ರಾಜ್ಯ

ಗಂಡ-ಹೆಂಡತಿ ಜಗಳದಲ್ಲಿ ಮದುವೆ ಬ್ರೋಕರ್ ಹತ್ಯೆ| ಮಂಗಳೂರಿನಲ್ಲೊಂದು ವಿಲಕ್ಷಣ ಘಟನೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ವಳಚ್ಚಿಲ್‌ನಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರಿಗೆ ಅವರ ಸಂಬಂಧಿಕನೇ ಚೂರಿಯಿಂದ ಇರಿದಿದ್ದು, ಗಾಯಾಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತ ವ್ಯಕ್ತಿಯ ಇಬ್ಬರು ಪುತ್ರರು ಗಾಯಗೊಂಡಿದ್ದಾರೆ. ಮೃತರನ್ನು ವಾಮಂಜೂರಿನ ಸುಲೇಮಾನ್ (50) ಎಂದು ಗುರುತಿಸಲಾಗಿದೆ. ಅವರ ಇಬ್ಬರು ಪುತ್ರರಾದ ರಿಯಾಬ್ ಹಾಗೂ ಶಿಯಾಬ್ ಕೂಡ ಗಾಯಗೊಂಡವರು. ಸುಲೇಮಾನ್ ಅವರ ಸಂಬಂಧಿ ವಳಚ್ಚಿಲ್ ನಿವಾಸಿ ಮುಸ್ತಾಫಾ (30) ಕೊಲೆ ಅರೋಪಿ. ಆತನನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ‘ಸುಲೇಮಾನ್ ಮದುವೆ […]

ಗಂಡ-ಹೆಂಡತಿ ಜಗಳದಲ್ಲಿ ಮದುವೆ ಬ್ರೋಕರ್ ಹತ್ಯೆ| ಮಂಗಳೂರಿನಲ್ಲೊಂದು ವಿಲಕ್ಷಣ ಘಟನೆ Read More »

ತಂದೆಯ ಹತ್ಯೆಗೆ ಚೈತ್ರಾ ಕುಂದಾಪುರ ಸುಪಾರಿ!? ದೂರು ನೀಡಿದ ಬಾಲಕೃಷ್ಣ ಪೂಜಾರಿ

ಸಮಗ್ರ ನ್ಯೂಸ್: ತಂದೆಯ ಕೊಲೆಗೆ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಸುಪಾರಿ ನೀಡಿದ್ದಾರಾ? ಹೀಗಂತ ಅವರ ತಂದೆ ಬಾಲಕೃಷ್ಣ ಪೂಜಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ಶ್ರೀಕಾಂತ್ ಕಶ್ಯಪ್ ಜೊತೆ ಚೈತ್ರಾ ಕುಂದಾಪುರ ಮದುವೆಯಾದಾಗಿನಿಂದ ತಂದೆ ಮತ್ತು ಮಗಳ ನಡುವೆ ವಾಗ್ವಾದ ಮಿತಿ ಮೀರಿದೆ. ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣೆಗೆ ತಂದೆ ಬಾಲಕೃಷ್ಣ ಅವರು ದೂರು ನೀಡಿದ್ದು, ಆಸ್ತಿಗಾಗಿ ಚೈತ್ರಾ ಕುಂದಾಪುರ ನನ್ನನ್ನು ಕೊಲೆ ಮಾಡಬಹುದು. ಶ್ರೀಕಾಂತ್ ಮತ್ತು ಚೈತ್ರಾ ಇಬ್ಬರೂ ವಂಚಕರು, ಲಕ್ಷಾಂತರ ರೂಪಾಯಿ

ತಂದೆಯ ಹತ್ಯೆಗೆ ಚೈತ್ರಾ ಕುಂದಾಪುರ ಸುಪಾರಿ!? ದೂರು ನೀಡಿದ ಬಾಲಕೃಷ್ಣ ಪೂಜಾರಿ Read More »

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮೇ.24ರಿಂದ ಭಾರೀ ಮಳೆ ಮುನ್ಸೂಚನೆ| ಕರಾವಳಿ,‌ಮಲೆನಾಡಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಮೇ 24ರ ನಾಳೆಯಿಂದ ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನಕ್ಕೆ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದ್ದು,

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮೇ.24ರಿಂದ ಭಾರೀ ಮಳೆ ಮುನ್ಸೂಚನೆ| ಕರಾವಳಿ,‌ಮಲೆನಾಡಿಗೆ ರೆಡ್ ಅಲರ್ಟ್ Read More »

