ರಾಜ್ಯ

ಶಾಲೆಗಳಿಗೆ ದಸರಾ ರಜೆ ಅ.31ರವರೆಗೂ ವಿಸ್ತರಣೆ?

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಶಾಲೆಗಳಿಗೆ ಮಧ್ಯಂತರ (ದಸರಾ) ರಜೆಯನ್ನು ಅಕ್ಟೋಬರ್‌ 31 ರವರೆಗೆ ವಿಸ್ತರಣೆ ಮಾಡುವಂತೆ ಒತ್ತಡ ಕೇಳಿಬಂದಿದೆ. ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆಗ್ರಹಿಸಿದೆ. ಕರ್ನಾಟಕ ರಾಜ್ಯದಲ್ಲಿ ಮಧ್ಯಂತರ ದಸರಾ ರಜೆಯನ್ನು ಅಕ್ಟೋಬರ್‌ 3ರಿಂದ ಅಕ್ಟೋಬರ್‌ 17 ರ ವರೆಗೆ ನಿಗದಿಪಡಿಸಲಾಗಿದ್ದು, ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ರಜೆಯನ್ನು ನೀಡಲಾಗಿದೆ. ನಿಜವಾಗಿಯೂ ಮಕ್ಕಳಿಗೆ ಹಾಗೂ ಶೈಕ್ಷಣಿಕ […]

ಶಾಲೆಗಳಿಗೆ ದಸರಾ ರಜೆ ಅ.31ರವರೆಗೂ ವಿಸ್ತರಣೆ? Read More »

ಓಲಾ, ಉಬರ್ ಆಟೋ ಮುಟ್ಟುಗೋಲಿಗೆ ಸಾರಿಗೆ ಸಚಿವ ಶ್ರೀರಾಮುಲು ಆದೇಶ

ಸಮಗ್ರ ನ್ಯೂಸ್: ಆಟೋರಿಕ್ಷಾವನ್ನು ನಿರ್ವಹಿಸುತ್ತಿರುವ ಕ್ಯಾಬ್ ಅಗ್ರಿಗೇಟರ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಶನಿವಾರ ಹೇಳಿದ್ದಾರೆ. ಆಯಪ್ ಆಧಾರಿತ ಕ್ಯಾಬ್ ಅಗ್ರಿಗೇಟರ್ಗಳು ಆಟೋರಿಕ್ಷಾವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸುವಂತೆ ಸಾರಿಗೆ ಇಲಾಖೆಯ ನಿರ್ದೇಶನಗಳ ಹೊರತಾಗಿಯೂ ಇನ್ನೂ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೂರುಗಳು ಬಂದ ನಂತರ ಅವರು ಈ ಆದೇಶ ನೀಡಿದ್ದಾರೆ. ಉಲ್ಲಂಘನೆಗಳಿಗಾಗಿ’ ಓಲಾ ಮತ್ತು ಉಬರ್ ನಂತಹ ಅಗ್ರಿಗೇಟರ್ ಗಳಿಗೆ ನೋಟಿಸ್ ಗಳನ್ನು ನೀಡಲಾಗಿದೆ ಮತ್ತು ಮುಂದಿನ ಕ್ರಮವನ್ನು

ಓಲಾ, ಉಬರ್ ಆಟೋ ಮುಟ್ಟುಗೋಲಿಗೆ ಸಾರಿಗೆ ಸಚಿವ ಶ್ರೀರಾಮುಲು ಆದೇಶ Read More »

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ, ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಕೆಲವು ಮಾಹಿತಿ ಸಿಕ್ಕಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದರು. ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ದೇಶಾದ್ಯಂತ ಪಿಎಫ್​ಐ ಕಚೇರಿ ಹಾಗೂ ಮುಖಂಡರ ಮೇಲೆ ಎನ್​ಐಎ ಮತ್ತು ಪೊಲೀಸರು

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ Read More »

ಬರ್ಬರವಾಗಿ ಕೊಲೆಯಾದ ಸರಳವಾಸ್ತು ಗುರೂಜಿಯ ಕೊಲೆ‌ ರಹಸ್ಯವೇನು? ಪೊಲೀಸರ ಚಾರ್ಜ್ ಶೀಟ್ ನಲ್ಲೇನಿದೆ?

