ರಾಜ್ಯ

ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆಮಾಡಿದ ತಮ್ಮ

ಸಮಗ್ರ ನ್ಯೂಸ್: ತಮ್ಮ ತನ್ನ ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ನಗರದಲ್ಲಿ ನಡೆದಿದೆ. ಪರಿಕ್ಷತ್ ತಾಜ್ (25) ಕೊಲೆಯಾದ ಯುವಕ. ನಿತ್ಯ ಕುಡಿದು ಹಣ ಕೊಡುವಂತೆ ಮನೆಯಲ್ಲಿ ಕಾಟ ಕೊಡುತ್ತಿದ್ದ. ಇದರಿಂದಅಣ್ಣನ ಕಿರುಕುಳ ತಾಳಲಾರದೆ ತಮ್ಮನೆ ಅಣ್ಣನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸುದ್ದಿ ತಿಳಿದ ಮಾನ್ವಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಭೀಮನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆಮಾಡಿದ ತಮ್ಮ Read More »

ಶಿಕ್ಷಕರನ್ನು ಸರ್, ಮೇಡಂ ಎಂದು ಸಂಬೋಧಿಸಬಾರದು – ಹೈಕೋರ್ಟ್

ಸಮಗ್ರ ನ್ಯೂಸ್: ವಿದ್ಯಾರ್ಥಿಗಳು ಇನ್ನು ಮುಂದೆ ಅಧ್ಯಾಪಕರನ್ನು ಸರ್, ಮೇಡಂ ಎಂದು ಸಂಬೋಧಿಸದೆ ಟೀಚರ್ ಎಂದು ಕರೆಯಲು ಸೂಚಿಸಬೇಕು ಎಂದು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಎಲ್ಲಾ ಶಾಲೆಗಳಿಗೆ ನಿರ್ಧೇಆನ ನೀಡಿದೆ. ಶಿಕ್ಷಕರನ್ನು ವಿದ್ಯಾರ್ಥಿಗಳು ಸರ್, ಮೇಡಂ ಎಂದು ಸಂಬೋಧಿಸದೆ ಟೀಚರ್ ಎಂದು ಕರೆಯಲು ಸೂಚಿಸಬೇಕು ಎಂದು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಎಲ್ಲಾ ಶಾಲೆಗಳಿಗೆ ನಿರ್ದೇಶನ ನೀಡಿದೆ. ಟೀಚರ್ ಪದದಲ್ಲಿ ಲಿಂಗ ತಟಸ್ಥವಾಗಿ ಇರುವುದರಿಂದ ಈ ಪದ ಸೂಕ್ತವಾಗುತ್ತದೆ. ಹೀಗಾಗಿ ವಿದ್ಯರ‍್ಥಿಗಳು ಶಿಕ್ಷಕರನ್ನು

ಶಿಕ್ಷಕರನ್ನು ಸರ್, ಮೇಡಂ ಎಂದು ಸಂಬೋಧಿಸಬಾರದು – ಹೈಕೋರ್ಟ್ Read More »

ವಿಶ್ವದ ಅತೀ ಉದ್ದದ ಕ್ರೂಸ್ ಗಂಗಾವಿಲಾಸ್ ಗೆ ಇಂದು ಚಾಲನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವೀಡಿಯೋ ಲಿಂಕ್ ಮೂಲಕ ವಾರಣಾಸಿಯಲ್ಲಿ ವಿಶ್ವದ ಅತೀ ಉದ್ದದ ಕ್ರೂಸ್ ಎಂವಿ ಗಂಗಾ ವಿಲಾಸ್‌ಗೆ ಚಾಲನೆ ನೀಡಲಿದ್ದಾರೆ ಮತ್ತು ಹಲವಾರು ಇತರ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಮಾರಂಭದಲ್ಲಿ ₹ 1000 ಕೋಟಿಗೂ ಹೆಚ್ಚು ಮೌಲ್ಯದ ಹಲವಾರು ಒಳನಾಡು ಜಲಮಾರ್ಗ ಯೋಜನೆಗಳಿಗೆ ಉದ್ಘಾಟನೆ ಮತ್ತು ಅಡಿಪಾಯ ಹಾಕಲಿದ್ದಾರೆ. ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ – ಸರ್ಬಾನಂದ ಸೋನೋವಾಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,

