ರಾಜ್ಯ

ಕೊಟ್ಟಿಗೆಹಾರ: ಪ್ರಕೃತಿ ಹೆಸರಲ್ಲಿ ಅರಣ್ಯಾಧಿಕಾರಿಗಳ ಹಗಲು ದರೋಡೆ….? ಅಧಿಕಾರಿಗಳ ವಿರುದ್ಧ ಬೀದಿಗಿಳಿದ ಜನ….!

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಪ್ರಕೃತಿ ಸೌಂದರ್ಯವನ್ನೇ ಬಂಡವಾಳ ಮಾಡಿಕೊಂಡು ಹಣ ಮಾಡುವ ದಂಧೆಗೆ ಇಳಿದಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದ್ದು, ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಜನ ಅರಣ್ಯ ಅಧಿಕಾರಿಗಳು ಜಿಲ್ಲೆ ಹಾಗೂ ನಾಡಿನ ಸುಪ್ರಸಿದ್ಧ ಪ್ರವಾಸಿ ತಾಣದಲ್ಲಿ ಅರಣ್ಯ ಅಧಿಕಾರಿಗಳು ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ಬೀದಿಗಿಳಿದ ಹೋರಾಟ ನಡೆಸಿದ್ದಾರೆ. ಬಲ್ಲಾಳರಾಯನದುರ್ಗದ ಸುತ್ತಮುತ್ತಲಿನ ಪ್ರದೇಶದ ಸೌಂದರ್ಯ ನೋಡೋ ಕಣ್ಗಳಿಗೆ ಹೊಸದೊಂದು ಪ್ರಪಂಚವನ್ನೇ ಉಣಬಡಿಸುವಂತಿದೆ. ಕಣ್ಣಿನ ದೃಷ್ಠಿ ಮುಗಿದರು ಹಚ್ಚಹಸಿರಿನ ಬೆಟ್ಟಗುಡ್ಡಗಳ ಸಾಲಿಗೆ ಕೊನೆ […]

ಕೊಟ್ಟಿಗೆಹಾರ: ಪ್ರಕೃತಿ ಹೆಸರಲ್ಲಿ ಅರಣ್ಯಾಧಿಕಾರಿಗಳ ಹಗಲು ದರೋಡೆ….? ಅಧಿಕಾರಿಗಳ ವಿರುದ್ಧ ಬೀದಿಗಿಳಿದ ಜನ….! Read More »

ಮಾಂಸಾಹಾರ ಸೇವಿಸುವವರಿಗೆ RSS ಮುಖ್ಯಸ್ಥ ಭಾಗವತ್ ಸಲಹೆ!

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್​ ಭಾಗವತ್​ ಅವರು ‘ಮಾಂಸಾಹಾರ’ ತಿನ್ನುವವರಿಗೆ ಒಂದು ಸಲಹೆ ನೀಡಿದ್ದಾರೆ. ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋಹನ್ ಭಾಗವತ್​, ‘ನಾವು ತಿನ್ನುವ ಆಹಾರ ನಮ್ಮ ಮನಸಿನ ಮೇಲೆ ಪ್ರಭಾವ ಬೀರುತ್ತದೆ. ನೀವು ಆಹಾರ ಕ್ರಮದಲ್ಲಿ ತಪ್ಪಿದರೆ, ಜೀವನದಲ್ಲೂ ತಪ್ಪು ದಾರಿಯಲ್ಲೇ ಸಾಗುತ್ತೀರಿ. ಅತ್ಯಂತ ಹೆಚ್ಚಾಗಿ ಮಾಂಸಾಹಾರವನ್ನೇ ಒಳಗೊಂಡಿರುವ ತಾಮಸ ಆಹಾರಗಳನ್ನು ಆದಷ್ಟು ಕಡಿಮೆ ತಿನ್ನಬೇಕು. ತ್ಯಜಿಸಿದರೂ ತೊಂದರೆಯಿಲ್ಲ. ಪಾಶ್ಚಾತ್ಯ ದೇಶಗಳಲ್ಲಿ ಜನರು ಮಾಂಸಾಹಾರ ತಿನ್ನುವಂತೆ ನಮ್ಮ ದೇಶದಲ್ಲಿಯೂ ಮಾಂಸ

ಮಾಂಸಾಹಾರ ಸೇವಿಸುವವರಿಗೆ RSS ಮುಖ್ಯಸ್ಥ ಭಾಗವತ್ ಸಲಹೆ! Read More »

ಮಿಥುನ್ ರೈ ಚಿಲ್ಲರೆ ಮನುಷ್ಯ; ಅವನ ಮಾತಿಗೆ ಬೆಲೆ ಕೊಡಲ್ಲ| ಸೆಲ್ಫಿ ಹೇಳಿಕೆಗೆ ಶೋಭಾ ಕರಂದ್ಲಾಜೆ ಗರಂ

