ರಾಜ್ಯ

ಅಬ್ಬಾ…! ಚುನಾವಣಾ ಅಕ್ರಮದಲ್ಲಿ ಕೋಟಿ ಕೋಟಿ ನಗ-ನಗದು ವಶಕ್ಕೆ ಪಡೆದ ಅಧಿಕಾರಿಗಳು| ಇಲ್ಲಿದೆ ಫುಲ್ ಡೀಟೈಲ್ಸ್…

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಯ ಸೋಮವಾರ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಈವರೆಗೆ ಚುನಾವಣಾ ಆಯೋಗ 375.60 ಕೋಟಿ ರೂ. ಮೌಲ್ಯದ ನಗದು, ಮದ್ಯ, ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆದಿದೆ. ಒಟ್ಟು 24.21 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆ, 83.66 ಕೋಟಿ ಮೌಲ್ಯದ ಒಟ್ಟು 22.27 ಲಕ್ಷ ಲೀಟರ್ ಮದ್ಯ, 23.66 ಕೋಟಿ ಮೌಲ್ಯದ 1,954 ಕೆಜಿ ಡ್ರಗ್ಸ್ ಹಾಗೂ 96.59 ಕೋಟಿ ಮೌಲ್ಯದ ಚಿನ್ನ, ಬೆಳ್ಳಿಯನ್ನು ಜಪ್ತಿ ಮಾಡಿದೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು

ಅಬ್ಬಾ…! ಚುನಾವಣಾ ಅಕ್ರಮದಲ್ಲಿ ಕೋಟಿ ಕೋಟಿ ನಗ-ನಗದು ವಶಕ್ಕೆ ಪಡೆದ ಅಧಿಕಾರಿಗಳು| ಇಲ್ಲಿದೆ ಫುಲ್ ಡೀಟೈಲ್ಸ್… Read More »

ಸೇತುವೆಯಿಂದ ಉರುಳಿದ ಬಸ್; 14 ಮಂದಿ‌ ಸಾವು

ಸಮಗ್ರ ನ್ಯೂಸ್: ಬಸ್ಸೊಂದು ಸೇತುವೆಯಿಂದ ಉರುಳಿಬಿದ್ದು 14 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ಹೇಳಿದ್ದಾರೆ. ಇಂದೋರ್ ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ.

ಸೇತುವೆಯಿಂದ ಉರುಳಿದ ಬಸ್; 14 ಮಂದಿ‌ ಸಾವು Read More »

Public holiday; ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆ| ನಾಳೆ ಸಾರ್ವತ್ರಿಕ ರಜೆ ಘೋಷಣೆ

ಸಮಗ್ರ ನ್ಯೂಸ್: ಮೇ. 10 ಬುಧವಾರದಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಂದು ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ- ಕಾಲೇಜುಗಳಿಗೆ, ಸಂಘ-ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ,

Public holiday; ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆ| ನಾಳೆ ಸಾರ್ವತ್ರಿಕ ರಜೆ ಘೋಷಣೆ Read More »

ವಿಧಾನಸಭಾ ಚುನಾವಣೆಗೆ ಹಿಂದೆಂದೂ ಕಾಣದ ಭದ್ರತೆ| ಸುಸೂತ್ರ ಮತದಾನಕ್ಕೆ ಬಿಗಿ ಕ್ರಮ

ಸಮಗ್ರ ನ್ಯೂಸ್: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ರಾಜ್ಯದೆಲ್ಲೆಡೆ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆ ಬಿಗಿ ಭದ್ರತೆ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ವಿಧಾನಸಭೆ ಚುನಾವಣೆ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ರಾಜ್ಯದಾದ್ಯಂತ ಒಟ್ಟು 1.60 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಭದ್ರತಾ ಕಾರ್ಯದಲ್ಲಿ 304 ಡಿವೈಎಸ್‌ಪಿ, 991 ಪೊಲೀಸ್ ಸಬ್ ಇನ್ಸ್‌ಪೆಕ್ಟರ್, 2610

ವಿಧಾನಸಭಾ ಚುನಾವಣೆಗೆ ಹಿಂದೆಂದೂ ಕಾಣದ ಭದ್ರತೆ| ಸುಸೂತ್ರ ಮತದಾನಕ್ಕೆ ಬಿಗಿ ಕ್ರಮ Read More »

