ರಾಜ್ಯ

ಉಮ್ರಾ ಯಾತ್ರಿಕರ ಬಸ್ ಅಪಘಾತ| 20 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಪವಿತ್ರ ಉಮ್ರಾಕ್ಕೆ ತೆರಳುತ್ತಿದ್ದ ಬಸ್ ವೊಂದು ಪಲ್ಟಿಯಾಗಿ ಭಾರತೀಯರು ಸೇರಿ 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ವರದಿಯಾಗಿದೆ. ಘಟನೆ ಅಸಿರ್‌ನ ಉತ್ತರದಲ್ಲಿರುವ ಅಕಾಬಾ ಷಾದ ಮಹಿಲ್ ಪಾಸ್ ನಲ್ಲಿ ನಡೆದಿದೆ‌. ಬಸ್ ಪಲ್ಟಿಯಾಗಿ ಏಕಾಏಕಿ ಬೆಂಕಿ ಹೊತ್ತಿ ಕೊಂಡ ಪರಿಣಾಮ 20ಕ್ಕೂ ಹೆಚ್ಚು ಮಂದಿ ಮೃತಪಟ್ಟು 19ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 16 ಮಂದಿಗೆ ಗಂಭೀರ ಸ್ವರೂಪದ ಗಾಯ ಮತ್ತು ಸುಟ್ಟಗಾಯಗಳಾಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಘಟನೆಯಿಂದ ಬಾಂಗ್ಲಾದೇಶ ಮತ್ತು

ಉಮ್ರಾ ಯಾತ್ರಿಕರ ಬಸ್ ಅಪಘಾತ| 20 ಮಂದಿ ದುರ್ಮರಣ Read More »

ವಿಪತ್ತು ನಿರ್ವಹಣೆಯಲ್ಲಿ ಸಕ್ರಿಯವಾಗಿದೆ ಶೌರ್ಯ ತಂಡ| ರಾಜ್ಯದಲ್ಲಿ 70 ತಂಡಗಳನ್ನು ನೀಡಿದ‌ SKDRDP

ಸಮಗ್ರ ನ್ಯೂಸ್: ರಾಜ್ಯದ ಬಹುತೇಕ ಕಡೆಗಳಲ್ಲಿ ಕಾಡ್ಗಿಚ್ಚು, ರಸ್ತೆ ಅಪಘಾತದಂತಹ ವಿಪತ್ತುಗಳು ಸಂಭವಿಸುತ್ತಿವೆ. ಕುಡಿಯುವ ನೀರಿನ ಸಮಸ್ಯೆ ಸಹ ಅಲ್ಲಲ್ಲಿ ಕಾಡುತ್ತಿವೆ. ಇಂತಹ ವಿಪತ್ತುಗಳನ್ನು ಎದುರಿಸಲು ಅಗ್ನಿಶಾಮಕ ಪೊಲೀಸ್ ಇಲಾಖೆಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಪ್ರಾಯೋಜಿತ ‘ಶೌರ್ಯ’ ವಿಪತ್ತು ನಿರ್ವಹಣಾ ತಂಡವು ಸಕ್ರೀಯವಾಗಿ ತೊಡಗಿಕೊಂಡಿದೆ. ವಿಪತ್ತುಗಳ ನಿರ್ವಹಣೆಗೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಮೂಡಿಬಂದ ಕಾರ್ಯಕ್ರಮವೇ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ.

ವಿಪತ್ತು ನಿರ್ವಹಣೆಯಲ್ಲಿ ಸಕ್ರಿಯವಾಗಿದೆ ಶೌರ್ಯ ತಂಡ| ರಾಜ್ಯದಲ್ಲಿ 70 ತಂಡಗಳನ್ನು ನೀಡಿದ‌ SKDRDP Read More »

ಲಂಚ ಪ್ರಕರಣ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್

ಸಮಗ್ರ ನ್ಯೂಸ್: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್‌ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದಾರೆ. ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್‌ 7 ರಂದು ಹೈಕೋರ್ಟ್‌ ಮಧ್ಯಂತರ ಜಾಮೀನು ಮಜೂರು ಮಾಡಿತ್ತು.

ಲಂಚ ಪ್ರಕರಣ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್ Read More »

ಒಳಮೀಸಲಾತಿ ವಿವಾದ| ಶಿವಮೊಗ್ಗದಲ್ಲಿ ಯಡಿಯೂರಪ್ಪ ಮನೆ ಮೇಲೆ ಕಲ್ಲು‌ ತೂರಾಟ; ಹಿಂಸಾಚಾರ

ಸಮಗ್ರ ನ್ಯೂಸ್: ಒಳಮೀಸಲಾತಿ ವರದಿ ಅಂಗೀಕಾರ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರದಿ ಅಂಗೀಕರಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಇಂದು ಶಿಕಾರಿಪುರದಲ್ಲಿ ಬಂಜಾರ ಸೇವಾ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮನೆ ಮತ್ತು ಕಚೇರಿ ಮೇಲೆ ಕಲ್ಲು, ಚಪ್ಪಲಿ ತೂರಿದ್ದಾರೆ. ನಡೆಸುತ್ತಿದ್ದ ಬಂಜಾರ ಸಮುದಾಯದ ನೂರಾರು ಜನರು ಶಿಕಾರಿಪುರ ಪಟ್ಟಣದಲ್ಲಿನ ಯಡಿಯೂರಪ್ಪ ಅವರ ಮನೆ ಕಡೆಗೆ ಬ್ಯಾರಕೇಡ್

