ಪುತ್ತೂರು: ಜಾತ್ರೋತ್ಸವದ ಧ್ವಜಾರೋಹಣ ಅರ್ಹತೆ ಇಲ್ಲದ ಜಗನ್ನಿವಾಸ ರಾವ್ ನಡೆಸಿದರೆ ದೇಗುಲಕ್ಕೆ ಕಪ್ಪುಚುಕ್ಕೆ – ಶೈವಕ್ಷೇತ್ರ ಸಂರಕ್ಷಣಾ ವೇದಿಕೆ
ಸಮಗ್ರ ನ್ಯೂಸ್: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಜಾತ್ರೋತ್ಸವದ ಧ್ವಜಾರೋಹಣ ಪ್ರಕ್ರಿಯೆಯಲ್ಲಿ ಯಾವುದೇ ಅಧಿಕೃತ ಅರ್ಹತೆ ಇಲ್ಲದ ಪಿ.ಜಿ. ಜಗನ್ನಿವಾಸ ರಾವ್ ಅವರು ಭಾಗವಹಿಸುವುದು ದೇವಸ್ಥಾನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಲಿದೆ ಎಂದು ಶೈವಕ್ಷೇತ್ರ ಸಂರಕ್ಷಣಾ ವೇದಿಕೆಯ ಸಂಸ್ಥಾಪಕ ಶ್ರೀನಾಥ್ ಟಿ.ಎಸ್. ಸುಬ್ರಹ್ಮಣ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದ ಪಾವಿತ್ರ್ಯತೆ ಮತ್ತು ಸಂಪ್ರದಾಯಗಳ ಉಲ್ಲಂಘನೆಯಾಗುತ್ತಿರುವ ಕುರಿತು ಹಲವು ಗಂಭೀರ ಆರೋಪಗಳನ್ನು ಮಾಡಿದರು. “ದೇವಸ್ಥಾನದ ನಿಯಮದಂತೆ ಧ್ವಜಾರೋಹಣ ಮತ್ತು ಅವರೋಹಣ ಮಾಡುವ ಜವಾಬ್ದಾರಿ ಕೇವಲ ಖಾಯಂ […]










