ರಾಜ್ಯ

ಚಿರತೆ ದಾಳಿಯಿಂದ ಮೃತಪಟ್ಟವರಿಗೆ 5ಲಕ್ಷ ಪರಿಹಾರ; ಚಿರತೆ ಹಿಡಿಯಲು ವಿಶೇಷ ತಂಡ- ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರು ಮತ್ತು ಮೈಸೂರಿನ ಕೆಲವು ಭಾಗಗಳಲ್ಲಿ ಕಂಡುಬಂದಿರುವ ಚಿರತೆಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಚಿರತೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು. ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಿದಂತೆ ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ನೀಡಲಾಗುವುದು. ಕಾಡಿನಲ್ಲಿದ್ದ […]

ಚಿರತೆ ದಾಳಿಯಿಂದ ಮೃತಪಟ್ಟವರಿಗೆ 5ಲಕ್ಷ ಪರಿಹಾರ; ಚಿರತೆ ಹಿಡಿಯಲು ವಿಶೇಷ ತಂಡ- ಸಿಎಂ ಬೊಮ್ಮಾಯಿ Read More »

ಕಾಸರಗೋಡು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ

ಸಮಗ್ರ ನ್ಯೂಸ್: ಕಾರು ಮತ್ತು ಟಿಪ್ಪರ್ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಚಾಲಕ ದಾರುಣ ಘಟನೆ ಶುಕ್ರವಾರ ರಾತ್ರಿ ನೀಲೇಶ್ವರ ಕೊಲ್ಲಂಪಾರೆಯಲ್ಲಿ ಸಂಭವಿಸಿದೆ. ಕರಿಂದಲದ ಕೆ. ಶ್ರೀ ರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದುಲ ಇವರು ಕೆ ಎಸ್ ಇ ಬಿ ಕಾರ್ಮಿಕರಾಗಿದ್ದರು. ಕಾರಲ್ಲಿದ್ದ ಬಿನು ಎಂಬವರು ಗಂಭೀರ ಗಾಯಗೊಂಡಿದ್ದು, ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 8 ಗಂಟೆ ಸುಮಾರಿಗೆ ಆ ಅಪಘಾತ ನಡೆದಿದೆ . ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು,

ಕಾಸರಗೋಡು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ Read More »

ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡೇ ಚಿನ್ನ, ಕಾರು, ಬೈಕ್ ಖರೀದಿಸಿದ ವಂಚಕಿ

ಸಮಗ್ರ ನ್ಯೂಸ್: ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕ ವಂಚನೆಗೆ ಒಳಗಾದ ವ್ಯಕ್ತಿ. ಈತನ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ಪ್ರಕರಣವನ್ನು ವಿಜಯಪುರ ಸಿಇಎನ್‌ ಪೊಲೀಸರು ಭೇದಿಸಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ಮೂಲದ ಮಂಜುಳಾ ಎಂಬಾಕೆ ಫೇಸ್‌ಬುಕ್‌

ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡೇ ಚಿನ್ನ, ಕಾರು, ಬೈಕ್ ಖರೀದಿಸಿದ ವಂಚಕಿ Read More »

ಮುರುಘಾ ಶರಣರಿಗೆ ಜೈಲೇ ಗತಿ| ತಿರಸ್ಕೃತವಾಯ್ತು ಮತ್ತೊಂದು ಜಾಮೀನು ಅರ್ಜಿ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮತ್ತೆ ಜೈಲೇ ಗತಿಯಾಗಿದೆ. 2ನೇ ಪೋಕ್ಸೋ ಪ್ರಕರಣದಲ್ಲಿಯೂ ಮುರುಘಾ ಶರಣರಿಗೆ ಜಾಮೀನು ನಿರಾಕರಿಸಲಾಗಿದೆ. ಈಗಾಗಲೇ ಮೊದಲ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಮುರುಘಾಶ್ರೀಗಳ ವಿರುದ್ಧ 2ನೇ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿಯೂ ಮುರುಘಾಶ್ರೀಗಳಿಗೆ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ನೀಡಿದೆ. ಅ.13ರಂದು ದಾಖಲಾಗಿದ್ದ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳು ಚಿತ್ರದುರ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ

ಮುರುಘಾ ಶರಣರಿಗೆ ಜೈಲೇ ಗತಿ| ತಿರಸ್ಕೃತವಾಯ್ತು ಮತ್ತೊಂದು ಜಾಮೀನು ಅರ್ಜಿ Read More »

ಮಾಜಿ ಸಿಎಂ, ವಿಪಕ್ಷನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಸಮಗ್ರ‌ ನ್ಯೂಸ್: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು, ಇಂದು ಸಂಜೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ವೈದ್ಯರು ನಾಲ್ಕು ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಸಿಎಂ, ವಿಪಕ್ಷನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು Read More »

