ರಾಜ್ಯ

ಒಂದನೇ ತರಗತಿಗೆ ಸೇರಲು 6 ವರ್ಷ ಕಡ್ಡಾಯ ನಿಯಮ‌ ಸಡಿಲಿಕೆ ಮಾಡದಂತೆ ಮನವಿ

ಸಮಗ್ರ ನ್ಯೂಸ್: ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು ಆರು ವರ್ಷ ಕಡ್ಡಾಯ ಸಡಲಿಕೆ ಮಾಡಬಾರದೆಂದು ಖಾಸಗಿ ಶಾಲೆಗಳು ಮನವಿ ಮಾಡಿವೆ. ಮುಂಬರುವ 2025- 26ನೇ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಜೂನ್ 1 ಕ್ಕೆ ಆರು ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮವನ್ನು ಯಾವುದೇ ಕಾರಣಕ್ಕೂ ಸಡಿಲಿಕೆ ಮಾಡಬಾರದು ಎಂದು ಖಾಸಗಿ ಶಾಲೆಗಳ ಸಂಘಟನೆ ಕ್ಯಾಮ್ಸ್ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದೆ. ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಮನವಿ […]

ಒಂದನೇ ತರಗತಿಗೆ ಸೇರಲು 6 ವರ್ಷ ಕಡ್ಡಾಯ ನಿಯಮ‌ ಸಡಿಲಿಕೆ ಮಾಡದಂತೆ ಮನವಿ Read More »

ಕರ್ನಾಟಕದ ಜನತೆಗೆ ಮತ್ತೊಂದು ಬರೆ ಹಾಕಿದ ಸರ್ಕಾರ| ಡೀಸೆಲ್ ಮಾರಾಟ ತೆರಿಗೆ ₹2 ಹೆಚ್ಚಳ| ನಾಳೆಯಿಂದಲೇ ಪರಿಷ್ಕೃತ ದರ ಜಾರಿ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರ ಡೀಸೆಲ್​ ಮೇಲಿನ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಾಗಲಿದೆ. ಈ ಹಿಂದೆ ಶೇ 18.44 ರಷ್ಟು ಇದ್ದ ತೆರಿಗೆ, ಇದೀಗ ಶೇ 21.17ಕ್ಕೆ ಏರಿಕೆಯಾಗಿದೆ. ಸದ್ಯ ಬೆಂಗಳೂರಲ್ಲಿ ಡಿಸೇಲ್​ 88.99 ರೂ. ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಡೀಸೆಲ್ ಬೆಲೆ 90 ರೂ. ಆಗಲಿದೆ. ಕರ್ನಾಟಕ ಸರ್ಕಾರ ಹಾಲು ಮತ್ತು ವಿದ್ಯುತ್ ದರ ಏರಿಕೆ

ಕರ್ನಾಟಕದ ಜನತೆಗೆ ಮತ್ತೊಂದು ಬರೆ ಹಾಕಿದ ಸರ್ಕಾರ| ಡೀಸೆಲ್ ಮಾರಾಟ ತೆರಿಗೆ ₹2 ಹೆಚ್ಚಳ| ನಾಳೆಯಿಂದಲೇ ಪರಿಷ್ಕೃತ ದರ ಜಾರಿ Read More »

ನಾಳೆ ಬೆಂಗಳೂರಿನಲ್ಲಿ ಆರ್ಸಿಬಿ – ಜಿಟಿ ಮ್ಯಾಚ್.. ಮೆಟ್ರೋ ಸೇವೆ ವಿಸ್ತರಣೆ

ಸಮಗ್ರ ನ್ಯೂಸ್: ನಾಳೆ ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯ ನಡೆಯಲಿದ್ದು, ಗುಜರಾತ್ ಟೈಟನ್ಸ್ ವಿರುದ್ಧ ಆರ್ಸಿಬಿ ಮ್ಯಾಚ್ ನಡೆಯಲಿದೆ. ಈ ಕಾರಣ ನಮ್ಮ ಮೆಟ್ರೋ ಕೂಡ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಈ ಬಗ್ಗೆ ಬಿಎಂಆರ್ಸಿಎಲ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಮಾಹಿತಿ ನೀಡಿದೆ ನಾಳೆ ಮೆಟ್ರೋ ಸೇವೆಯನ್ನು ತಡ ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಪ್ರಕಟನೆಯನ್ನು ಪರಿಶೀಲಿಸಿ ಎಂದು

ನಾಳೆ ಬೆಂಗಳೂರಿನಲ್ಲಿ ಆರ್ಸಿಬಿ – ಜಿಟಿ ಮ್ಯಾಚ್.. ಮೆಟ್ರೋ ಸೇವೆ ವಿಸ್ತರಣೆ Read More »

