ರಾಜ್ಯ

ವಿವಿಧ ಕಡೆ ಎನ್ಐಎ ದಾಳಿ | ಕೊಪ್ಪಳದಲ್ಲಿ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಬಂಧನ

ಕೊಪ್ಪಳ: ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ. ಈ ನಡುವೆ ಕರ್ನಾಟಕದ ಕೊಪ್ಪಳ ಜಿಲ್ಲೆಯ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಪೊಲೀಸರು ಗಂಗಾವತಿ ನಗರದಲ್ಲಿರುವ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಫೈಯಾಜ್‍ನನ್ನು ಬಂಧಿಸಿದ್ದಾರೆ. ಎಸ್‍ಪಿ ನೇತೃತ್ವದಲ್ಲಿ ಪೊಲೀಸ್ […]

ವಿವಿಧ ಕಡೆ ಎನ್ಐಎ ದಾಳಿ | ಕೊಪ್ಪಳದಲ್ಲಿ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಬಂಧನ Read More »

ಚಿಕ್ಕಮಗಳೂರು: ಬಸ್ಸಿನಿಂದ ಬಿದ್ದು ನಿಷ್ಕ್ರಿಯಗೊಂಡ ಯುವತಿಯ ಮೆದುಳು| ನೋವಿನ ನಡುವೆಯೂ ಅಂಗಾಂಗ‌ ದಾನಕ್ಕೆ ನಿರ್ಧರಿಸಿದ‌ ಕುಟುಂಬಸ್ಥರು|

ಸಮಗ್ರ ನ್ಯೂಸ್: ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ ಯುವತಿಯೋರ್ವಳು ಬಸ್ಸಿನಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಯುವತಿ ಗಂಭೀರ ಗಾಯಗೊಂಡಿದ್ದು, ಮೆದುಳು ನಿಷ್ಕ್ರಿಯಗೊಂಡ ಕಾರಣ ಯುವತಿಯ ಮನೆಯವರು ನೋವಿನ ನಡುವೆಯೂ ಮಾನವೀಯತೆ ಮೆರೆದಿದ್ದು, ಅಂಗಾಂಗ ದಾನಕ್ಕೆ ನಿರ್ಧರಿಸಿದ್ದಾರೆ. ಈ ಸಂಬಂಧ ಯುವತಿಯ ಹೃದಯವನ್ನು ಕಸಿ ಮಾಡಲು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಜೀವಂತ ಹೃದಯವನ್ನು ವಿಶೇಷ ಹೆಲಿಕಾಪ್ಟರ್ ಮೂಲಕ ರವಾನಿಸಲಾಗಿದೆ. ಒಟ್ಟು 9 ಅಂಗಾಂಗಗಳನ್ನು ದಾನ ಮಾಡಲಾಗುತ್ತಿದ್ದು, ಯುವತಿಯ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ.

ಚಿಕ್ಕಮಗಳೂರು: ಬಸ್ಸಿನಿಂದ ಬಿದ್ದು ನಿಷ್ಕ್ರಿಯಗೊಂಡ ಯುವತಿಯ ಮೆದುಳು| ನೋವಿನ ನಡುವೆಯೂ ಅಂಗಾಂಗ‌ ದಾನಕ್ಕೆ ನಿರ್ಧರಿಸಿದ‌ ಕುಟುಂಬಸ್ಥರು| Read More »

ನಾಳೆಯಿಂದ ಮತ್ತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಸಮಗ್ರ ನ್ಯೂಸ್: ನಾಳೆಯಿಂದ ಮತ್ತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ ನಾಳೆಯಿಂದ ಚದುರಿದ ರೀತಿ ಮಳೆಯಾಗುವ ಸಾಧ್ಯತೆಗಳಿವೆ. ಶುಕ್ರವಾರ ಮತ್ತು ಶನಿವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

ನಾಳೆಯಿಂದ ಮತ್ತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ Read More »