ವಿಶ್ವದ ಅತೀ ಉದ್ದದ ಕ್ರೂಸ್ ಗಂಗಾವಿಲಾಸ್ ಗೆ ಇಂದು ಚಾಲನೆ Read More »

ಶಬರಿಮಲೆ: ಜ್ಯೋತಿ ದರ್ಶನಕ್ಕೆ ಸಕಲ ಸಿದ್ದತೆ| ಜ.14 ರಂದು ದರ್ಶನ ನೀಡಲಿದ್ದಾನೆ ಅಯ್ಯಪ್ಪ

ಸಮಗ್ರ ನ್ಯೂಸ್: ಕೇರಳದ ಪ್ರಸಿದ್ಧ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜಾ ಕಾರ್ಯಗಳು ಆರಂಭವಾಗಿವೆ. ಮಕರ ಜ್ಯೋತಿ ಉತ್ಸವದ ಅಂಗವಾಗಿ ಅಯ್ಯಪ್ಪ ಸ್ವಾಮಿ ವಿಗ್ರಹಕ್ಕೆ ತೊಡಿಸುವ ಪವಿತ್ರ ಆಭರಣಗಳ ಶೋಭಾಯಾತ್ರೆ ಗುರುವಾರ ಪಂದಳ ಅರಮನೆಯಿಂದ ಆರಂಭವಾಗಿದೆ. ಕಾಡುದಾರಿಯ ಮೂಲಕ ಆಭರಣ ಶೋಭಾಯಾತ್ರೆ ಸಾಗಲಿದ್ದು ಜನವರಿ 14ರಂದು ಅಯ್ಯಪ್ಪ ಸ್ವಾಮಿ ಸನ್ನಿಧಾನ ತಲುಪಲಿದೆ. ಸಂಜೆ ಆವರಣ ಪೆಟ್ಟಿಗೆಗಳನ್ನು ಗರ್ಭಗುಡಿಗೆ ಕೊಂಡೊಯ್ದು ಸ್ವಾಮಿಯ ವಿಗ್ರಹಕ್ಕೆ ಆಭರಣ ತೊಡಿಸಿ ಅಲಂಕಾರ, ವಿಶೇಷ ಪೂಜೆ, ದೀಪಾರಾಧನೆ ನೆರವೇರಿಸಲಾಗುತ್ತದೆ. ನಂತರ

ಶಬರಿಮಲೆ: ಜ್ಯೋತಿ ದರ್ಶನಕ್ಕೆ ಸಕಲ ಸಿದ್ದತೆ| ಜ.14 ರಂದು ದರ್ಶನ ನೀಡಲಿದ್ದಾನೆ ಅಯ್ಯಪ್ಪ Read More »

ರಾಜ್ಯ ಸರ್ಕಾರಕ್ಕೆ ಹಿನ್ನಡೆ; ಒಕ್ಕಲಿಗ, ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ಹೈಕೋರ್ಟ್​​ನಲ್ಲಿ ಸಿಎಂ ಬಸವರಾಜ್​ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ರಾಜ್ಯದ ಪ್ರಬಲ ಸಮುದಾಯಗಳಾದ ಪಂಚಮಸಾಲಿ ಲಿಂಗಾಯತ ಮತ್ತು ಒಕ್ಕಲಿಗರ ಮೀಸಲಾತಿ ಹೆಚ್ಚಳ ನಿರ್ಧಾರಕ್ಕೆ ತಡೆ ನೀಡಿ ಹೈಕೋರ್ಟ್​ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಮೀಸಲಾತಿ ಪರಿಷ್ಕೃತ ನಿರ್ಧಾರವನ್ನು ಪ್ರಶ್ನಿಸಿ ರಾಘವೇಂದ್ರ ಡಿ.ಜಿ. ಎಂಬುವರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಈಗ ವಿಚಾರಣೆ ನಡೆಸಿರುವ ಹೈಕೋರ್ಟ್​, ಅಂತಿಮ ತೀರ್ಪು ನೀಡುವತನಕ ಸರ್ಕಾರ ಈ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು

