ರಾಜ್ಯ

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲಿ 60 ಮಂದಿ ಸ್ಪರ್ಧೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಮಪತ್ರ ಸಲ್ಲಿಸಿದ್ದ 72 ಜನರಲ್ಲಿ 12 ಜನರು ನಾಮಪತ್ರ ಹಿಂತೆಗೆದುಕೊಂಡುದರಿಂದ ಈಗ ಸ್ಪರ್ಧೆಯಲ್ಲಿ 60 ಮಂದಿ ಉಳಿದಿದ್ದಾರೆ. ಮಂಗಳೂರು ಉತ್ತರದಲ್ಲಿ 10, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮೂಡಬಿದಿರೆ, ಮಂಗಳೂರು ದಕ್ಷಿಣಗಳಲ್ಲಿ ತಲಾ 8, ಬಂಟ್ವಾಳ 6, ಮಂಗಳೂರು ಉಳ್ಳಾಲದಲ್ಲಿ 4 ಮಂದಿ ಉಳಿದಿದ್ದಾರೆ. ಮೇ.10 ರಂದು ಚುನಾವಣೆ ನಡೆಯಲಿದ್ದು, ಮೇ. 13ಕ್ಕೆ ಈ ಸ್ಪರ್ಧಾಳುಗಳ ಭವಿಷ್ಯ ತಿಳಿಯಲಿದೆ.

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲಿ 60 ಮಂದಿ ಸ್ಪರ್ಧೆ Read More »

ಬೆಳ್ತಂಗಡಿ: ಮಾಜಿ‌ ಶಾಸಕ,‌ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಬಳಿ ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಮನೆ ಮೇಲೆ‌ ಏ.24 ರಂದು ಬೆಳಗ್ಗೆ 6:30 ಕ್ಕೆ ಆದಾಯ‌ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದು, ಹಲವು ಸೊತ್ತು‌ ಹಾಗೂ ದಾಖಲೆಗಳು ವಶವಾಗಿವೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬಂಗಾಡಿ ಫಾರ್ಮ್ ಹೌಸ್ , ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಲಾಯಿಲ ಪ್ರಸನ್ನ ಎಜುಕೇಶನ್ ಟ್ರಸ್ಟ್ ಮೇಲೆ ಏಕಕಾಲದಲ್ಲಿ ಏ.24 ರ ಬೆಳಗ್ಗೆ 6:30 ಕ್ಕೆ ದಾಳಿ ಮಾಡಿದ್ದರು.

ಬೆಳ್ತಂಗಡಿ: ಮಾಜಿ‌ ಶಾಸಕ,‌ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರ ಬಳಿ ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಹವಾಮಾನ ವರದಿ| ಇನ್ನಾದರೂ ಬಂದೀತೇ ಮಳೆ? ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಸಮಗ್ರ ನ್ಯೂಸ್: ಬಿಸಿಲ ಬೇಗೆಗೆ ಕಾದು ಕೆಂಪಾಗಿರುವ ಇಳೆಗೆ ಮಳೆಯ ಸಿಂಚನವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇಂದಿನಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಾಗಲಕೋಟೆ, ಕಲಬುರ್ಗಿ, ಬೀದರ್, ಬೆಳಗಾವಿ, ರಾಯಚೂರು, ಕೊಪ್ಪಳ, ಯಾದಗಿರಿ, ಜಿಲ್ಲೆಗಳಲ್ಲಿ

ಹವಾಮಾನ ವರದಿ| ಇನ್ನಾದರೂ ಬಂದೀತೇ ಮಳೆ? ಹವಾಮಾನ ಇಲಾಖೆಯಿಂದ ಮುನ್ಸೂಚನೆ Read More »

ಸೀರೆಗಾಗಿ ಮಹಿಳೆಯರ ಜಡೆಜಗಳ| ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ನಾರೀಮಣಿಗಳ ಕಿತಾಪತಿ