ಬೆಳಗಾವಿ: ಗ್ರಾ.ಪಂ ಕಚೇರಿಯಲ್ಲಿ ಅಧ್ಯಕ್ಷೆಯ ಗಂಡನ ದರ್ಬಾರ್|ಭರ್ಜರಿ ಬರ್ತ್ ಡೇಗೆ ಪಂಚಾಯತ್ ಸಿಬ್ಬಂದಿ ಸಾಥ್

ಸಮಗ್ರ ನ್ಯೂಸ್: ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷೆಯ ಗಂಡನ ದರ್ಬಾರ್ ನಿಂದ ಭರ್ಜರಿ ಬರ್ತ್ ಡೇ ಆಚರಿಸಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಪಂಚಾಯತ್ ನಲ್ಲಿ ನಡೆದಿದೆ. ಈ ಗ್ರಾಮ ಪಂಚಾಯತ್ ನಲ್ಲಿ ಸವಿತ ಎಂಬಾಕೆ ಅಧ್ಯಕ್ಷರಾಗಿದ್ದಾರೆ. ಇದೀಗ ಆಕೆಯ ಪತಿ ಅಪ್ಪಾಸಾಹೇಬ್ ಚೌಗಲಾ ತನ್ನ ಹುಟ್ಟುಹಬ್ಬವನ್ನು ಇದೇ ಪಂಚಾಯತ್ ಸಭಾಂಗಣದಲ್ಲಿ ಆಚರಿಸಿಕೊಂಡಿದ್ದಾರೆ. ಇದಲ್ಲದೆ ಈ ಪಾರ್ಟಿಗೆ ಗ್ರಾಮ ಪಂಚಾಯತ್ ಸಿಬ್ಬಂದಿ ಕೂಡ ಸಾಥ್ ನೀಡಿದ್ದಾರೆ. ಇನ್ನು ನಿಯಮದ ಪ್ರಕಾರ ಸರಕಾರಿ ಕಚೇರಿಗಳಲ್ಲಿ

ಬೆಳಗಾವಿ: ಗ್ರಾ.ಪಂ ಕಚೇರಿಯಲ್ಲಿ ಅಧ್ಯಕ್ಷೆಯ ಗಂಡನ ದರ್ಬಾರ್|ಭರ್ಜರಿ ಬರ್ತ್ ಡೇಗೆ ಪಂಚಾಯತ್ ಸಿಬ್ಬಂದಿ ಸಾಥ್ Read More »

ಹುಣಸೂರು: ಸರ್ಕಾರಿ ಜಾಗ ಪ್ರಭಾವಿಗಳ‌ ಪಾಲು| ಒತ್ತುವರಿ ಜಮೀನಿನಲ್ಲಿ ಅಂಗನವಾಡಿ ನಿರ್ಮಿಸಲು ಒತ್ತಾಯ

ಸಮಗ್ರ ನ್ಯೂಸ್: ಸರ್ಕಾರಿ ಜಾಗ ಪ್ರಭಾವಿಗಳ ಪಾಲಾಗುತ್ತಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಕನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮೂಕನಹಳ್ಳಿ ಗ್ರಾಮದ ಭರತ್ ಎಂಬವವರು ಗ್ರಾಮದ ಉಪಯೋಗಕ್ಕಾಗಿ ಬಿಟ್ಟಿದ್ದ ಸರ್ಕಾರಿ ಜಾಗದಲ್ಲಿ ಅಕ್ರಮ ಮಾಡಿಕೊಂಡು ಮನೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.ಈ ಹಿನ್ನಲೆ ಅದನ್ನು ತಡೆದು ಸರ್ಕಾರದ ವಶಕ್ಕೆ ಪಡೆಯ ಬೇಕಿದೆ. ಅದಲ್ಲದೆ ಗ್ರಾಮದಲ್ಲಿ 10ವರ್ಷಗಳಿಂದ ಅಂಗನವಾಡಿ ಕಟ್ಟಡ ಇಲ್ಲದೆ ಬಾಡಿಗೆ ಮನೆಯಲ್ಲಿ ಅಂಗನವಾಡಿ ನಡೆಯುತ್ತಿದೆ. ಹಾಗಾಗಿ ಈ ಸರಕಾರಿ ಜಾಗದಲ್ಲಿ ಅಂಗನವಾಡಿ ಕಟ್ಟಬೇಕು