ರಾಜ್ಯ ಸರ್ಕಾರಕ್ಕೆ ಹಿನ್ನಡೆ; ಒಕ್ಕಲಿಗ, ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಹೈಕೋರ್ಟ್ ತಡೆ Read More »

ಕೊನೆಕ್ಷಣದಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ ಪರೇಡ್ ಸಮಿತಿ| ಗಣರಾಜ್ಯೋತ್ಸವದಲ್ಲಿ ನಾರಿಶಕ್ತಿಯ ಪ್ರದರ್ಶನಕ್ಕೆ ಅಸ್ತು

ಸಮಗ್ರ ನ್ಯೂಸ್: ಕರ್ನಾಟಕದ ನಾರಿಶಕ್ತಿ ಸ್ತಬ್ಧಚಿತ್ರಕ್ಕೆ ಗಣರಾಜ್ಯೋತ್ಸವ ಪರೇಡ್ ಸಮಿತಿ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಈ ಮೂಲಕ ಕೊನೆ ಕ್ಷಣದಲ್ಲಿ ಕರ್ನಾಟಕ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ಗೆ ಸೇರ್ಪಡೆಯಾಗಿದೆ. 14ನೇ ಬಾರಿ ಕರ್ನಾಟಕದ ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಸಾಗಲಿದೆ. ರಾಜಧಾನಿ ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆಕರ್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಕರ್ನಾಟಕದ ನಾರಿಶಕ್ತಿ ಸ್ತಬ್ದ

ಕೊನೆಕ್ಷಣದಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ ಪರೇಡ್ ಸಮಿತಿ| ಗಣರಾಜ್ಯೋತ್ಸವದಲ್ಲಿ ನಾರಿಶಕ್ತಿಯ ಪ್ರದರ್ಶನಕ್ಕೆ ಅಸ್ತು Read More »

ಹುಬ್ಬಳ್ಳಿ: ಪ್ರಧಾನಿ ಮೋದಿ ರೋಡ್ ಶೋ ವೇಳೆ‌ ಭದ್ರತಾ‌ ಲೋಪ

ಸಮಗ್ರ ನ್ಯೂಸ್: ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರು, ರೋಡ್ ಶೋ ನಡೆಸಿದ ವೇಳೆಯಲ್ಲಿ ಭದ್ರತಾ ಲೋಪ ಕಂಡು ಬಂದಿದೆ. ಭದ್ರತೆಯನ್ನು ಮೀರಿ ಯುವಕನೋರ್ವ ನರೇಂದ್ರ ಮೋದಿಗೆ ಹಾರ ಹಾಕಲು ಯತ್ನಿಸಿದ್ದಾನೆ. ಇಂದು ಮೋದಿಯವರು ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸುತ್ತಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಕಂಡು ಬಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುತ್ತಿದ್ದ ಸಂದರ್ಭದಲ್ಲಿ ಭದ್ರತೆಯನ್ನು ಮೀರಿ ಯುವಕನೋರ್ವ ನಡೆದುಕೊಂಡಿದ್ದಾರೆ. ಪ್ರಧಾನಿ ಮೋದಿಯವರ ಭದ್ರತೆಯನ್ನು ಮೀರಿ ಹುಬ್ಬಳ್ಳಿಯ ರೋಡ್

ಹುಬ್ಬಳ್ಳಿ: ಪ್ರಧಾನಿ ಮೋದಿ ರೋಡ್ ಶೋ ವೇಳೆ‌ ಭದ್ರತಾ‌ ಲೋಪ Read More »

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ

ಸಮಗ್ರ ನ್ಯೂಸ್: ಶ್ರೀಲಂಕಾ ವಿರುದ್ದದ ಟಿ20 ಸರಣಿ ಗೆಲುವಿನ ಬಳಿಕ ಇದೀಗ ಏಕದಿನ ಸರಣಿಯಲ್ಲಿ ಭಾರತ ಭರ್ಜರಿ ಶುಭಾರಂಭ ಪಡೆದಿದೆ. ಕೊಹ್ಲಿ ಸೆಂಚುರಿ, ಇತರರ ಸ್ಫೋಟಕ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾ 373 ರನ್ ಸಿಡಿಸಿತ್ತು. ಇದಕ್ಕುತ್ತರವಾಗಿ ಶ್ರೀಲಂಕಾ 8 ವಿಕೆಟ್ ನಷ್ಟಕ್ಕೆ 306 ರನ್ ಸಿಡಿಸಿ ಸೋಲೊಪ್ಪಿಕೊಂಡಿದೆ. ಭಾರತ 67 ರನ್ ಗೆಲುವು ಸಾಧಿಸಿತು. ಲಂಕಾ ನಾಯಕ ದಸೂನ್ ಶನಕ ಗೆಲುವಿಗಾಗಿ ಕೊನೆಯ ಎಸೆತದವರೆಗೂ ಹೋರಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಇದರೊಂದಿಗೆ 3 ಏಕದಿನ ಪಂದ್ಯದ ಸರಣಿಯಲ್ಲಿ