ಸಮಗ್ರ ನ್ಯೂಸ್: ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಪೊಲೀಸ್ ಕಮೀಷನರೇಟ್ ನ್ಯಾಯಾಲಯಕ್ಕೆ 840 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಜೆಎಂಎಫ್‌ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾಜ್‌ಶೀಟ್‌ನಲ್ಲಿ ಕೊಲೆಗೆ ಏನು ಕಾರಣ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಸರ್ವೆ ನಂಬರ್ 166/1 ,5.11 ಗುಂಟೆ ಜಮೀನು ವಿಚಾರ ಗುರೂಜಿ ಕೊಲೆಗೆ ಮುಖ್ಯ ಕಾರಣ ಎಂದು ಚಾರ್ಜ್​ ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಚಾರ್ಜ್ ಶೀಟ್ ನಲ್ಲಿನ ರಹಸ್ಯವೇನು?ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಇದ್ದ

ಬರ್ಬರವಾಗಿ ಕೊಲೆಯಾದ ಸರಳವಾಸ್ತು ಗುರೂಜಿಯ ಕೊಲೆ‌ ರಹಸ್ಯವೇನು? ಪೊಲೀಸರ ಚಾರ್ಜ್ ಶೀಟ್ ನಲ್ಲೇನಿದೆ? Read More »

5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಅ.12ಕ್ಕೆ ಉನ್ನತ ಮಟ್ಟದ ಸಭೆ

ಸಮಗ್ರ ನ್ಯೂಸ್: ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕೆ ಗುಣಮಟ್ಟ ಪರಿಶೀಲನೆಗೆ ಪಬ್ಲಿಕ್ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಈ ಪರೀಕ್ಷೆಯನ್ನು ಯಾವ ವರ್ಷದಿಂದ ನಡೆಸಬೇಕು ಎಂಬುದು ಅಕ್ಟೋಬರ್ 12 ರಂದು ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರವಾಗಲಿದೆ.

5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಅ.12ಕ್ಕೆ ಉನ್ನತ ಮಟ್ಟದ ಸಭೆ Read More »

ಟಿಪ್ಪು ಎಕ್ಸ್‌ಪ್ರೆಸ್‌ ರೈಲು ಇನ್ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌| ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಆದೇಶ ಪ್ರತಿಯಲ್ಲಿ ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ನಾಮಕರಣ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಹಲವು ದಿನಗಳಿಂದ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಎಂಬ ಒತ್ತಾಯ ಕೇಳಿ ಬಂದಿತ್ತು.ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದರು. ದೆಹಲಿಯಲ್ಲಿ ಭೇಟಿಯಾಗಿ ಸಂಸದರು ಲಿಖಿತ ಮನವಿ ಕೂಡ ಸಲ್ಲಿಸಿದ್ದರು. ಮೈಸೂರಿಗೆ

ಟಿಪ್ಪು ಎಕ್ಸ್‌ಪ್ರೆಸ್‌ ರೈಲು ಇನ್ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌| ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ Read More »

