ರಾಜ್ಯ

ಗ್ರಾ.ಪಂ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಪ್ರಸ್ತಾವನೆ ತಿರಸ್ಕರಿಸಿದ ಸಿಎಂ

ಸಮಗ್ರ ನ್ಯೂಸ್: ಗ್ರಾಮ ಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ನೀಡುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗಜ್ಞಾನೇಂದ್ರ, ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಸಿಎಂ […]

ಗ್ರಾ.ಪಂ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಪ್ರಸ್ತಾವನೆ ತಿರಸ್ಕರಿಸಿದ ಸಿಎಂ Read More »

ಸಕಲೇಶಪುರ : ನ.02 ರಂದು ಬೃಹತ್ ರಕ್ತದಾನ ಶಿಬಿರ

ಸಮಗ್ರ ನ್ಯೂಸ್: ಅಯೋಧ್ಯೆ ಬಲಿದಾನ ದಿವಸದ ನಿಮಿತ್ತ ನವೆಂಬರ್ 02ರಂದು ಪಟ್ಟಣದ ಪುರಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ್ಯ ಸಹ ಸಂಯೋಜಕ ರಘು ಸಕಲೇಶಪುರ ತಿಳಿಸಿದ್ದಾರೆ. ರಕ್ತದಾನ ಮಹಾದಾನವಾಗಿದೆ ರಕ್ತದಾನದಿಂದ ಜೀವನ ಉಳಿಸಬಹುದು ಆದ್ದರಿಂದ ರಕ್ತದಾನಿಗಳು ಬರುವುದರ ಜೊತೆಗೆ ಮತ್ತೊಬ್ಬರನ್ನು ಕರೆದುಕೊಂಡು ಬಂದು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಸಕಲೇಶಪುರ : ನ.02 ರಂದು ಬೃಹತ್ ರಕ್ತದಾನ ಶಿಬಿರ Read More »

ಮಡಿಕೇರಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಆಶಾ| 8 ಜನರಿಗೆ ಅಂಗಾಂಗ ದಾನ

ಸಮಗ್ರ ನ್ಯೂಸ್: ಮಡಿಕೇರಿಯ ಸುದರ್ಶನ ಬಡಾವಣೆಯ ನಿವಾಸಿ ಆಶಾ ಅವರು ಅನಾರೋಗ್ಯಕ್ಕೆ ತುತ್ತಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಅವರ ಕುಟುಂಬಸ್ಥರು ಅಂಗಾಗ ದಾನ ಮಾಡುವ ಮೂಲಕ 8 ಜನರ ಜೀವ ಉಳಿಸಿದ್ದಾರೆ. ಕಣ್ಣು, ಕಿಡ್ನಿ, ಹೃದಯ, ಲಿವರ್ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ. 18 ವರ್ಷದಿಂದ ಬೇಬಿ ಸಿಟಿಂಗ್ ನಡೆಸುತ್ತಿದ್ದ ಪಂದ್ಯಂಡ ಆಶಾ (53) ಕಳೆದ ಶನಿವಾರ ಬೆಂಗಳೂರಿನಲ್ಲಿರುವ ಪುತ್ರಿ ಮನೆಗೆ ಹೋಗಿದ್ದರು. ಈ ವೇಳೆ ಅನಾರೋಗ್ಯಕ್ಕೆ ತುತ್ತಾದ ಆಶಾ ಅವರ ಮೆದುಳು ಪಾರ್ಶ್ವವಾಯುವಿಗೆ ಒಳಗಾಗಿತ್ತು. ತಕ್ಷಣವೇ

ಮಡಿಕೇರಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಆಶಾ| 8 ಜನರಿಗೆ ಅಂಗಾಂಗ ದಾನ Read More »

