲ, ಸುಮಾರು 50 ಕೋಟಿಗೂ ಹೆಚ್ಚಿನ ಜನರಿಗೆ ನಮ್ಮ ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಸಿಗುತ್ತಿದೆ. ಮುಂದೆ ಕೃಷ್ಟಿ ನಂತರ ಭವಿಷ್ಯದ ಉದ್ಯಮವೆಂದರೆ ಅದು ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು. ಉತ್ತರ ಭಾಗದಲ್ಲಿ ವಿವಿಧ ರೀತಿಯ ಜೇನನ್ನು ಉತ್ಪಾದನೆ ಮಾಡುತ್ತಾರೆ ಹಾಗೂ ಅದು ವಿದೇಶಗಳಿಗೆ ರಫ್ತು ಆಗುತ್ತವೆ ಹಾಗೆಯೇ ಇಲ್ಲಿ ಉತ್ಪಾದನೆ ಆಗುವಂತಹ ಜೇನಿನ ಚಾಕಲೇಟ್ ವಿದೇಶಗಳಿಗೆ ರಫ್ತು ಆಗಬೇಕು. ಹಾಗೆಯೇ ದ.ಕ ಕನ್ನಡದಲ್ಲಿ ಒಂದು ಗುಣಮಟ್ಟದ ಫುಡ್ ಟೆಸ್ಟಿಂಗ್

ಸುಳ್ಯ ಜೇನು ವ್ಯವಸಾಯಗಾರರ ನೂತನ ಕಟ್ಟಡ, ಆಧುನಿಕ ಸಂಸ್ಕರಣಾ ಘಟಕ, ಜೇನು ಚಾಕಲೇಟ್ ಇದರ ಲೋಕಾರ್ಪಣೆ| ಜಿಲ್ಲೆಯ ಉತ್ಪನ್ನಗಳು ವಿಶ್ವವ್ಯಾಪಿಯಾಗಲಿ – ಶೋಭಾ ಕರಂದ್ಲಾಜೆ Read More »

ಮಾಸ್ಕೋದಲ್ಲಿ ಭಾರತದ ಸಂಸದರ ನಿಯೋಗ ಇಳಿಯುವ ವೇಳೆ‌‌ ಡ್ರೋನ್ ದಾಳಿ

ಸಮಗ್ರ ನ್ಯೂಸ್: ಸಂಸದೆ ಕನ್ನಿಮೋಳಿ ನೇತೃತ್ವದ ಭಾರತದ ಸಂಸದರ ನಿಯೋಗ ಏರ್​ಪೋರ್ಟ್​ನಲ್ಲಿ ಇಳಿಯುವಾಗ ಡ್ರೋನ್ ದಾಳಿ ಸಂಭವಿಸಿದೆ. ಆಪರೇಷನ್ ಸಿಂಧೂರ್‌ ಬಗ್ಗೆ ಇಡೀ ಜಗತ್ತಿಗೆ ಮಾಹಿತಿ ನೀಡಲು ಹಾಗೂ ಪಾಕ್​ ಬಣ್ಣ ಬಯಲು ಮಾಡಲು ಸಂಸದರ ನಿಯೋಗ ಹೊರಟಿದೆ. ಅದರಲ್ಲಿ ಈ ಒಂದು ನಿಯೋಗ ರಷ್ಯಾಗೆ ತೆರಳುತ್ತಿತ್ತು. ಭಾರತೀಯ ಸಂಸದರ ನಿಯೋಗವು ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ. ಈ ವಿಮಾನದಲ್ಲಿ ಡಿಎಂಕೆ ಸಂಸದೆ ಕನಿಮೋಳಿ ಇದ್ದರು. ಡ್ರೋನ್ ದಾಳಿಯಿಂದಾಗಿ, ಈ ವಿಮಾನವು

ಮಾಸ್ಕೋದಲ್ಲಿ ಭಾರತದ ಸಂಸದರ ನಿಯೋಗ ಇಳಿಯುವ ವೇಳೆ‌‌ ಡ್ರೋನ್ ದಾಳಿ Read More »