ಮನೆಮುಂದೆ ಕುಳಿತಿದ್ದ ಯುವತಿ ಮೇಲೆ ಚಿರತೆ ದಾಳಿ| ಕುತ್ತಿಗೆಯನ್ನೇ ಕಚ್ಚಿ ಸಾಯಿಸಿದ ನರಭಕ್ಷಕ

ಸಮಗ್ರ ನ್ಯೂಸ್: ರಾಜ್ಯದ ವಿವಿಧೆಡೆ ಚಿರತೆ ದಾಳಿ ವಿಪರೀತವಾಗಿದ್ದು, ಇದುವರೆಗೆ ಕಾಡಿನ ನಿರ್ಜನ ದಾರಿಯಲ್ಲಿ ಹೊಂಚು ಹಾಕಿ ದಾಳಿ ಮಾಡುತ್ತಿದ್ದ, ಹೊಲ ಗದ್ದೆಗಳಲ್ಲಿ ಮನುಷ್ಯರ ಮೇಲೆ ಮುಗಿಬೀಳುತ್ತಿದ್ದ ಚಿರತೆ ಈಗ ಮನೆ ಬಾಗಿಲಿಗೇ ಬಂದು ಪ್ರಾಣ ತೆಗೆಯುವಷ್ಟರ ಮಟ್ಟಿಗೆ ಅಟ್ಟಹಾಸ ಮೆರೆಯುತ್ತಿದೆ. ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಭಯಾನಕ ಘಟನೆ ನಡೆದಿದೆ. ಸಂಜೆಯ ಹೊತ್ತು ಮನೆ ಮುಂದೆ ಕುಳಿತಿದ್ದ ಯುವತಿಯ ಮೇಲೆ ದಾಳಿ ಮಾಡಿದ ಚಿರತೆ ಆಕೆಯ ಕುತ್ತಿಗೆಯನ್ನೇ ಹಿಡಿದು ಸಾಯಿಸಿದೆ. ಮೇಘನಾ (20)

ಮನೆಮುಂದೆ ಕುಳಿತಿದ್ದ ಯುವತಿ ಮೇಲೆ ಚಿರತೆ ದಾಳಿ| ಕುತ್ತಿಗೆಯನ್ನೇ ಕಚ್ಚಿ ಸಾಯಿಸಿದ ನರಭಕ್ಷಕ Read More »

ಮಂಡ್ಯ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ

ಸಮಗ್ರ ನ್ಯೂಸ್: ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿ ನೇಣಿಗೆ ಕೊರಳೊಡ್ಡಿರುವ ದಾರುಣ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಮಹಾವೀರ ಚಿತ್ರಮಂದಿರದ ಹಿಂಭಾಗದಲ್ಲಿ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬದ ಉಸ್ನಾ ಕೌಸರ್ ಬಿನ್ ಆಖಿಲ್ ಅಹಮ್ಮದ್( 30) ಮದ್ದೂರು ಮೆಡಿಕಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ತನ್ನ ಮೂವರು ಮಕ್ಕಳಾದ ಹಾರಿಸ್ ಗಂಡು (7) ವರ್ಷ, ಅಲೀಸಾ ಹೆಣ್ಣು ( 4 )ವರ್ಷ, ಅನಮ್ ಫಾತಿಮಾ ಹೆಣ್ಣು

ಮಂಡ್ಯ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ Read More »

ಸುಳ್ಯ: ಮತ್ತೆ ಲಘು‌ ಭೂಕಂಪನ

ಸಮಗ್ರ ನ್ಯೂಸ್: ಕೆಲದಿನಗಳಿಂದ ತಣ್ಣಗಾಗಿದ್ದ ಭೂಮಿ ಸುಳ್ಯದಲ್ಲಿ ಮತ್ತೆ ಕಂಪಿಸಿರುವ ಬಗ್ಗೆ ವರದಿಯಾಗಿದೆ. ತಾಲೂಕಿನ ಮಡಪ್ಪಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಭೂಕಂಪನವಾದ ಘಟನೆ ಗುರುವಾರ ಸಂಜೆ ವೇಳೆಗೆ ನಡೆದಿದೆ. ಮಡಪ್ಪಾಡಿ ಗ್ರಾಮದ ಕಡ್ಯ, ಹಾಡಿಕಲ್ಲು, ಮಡಪ್ಪಾಡಿ ಪೇಟೆ ಹಾಗೂ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸುಳ್ಯ: ಮತ್ತೆ ಲಘು‌ ಭೂಕಂಪನ Read More »

ಸರ್ಕಾರಿ ವೈದ್ಯರಾಗಿ ನೇಮಕವಾದ ಇಬ್ಬರು ಮಂಗಳಮುಖಿಯರು| ಖಾಸಗಿ ಆಸ್ಪತ್ರೆಯಿಂದ ವಜಾಗೊಂಡಿದ್ದವರು ಸರ್ಕಾರಿ ಸೇವೆಗೆ ಹಾಜರ್