ಸಮಗ್ರ ನ್ಯೂಸ್: ಇತ್ತೀಚೆಗೆ ರಸ್ತೆ ಅವ್ಯವಸ್ಥೆ ವಿರುದ್ದ ವಿನೂತನ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಯುವ ನಾಯಕ ಮಿಥುನ್ ರೈ ಅವರು ಸಚಿವೆ ಶೋಭಾ ಕರಂದ್ಲಾಜೆ ಕಂಡರೆ ಪೋಟೋ ತೆಗೆದು ಕಳುಹಿಸಿ ಎಂದು ಹೇಳಿದ್ದರು. ಇದಕ್ಕೆ ಈಗ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ‘ಮಿಥುನ್ ರೈ ಎಲ್ಲಿದ್ದಾರೆ. ಸೆಲ್ಫಿ ತೆಗೆದುಕೊಳ್ಳಲು ಮೊದಲು ಅವರು ಬರಲಿ’ ಎಂದು ಸವಾಲೆಸೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಉಡುಪಿಗೆ ಬಂದಿದ್ದೇನೆ ಬನ್ನಿ ಎಲ್ಲರೂ ಸೆಲ್ಫಿ ತೆಗೆಯಿರಿ. ಅವ ಎಲ್ಲಿ ಮಿಥುನ್ ರೈ ಅವನು

ಮಿಥುನ್ ರೈ ಚಿಲ್ಲರೆ ಮನುಷ್ಯ; ಅವನ ಮಾತಿಗೆ ಬೆಲೆ ಕೊಡಲ್ಲ| ಸೆಲ್ಫಿ ಹೇಳಿಕೆಗೆ ಶೋಭಾ ಕರಂದ್ಲಾಜೆ ಗರಂ Read More »

ಇಂದಿನಿಂದ(ಅ.1) 9 ದಿನ ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ದಸರಾ ರಜೆ

ಸಮಗ್ರ ನ್ಯೂಸ್: ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಅಕ್ಟೋಬರ್‌ 1ರಿಂದ 9ರ ವರೆಗೆ ದಸರಾ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಈ ಮೊದಲು ಸರ್ಕಾರಿ ಪದವಿ ಕಾಲೇಜು ಅಧ್ಯಾಪಕರಿಗೆ ಮಾತ್ರ ರಜೆ ಘೋಷಿಸಲಾಗಿತ್ತು.ಖಾಸಗಿ ಮತ್ತು ಅನುದಾನಿತ ಕಾಲೇಜುಗಳವರು ಸರ್ಕಾರಕ್ಕೆ ಪತ್ರ ಬರೆದು ತಮಗೂ ರಜೆ ನೀಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಕೋರಿಕೆ ಪರಿಗಣಿಸಿ ರಜೆ ನೀಡಿರುವುದಾಗಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದಿನಿಂದ(ಅ.1) 9 ದಿನ ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ದಸರಾ ರಜೆ Read More »

ರಾಜ್ಯದ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ| ಹಲವು ತಿಮಿಂಗಿಲಗಳು ಬಲೆಗೆ?

ಸಮಗ್ರ ನ್ಯೂಸ್: ರಾಜ್ಯದ ಹಲವು ಚೆಕ್ ಪೋಸ್ಟ್ ಗಳ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಸಾರಿಗೆ ಇಲಾಖಾಧಿಕಾರಿಗಳಿಗೆ ಶಾಕ್ ನೀಡಿದೆ. ಬೀದರ್ ನ ಹುಮ್ನಾಬಾದ್, ಚೆಕ್ ಪೋಸ್ಟ್, ಬಳ್ಳಾರಿಯ ಹಗರಿ ಚೆಕ್ ಪೋಸ್ಟ್, ಅತ್ತಿಬೆಲೆಯ ಆರ್.ಟಿ.ಒ. ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೀದರ್ -ಕಲಬುರ್ಗಿ ಲೋಕಾಯುಕ್ತ ಎಸ್.ಪಿ. ನೇತೃತ್ವದ ತಂಡ ಬೆಳಗಿನ ಜಾವ ನಾಲ್ಕು ಗಂಟೆಗೆ ದಾಳಿ ನಡೆಸಿದ್ದು, ಚೆಕ್ ಪೋಸ್ಟ್

ರಾಜ್ಯದ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ| ಹಲವು ತಿಮಿಂಗಿಲಗಳು ಬಲೆಗೆ? Read More »

