ರಾಜ್ಯಕ್ಕೆ ಬ್ರಾಹ್ಮಣ ಮುಖ್ಯಮಂತ್ರಿ!? ಸಂಶಯ ಸೃಷ್ಟಿಸಿದ ಎಚ್ ಡಿ ಕೆ ಹೇಳಿಕೆ
ಸಮಗ್ರ ನ್ಯೂಸ್: ಬಿಜೆಪಿ ಯಾವುದೇ ಬೆಲೆ ತೆತ್ತಾದರೂ ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜನತಾದಳ ( ಜಾತ್ಯತೀತ ) ನಾಯಕ ಎಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಮೂಲಕ ತೆರೆಮರೆಗೆ ಸರಿದಿದ್ದ ಬ್ರಾಹ್ಮಣ ಮುಖ್ಯಮಂತ್ರಿ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಬಾದಾಮಿ ತಾಲೂಕಿನ ಚಿಕ್ಕಮುಚ್ಚಳಗುಡ್ಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಯಾವುದೇ ಕಾರಣಕ್ಕೂ ಬಿಜೆಪಿ ಲಿಂಗಾಯತರನ್ನು ಸಿಎಂ ಮಾಡಲ್ಲ. ಬಿಜೆಪಿಯೊಳಗೆ ಬ್ರಾಹ್ಮಣರನ್ನು ಸಿಎಂ ಮಾಡುವ ಕೆಲಸ ಸದ್ದಿಲ್ಲದೆ ನಡೆದಿದೆ ಎಂದು ಆರೋಪಿಸಿದರು.
ರಾಜ್ಯಕ್ಕೆ ಬ್ರಾಹ್ಮಣ ಮುಖ್ಯಮಂತ್ರಿ!? ಸಂಶಯ ಸೃಷ್ಟಿಸಿದ ಎಚ್ ಡಿ ಕೆ ಹೇಳಿಕೆ Read More »