ಮಂಗಳೂರು: ಕೆಎಸ್ಆರ್ಟಿಸಿ ಯಿಂದ ಮತ್ತೊಂದು ಹೊಸ ಪ್ಯಾಕೇಜ್ ಗೆ ಚಿಂತನೆ

ಸಮಗ್ರ ನ್ಯೂಸ್: ಪ್ಯಾಕೇಜ್ ಟೂರ್‌ಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಕೆಎಸ್‌ಆರ್‌ಟಿಸಿಯಿಂದ ಸದ್ಯದ ಮಟ್ಟಿಗೆ 5-10 ಬಸ್ಸುಗಳನ್ನು ಬಿಡಲಾಗುತ್ತಿದೆ. ವೀಕೆಂಡ್‌ಗಳಲ್ಲಿ ದಕ್ಷಿಣ ಕನ್ನಡದ ಪ್ರಮುಖ ದೇವಸ್ಥಾನಗಳ ದರ್ಶನವಾಗುವಂತೆ ಪ್ಯಾಕೇಜ್ ಟೂರ್‌ಗಳನ್ನು ರೂಪಿಸಲಾಗಿದೆ. ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ ಚಂದ್ರಪ್ಪ ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದರು. ದಸರಾ ಸಂದರ್ಭದಲ್ಲೂ ಕೆಎಸ್‌ಆರ್‌ಟಿಸಿ ಪ್ಯಾಕೇಜ್ ಟೂರ್ ಆಯೋಜಿಸಿತ್ತು. ತಕ್ಕಮಟ್ಟಿಗೆ ಯಶಸ್ವಿಯೂ ಆಗಿತ್ತು. ಈ ಹಿನ್ನೆಲೆಯಲ್ಲಿ ದಿಪಾವಳಿಗೂ ಪ್ಯಾಕೇಜ್ ಟೂರ್ ಹಾಕಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಸದ್ಯಕ್ಕೆ 5-10 ಬಸ್ಸುಗಳನ್ನು ವೀಕೆಂಡ್ ಪ್ರವಾಸ ಯೋಜನೆಗೆ

ಮಂಗಳೂರು: ಕೆಎಸ್ಆರ್ಟಿಸಿ ಯಿಂದ ಮತ್ತೊಂದು ಹೊಸ ಪ್ಯಾಕೇಜ್ ಗೆ ಚಿಂತನೆ Read More »

ಮಂಚಿ: ಸಭಾ ಕೌಶಲ್ಯ ತರಬೇತಿ ಹಾಗೂ ಹಾಗೂ ನಿವೃತ್ತ ಯೋಧರಿಗೆ ಗೌರವ ಸನ್ಮಾನ

ಸಮಗ್ರ ನ್ಯೂಸ್: ಮಂಚಿ -ಕೊಳ್ನಾಡು ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ, ಲಯನ್ಸ್ ಕ್ಲಬ್ ಕೊಳ್ನಾಡು, ಸಾಲೆತ್ತೂರು ಹಾಗೂ ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಸಹಯೋಗದಲ್ಲಿ ಮಂಚಿ ಪ್ರೌಢಶಾಲೆಯ ಸಭಾಂಗಣದಲ್ಲಿ ಒಂದು ದಿನದ ಸಭಾ ಕೌಶಲ್ಯ ತರಬೇತಿ ಕಾರ್ಯಾಗಾರ ಹಾಗೂ ನಿವೃತ್ತ ಯೋಧರಿಗೆ ಗೌರವ ಸನ್ಮಾನ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಉಪನ್ಯಾಸಕರಾದ ಡಾ. ನಾಗವೇಣಿ ಮಂಚಿ, ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, “ಬಾಲ್ಯದಲ್ಲಿ ಶಿಕ್ಷಕರು ಕಟ್ಟಿಕೊಡುವ ಜೀವನ ಮೌಲ್ಯಗಳು ನಮ್ಮ

ಮಂಚಿ: ಸಭಾ ಕೌಶಲ್ಯ ತರಬೇತಿ ಹಾಗೂ ಹಾಗೂ ನಿವೃತ್ತ ಯೋಧರಿಗೆ ಗೌರವ ಸನ್ಮಾನ Read More »

ಕುಡಿದರನ್ನು ಮನೆಗೆ ತಲುಪಿಸುವುದು ಬಾರ್ ಮಾಲೀಕರ ಹೊಣೆ|ವಿವಾದಕ್ಕೆ ಕಾರಣವಾಗಲಿದೆಯಾ ಸಚಿವರ‌ ಹೇಳಿಕೆ?