ಚಿಕ್ಕಮಗಳೂರು: ಆರ್.ಎಸ್.ಎಸ್ ಕಾರ್ಯಕರ್ತನ ಕಾರಿನ ಮೇಲೆ ಬರಹ| ಇಬ್ಬರು ಅಪ್ರಾಪ್ತರ ಬಂಧನ

ಸಮಗ್ರ ನ್ಯೂಸ್: ಆರ್ ಎಸ್ಎಸ್‌ ಕಾರ್ಯಕರ್ತ ಕಡೂರಿನ ಡಾ. ಶಶಿಧರ್ ಚಿಂದಿಗೆರೆ ಅವರ ಕಾರಿನ ಮೇಲೆ ಕ್ಷುಲ್ಲಕ ಬರವಣಿಗೆ ಬರೆದ ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸರು ಇಬ್ಬರು ಅಪ್ರಾಪ್ತರನ್ನು ಬಂಧಿಸಿದ್ದಾರೆ. ಕಾರಿನ ಮೇಲೆ ‘ಕಿಲ್ ಯೂ, ಜಿಹಾದಿ ಹಾಗೂ ಇನ್ನಿತರ ಅಶ್ಲೀಲ ಬರಹಗಳನ್ನು ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಸೆ.29ರಂದು ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನೂತನ ಮಾದರಿಯ ಕಾರು ಇದಾಗಿದ್ದು, ಇಂತಹ ಕಾರು ಕೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಲ್ಲಿನಲ್ಲಿ ಬರಹ ಗೀಚಿರುವುದಾಗಿ ಪ್ರಾಥಮಿಕ ತನಿಖೆಯಿಂದ

ಚಿಕ್ಕಮಗಳೂರು: ಆರ್.ಎಸ್.ಎಸ್ ಕಾರ್ಯಕರ್ತನ ಕಾರಿನ ಮೇಲೆ ಬರಹ| ಇಬ್ಬರು ಅಪ್ರಾಪ್ತರ ಬಂಧನ Read More »

ಕೊಟ್ಟಿಗೆಹಾರ: ಕಳ್ಳಬಟ್ಟಿ ಅಡ್ಡೆ ಮೇಲೆ ಪೊಲೀಸ್ ದಾಳಿ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಬಾಳೂರು ಠಾಣಾ ವ್ಯಾಪ್ತಿಯ ಮಲೆಮನೆ ಎಂಬಲ್ಲಿ ಬಾಳೂರು ಪೊಲೀಸರು ಅಕ್ರಮ ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ ನಡೆಸಿದ್ದು ಕಳ್ಳಬಟ್ಟಿ ಹಾಗೂ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಮಲೆ ಮನೆ ಗ್ರಾಮದ ಸುರೇಶ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಬಾಳೂರು ಠಾಣಾಧಿಕಾರಿ ಪವನ್ ಹಾಗೂ ಸಿಬ್ಬಂದಿ ಸುರೇಶ ಎಂಬವರು ಕಳ್ಳಬಟ್ಟಿ ತಯಾರಿಸುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ.ಈ ವೇಳೆ 200 ಲೀಟರ್ ಬೆಲ್ಲದ ಕೊಳೆ ಹಾಗೂ ಎರಡು ಲೀಟರ್ ಕಳ್ಳಬಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂದಿಸಿದ್ದಾರೆ.

ಕೊಟ್ಟಿಗೆಹಾರ: ಕಳ್ಳಬಟ್ಟಿ ಅಡ್ಡೆ ಮೇಲೆ ಪೊಲೀಸ್ ದಾಳಿ Read More »

ಪಿಎಫ್ಐ ಬಳಿಕ SDPI ಮೇಲೆ ನಿಷೇಧದ ತೂಗುಗತ್ತಿ!? ಪಕ್ಷದ ಮೇಲೆ ಚುನಾವಣಾ ಆಯೋಗ ಹದ್ದಿನಕಣ್ಣು

ಸಮಗ್ರ ನ್ಯೂಸ್: ದೇಶವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಸಂಘಟನೆಯನ್ನು ನಿಷೇಧಿಸಿದ ಬಳಿಕ, ಅದರ ರಾಜಕೀಯ ವಿಭಾಗವಾದ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದ (SDPI) ಮೇಲೆ ಚುನಾವಣಾ ಆಯೋಗ ಹದ್ದಿನಗಣ್ಣು ಇಟ್ಟಿದೆ ಎಂದು ತಿಳಿದುಬಂದಿದೆ. ಪಿಎಫ್‌ಐ ಹಾಗೂ ಅದರ ಜತೆ ನಿಕಟವಾಗಿರುವ ಹಲವು ಅಂಗಸಂಸ್ಥೆಗಳನ್ನು ನಿಷೇಧಿಸಿರುವ ಪ್ರಕಟಣೆಯಲ್ಲಿ ಕೇಂದ್ರ ಗೃಹ ಸಚಿವಾಲಯ, ಎಸ್‌ಡಿಪಿಐ ಬಗ್ಗೆ ಏನನ್ನೂ ಹೇಳಿಲ್ಲ. ಆದರೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಎರಡೂ ಕಡೆ ಸಕ್ರಿಯವಾಗಿರುವ ಕಾರ್ಯಕರ್ತರ ಕಾನೂನುಪಾಲನಾ ಸಂಸ್ಥೆಗಳು