ರಾಜ್ಯದಲ್ಲಿ ಮೋಚಾ ಚಂಡಮಾರುತ ಅಬ್ಬರ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ| ಇನ್ನೆರಡು ದಿನವೂ ಮುಂದುವರಿಯಲಿದೆ ವರ್ಷಧಾರೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಮತದಾನದ ಪ್ರಮಾಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ರಾಮನಗರ, ಚನ್ನಪಟ್ಟಣ, ಕೋಲಾರ, ದೊಡ್ಡಬಳ್ಳಾಪುರ ಸೇರಿದಂತೆ

ರಾಜ್ಯದಲ್ಲಿ ಮೋಚಾ ಚಂಡಮಾರುತ ಅಬ್ಬರ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ| ಇನ್ನೆರಡು ದಿನವೂ ಮುಂದುವರಿಯಲಿದೆ ವರ್ಷಧಾರೆ Read More »

ಐಎಎಸ್ ಅಧಿಕಾರಿ ಕೊಲೆ ಪ್ರಕರಣ; ಕೈದಿ ರಿಲೀಸ್ ಖಂಡಿಸಿ ಬಿಹಾರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಸಮಗ್ರ ನ್ಯೂಸ್: ದರೋಡೆಕೋರ, ರಾಜಕಾರಣಿ ಆನಂದ್ ಮೋಹನ್ ಅವರನ್ನು ಅವಧಿಗೂ ಮುನ್ನವೇ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು, ಸುಪ್ರೀಂ ಕೋರ್ಟ್ ಬಿಹಾರ ಸರ್ಕಾರಕ್ಕೆ ಮೇ 8ರಂದು ನೋಟಿಸ್ ಜಾರಿ ಮಾಡಿದೆ. ಸರಕಾರ ಎರಡು ವಾರಗಳಲ್ಲಿ ಉತ್ತರಿಸಬೇಕು ಎಂದು ನ್ಯಾಯಾಲಯಕ್ಕೆ ಎಚ್ಚರಿಕೆ ನೀಡಿದೆ. ಐಎಎಸ್ ಅಧಿಕಾರಿ ಜಿ ಕೃಷ್ಣಯ್ಯ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಆನಂದ್ ಮೋಹನ್‌ನನ್ನು ಬಿಹಾರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ ಕೃಷ್ಣಯ್ಯ ಪತ್ನಿ ಉಮಾ ಕೃಷ್ಣಯ್ಯ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ನಿತೀಶ್

ಐಎಎಸ್ ಅಧಿಕಾರಿ ಕೊಲೆ ಪ್ರಕರಣ; ಕೈದಿ ರಿಲೀಸ್ ಖಂಡಿಸಿ ಬಿಹಾರ ಸರ್ಕಾರಕ್ಕೆ ಸುಪ್ರೀಂ ನೋಟಿಸ್ Read More »

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ನಾಲ್ವರು ಹಿಂದೂ ಕಾರ್ಯಕರ್ತರ ಗಡಿಪಾರು

ಸಮಗ್ರ ನ್ಯೂಸ್: ಮೇ.10ರಂದು ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ನಾಲ್ಕು ಮಂದಿಯನ್ನು ಪುತ್ತೂರಿನಿಂದ ಗಡಿಪಾರು ಮಾಡಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತರಾಗಿರುವ ಬನ್ನೂರು ಮೂಲದ ಪ್ರಜ್ವಲ್, ಪ್ರತಾಪ್, ಜಗ್ಗ ಯಾನೆ ಅಚ್ಚು, ಅವಿನಾಶ್ ಅವರು ಗಡಿಪಾರು ಆಗಿದ್ದಾರೆ. ಈ ನಾಲ್ಕು ಮಂದಿ ಚುನಾವಣೆಯ ಸಂದರ್ಭ ಶಾಂತಿ ಭಂಗ ಮಾಡಬಹುದೆಂಬ ನಿಟ್ಟಿನಲ್ಲಿ ನಗರ ಠಾಣೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕೆಲವು ದಿನಗಳಿಂದ ಇವರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಇದೇ ಕಾರಣದಿಂದ

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ನಾಲ್ವರು ಹಿಂದೂ ಕಾರ್ಯಕರ್ತರ ಗಡಿಪಾರು Read More »

ಕಡಬ: ನದಿಯಲ್ಲಿ ಮುಳುಗಿ ಸಹೋದರಿಯರಿಬ್ಬರು ದುರ್ಮರಣ| ಇಬ್ಬರ ಶವವೂ ಪತ್ತೆ; ಶೋಕಸಾಗರದಲ್ಲಿ ಕುಟುಂಬ