ಸಮಗ್ರ ನ್ಯೂಸ್: ಕುಡಿದವರನ್ನು ಮನೆಗೆ ತಲುಪಿಸುವುದು ಇನ್ಮುಂದೆ ಬಾರ್‌ ಮಾಲೀಕರ ಜವಾಬ್ಧಾರಿ ಎಂದು ಗೋವಾ ಸಚಿವ ಮೌವಿನ್‌ ಗೋಡಿನ್ಹೊ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೇ ಕಾನೂನಾತ್ಮಕ ನಿಬಂಧನೆಗಳನ್ನು ಪರಿಶೀಲಿಸಲು ಮತ್ತು ಅದರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಅವರ ಜೊತೆಗೆ ಚರ್ಚಿಸುವುದಾಗಿ ಸಚಿವ ಗೋಡಿನ್ಹೊ ಹೇಳಿದ್ದಾರೆ. ಸಚಿವರ ಈ ಹೇಳಿಕೆ ಕುರಿತು ಗೋವಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗೋವಾ ಒಂದು ಪ್ರವಾಸಿ ತಾಣವಾಗಿರುವ ಕಾರಣ, ದೇಶ ವಿದೇಶಗಳಿಂದಲೂ ಪ್ರವಾಸಕ್ಕಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಗೋವಾದಲ್ಲಿ ಹೆಚ್ಚಿನ

ಕುಡಿದರನ್ನು ಮನೆಗೆ ತಲುಪಿಸುವುದು ಬಾರ್ ಮಾಲೀಕರ ಹೊಣೆ|ವಿವಾದಕ್ಕೆ ಕಾರಣವಾಗಲಿದೆಯಾ ಸಚಿವರ‌ ಹೇಳಿಕೆ? Read More »

ಬಿಸಿಸಿಐ ಅಧ್ಯಕ್ಷರಾಗಿ ರೋಜರ್ ಬಿನ್ನಿ ನೇಮಕ!?

ಸಮಗ್ರ ನ್ಯೂಸ್: ರೋಜರ್ ಬಿನ್ನಿ ಈ ಹಿಂದೆ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್‌ 11 ಮತ್ತು 12 ರಂದು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದು. ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್‌ ವಿಜೇತ ತಂಡದ ಸದಸ್ಯರಾಗಿದ್ದ ಕರ್ನಾಟಕದ ರೋಜರ್‌ ಬಿನ್ನಿ ಅವರು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಲಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಬಿನ್ನಿ ಸೌರವ್‌ ಗಂಗೂಲಿ ಅವರ ಸ್ಥಾನವನ್ನು ತುಂಬಲಿದ್ದಾರೆಂದು ಬಿಸಿಸಿಐ ಮೂಲಗಳು

ಬಿಸಿಸಿಐ ಅಧ್ಯಕ್ಷರಾಗಿ ರೋಜರ್ ಬಿನ್ನಿ ನೇಮಕ!? Read More »

ಕೊಟ್ಟಿಗೆಹಾರ : ಉದ್ಯೋಗ ಖಾತ್ರಿ ಕಾಮಗಾರಿಯಲ್ಲಿ ಯಂತ್ರ ಬಳಕೆ| ಗ್ರಾ.ಪಂ ಅಧ್ಯಕ್ಷರ ವಿರುದ್ಧ ಸ್ಥಳಿಯರ ಆಕ್ರೋಶ

ಸಮಗ್ರ ನ್ಯೂಸ್: ಕೂಲಿ ಕಾರ್ಮಿಕರನ್ನೇ ಕೇಂದ್ರಿಕೃತವಾಗಿ ಇಟ್ಟುಕೊಂಡು ಅವರಿಗೆ ವರ್ಷದಲ್ಲಿ ಇಷ್ಟು ದಿನ ಕೂಲಿ ಸಿಗಲಿ, ಜೀವನ ನಡೆಸೋದಕ್ಕೆ ತೊಂದರೆ ಆಗಬಾರದು ಎಂದು ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯನ್ನ ಜಾರಿಗೆ ತಂದಿದೆ. ಆದರೆ, ಜಿಲ್ಲೆಯ ಮೂಡಿಗೆರೆ ತಾಲೂಕಿನ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಕಲವ್ಯ ಶಾಲೆಯ ಮೈದಾನ ಸಮತಟ್ಟು ಮಾಡಲು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನಡೆಯುತ್ತಿದ್ದು ತರುವೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಕೇಂದ್ರ ಸರ್ಕಾರದ ಯೋಜನೆಗೆ ಹಾಲು-ತುಪ್ಪ ಬಿಟ್ಟಿದ್ದಾರೆ ಎಂದು ಸ್ಥಳಿಯರೇ ಆರೋಪಿಸಿ ಗ್ರಾಮ

ಕೊಟ್ಟಿಗೆಹಾರ : ಉದ್ಯೋಗ ಖಾತ್ರಿ ಕಾಮಗಾರಿಯಲ್ಲಿ ಯಂತ್ರ ಬಳಕೆ| ಗ್ರಾ.ಪಂ ಅಧ್ಯಕ್ಷರ ವಿರುದ್ಧ ಸ್ಥಳಿಯರ ಆಕ್ರೋಶ Read More »