ಹುಣಸೂರು: ಸರ್ಕಾರಿ ಜಾಗ ಪ್ರಭಾವಿಗಳ‌ ಪಾಲು| ಒತ್ತುವರಿ ಜಮೀನಿನಲ್ಲಿ ಅಂಗನವಾಡಿ ನಿರ್ಮಿಸಲು ಒತ್ತಾಯ Read More »

ರಾಜಧಾನಿಯ ಹಲವೆಡೆ ‘ಪೇ-ಸಿಎಂ’ ಪೋಸ್ಟರ್| ಮೂರು ಠಾಣೆಯಲ್ಲಿ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಬೆಂಗಳೂರು ನಗರದಾದ್ಯಂತ ಕ್ಯೂಆರ್ ಕೋಡ್‌ನೊಂದಿಗೆ ಪೇ-ಸಿಎಂ ಪೋಸ್ಟರ್‌ಗಳು ಕಂಡು ಬಂದಿದ್ದು, ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ‘ಪೇ-ಸಿಎಂ’ ಶೀರ್ಷಿಕೆಯ ಪೋಸ್ಟರ್‌ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ. ಈ ಪ್ರಕರಣ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ನೀಡಿರುವ ದೂರಿನ ಅನ್ವಯ ಪಬ್ಲಿಕ್ ಪೋಸ್ಟ್ ಡಿಸ್ಫಿಗರ್ಮೆಂಟ್ ಆಯಕ್ಟ್ ಅಡಿ ಕೇಂದ್ರ ವಿಭಾಗದ ಮೂರು ಠಾಣೆಗಳಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರಿನ ಆರ್.ಟಿ.ನಗರ, ಸದಾಶಿವನಗರ, ಶೇಷಾದ್ರಿಪುರಂ, ಭಾರತಿನಗರ, ಹೈಗ್ರೌಂಡ್ಸ್, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕೇಸ್

ರಾಜಧಾನಿಯ ಹಲವೆಡೆ ‘ಪೇ-ಸಿಎಂ’ ಪೋಸ್ಟರ್| ಮೂರು ಠಾಣೆಯಲ್ಲಿ ಪ್ರಕರಣ ದಾಖಲು Read More »

ವಿಶ್ವವಿದ್ಯಾಲಯದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ವಿಶ್ವವಿದ್ಯಾನಿಲಯವು ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2022-23 ನೇ ಶೈಕ್ಷಣಿಕ ವರ್ಷಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಪ್ರತಿಗಳನ್ನು ಸೆಪ್ಟೆಂಬರ್ 26 ರಂದು ಅಥವಾ ಅದರ ಮೊದಲು ಆಯಾ ಇಲಾಖೆಗಳ ಮುಖ್ಯಸ್ಥರಿಗೆ ಸಲ್ಲಿಸಬೇಕಾಗುತ್ತದೆ ಬೆಂಗಳೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಹೊರಡಿಸಿದ ಪ್ರಕಟಣೆಯಲ್ಲಿ, “ಆರ್ಕಿಟೆಕ್ಚರ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್

