ಮೂಡಿಗೆರೆ: ಸಮಾಜದೊಂದಿಗೆ ಉತ್ತಮ ಭಾಂದವ್ಯಕ್ಕೆ ಸಾಮಾಜಿಕ ಕಾರ್ಯಗಳು ವೇದಿಕೆಯಾಗಲಿ|ವಿಷು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣುಹಂಪಲು ವಿತರಣೆ|ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದಿಂದ ವಿತರಣೆ
Samagra news:ಸಮಾಜದೊಂದಿಗೆ ಉತ್ತಮ ಭಾಂದವ್ಯವನ್ನು ಇಟ್ಟುಕೊಳ್ಳಲು ಸಾಮಾಜಿಕ ಕಾರ್ಯಗಳು ವೇದಿಕೆಯಾಗಿವೆ ಎಂದು ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಅಧ್ಯಕ್ಷ ರಾಮಚಂದ್ರ ಹೇಳಿದರು. ಬಣಕಲ್ ಹಿರೇಬೈಲ್ನ ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದಿಂದ ವಿಷು ಹಬ್ಬದ ಪ್ರಯುಕ್ತ ಮೂಡಿಗೆರೆ ಎಂಜಿಎಂ ತಾಲ್ಲೂಕು ಆಸ್ಪತ್ರೆಯಲ್ಲಿ ನಡೆದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಹಾಗೂ ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಆರೋಗ್ಯಪೂರ್ಣ ಸ್ವಸ್ಥ ಹಾಗೂ ಸದೃಡ ಸಮುದಾಯವನ್ನಾಗಿ ರೂಪಿಸುವುದು ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಉದ್ದೇಶವಾಗಿದೆ. ಸಮುದಾಯದ ಸರ್ವಾಂಗೀಣ










