ರಾಜ್ಯ

ಪಿಯುಸಿ ಫಲಿತಾಂಶ| ಕಲಾ ವಿಭಾಗದಲ್ಲಿ ಮಂಜುಶ್ರೀ ಕೆದಂಬಾಡಿ ದ.ಕ ಜಿಲ್ಲೆಗೆ ಪ್ರಥಮ

ಸಮಗ್ರ ನ್ಯೂಸ್: 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ವಂಶಸ್ಥರಾದ ಮಂಜುಶ್ರೀ ಕೆದಂಬಾಡಿ ಅವರು ಪಿಯು ಪರೀಕ್ಷೆಯಲ್ಲಿ 591 ಅಂಕಗಳನ್ನು ಪಡೆದು ದ.ಕ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಮಂಜುಶ್ರೀ ಕೆದಂಬಾಡಿ ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದ ತೀರ್ಥರಾಮ ಕೆದಂಬಾಡಿ ಮತ್ತು ಸಂಧ್ಯಾ ಕೆದಂಬಾಡಿ ದಂಪತಿಯ ಪುತ್ರಿ. ಕೆದಂಬಾಡಿ ರಾಮಯ್ಯಗೌಡರ ಐದನೇ ತಲೆಮಾರಿನ ಮಂಜುಶ್ರೀ ಆಗಿದ್ದು, ರಾಮಯ್ಯಗೌಡರು ಬ್ರಿಟಿಷರ ವಿರುದ್ಧ ನಾನಾ ತಂತ್ರಗಾರಿಕೆಯಿಂದ

ಪಿಯುಸಿ ಫಲಿತಾಂಶ| ಕಲಾ ವಿಭಾಗದಲ್ಲಿ ಮಂಜುಶ್ರೀ ಕೆದಂಬಾಡಿ ದ.ಕ ಜಿಲ್ಲೆಗೆ ಪ್ರಥಮ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ದ.ಕ ಪ್ರಥಮ; ಉಡುಪಿ ದ್ವಿತೀಯ

ಸಮಗ್ರ ನ್ಯೂಸ್: 2022-23ನೇ ಶೈಕ್ಷಣಿಕ ಸಾಲಿನ ಕರ್ನಾಟಕ ದ್ವಿತೀಯ ಪಿಯು ಫಲಿತಾಂಶವಾಗಿದ್ದು, ಕರಾವಳಿಯ ಉಭಯ ಜಿಲ್ಲೆಗಳು ಮೊದಲ ಸ್ಥಾನ ಪಡೆದುಕೊಂಡಿವೆ. ದ.ಕ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ದ್ವಿತೀಯ ಸ್ಥಾನಿಯಾಗಿದೆ. ಯಾದಗಿರಿ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ(ಶೇ.95) ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ದ.ಕ ಪ್ರಥಮ; ಉಡುಪಿ ದ್ವಿತೀಯ Read More »

ಅತ್ಯಾಚಾರ ಪ್ರಕರಣದ ಪ್ರಮುಖ ಸಾಕ್ಷಿ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ| ರಾಘವೇಶ್ವರ ಶ್ರೀ, ಕಲ್ಲಡ್ಕ ಭಟ್ ಮೇಲಿನ ಕೇಸು‌ ರದ್ದು

ಸಮಗ್ರ ನ್ಯೂಸ್: ಪುತ್ತೂರಿನ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ. ರಾಮಕಥಾ ಗಾಯಕಿ ಪ್ರೇಮಲತಾ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಂತ್ರಸ್ತೆ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹಿನ್ನೆಲೆ 2014ರ ಸೆ.1ರಂದು ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶಾಸ್ತ್ರಿ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಚಾರಣೆ ನಡೆಸಿದ್ದ

ಅತ್ಯಾಚಾರ ಪ್ರಕರಣದ ಪ್ರಮುಖ ಸಾಕ್ಷಿ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ| ರಾಘವೇಶ್ವರ ಶ್ರೀ, ಕಲ್ಲಡ್ಕ ಭಟ್ ಮೇಲಿನ ಕೇಸು‌ ರದ್ದು Read More »