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ Read More »

ಶಬರಿಮಲೆ ಯಾತ್ರಾರ್ಥಿಗಳೇ ಗಮನಿಸಿ…| ಈ ಫೋಟೋಗಳನ್ನು ತೆಗೆದುಕೊಂಡು ಹೋದ್ರೆ ನೋ ಎಂಟ್ರಿ!

ಸಮಗ್ರ ನ್ಯೂಸ್: ಶಬರಿಮಲೆಗೆ ಬರುವ ಯಾತ್ರಿಗಳಿಗೆ ಕೇರಳ ಹೈಕೋರ್ಟ್ ಸೂಚನೆ ನೀಡಿದ್ದು, ಸೆಲೆಬ್ರಿಟಿಗಳ ಫೋಟೋ, ಪೋಸ್ಟರ್‌ ಗಳನ್ನು ಹಿಡಿದುಕೊಂಡು ಬಂದರೆ ಅಂಥವರಿಗೆ ಸನ್ನಿಧಾನ ಪ್ರವೇಶಕ್ಕೆ ಅವಕಾಶ ನೀಡಬಾರದೆಂದು ಕೇರಳ ಹೈಕೋರ್ಟ್‌ ಸೋಮವಾರ(ಜ.9 ರಂದು) ತೀರ್ಪು ನೀಡಿದೆ. ನ್ಯಾಯಮೂರ್ತಿ ಅನಿಲ್ ಕೆ ನರೇಂದ್ರನ್ ಮತ್ತು ನ್ಯಾಯಮೂರ್ತಿ ಪಿ ಜಿ ಅಜಿತ್‌ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಯಾತ್ರಾರ್ಥಿಯೊಬ್ಬರ ದೂರಿನ ಆಧಾರದ ಮೇಲೆ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯನ್ನು ನಡೆಸಿ ತಿರುವಾಂಕೂರು ದೇವಸ್ವಂ ಮಂಡಳಿಗೆ ಪ್ರತಿಯೊಬ್ಬ ಅಯ್ಯಪ್ಪನ ಭಕ್ತ ತನ್ನ ಪೂಜಾ ಆರಾಧನವನ್ನು

ಶಬರಿಮಲೆ ಯಾತ್ರಾರ್ಥಿಗಳೇ ಗಮನಿಸಿ…| ಈ ಫೋಟೋಗಳನ್ನು ತೆಗೆದುಕೊಂಡು ಹೋದ್ರೆ ನೋ ಎಂಟ್ರಿ! Read More »

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದರು. ಗಡಿನಾಡು ಕಾಸರಗೋಡಿನಲ್ಲಿ 1936, ಜೂನ್ 30ರಂದು ಹುಟ್ಟಿದ ಸಾರಾ ಅವರು, ಮಹಿಳಾ ಸಮಾನತೆ, ಸಬಲೀಕರಣ ಸೇರಿದಂತೆ ವಿವಿಧ ಚಿಂತನೆಯ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದರು. ಇವರು 10 ಕಾದಂಬಲಿ, 6 ಕಥಾ ಸಂಕಲನ, 5 ಬಾನುಲಿ ನಾಟಕ ಸೇರಿದಂತೆ ವಿವಿಧ ಸಾಹಿತ್ಯ ಕೃಷಿಯನ್ನು ನಡೆಸಿದ್ದಾರೆ. ಇದರಲ್ಲಿ ‘ಚಂದ್ರಗಿರಿಯ ತೀರದಲ್ಲಿ’

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ Read More »