ವಿಶ್ವವಿದ್ಯಾಲಯದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕ್ಯಾನ್ಸರ್ ನಿಂದ ಬಳಲುವ ವಿದ್ಯಾರ್ಥಿನಿಗೆ, ಪ್ರೇತದ ವೇಷ ಧರಿಸಿ ಹಣ ಸಂಗ್ರಹಕ್ಕೆ ನೆರವಾದ ವ್ಯಕ್ತಿ; ಇವರಿಗೆ ಸಾಥ್ ನೀಡಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್ : ವ್ಯಕ್ತಿಯೋರ್ವ ಕ್ಯಾನ್ಸರ್ ನಿಂದ ಬಳಲುತ್ತಿರುವ ವಿದ್ಯಾರ್ಥಿನಿಯ ಸಹಾಯಕ್ಕಾಗಿ ಪ್ರೇತದ ವೇಷ ಧರಿಸಿ ಜನರಿಂದ ಹಣ ಸಂಗ್ರಹಣೆ ಮಾಡಿ ನೆರವಾಗಿದ್ದಾರೆ. ಇವರಿಗೆ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ. ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಕಾಲೇಜ್ ವಿದ್ಯಾರ್ಥಿನಿ ರಶ್ಮಿತಾ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. ಇದೀಗ ಅವರಿಗೆ ಬೆಂಗಳೂರಿನ ಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ರಶ್ಮಿಕಾ ಚಿಕಿತ್ಸೆಗಾಗಿ 20 ಲಕ್ಷಕ್ಕೂ ಹೆಚ್ಚಿನ ಹಣದ ಅವಶ್ಯಕತೆ ಇದೆ. ವಿದ್ಯಾರ್ಥಿನಿ ರಶ್ಮಿತಾ, ತಂದೆ ತಾಯಿ ಕಡು ಬಡವರಾಗಿದ್ದು ಆಸ್ಪತ್ರೆಯ

ಕ್ಯಾನ್ಸರ್ ನಿಂದ ಬಳಲುವ ವಿದ್ಯಾರ್ಥಿನಿಗೆ, ಪ್ರೇತದ ವೇಷ ಧರಿಸಿ ಹಣ ಸಂಗ್ರಹಕ್ಕೆ ನೆರವಾದ ವ್ಯಕ್ತಿ; ಇವರಿಗೆ ಸಾಥ್ ನೀಡಿದ ವಿದ್ಯಾರ್ಥಿಗಳು Read More »

ಮಹಾನಗರ ಪಾಲಿಕೆಯ ಆಹಾರ ಮೇಳ ಆಯೋಜನೆ ಆಸಕ್ತರಿಂದ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ : ಮಹಾನಗರ ಪಾಲಿಕೆಯು ಸೆ. 24 ಮತ್ತು 27 ರಂದು ಅಡುಗೆ ಸ್ಪರ್ಧೆ ಮತ್ತು ತಿನ್ನುವ ಸ್ಪರ್ಧೆ ಹಾಗೂ ಸೆ. 26 ರಿಂದ ಅ.05 ರವರೆಗೆ ಆಹಾರ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. 24/09/2022 ರಂದು ನಗರದ ಶ್ರೀ ನಿಜಲಿಂಗಪ್ಪ ಸಮುದಾಯ ಭವನದಲ್ಲಿ ಮಧ್ಯಾಹ್ನ 2 ರಿಂದ 3 ರವರೆಗೆ ಅತ್ತೆ ಸೊಸೆಯರಿಗೆ ಅಡುಗೆ ಮಾಡುವ ಸ್ಪರ್ಧೆ ಹಾಗೂ ಸಂಜೆ 04 ರಿಂದ 05ರವರೆಗೆ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಅಡುಗೆ

ಮಹಾನಗರ ಪಾಲಿಕೆಯ ಆಹಾರ ಮೇಳ ಆಯೋಜನೆ ಆಸಕ್ತರಿಂದ ಅರ್ಜಿ ಆಹ್ವಾನ Read More »

ಸಿಎಂ ಅವರಿಗೆ ದಸರಾ ಮಹೋತ್ಸವದ ಅಹ್ವಾನ ಪತ್ರಿಕೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್

ಸಮಗ್ರ ನ್ಯೂಸ್: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ದಸರಾ ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಿದರು. ಬೃಹತ್ ನೀರಾವರಿ ಸಚಿವರಾದ ಗೋವಿಂದ್ ಕಾರಜೋಳ, ಶಾಸಕರಾದ ಎಲ್. ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೆಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ.ಕುಬೇರಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ

ಸಿಎಂ ಅವರಿಗೆ ದಸರಾ ಮಹೋತ್ಸವದ ಅಹ್ವಾನ ಪತ್ರಿಕೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್ Read More »