ಅತ್ಯಾಚಾರ ಆರೋಪದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಅರೆಸ್ಟ್

ಸಮಗ್ರ ನ್ಯೂಸ್: ಅತ್ಯಾಚಾರ ಆರೋಪದಡಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ʼಕಾಮಿಡಿ ಕಿಲಾಡಿಗಳು’ ಖ್ಯಾತಿಯ ಕಲಾವಿದ, ಕಿರುತೆರೆ ನಟ ಮಡೆನೂರು ಮನು ವಿರುದ್ಧ ಯುವತಿಯೊಬ್ಬಳು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪವನ್ನು ಮಾಡಿ ಎಫ್‌ಐಆರ್‌ ದಾಖಲಿಸಿದ್ದರು. ಆರೋಪ ಕೇಳಿ ಬರುತ್ತಿದ್ದಂತೆ ನಟ ಮೊಬೈಲ್‌ ಸ್ವಿಚ್ಡ್‌ ಆಫ್‌ ಮಾಡಿಕೊಂಡು ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ಮನು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಶಾಂತಿಗ್ರಾಮದಲ್ಲಿ ಬೆಂಗಳೂರಿನ ಪೊಲೀಸರು

ಅತ್ಯಾಚಾರ ಆರೋಪದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಅರೆಸ್ಟ್ Read More »

ಕರಾವಳಿಯನ್ನು ಬೆಚ್ಚಿಬೀಳಿಸಿದ ವಿಮಾನ ದುರಂತಕ್ಕೆ 15 ವರ್ಷ| ಜಿಲ್ಲಾಡಳಿತದಿಂದ ಗೌರವ ನಮನ

ಸಮಗ್ರ ನ್ಯೂಸ್: 2010ರ ಮೇ 22ರಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಈಗ 15 ವರ್ಷ. ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಈ ದುರ್ಘಟನೆಯಲ್ಲಿ ಮಡಿದವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮೇ.22ರಂದು ಗೌರವ ಸಲ್ಲಿಸಿತು. ಅಂದು ಬೆಳಗ್ಗೆ 6:20ಕ್ಕೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಬಜ್ಪೆ ಕೆಂಜಾರಿನಲ್ಲಿರುವ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಹಂತದಲ್ಲಿ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ 166 ಮಂದಿಯ ಪೈಕಿ 158 ಮಂದಿ ಮೃತಪಟ್ಟಿದ್ದರು. ಕೆಂಜಾರು

ಕರಾವಳಿಯನ್ನು ಬೆಚ್ಚಿಬೀಳಿಸಿದ ವಿಮಾನ ದುರಂತಕ್ಕೆ 15 ವರ್ಷ| ಜಿಲ್ಲಾಡಳಿತದಿಂದ ಗೌರವ ನಮನ Read More »

ಶಿರಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕ ಗಂಭೀರ

ಸಮಗ್ರ ನ್ಯೂಸ್: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಶಿರಾಡಿ ಗ್ರಾಮದ ಕೊಡ್ಯಕಲ್ ಎಂಬಲ್ಲಿ ಮೇ 21 ರಂದು ಸಂಜೆ ಸುಮಾರು 4.30ರ ವೇಳೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಕೊಡ್ಯಕಲ್ ನಲ್ಲಿ ಚಾಲಕ (ಬಬ್ಲಿ ಯಾದವ್) ನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆ ಇಲ್ಲದೇ ಇರುವುದರಿಂದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಒಂದು

ಶಿರಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕ ಗಂಭೀರ Read More »

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ.ಎ ಸಲೀಂ ನೇಮಕ

ಸಮಗ್ರ ನ್ಯೂಸ್: ಕನ್ನಡಿಗ, ಹಿರಿಯ ಐಪಿಎಸ್‌ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ಕರ್ನಾಟಕದ ಪೊಲೀಸ್‌ ಮಹಾನಿರ್ದೇಶಕರಾಗಿ ( ಡಿಜಿ ಹಾಗೂ ಐಜಿಪಿ) ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮೇ 21ರಂದು ಕರ್ನಾಟಕದ ಪೊಲೀಸ್‌ ಮಹಾನಿರ್ದೇಶಕರಾಗಿರುವ ಡಾ.ಅಲೋಕ್‌ಮೋಹನ್‌ ಅವರು ಸೇವೆಯಿಂದ ನಿವೃತ್ತರಾಗಲಿದ್ದು, ಈ ಸ್ಥಾನಕ್ಕೆ ಕನ್ನಡಿಗ ಐಪಿಎಸ್‌ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ನೇಮಕ ಮಾಡಲಾಗಿದೆ. 1966ರ ಜೂನ್ 25ರಂದು ಬೆಂಗಳೂರು ಸಮೀಪದ ಪಟ್ಟಣದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1993ರಲ್ಲಿ ಉಸ್ಮಾನಿಯಾ