ಪಿಎಫ್ಐ ಬಳಿಕ SDPI ಮೇಲೆ ನಿಷೇಧದ ತೂಗುಗತ್ತಿ!? ಪಕ್ಷದ ಮೇಲೆ ಚುನಾವಣಾ ಆಯೋಗ ಹದ್ದಿನಕಣ್ಣು Read More »

ಪಿಎಫ್ಐ, ಎಸ್ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು| ಬಿಜೆಪಿ ಒಂದನ್ನು ಮಾತ್ರ ಯಾಕೆ ಬ್ಯಾನ್ ಮಾಡಿದೆ? – ಕಾಂಗ್ರೆಸ್

ಸಮಗ್ರ ನ್ಯೂಸ್: PFI ಹಾಗೂ SDPI ಒಂದೇ ನಾಣ್ಯದ ಎರಡು ಮುಖಗಳಂತಿದ್ದವು, ಚುನಾವಣಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರುವ SDPI ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್​ ಪ್ರಶ್ನಿಸಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಕಾಂಗ್ರೆಸ್​, PFI ಹಾಗೂ SDPI ಒಂದೇ ನಾಣ್ಯದ ಎರಡು ಮುಖಗಳಂತಿದ್ದವು, ಚುನಾವಣಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರುವ SDPI ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ? SDPIಗೂ ಬಿಜೆಪಿಗೂ ಇರುವುದು “ಯಾವ ಜನ್ಮದ ಮೈತ್ರಿ”? PFI ಜೊತೆಗೆ ಇದ್ದ ಬಿಜೆಪಿಯ ಹೊಂದಾಣಿಕೆ

ಪಿಎಫ್ಐ, ಎಸ್ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು| ಬಿಜೆಪಿ ಒಂದನ್ನು ಮಾತ್ರ ಯಾಕೆ ಬ್ಯಾನ್ ಮಾಡಿದೆ? – ಕಾಂಗ್ರೆಸ್ Read More »

ಪೋಟೋ ಶೋಕಿಗಾಗಿ ಮಾತ್ರ ಗಿಡ ನೆಟ್ಟರು| ಶಾಸಕ ಮಹೇಶ್ ಕುಮಠಳ್ಳಿ ಕ್ಷೇತ್ರದಲ್ಲೊಂದು ಕೋಟಿವೃಕ್ಷದ ಲೂಟಿ ಅಭಿಯಾನ!!

ಸಮಗ್ರ ನ್ಯೂಸ್: ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರ ಸಮ್ಮುಖದಲ್ಲಿ ಅಥಣಿ ತಾಲೂಕಾಡಳಿತದ ಪ್ರಮುಖ ಅಧಿಕಾರಿಗಳ ಉಪಸ್ಥಿತಿಯಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಕೋಟಿ ವೃಕ್ಷ ಅಭಿಯಾನ ನಡೆಸಲಾಯಿತು. ಸ್ವಾತಂತ್ರದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಕಳೆದ ತಿಂಗಳು ನೆಡಲಾಗಿದ್ದ 75 ಗಿಡಗಳಲ್ಲಿ ಇಂದು ಒಂದೂ ಗಿಡವೂ ಜೀವಂತ ಇಲ್ಲದಿರುವುದು ನೋಡಿದರೆ ಕೇವಲ ಪೊಟೊ ಶೋಕಿಗಾಗಿ ತೋಟಗಾರಿಕೆ ಇಲಾಖೆಯವರು ಈ ಅಭಿಯಾನ ಹಮ್ಮಿಕೊಂಡಿದ್ರಾ ? ಎಂದು ಜಿಜ್ಞಾಸೆ ಮೂಡುತ್ತಿದೆ. ಇಡೀ ದೇಶದಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ವಿವಿಧ

ಪೋಟೋ ಶೋಕಿಗಾಗಿ ಮಾತ್ರ ಗಿಡ ನೆಟ್ಟರು| ಶಾಸಕ ಮಹೇಶ್ ಕುಮಠಳ್ಳಿ ಕ್ಷೇತ್ರದಲ್ಲೊಂದು ಕೋಟಿವೃಕ್ಷದ ಲೂಟಿ ಅಭಿಯಾನ!! Read More »