ನಾಳೆ ಎ.1ರಿಂದ ದುಬಾರಿ ದುನಿಯಾ| ಹಲವು ಅಗತ್ಯ ವಸ್ತುಗಳು ಕಾಸ್ಟ್ಲಿ

ಸಮಗ್ರ ನ್ಯೂಸ್: ಈಗಾಗಲೇ ಬೆಲೆ ಏರಿಕೆಯಿಂದ ಜನರು ತಮಗೆ ಅಗತ್ಯವಿರುವ ದಿನನಿತ್ಯದ ವಸ್ತುಗಳನ್ನು ಖರೀದಿಸಿ ಜೀವನ ಮಾಡಲು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ದೇಶಾದ್ಯಂತ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿರುವುದು ಜನರಿಗೆ ಒಂದು ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಯಾಕೆಂದರೆ ನಾಳೆಯಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರ, ವಿದ್ಯುತ್ ದರ, ಜೊತೆಗೆ ದೇಶದಲ್ಲಿ ಹೊಸ ಟೋಲ್ ದರಗಳು ಜಾರಿಗೆ ಬರಲಿವೆ. ಹಾಲಿನ ದರ 4 ರೂಪಾಯಿ, ಮೊಸರು ದರ 4 ರೂಪಾಯಿ, ವಿದ್ಯುತ್ ದರ ಪ್ರತಿ ಯೂನಿಟ್​ಗೆ 36

ನಾಳೆ ಎ.1ರಿಂದ ದುಬಾರಿ ದುನಿಯಾ| ಹಲವು ಅಗತ್ಯ ವಸ್ತುಗಳು ಕಾಸ್ಟ್ಲಿ Read More »

ಸೌದಿಯ ಮರುಭೂಮಿಯಲ್ಲಿ ರಾರಾಜಿಸುತ್ತಿರುವ ಕರ್ನಾಟಕ ಕರಾವಳಿಯ ಬೆದ್ರ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಪ್ರಮುಖ ಪಟ್ಟಣ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳಿಗೆ ಫೇಮಸ್. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಸರುವಾಸಿ ಎಂಬುದಷ್ಟೇ ನಮಗೆ ಗೊತ್ತು. ಆದರೆ ಮರುಭೂಮಿ ದೇಶಗಳಲ್ಲೂ ಇದರ ಹೆಸರು ರಾರಾಜಿಸುತ್ತಿರುವುದು ಗೊತ್ತಾ? ತುಳುವಿನಲ್ಲಿ ಮಂಗಳೂರಿಗೆ ಕುಡ್ಲ, ಮೂಡುಬಿದಿರೆಗೆ ಬೆದ್ರ, ಕಾರ್ಕಳಕ್ಕೆ ಕಾರ್ಲ, ಉಪ್ಪಿನಂಗಡಿಗೆ ಉಬಾರ್ ಹೀಗೆ ಸ್ಥಳೀಯ ಸೊಗಡಿನ ಹೆಸರುಗಳಿವೆ. ಊರವರು ಎಲ್ಲಿ ಹೋದರೂ ತಮ್ಮತನವನ್ನು ಬಿಡುವುದಿಲ್ಲ ಎಂಬುದಕ್ಕೆ ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಓಡಾಡುವ ಬಸ್ ನೋಡಿದರೆ ಗೊತ್ತಾಗುತ್ತದೆ. ಕನ್ನಡ ಲಿಪಿಯಲ್ಲಿ ಬೆದ್ರ ಎಂದು ಬರೆಯಲಾಗಿರುವ ಈ

ಸೌದಿಯ ಮರುಭೂಮಿಯಲ್ಲಿ ರಾರಾಜಿಸುತ್ತಿರುವ ಕರ್ನಾಟಕ ಕರಾವಳಿಯ ಬೆದ್ರ!! Read More »

ಬೆಳ್ತಂಗಡಿ: ಬೈಕ್ ಅಪಘಾತಕ್ಕೆ ಯಕ್ಷಗಾನ ಭಾಗವತ ಬಲಿ

ಸಮಗ್ರ ನ್ಯೂಸ್: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವಿನಲ್ಲಿ ನಡೆದಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ಅಂಡಿಂಜೆ (40) ಸಾವನಪ್ಪಿದವರು. ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಸತೀಶ್ ಆಚಾರ್ಯ ಅವರು ತಮ್ಮ ಬೈಕ್‌ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿರುವ

ಬೆಳ್ತಂಗಡಿ: ಬೈಕ್ ಅಪಘಾತಕ್ಕೆ ಯಕ್ಷಗಾನ ಭಾಗವತ ಬಲಿ Read More »