ಸಮಗ್ರ ನ್ಯೂಸ್: ಸೀರೆಗಾಗಿ ಇಬ್ಬರು ಮಹಿಳೆಯರು ಜಗಳವಾಡುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ ಎನ್ನಲಾಗಿದೆ. ಟ್ವಿಟರ್ ಬಳಕೆದಾರರಾದ ಆರ್ ವೈದ್ಯ ಅವರು ಹಂಚಿಕೊಂಡ ವಿಡಿಯೋದಲ್ಲಿ, ಬೆಂಗಳೂರಿನ ಮಲ್ಲೇಶ್ವರಂನ ಮೈಸೂರು ಸಿಲ್ಕ್ಸ್‌ನಲ್ಲಿ ಶಾಪಿಂಗ್ ಮಾಡುವಾಗ ಇಬ್ಬರು ಮಹಿಳೆಯರು ಸೀರೆಗಾಗಿ ಜಗಳವಾಡುತ್ತಿರುವುದು ಕಂಡುಬಂದಿದೆ. ಮಹಿಳೆಯರು ಪರಸ್ಪರ ಹೊಡೆದುಕೊಳ್ಳಲು ಮತ್ತು ಪರಸ್ಪರರ ಕೂದಲನ್ನು ಎಳೆಯಲು ಪ್ರಾರಂಭಿಸಿದ್ದರಿಂದ ವಾದವು ಶೀಘ್ರದಲ್ಲೇ ಜಗಳಕ್ಕೆ ತಿರುಗಿತು. ಆದಾಗ್ಯೂ, ಇತರ ಗ್ರಾಹಕರು ಅವರ ಜಗಳವನ್ನು ನಿಲ್ಲಿಸಲು ಮುಂದಾಗಲಿಲ್ಲ. ಭದ್ರತಾ

ಸೀರೆಗಾಗಿ ಮಹಿಳೆಯರ ಜಡೆಜಗಳ| ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ನಾರೀಮಣಿಗಳ ಕಿತಾಪತಿ Read More »

ಸುರಕ್ಷಿತವಲ್ಲ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೈವೇ| ಪ್ರಯಾಣಿಕರ ಪ್ರಾಣಕ್ಕಿಲ್ಲ ಗ್ಯಾರಂಟಿ!!

ಸಮಗ್ರ ನ್ಯೂಸ್: ರಾಜ್ಯದ ಸುಸಜ್ಜಿತ ಹೆದ್ದಾರಿ ಎಂದು ಹೇಳುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಕನಿಷ್ಠ ಸುರಕ್ಷತಾ ವ್ಯವಸ್ಥೆಯನ್ನು ಅಳವಡಿಸಿಕೊಂಡಿಲ್ಲ. ಪರಿಣಾಮ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರ ಜೀವಕ್ಕೆ ಗ್ಯಾರಂಟಿಯೇ ಇಲ್ಲದಂತಾಗಿದೆ. ನೂತನ ಬೆಂಗಳೂರು-ಮೈಸೂರು ಹೆದ್ದಾರಿ ಪ್ರಯಾಣಕ್ಕೆ ಮುಕ್ತವಾದ ಬಳಿಕ ಅಪಘಾತಗಳು ಹೆಚ್ಚಾಗಿವೆ. ಮೊದಲ ಹಂತದ ಹೆದ್ದಾರಿ ಉದ್ಘಾಟನೆಗೊಂಡು ಟೋಲ್‌ ಶುಲ್ಕ ಸಂಗ್ರಹಿಸಲು ಆರಂಭಿಸಿದೆಯಾದರೂ, ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಪ್ರಯಾಣಿಕರಿಗೆ ದೊರೆಯಬೇಕಾದ ಕನಿಷ್ಠ ಸುರಕ್ಷತಾ ಸೌಲಭ್ಯಗಳು ಇಲ್ಲ ಎಂಬ ಸಂಗತಿ ಏಪ್ರಿಲ್‌ 22 ರಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತ

ಸುರಕ್ಷಿತವಲ್ಲ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೈವೇ| ಪ್ರಯಾಣಿಕರ ಪ್ರಾಣಕ್ಕಿಲ್ಲ ಗ್ಯಾರಂಟಿ!! Read More »

ಸುಳ್ಯ: ಕೊಲ್ಲಮೊಗ್ರದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ

ಸಮಗ್ರ ನ್ಯೂಸ್: ಕೊಲ್ಲಮೊಗ್ರ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಎ.24 ರಂದು ಸಂಭವಿಸಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ಶ್ರೀಮತಿ ವಿಮಲಾಕ್ಷಿ ದಂಪತಿಗಳ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ. ಎ.24 ರ ಬೆಳಿಗ್ಗೆ ಯತೀಶ್ ರವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದಿರುವುದು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಯತೀಶ್ ರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ ಪಟ್ಟಿರುವವುದಾಗಿ ತಿಳಿದು ಬಂದಿದೆ. ಅವಿವಾಹಿತರಾಗಿರುವ ಯತೀಶ್ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದು,

ಸುಳ್ಯ: ಕೊಲ್ಲಮೊಗ್ರದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ Read More »

ರಾಜ್ಯದ ಹಲವೆಡೆ ಲೋಕಾಯುಕ್ತ ಮಿಂಚಿನ ದಾಳಿ| ಹಲವು ಭ್ರಷ್ಟ ತಿಮಿಂಗಿಲಗಳು ಬಲೆಗೆ

ಸಮಗ್ರ ನ್ಯೂಸ್: ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೀದರ್, ಕೋಲಾರ, ಬಳ್ಳಾರಿ ಸೇರಿದಂತೆ ಕೆಲ ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲಾತಿಗಳ ಪರಿಶೀಲನೆ ಮುಂದುವರೆಸಿದ್ದಾರೆ. ಬೀದರ್ ಜಿಲ್ಲೆಯ 6 ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಮುಡಬಿಯ

ರಾಜ್ಯದ ಹಲವೆಡೆ ಲೋಕಾಯುಕ್ತ ಮಿಂಚಿನ ದಾಳಿ| ಹಲವು ಭ್ರಷ್ಟ ತಿಮಿಂಗಿಲಗಳು ಬಲೆಗೆ Read More »

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೋಂದಣಿ ಆರಂಭ

ಸಮಗ್ರ ನ್ಯೂಸ್: ಕರ್ನಾಟಕ ದ್ವಿತೀಯ ಪಿಯುಸಿ 2023 ರ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ದ್ವಿತೀಯ ಪಿಯುಸಿ ಸಪ್ಲಿಮೆಂಟರಿ (ಪೂರಕ) ಪರೀಕ್ಷೆಯ ನೋಂದಣಿ ಇಂದು kseab.karnataka.gov.in ನಲ್ಲಿ ಆರಂಭವಾಗಲಿದೆ. ಮಂಡಳಿಯು ಹೊರಡಿಸಿದ ಪತ್ರಿಕಾ ಹೇಳಿಕೆಯ ಪ್ರಕಾರ, ಫಲಿತಾಂಶಗಳ ಪ್ರಕಟಣೆಯ ದಿನಾಂಕದಿಂದ ನೋಂದಣಿ ಪ್ರಾರಂಭವಾಗುತ್ತದೆ ಮತ್ತು ದಂಡವಿಲ್ಲದೆ ಏಪ್ರಿಲ್ 26, 2023 ರವರೆಗೆ ಅರ್ಜಿ ಸಲ್ಲಿಸಬಹುದು. ದಂಡದೊಂದಿಗೆ ನೋಂದಣಿ ಪ್ರಕ್ರಿಯೆಯು ಏಪ್ರಿಲ್ 27 ರಂದು ಪ್ರಾರಂಭವಾಗುತ್ತದೆ ಮತ್ತು ಮೇ 2, 2023 ರಂದು ಮುಕ್ತಾಯಗೊಳ್ಳುತ್ತದೆ. ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಏಪ್ರಿಲ್