‘ಅಂತಾರಾಷ್ಟ್ರೀಯ ಟೈಟಾನ್ ಬ್ಯುಸಿನೆಸ್ ಅವಾರ್ಡ್’ ಮುಡಿಗೇರಿಸಿಕೊಂಡ ಸಿಎಂ ಪುತ್ರ ಭರತ್ ಬೊಮ್ಮಾಯಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ, ಯುವ ಉದ್ಯಮಿ ಭರತ್ ಬಿ ಬೊಮ್ಮಾಯಿ ಅವರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಟೈಟಾನ್ ಬಿಸಿನೆಸ್ ಅವಾರ್ಡ್ 2022 ಲಭಿಸಿದೆ. ಅಶ್ವ ಎನರ್ಜಿ ಮತ್ತು ವಾಲ್ಟೆಕ್ ಎಂಬ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಭರತ್ ಬಿ ಬೊಮ್ಮಾಯಿ ಅವರು ಉತ್ಪಾದನೆ ವಿಭಾಗದಲ್ಲಿ ವರ್ಷದ ಜಾಗತಿಕ ವಾಣಿಜ್ಯೋದ್ಯಮಿಯಾಗಿ ಹೊರಹೊಮ್ಮಿದ್ದು 2022 ರ – ಟೈಟಾನ್ ಬಿಸಿನೆಸ್ ಅವಾರ್ಡ್: ಸೀಸನ್ 2 ರಲ್ಲಿ ನಿರ್ಣಾಯಕ ವಿಜಯವನ್ನು ಸಾಧಿಸಿದ್ದಾರೆ. ಈ ಬಗ್ಗೆ ಪ್ರಕಟಣೆಯನ್ನು ಹೊರಡಿಸಿರುವ ಟೈಟಾನ್ ಬಿಸಿನೆಸ್

‘ಅಂತಾರಾಷ್ಟ್ರೀಯ ಟೈಟಾನ್ ಬ್ಯುಸಿನೆಸ್ ಅವಾರ್ಡ್’ ಮುಡಿಗೇರಿಸಿಕೊಂಡ ಸಿಎಂ ಪುತ್ರ ಭರತ್ ಬೊಮ್ಮಾಯಿ Read More »

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಗಿಪ್ಟ್| ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ

ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ನೌಕರರಿಗೆ ದಸರಾ ಹಾಗೂ ದೀಪಾವಳಿ ಗಿಫ್ಟ್ ಎನ್ನುವಂತೆ ತುಟ್ಟಿಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಲಾಗಿತ್ತು. ಇದೀಗ ಸಿಎಂ ಬೊಮ್ಮಾಯಿಯವರು ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.3.75ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದ್ದಾರೆ. ಈ ಕುರಿತಂತೆ ಸಿಎಂ ಟ್ವಿಟ್ಟರ್ ಖಾತೆಯಿಂದ ಟ್ಟಿಟ್ ಮಾಡಿ ಮಾಹಿತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಗಿಪ್ಟ್| ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ Read More »

ರಾಜ್ಯದಲ್ಲಿ ಮತ್ತೆ ಮಳೆ; ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಕೆಲದಿನಗಳಿಂದ ಕೊಂಚ ಕಡಿಮೆಯಾಗಿದ್ದ ಮಳೆ‌ ಮತ್ತೆ ಭಾರತೀಯ ಬಿರುಸು ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ. ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ನಿಧಾನವಾಗಲಿದೆ ಎಂದು ಐಎಂಡಿ ಹೇಳಿದೆ. ಮಳೆಯ

ರಾಜ್ಯದಲ್ಲಿ ಮತ್ತೆ ಮಳೆ; ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ನಾಡಹಬ್ಬ ದಸರಾ ಜಂಬೂ ಸವಾರಿ‌ ನೇರಪ್ರಸಾರ

ಸಮಗ್ರ ನ್ಯೂಸ್: ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುತ್ತಿರುವ ದಸರಾ ಜಂಬೂಸವಾರಿ ನೇರಪ್ರಸಾರ ಕೃಪೆ: ಡಿಡಿ ಚಂದನ… ಕೆಳಗಿನ ಲಿಂಕ್ ಕ್ಲಿಕ್ ಮಾಡಿ…

ನಾಡಹಬ್ಬ ದಸರಾ ಜಂಬೂ ಸವಾರಿ‌ ನೇರಪ್ರಸಾರ Read More »