Weather report| ಉತ್ತರ ಮತ್ತು ದ. ಒಳನಾಡಿನ ಹಲವೆಡೆ ಹಗುರ ಮಳೆ ಸಂಭವ| ಕರಾವಳಿಯಲ್ಲಿ ಉಷ್ಣಾಂಶ ಏರಿಕೆ ಮುನ್ಸೂಚನೆ

ಸಮಗ್ರ ನ್ಯೂಸ್: ಬೆಂಗಳೂರು, ಮಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಅಥವಾ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ‌ಇಲಾಖೆ ನೀಡಿದೆ. ಇಂದು ಶುಕ್ರವಾರ ರಾಜ್ಯದ ಕೆಲವು ಕಡೆಗಳಲ್ಲಿ ಒಣಹವೆ, ಪ್ರಖರ ಬಿಸಿಲು ಮುಂದುವರೆಯಲಿದೆ. ಗುರುವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕೆಲವು ಕಡೆ ಚುನಾವಣಾ ಸಮಾವೇಶಗಳಲ್ಲಿ ಅನಿರೀಕ್ಷಿತ ಮಳೆಯು ಬಿಸಿಲಲ್ಲಿ ಬೆಂದ ಕಾರ್ಯಕರ್ತರನ್ನು ತಂಪಾಗಿಸಿದೆ. ಬೆಳಗಾವಿಯಲ್ಲಿ ಗಾಳಿಸಹಿತ ಮತ್ತು ಗದಗದಲ್ಲಿ ಗುಡುಗು

Weather report| ಉತ್ತರ ಮತ್ತು ದ. ಒಳನಾಡಿನ ಹಲವೆಡೆ ಹಗುರ ಮಳೆ ಸಂಭವ| ಕರಾವಳಿಯಲ್ಲಿ ಉಷ್ಣಾಂಶ ಏರಿಕೆ ಮುನ್ಸೂಚನೆ Read More »

ವಿಧಾನಸಭಾ ಚುನಾವಣೆ| 3632 ಅಭ್ಯರ್ಥಿಗಳಿಂದ ಉಮೇದುವಾರಿಕೆ| ಇಂದು ನಾಮಪತ್ರ ಪರಿಶೀಲನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಂದು(ಎ.21) ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಬಿಜೆಪಿಯಿಂದ 224 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 75 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 68 ಮಂದಿ ಲಿಂಗಾಯಿತರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, 134 ಪದವೀಧರರು, 37 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ. ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 53 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 53 ಒಕ್ಕಲಿಗರಿಗೆ, 51 ಮಂದಿ ಲಿಂಗಾಯಿತರಿಗೆ, 14 ಮುಸ್ಲಿಮರಿಗೆ

ವಿಧಾನಸಭಾ ಚುನಾವಣೆ| 3632 ಅಭ್ಯರ್ಥಿಗಳಿಂದ ಉಮೇದುವಾರಿಕೆ| ಇಂದು ನಾಮಪತ್ರ ಪರಿಶೀಲನೆ Read More »

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಬಿಸಿಯ ನಡುವೆ ವಿದ್ಯಾರ್ಥಿಗಳ ಭವ್ಯ ಭವಿಷ್ಯದ ಮಹತ್ತರ ಘಟ್ಟ ಪಿಯುಸಿ ಫಲಿತಾಂಶ ಇವತ್ತು ಪ್ರಕಟ ಆಗುತ್ತಿದೆ. 11 ಗಂಟೆಗೆ ವೆಬ್​ಸೈಟ್​ನ ಪರದೆ ಮೇಲೆ ಭವಿಷ್ಯ ಕಾಣಲಿದೆ. ಪರೀಕ್ಷೆ ಬರೆದ 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಫಲಿತಾಂಶ ಬೆಳಗ್ಗೆ 11 ಗಂಟೆಗೆ ವೆಬ್​ಸೈಟ್​ನಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಬೆಳಗ್ಗೆ 10 ಗಂಟೆಗೆ ಕರ್ನಾಟಕ‌ ಶಾಲಾ ಪರೀಕ್ಷೆ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಉಡುಪಿ: ಮಾನಹಾನಿಕರ ವರದಿ‌ ಪ್ರಕರಣ| ಬಿಟಿವಿ ಸುದ್ದಿವಾಹಿನಿ ಎಂಡಿ ಹಾಗೂ ಇಬ್ಬರು ಸಿಬ್ಬಂದಿಗೆ ಜೈಲು

ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ ಕಿಶನ್ ಹೆಗ್ಡೆ ಕೊಳ್ಗೆಬೈಲ್‌ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸಿದ ಪ್ರಕರಣದಲ್ಲಿ ಬಿಟಿವಿ ಎಂಡಿ ಜಿ.ಎಂ.ಕುಮಾರ್, ವರದಿಗಾರ ಭರತ್ ರಾಜ್, ನಿರೂಪಕ ಶೇಷ ಕೃಷ್ಣಗೆ ಉಡುಪಿ ಜಿಲ್ಲಾ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಶನಿವಾರ 2 ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹ 10,000 ದಂಡ ವಿಧಿಸಿದೆ. ‘2017ರಲ್ಲಿ ಬಿಟಿವಿಯಲ್ಲಿ ಪ್ರಕಟವಾದ ಮಾನಹಾನಿಯಾಗುವಂತಹ ಸುಳ್ಳು ಸುದ್ದಿಯ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದೆ. 6 ವರ್ಷಗಳ ವಿಚಾರಣೆ

ಉಡುಪಿ: ಮಾನಹಾನಿಕರ ವರದಿ‌ ಪ್ರಕರಣ| ಬಿಟಿವಿ ಸುದ್ದಿವಾಹಿನಿ ಎಂಡಿ ಹಾಗೂ ಇಬ್ಬರು ಸಿಬ್ಬಂದಿಗೆ ಜೈಲು Read More »

ನೃತ್ಯ ‌ನಿರ್ದೇಶಕ‌ ರಾಜೇಶ್ ಮಾಸ್ಟರ್‌ ನಿಗೂಢ ಸಾವು

ಸಮಗ್ರ ನ್ಯೂಸ್: ನೃತ್ಯ ನಿರ್ದೇಶಕ ರಾಜೇಶ್ ಮಾಸ್ಟರ್ ನಿಗೂಢವಾಗಿ ಸಾವನ್ನಪ್ಪಿರುವ ಆಘಾತದ ಸುದ್ದಿ ಹೊರಬಿದ್ದಿದೆ. ಅವರ ಸಾವಿನ ಕಾರಣದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣಗಳಿಲ್ಲದಿದ್ದರೂ, ನಿಗೂಢ ಕಾರಣಕ್ಕಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹಲವಾರು ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ರಾಜೇಶ್ ಮಾಸ್ಟರ್ ಸಾವಿನ ಸುದ್ದಿ ಬಗ್ಗೆ ತಮ್ಮ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ಮಲಯಾಳಂ ಚಿತ್ರರಂಗದ ನಟಿ ದೇವಿ ಚಂದನಾ ಅವರು ಫೇಸ್‌ಬುಕ್‌ ನಲ್ಲಿ ರಾಜೇಶ್ ಮಾಸ್ಟರ್ ಅವರೊಂದಿಗಿನ ಕೆಲವು ಫೋಟೋಗಳನ್ನು ಹಂಚಿಕೊಂಡು ತಮ್ಮ ಆಘಾತವನ್ನು

ನೃತ್ಯ ‌ನಿರ್ದೇಶಕ‌ ರಾಜೇಶ್ ಮಾಸ್ಟರ್‌ ನಿಗೂಢ ಸಾವು Read More »

ಪಶ್ಚಿಮ ಘಟ್ಟದ ಮೇಲಿನ ದೌರ್ಜನ್ಯಕ್ಕೆ ಬತ್ತಿ ಹೋದಳೇ ನೇತ್ರಾವತಿ|ಜೀವನದಿ ಬರಡಾಗಲು ಕಾರಣವಾಯ್ತೇ ಎತ್ತಿನ ಹೊಳೆ?