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ.ಎ ಸಲೀಂ ನೇಮಕ Read More »

ಖಾಸಗಿ ಬಸ್ – ಕಾರು ನಡುವೆ ಡಿಕ್ಕಿ| 6 ಮಂದಿ ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ವಿಜಯಪುರ ನಗರ ಸಮೀಪದ ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್‌ಎಚ್- 50) ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ದಾರುಣವಾಗಿ ಸಾವಿಗೀಡಾಗಿದ್ದಾರೆ. ಮಹಿಂದ್ರಾ ಸ್ಕಾರ್ಪಿಯೋದಲ್ಲಿ ಇದ್ದ ತೆಲಂಗಾಣದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು ಜೋಸ್ನಾ, ಮಹೀಂದ್ರಾ ಸ್ಕಾರ್ಪಿಯೋ ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ವಿಆರ್‌ಎಲ್ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಸ್ಥಳದಲ್ಲೇ

ಖಾಸಗಿ ಬಸ್ – ಕಾರು ನಡುವೆ ಡಿಕ್ಕಿ| 6 ಮಂದಿ ಸ್ಥಳದಲ್ಲೇ ದುರ್ಮರಣ Read More »

ಕನ್ನಡ ಮಾತನಾಡುವುದಿಲ್ಲ ಎಂದ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲೇ ಕ್ಷಮೆ ಕೇಳಿದ್ಲು| ಏನಿದು ಸ್ಟೋರಿ…?

ಸಮಗ್ರ ನ್ಯೂಸ್: ನಾನು ಮಾತನಾಡುವುದು ಹಿಂದಿಯಲ್ಲಿ ಮಾತ್ರ. ಕನ್ನಡದಲ್ಲಿ ಮಾತನಾಡುವುದಿಲ್ಲ. ಕನ್ನಡದಲ್ಲಿ ಮಾತನಾಡಬೇಕೆಂದು ಎಲ್ಲಿದೆ ನಿಯಮ? ಇದು ಕರುನಾಡ ರಾಜಧಾನಿ ಬೆಂಗಳೂರಿನ ಹೊರವಲಯದ ಚಂದಾಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರೊಬ್ಬರು ಕನ್ನಡಿಗ ಗ್ರಾಹಕರ ಮೇಲೆ ತೋರಿದ ದರ್ಪ. ಬ್ಯಾಂಕ್ ಗ್ರಾಹಕರೊಬ್ಬರು ಕನ್ನಡದಲ್ಲಿ ಮಾತನಾಡಿ ಎಂದು ಕೋರಿದ್ದಕ್ಕೆ ಉತ್ತರ ಭಾರತ ಮೂಲದ ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್ ಪ್ರಿಯಾಂಕಾಸಿಂಗ್ ಕನ್ನಡ ಮಾತನಾಡುವುದಿಲ್ಲ. ಏನು ಮಾಡುತ್ತಿರೋ ಮಾಡಿ ಎಂದು ಮೆರೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ

ಕನ್ನಡ ಮಾತನಾಡುವುದಿಲ್ಲ ಎಂದ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲೇ ಕ್ಷಮೆ ಕೇಳಿದ್ಲು| ಏನಿದು ಸ್ಟೋರಿ…? Read More »

ಗೃಹಸಚಿವ ಪರಮೇಶ್ವರ್ ಗೆ ಶಾಕ್ ನೀಡಿದ ಇಡಿ| ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ‌ ಮೇಲೆ‌ ದಾಳಿ

ಸಮಗ್ರ ನ್ಯೂಸ್: ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ಎಸ್ ಎಸ್ ಐಟಿ ಕಾಲೇಜು ಸೇರಿದಂತೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ

ಗೃಹಸಚಿವ ಪರಮೇಶ್ವರ್ ಗೆ ಶಾಕ್ ನೀಡಿದ ಇಡಿ| ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ‌ ಮೇಲೆ‌ ದಾಳಿ Read More »