ಸಮಗ್ರ ನ್ಯೂಸ್: ಮೊದಲ ಬಾರಿಗೆ ಮಂಗಳಮುಖಿಯರಿಬ್ಬರು ತೆಲಂಗಾಣದಲ್ಲಿ ಸರ್ಕಾರಿ ವೈದ್ಯರಾಗಿ ನೇಮಕವಾಗಿದ್ದಾರೆ. ಎಂಬಿಬಿಎಸ್ ಪದವಿ ಮುಗಿಸಿರುವ ಪ್ರಾಚಿ ರಾತೋಡ್ ಹಾಗೂ ರುತ್ ಜಾನ್ ಪೌಲ್ ಅವರೇ ಈ ಸಾಧನೆ ಮಾಡಿದವರು. ಈ ಮೂಲಕ ಈ ಇಬ್ಬರು ಮಂಗಳಮುಖಿ ವೈದ್ಯರು ತೆಲಂಗಾಣದಲ್ಲಿ ಇತಿಹಾಸ ಬರೆದಂತಾಗಿದೆ. ೨೦೧೫ ರಲ್ಲಿ ಈ ಲೈಂಗಿಕ ಅಲ್ಪಸಂಖ್ಯಾತರು ಎಂಬಿಬಿಎಸ್ ಪದವಿ ಮುಗಿಸಿದ್ದರು. ನಂತರ ಕೆಲ ವರ್ಷ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಾಚಿ ರಾತೋಡ್ ಅವರ ಲಿಂಗ ವಿಚಾರವಾಗಿ ಅವರು ಸೇವೆ ಸಲ್ಲಿಸುತ್ತಿದ್ದ

ಸರ್ಕಾರಿ ವೈದ್ಯರಾಗಿ ನೇಮಕವಾದ ಇಬ್ಬರು ಮಂಗಳಮುಖಿಯರು| ಖಾಸಗಿ ಆಸ್ಪತ್ರೆಯಿಂದ ವಜಾಗೊಂಡಿದ್ದವರು ಸರ್ಕಾರಿ ಸೇವೆಗೆ ಹಾಜರ್ Read More »

ಹೆಲ್ಮೆಟ್ ಇಲ್ಲದೆ ತ್ರಿಬಲ್ ರೈಡಿಂಗ್ ಮಾಡಿದ ಮಹಿಳಾ ಕಾನ್ಸ್ ಟೇಬಲ್| ಪೊಲೀಸ್ ಪೇದೆಗಳಿಗೆ ಕ್ಲಾಸ್ ತೆಗೆದುಕೊಂಡ ಮಹಿಳೆ

ಸಮಗ್ರ ನ್ಯೂಸ್: ಸಿಲಿಕಾನ್‌ ಸಿಟಿಯಲ್ಲಿ ಸ್ಕೂಟಿಯಲ್ಲಿ ಹೆಲ್ಮೆಟ್‌ ಕೂಡ ಇಲ್ಲದೇ ತ್ರಿಬಲ್‌ ರೈಡಿಂಗ್‌ ಬಂದ ಮಹಿಳಾ ಪೊಲೀಸ್‌ ಪೇದೆಗಳಿಗೆ ಮಹಿಳೆಯೊಬ್ಬರು ಕ್ಲಾಸ್‌ ತೆಗೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಮೂವರು ಮಹಿಳಾ ಪೊಲೀಸ್‌ ಪೇದೆಗಳು ಹೆಲ್ಮೆಟ್‌ ಇಲ್ಲದೇ ಸ್ಕೂಟಿಯಲ್ಲಿ ತ್ರಿಬಲ್‌ ರೈಡಿಂಗ್‌ ಬಂದಿದ್ದಾರೆ. ಮತ್ತೊಂದು ಸ್ಕೂಟಿಯಲ್ಲಿ ಇನ್ನಿಬ್ಬರು ಮಹಿಳಾ ಕಾನ್‌ಸ್ಟೇಬಲ್‌ಗಳಲ್ಲಿ ಹಿಂಬದಿ ಸವಾರರು ಹೆಲ್ಮೆಟ್‌ ಧರಿಸಿರಲಿಲ್ಲ. ಇದನ್ನು ಗಮನಿಸಿದ ಮಹಿಳೆಯೊಬ್ಬರು, ‘ರೂಲ್ಸ್ ಮಾಡೊರೂ ನೀವೇ.. ಬ್ರೇಕ್ ಮಾಡೊರೂ ನೀವೇ..ʼ ಅಂತಾ ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೇ ಈ ದೃಶ್ಯವನ್ನು ವೀಡಿಯೋ

ಹೆಲ್ಮೆಟ್ ಇಲ್ಲದೆ ತ್ರಿಬಲ್ ರೈಡಿಂಗ್ ಮಾಡಿದ ಮಹಿಳಾ ಕಾನ್ಸ್ ಟೇಬಲ್| ಪೊಲೀಸ್ ಪೇದೆಗಳಿಗೆ ಕ್ಲಾಸ್ ತೆಗೆದುಕೊಂಡ ಮಹಿಳೆ Read More »