ಸಮಗ್ರ ನ್ಯೂಸ್: ಸುಮಾರು 8 ತಿಂಗಳ ಹಿಂದೆ ಉಪ್ಪಿನಂಗಡಿಯಲ್ಲಿ ನದಿಯೊಂದು ಬೋರ್ಗರೆಯುತ್ತಿತ್ತು. ನಾಲ್ಕು ತಿಂಗಳ ಹಿಂದೆ ಹಾಗೋ ಹೀಗೋ ಹರಿಯುತ್ತಿತ್ತು. ಈಗ ಆ ನದಿ ಎಲ್ಲೆಂದು ಜನ ಹುಡುಕುತ್ತಿದ್ದಾರೆ!ಇದು ಉಪ್ಪಿನಂಗಡಿಯಲ್ಲಿ ಹರಿಯುವ ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿ ನಿರ್ಜೀವವಾಗಿರುವ ಬಗೆ!! ಹೌದು… ಕೋಲಾರ, ತುಮಕೂರು ಕಡೆಗೆ ಇದನ್ನು ತಿರುಗಿಸಿ ಜೀವ ಜಲ ಒದಗಿಸುತ್ತೇವೆಂದು ರಾಜಕಾರಣಿಗಳು ನಂಬಿಸಿರುವ ಅದೇ ನೇತ್ರಾವತಿ ನದಿಯಿದು! ಇನ್ನೆರಡು ತಿಂಗಳು ಕಳೆದರೆ ಮತ್ತ ಇಲ್ಲಿ ನದಿ ಭೋರ್ಗರೆಯುತ್ತದೆ. ಜನ ಇಂದಿನ ಪರಿಸ್ಥಿತಿಯನ್ನು ಮರೆತುಬಿಡುತ್ತಾರೆ. ಆ

ಪಶ್ಚಿಮ ಘಟ್ಟದ ಮೇಲಿನ ದೌರ್ಜನ್ಯಕ್ಕೆ ಬತ್ತಿ ಹೋದಳೇ ನೇತ್ರಾವತಿ|ಜೀವನದಿ ಬರಡಾಗಲು ಕಾರಣವಾಯ್ತೇ ಎತ್ತಿನ ಹೊಳೆ? Read More »

ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ಉಪನ್ಯಾಸಕ ಮನೋಜ್ ಕುಮಾರ್ ನೇಮಕ

ಸಮಗ್ರ ನ್ಯೂಸ್: ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಸಿದ್ಧಗಂಗಾ ಪಾಲಿಟೆಕ್ನಿಕ್​ನಲ್ಲಿ ಉಪನ್ಯಾಸಕನಾಗಿರುವ ಮನೋಜ್ ಕುಮಾರ್​ ಅವರನ್ನು ನೇಮಕ ಮಾಡಿ ಸಿದ್ದಲಿಂಗ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ. ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿ ನಿವಾಸಿ ಷಡಕ್ಷರಿ, ವಿರೂಪಾಕ್ಷಮ್ಮ ದಂಪತಿಯ ಪುತ್ರ. ತ್ರಿವಿಧ ದಾಸೋಹಿ ಮಠ ಎಂದು ವಿಶ್ವಖ್ಯಾತಿ ಪಡೆದಿರುವ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾದ ನಂತರ ಉತ್ತರಾಧಿಕಾರಿಯಾಗಿ ಸಿದ್ಧಲಿಂಗ ಸ್ವಾಮೀಜಿ ಆಡಳಿತ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ಈಗ ನಡೆದಿದೆ.

ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ಉಪನ್ಯಾಸಕ ಮನೋಜ್ ಕುಮಾರ್ ನೇಮಕ Read More »