ಸಮಗ್ರ ನ್ಯೂಸ್: ರಜೆ ಅವಧಿಯಲ್ಲಿ ಕಾರ್ಯಕ್ರಮಕ್ಕೆ ಸಂಬಂಧಿಗಳ ಮನೆಗೆ ಬಂದಿದ್ದ ಸಹೋದರಿಯಬ್ಬರು ನದಿಯಲ್ಲಿ ಮುಳುಗಿ‌ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಗ್ರಾಮದಲ್ಲಿ ನಡೆದಿದೆ. ಮೇ.8ರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಮೂಲತಃ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ ( 15 ) ಮತ್ತು ಅವಂತಿಕಾ ( 11 ) ಎಂಬ ಸಹೋದರಿಯರು ನೀರು ಪಾಲಾದ ದುರ್ದೈವಿಗಳು. ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ

ಕಡಬ: ನದಿಯಲ್ಲಿ ಮುಳುಗಿ ಸಹೋದರಿಯರಿಬ್ಬರು ದುರ್ಮರಣ| ಇಬ್ಬರ ಶವವೂ ಪತ್ತೆ; ಶೋಕಸಾಗರದಲ್ಲಿ ಕುಟುಂಬ Read More »

ಸುಳ್ಯ: ವೋಟರ್ಸ್ ಸ್ಲಿಪ್ ಜೊತೆ ಬಿಜೆಪಿ ಕರಪತ್ರ ಹಂಚಿದರಾ ಬಿಎಲ್ಒಗಳು? ಸಮಗ್ರ ತನಿಖೆಗೆ ಚುನಾವಣಾಧಿಕಾರಿ ಆದೇಶ

ಸಮಗ್ರ ನ್ಯೂಸ್: ವೋಟರ್ಸ್ ಸ್ಲಿಪ್ ಅನ್ನು ಮತದಾರರ ಮನೆಗೆ ತಲುಪಿಸುವ ವೇಳೆ ಬಿಜೆಪಿ ಪಕ್ಷದ ಪ್ರಚಾರದ ಕರಪತ್ರವನ್ನು ಕೂಡ ಜತೆಗೆ ವಿತರಿಸಿದ್ದಾರೆ ಎಂದು ಆರೋಪ‌ ಕೇಳಿಬಂದಿದ್ದು ಬಿಎಲ್‌ಒಗಳಿಬ್ಬರ ಮೇಲೆ ತನಿಖೆ ನಡೆಸಲು ಸುಳ್ಯ ಚುನಾವಣಾಧಿಕಾರಿಗಳು ಆದೇಶಿಸಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಜಾಲ್ಸೂರು ಗ್ರಾಮದ ಎರಡು ಬೂತ್ ಗಳಲ್ಲಿ ಬಿ.ಜೆ.ಪಿ.ಯ ಪ್ರಚಾರ ಸಾಮಾಗ್ರಿಯನ್ನು ವೋಟರ್ಸ್ ಸ್ಲಿಪ್ ನೊಂದಿಗೆ ಕೊಟ್ಟಿರುವುದಾಗಿ ಹೇಳಲಾಗಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾಧಿಕಾರಿಗಳು

ಸುಳ್ಯ: ವೋಟರ್ಸ್ ಸ್ಲಿಪ್ ಜೊತೆ ಬಿಜೆಪಿ ಕರಪತ್ರ ಹಂಚಿದರಾ ಬಿಎಲ್ಒಗಳು? ಸಮಗ್ರ ತನಿಖೆಗೆ ಚುನಾವಣಾಧಿಕಾರಿ ಆದೇಶ Read More »

ಕಡಬ: ಕುಮಾರಧಾರಾದಲ್ಲಿ ಮುಳುಗಿ ಬಾಲಕಿಯರಿಬ್ಬರು ನೀರುಪಾಲು| ಒಬ್ಬಳ ಶವ ಪತ್ತೆ

ಸಮಗ್ರ ನ್ಯೂಸ್: ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಬಾಲಕಿಯರು ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ಕೇನ್ಯ ಎಂಬಲ್ಲಿ ನಡೆದಿದೆ. ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಸಂಜೆ 4 ಗಂಟೆ ಸುಮಾರಿಗೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು ಕಾಣೆಯಾದವರ ಪೈಕಿ ಒರ್ವ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಸ್ಥಳಿಯರ ಸಹಕಾರದೊಂದಿಗೆ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಸತೀಶ್ ಅಮ್ಮಣ್ಣಾಯ

ಕಡಬ: ಕುಮಾರಧಾರಾದಲ್ಲಿ ಮುಳುಗಿ ಬಾಲಕಿಯರಿಬ್ಬರು ನೀರುಪಾಲು| ಒಬ್ಬಳ ಶವ ಪತ್ತೆ Read More »