ಹವಾಮಾನ ವರದಿ| ಎ.2 ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಏಪ್ರಿಲ್ ​2ರಿಂದ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ. ಈ ಬಾರಿ

ಹವಾಮಾನ ವರದಿ| ಎ.2 ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ Read More »

ಹಿಮಾಚಲ ಪ್ರದೇಶದ ಕುಲ್ಲುನಲ್ಲಿ ಭೂಕುಸಿತ| 6 ಮಂದಿ ಸಾವು

ಸಮಗ್ರ ನ್ಯೂಸ್: ಹಿಮಾಚಲ ಪ್ರದೇಶದ ಕುಲ್ಲುವಿನ ಗುರುದ್ವಾರ ಮಣಿಕರಣ್ ಸಾಹಿಬ್ ಎದುರಿನ ಪಿಡಬ್ಲ್ಯೂಡಿ ರಸ್ತೆಯ ಬಳಿ ಭಾನುವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಆರು ಜನ ಸಾವನ್ನಪ್ಪಿದ್ದು, ಈ ಪೈಕಿ ಮೂವರು ಮಹಿಳೆಯರು ಇದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ರಸ್ತೆಯ ಅಂಚಿನಲ್ಲಿ ಕುಳಿತಿದ್ದ ಜನರು ದೊಡ್ಡ ಮರವೊಂದು ಉರುಳಿ ಬಿದ್ದ ಪರಿಣಾಮ ನಲುಗಿ ಸಾವನ್ನಪ್ಪಿದರು.ಗಾಯಾಳುಗಳನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಜಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ರಸ್ತೆಬದಿಯ ವ್ಯಾಪಾರಿ, ಕಾರು ಸವಾರ ಮತ್ತು

ಹಿಮಾಚಲ ಪ್ರದೇಶದ ಕುಲ್ಲುನಲ್ಲಿ ಭೂಕುಸಿತ| 6 ಮಂದಿ ಸಾವು Read More »

ಕರಾವಳಿಯಾದ್ಯಂತ ಮಾ.31ರ ನಾಳೆ ಈದ್ ಉಲ್‌ ಫಿತರ್ ಆಚರಣೆ

ಸಮಗ್ರ ನ್ಯೂಸ್: ಶವ್ವಾಲ್ ಚಂದ್ರ ದರ್ಶನವಾದ ಹಿನ್ನೆಲೆ ಕರ್ನಾಟಕದ ಕರಾವಳಿಯಲ್ಲಿ ನಾಳೆ (ಮಾ.31) ರಂದು ಈದ್ ಉಲ್ ಫಿತರ್ ಆಚರಣೆ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಸೋಮವಾರ ಈದ್ ಉಲ್ ಫಿತರ್ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.ದಕ್ಷಿಣಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಸೋಮವಾರ ಹಬ್ಬ ಆಚರಣೆ ಮಾಡಲು ಸೂಚಿಸಲಾಗಿದೆ.ನಾಳೆ ಈದ್ಗಾ, ಮಸೀದಿಗಳಲ್ಲಿ ಮುಸ್ಲಿಮರು ಸಾಮೂಹಿಕ ಹಬ್ಬದ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಕರಾವಳಿಯಾದ್ಯಂತ ಮಾ.31ರ ನಾಳೆ ಈದ್ ಉಲ್‌ ಫಿತರ್ ಆಚರಣೆ Read More »

ದ್ವಾದಶ‌ ರಾಶಿಗಳ ವರ್ಷ ಭವಿಷ್ಯ| ಹೊಸ ಸಂವತ್ಸರದಲ್ಲಿ ರಾಶಿಗಳ ಗೋಚಾರಫಲವೇನು?

ಸಮಗ್ರ ನ್ಯೂಸ್: ಪಂಚಾಂಗದ ಪ್ರಕಾರ ಮಾ. 30ರಿಂದ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಹಾಗಾದರೆ ನೂತನ ವಿಶ್ವಾವಸು ಸಂವತ್ಸರದಲ್ಲಿ ಯಾವ ರಾಶಿಗಳ ಗೋಚಾರ ಫಲ ಏನು? ಯಾರಿಗೆ ಲಾಭ? ತಿಳಿಯೋಣ… ಮೇಷ ರಾಶಿ:ಸಾಡೇಸಾತ್ ಶನಿ ಆರಂಭವಾಗುತ್ತದೆ. ಖರ್ಚಿನ ಪ್ರಮಾಣ ಜಾಸ್ತಿಯಾಗುತ್ತದೆ.

ದ್ವಾದಶ‌ ರಾಶಿಗಳ ವರ್ಷ ಭವಿಷ್ಯ| ಹೊಸ ಸಂವತ್ಸರದಲ್ಲಿ ರಾಶಿಗಳ ಗೋಚಾರಫಲವೇನು? Read More »