ಒಳಮೀಸಲಾತಿ ವಿವಾದ| ಶಿವಮೊಗ್ಗದಲ್ಲಿ ಯಡಿಯೂರಪ್ಪ ಮನೆ ಮೇಲೆ ಕಲ್ಲು‌ ತೂರಾಟ; ಹಿಂಸಾಚಾರ Read More »

ಮತ್ತೆ ಏರಿಕೆಯ ಹಾದಿಯಲ್ಲಿ ಕೊರೊನಾ ಕೇಸ್| ರಾಜ್ಯದಲ್ಲಿ 209 ಮಂದಿಗೆ ಪಾಸಿಟಿವ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ನಿನ್ನೆ ಹೊಸದಾಗಿ 209 ಮಂದಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಂಕ್ರೀಯ ಸೋಂಕಿತರ ಸಂಖ್ಯೆ 792ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಭಾನುವಾರ 7021 ಮಂದಿಯನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರು ಗ್ರಾಮಾಂತರ 07, ಬೆಂಗಳೂರು ನಗರ 120, ಬೀದರ್ ಮತ್ತು ಚಿಕ್ಕಬಳ್ಳಾಪುರ 03, ದಕ್ಷಿಣ ಕನ್ನಡ, ದಾವಣಗೆರೆ ಮತ್ತು

ಮತ್ತೆ ಏರಿಕೆಯ ಹಾದಿಯಲ್ಲಿ ಕೊರೊನಾ ಕೇಸ್| ರಾಜ್ಯದಲ್ಲಿ 209 ಮಂದಿಗೆ ಪಾಸಿಟಿವ್ Read More »

Weather Report|ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ| ಇನ್ನೆರಡು ದಿನವೂ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಹಿಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂಮುಂದಿನ ಐದು ದಿನಗಳಲ್ಲಿ ಆಂಧ್ರ ಪ್ರದೇಶ, ತೆಲಂಗಾಣ,

Weather Report|ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ| ಇನ್ನೆರಡು ದಿನವೂ ಮಳೆ ಮುನ್ಸೂಚನೆ Read More »

ಮತ್ತೊಮ್ಮೆ ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಭದ್ರತಾ ‌ಲೋಪ| ಪ್ರಧಾನಿ ಕಡೆಗೆ ಓಡಿದ ವ್ಯಕ್ತಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆ ಮತ್ತೊಮ್ಮೆ ಉಲ್ಲಂಘನೆಯಾಗಿದ್ದು, ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಭದ್ರತಾ ಉಲ್ಲಂಘನೆಯಾಗಿದೆ. ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಪ್ರಧಾನಿಯ ಭದ್ರತೆಯಲ್ಲಿ ಕೋಲಾಹಲ ಉಂಟಾಗಿದೆ. ಪ್ರಧಾನಿ ಕಡೆಗೆ ಓಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಆ ವ್ಯಕ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕೂಡಲೇ, ಪೊಲೀಸರು ಅವನನ್ನ ಮಧ್ಯದಲ್ಲಿ ಹಿಡಿದರು. ಭದ್ರತಾ ಸಂಸ್ಥೆಗಳು ಆತನನ್ನ ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆಗೆ ಒಳಪಡಿಸಲಾಗಿದ್ದು, ಆತನ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಮತ್ತೊಮ್ಮೆ ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಭದ್ರತಾ ‌ಲೋಪ| ಪ್ರಧಾನಿ ಕಡೆಗೆ ಓಡಿದ ವ್ಯಕ್ತಿ Read More »

Weather report| ರಾಜ್ಯದ 9 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ| ಕರಾವಳಿ ಸೇರಿದಂತೆ ಅಲ್ಲಲ್ಲಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ವಿವಿಧೆಡೆ ಶನಿವಾರ ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೊ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಭಾನುವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಒಳನಾಡಿನ ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆ ಸಾಮಾನ್ಯಕ್ಕಿಂತ 2-3

Weather report| ರಾಜ್ಯದ 9 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ| ಕರಾವಳಿ ಸೇರಿದಂತೆ ಅಲ್ಲಲ್ಲಿ ಮಳೆ ಮುನ್ಸೂಚನೆ Read More »

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ| ದ.ಕ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಗೊತ್ತಾ?

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದ್ದು, ಉಳ್ಳಾಲದಿಂದ ಯು.ಟಿ ಖಾದರ್, ಬಂಟ್ವಾಳದಿಂದ ರಮಾನಾಥ ರೈ ಸ್ಪರ್ಧೆ ಖಚಿತವಾಗಿದೆ. ಇನ್ನು ಸುಳ್ಯದಿಂದ ಕೃಷ್ಣಪ್ಪ, ಮೂಡುಬಿದಿರೆಯಿಂದ ಮಿಥುನ್ ರೈ ಬೆಳ್ತಂಗಡಿ ಯಿಂದ ರಕ್ಷಿತ್ ಶಿವರಾಂಗೆ ಟಿಕೆಟ್ ನೀಡಲಾಗಿದೆ. ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ದ.ಕ ಜಿಲ್ಲೆಯ 7 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ| ದ.ಕ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಗೊತ್ತಾ? Read More »

Karnataka assembly election| ಕರ್ನಾಟಕ ವಿಧಾನಸಭಾ ಚುನಾವಣೆ| ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿಯಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ. ಕರ್ನಾಟಕ ವಿಧಾನಸಭೆ

Karnataka assembly election| ಕರ್ನಾಟಕ ವಿಧಾನಸಭಾ ಚುನಾವಣೆ| ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ Read More »