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೋಂದಣಿ ಆರಂಭ Read More »

‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ‘ಶೋಭಕ್ಕ ನಿಮ್ಮ ಪಕ್ಷದವರಂತೆ ನಾವು 40 ಪರ್ಸೆಂಟ್‌ ಕಮಿಷನ್‌ ಪಡೆದಿಲ್ಲ. ನಿಮ್ಮ ಕಮಿಷನ್‌ ಸರ್ಕಾರದ ಬಗ್ಗೆ ಬಸನಗೌಡ ಪಾಟೀಲ್‌ ಯತ್ನಾಳ್‌, ನೆಹರೂ ಓಲೇಕಾರ್‌, ಮಾಡಾಳ್‌ ವಿರೂಪಾಕ್ಷಪ್ಪ, ಎಚ್‌. ವಿಶ್ವನಾಥ್‌, ಗೂಳಿಹಟ್ಟಿ ಶೇಖರ್‌ ಅವರೇ ಸಾಕ್ಷಿ ನೀಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಟಿಕೆಟ್‌ ಅರ್ಜಿ ಜತೆಗೆ ಕಾಂಗ್ರೆಸ್‌ ಪಕ್ಷ 2 ಲಕ್ಷ ರೂ ಸ್ವೀಕರಿಸಿದೆ. ಹೀಗಾಗಿ ಚುನಾವಣಾ ಆಯೋಗವು 223 ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕಾರ ಮಾಡಬೇಕು ಎಂಬ ಕೇಂದ್ರ ಸಚಿವೆ

‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ Read More »

ಹೊತ್ತಿ ಉರಿಯಲಿದ್ದಾನೆ ಸೂರ್ಯ| ಆದಷ್ಟೂ ಮನೆಯೊಳಗೆ ಇರಲು ನಾಸಾ ಸೂಚನೆ

ಸಮಗ್ರ ನ್ಯೂಸ್: ಸೂರ್ಯ‌ ಮುಂದಿನ ಒಂದೆರಡು ದಿನಗಳಲ್ಲಿ ಇನ್ನಷ್ಟು ಪ್ರಖರಗೊಳ್ಳಲಿದ್ದು ಹೆಚ್ಚು ಬಿಸಿಲಿನ ತಾಪಮಾನ ಅಂತೆಯೇ ಬಿಸಿಗಾಳಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಬಾಹ್ಯಾಕಾಶ ಸಂಸ್ಥೆ ನಾಸಾ ಎಚ್ಚರಿಸಿದೆ. ಸೂರ್ಯನು 11 ವರ್ಷಗಳ ಆವರ್ತನೆಯ ಉತ್ತುಂಗ ಮಟ್ಟವನ್ನು ತಲುಪುವ ಸಮಯದಲ್ಲಿ ಇನ್ನಷ್ಟು ಪ್ರಖರಗೊಳ್ಳುತ್ತದೆ ಎಂದು ಸಂಸ್ಥೆ ತಿಳಿಸಿದೆ.‌‌ ಆದ್ದರಿಂದ ಮುಂದಿನ ಎರಡ್ಮೂರು ದಿ‌ನ ಮನೆಯಿಂದ ಹೊರಗೆ ಬರೋದನ್ನು ಆದಷ್ಟು ತಪ್ಪಿಸುವುದು ಒಳಿತು ಎಂದು ನಾಸಾ ತಿಳಿಸಿದೆ. ಸೌರ ಬಿರುಗಾಳಿಯ ಆರಂಭದ ಹೊಡೆತವು ಏಪ್ರಿಲ್ 24 ರಂದು ಭೂಮಿಯನ್ನು

ಹೊತ್ತಿ ಉರಿಯಲಿದ್ದಾನೆ ಸೂರ್ಯ| ಆದಷ್ಟೂ ಮನೆಯೊಳಗೆ ಇರಲು ನಾಸಾ ಸೂಚನೆ Read More »