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿಗೆ ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ವಿದ್ಯಾರ್ಥಿಗಳ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಕೋರಿ ಅರ್ಜಿ ಸಲ್ಲಿಸಿದ್ದ ಎರಡು ದಂತ ವೈದ್ಯಕೀಯ ಕಾಲೇಜುಗಳಿಗೆ ನ್ಯಾಯಾಲಯದ ಸಮಯ ವ್ಯರ್ಥ ಮಾಡಿರುವುದಕ್ಕಾಗಿ ಕರ್ನಾಟಕ ಹೈಕೋರ್ಟ್ ತಲಾ ರೂ 1 ಲಕ್ಷ ದಂಡ ವಿಧಿಸಿದೆ. “ವಿದ್ಯಾರ್ಥಿಗಳು ನಿಜವಾಗಿಯೂ ಅರ್ಹರಾಗಿದ್ದು ಸೀಟುಗಳಿಂದ ವಂಚಿತರಾಗಿದ್ದರೆ, ಅವರೇ ಸ್ವತಂತ್ರವಾಗಿ ನ್ಯಾಯಾಲಯದ ಮೊರೆ ಹೋಗಬಹುದು. ಆದರೆ, ವಿದ್ಯಾರ್ಥಿಗಳ ಪರವಾಗಿ ಕಾಲೇಜುಗಳು ರಿಟ್ ಅರ್ಜಿಗಳನ್ನು ಸಲ್ಲಿಸುವಂತಿಲ್ಲ’ ಎಂದು ನ್ಯಾಯಾಲಯ ಹೇಳಿದೆ. ಸುಳ್ಯದ ಕೆವಿಜಿ ಡೆಂಟಲ್ ಕಾಲೇಜು ಮತ್ತು ಬೆಂಗಳೂರಿನ ಶ್ರೀ ವೆಂಕಟೇಶ್ವರ ಡೆಂಟಲ್ ಕಾಲೇಜು ಆರು

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿಗೆ ಲಕ್ಷ ದಂಡ ವಿಧಿಸಿದ ಹೈಕೋರ್ಟ್ Read More »

ಮದರಸಾ ಅಧ್ಯಯನ ಪ್ರಾಥಮಿಕ ವರದಿ ಬಹಿರಂಗ| ಗಾಬರಿಗೊಳಗಾದ ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ರಾಜ್ಯದ ಮದರಸಾಗಳ ಚಟುವಟಿಕೆ ಅಧ್ಯಯನಕ್ಕೆ ಶಿಕ್ಷಣ ಇಲಾಖೆ ಸಮಿತಿಯನ್ನು ರಚಿಸಿದ್ದು, ಸದಸ್ಯರು ನೀಡಿರುವ ಪ್ರಾಥಮಿಕ ಹಂತದ ವರದಿಗೆ ಶಿಕ್ಷಣ ಸಚಿವರೇ ಗಾಬರಿ ಆಗಿದ್ದಾರೆ. ಖುದ್ದು ಶಿಕ್ಷಣ ಸಚಿವರೇ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದು, ಕೆಲವು ಮದರಸಾದಲ್ಲಿ ಕಲಿಯಲು ಸೇರಿಕೊಂಡಿದ್ದ ಮಕ್ಕಳು ಎಲ್ಲಿ ಹೋಗಿದ್ದಾರೆ ಎಂಬುದೇ ತಿಳಿದಿಲ್ಲ ಎಂದಿದ್ದಾರೆ. ಮದರಸಾಗಳಲ್ಲಿ ಮಕ್ಕಳ ದಾಖಲಾತಿ ಇರುತ್ತದೆ, ಆದರೆ ಮಕ್ಕಳು ಮದರಸಾಗಳಲ್ಲಿಯೇ ಇರುವುದಿಲ್ಲ ಎಂಬ ಅಚ್ಚರಿಯ ಅಂಶವನ್ನು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಜತೆಗೆ ಕೆಲ ಮದರಸಾಗಳಲ್ಲಿ ಮಕ್ಕಳು ಕೂರಲು

ಮದರಸಾ ಅಧ್ಯಯನ ಪ್ರಾಥಮಿಕ ವರದಿ ಬಹಿರಂಗ| ಗಾಬರಿಗೊಳಗಾದ ಸಚಿವ ಬಿ.ಸಿ ನಾಗೇಶ್ Read More »