ರಾಜ್ಯ

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಬೃಹದಾಕಾರದ ಮರ; ಓರ್ವ ಬಲಿ

ಸಮಗ್ರ ನ್ಯೂಸ್: ಚಲಿಸುತ್ತಿರುವ ಬೈಕ್ ಮೇಲೆ ಬೃಹದಾಕಾರದ ಮರ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಗರದ ಆರ್​.ಟಿ.ಓ ಸರ್ಕಲ್ ಬಳಿ ನಡೆದಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ಈ ದುರಂತ ಸಂಭವಿಸಿದೆ.ಬೃಹದಾಕಾರದ ಮರ ಬಿದ್ದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಯ ಹೆಸರು ಇನ್ನು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಬೃಹದಾಕಾರದ ಮರ; ಓರ್ವ ಬಲಿ Read More »

” ನೀರು ಕೊಡೋ ಮಗನೇ ಏಕವಚನದಲ್ಲಿ ಕೇಳಿದಕ್ಕೆ ಎರಡು ಆಟೋ ಚಾಲಕರ ಗಲಾಟೆಯಲ್ಲಿ ಓರ್ವ ಸಾವು

ಸಮಗ್ರ ನ್ಯೂಸ್: “ನೀರು ಕೊಡೋ ಮಗನೇ’ ಎಂದು ಏಕವಚನದಲ್ಲಿ ಕೇಳಿದ ವಿಚಾರಕ್ಕೆ ಇಬ್ಬರು ಆಟೋ ಚಾಲಕರ ನಡುವೆ ನಡೆದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರ್‌.ಟಿ.ನಗರ ನಿವಾಸಿ ಸಿದ್ದಿಕ್‌ (23) ಕೊಲೆಯಾದ ಆಟೋ ಚಾಲಕ. ಈ ಸಂಬಂಧ ಅಜಯ್‌ ಎಂಬ ಆಟೋ ಚಾಲಕನನ್ನು ಬಂಧಿಸಲಾಗಿದೆ. ಜಾಲಹಳ್ಳಿ ಕ್ರಾಸ್‌ನಲ್ಲಿರುವ ಆಟೋ ನಿಲ್ದಾಣದಲ್ಲಿ ರಾತ್ರಿ 11.30ರ ಸುಮಾರಿಗೆ ಅಜಯ್‌ ಎಂಬಾತ ಆಟೋ ನಿಲ್ಲಿಸಿಕೊಂಡು ನಿಂತಿದ್ದ. ಅದೇ ವೇಳೆಯಲ್ಲಿ ಸಿದ್ದಿಕ್‌ ಆಟೋ ನಿಲ್ದಾಣಕ್ಕೆ ಬಂದಿದ್ದಾನೆ. ಆಗ

” ನೀರು ಕೊಡೋ ಮಗನೇ ಏಕವಚನದಲ್ಲಿ ಕೇಳಿದಕ್ಕೆ ಎರಡು ಆಟೋ ಚಾಲಕರ ಗಲಾಟೆಯಲ್ಲಿ ಓರ್ವ ಸಾವು Read More »

ಬಿಗ್ ಬಾಸ್ ರಿಯಾಲಿಟಿ ಶೋ ಗೆ ಕಾಲಿಡಲಿದ್ದಾರಾ ಅನಿರುದ್ಧ್

ಬೆಂಗಳೂರು : ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಂದ ನಂತರ ನಟ ಅನಿರುದ್ಧ್‌ ರಿಯಾಲಿಟಿ ಶೋ ಬಿಗ್‌ ಬಾಸ್‌ ಮನೆಗೆ ಹೋಗಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ರಿಯಾಲಿಟಿ ಶೋ ಬಿಗ್‌ ಬಾಸ್‌-9ರ ಪೂರ್ಣ ಪ್ರಮಾಣದ ಆವೃತ್ತಿಯಲ್ಲಿ ಅನಿರುದ್ಧ್‌ ಕಾಣಿಸಿಕೊಳ್ಳಲಿದ್ದಾರೆ. ಬಿಗ್‌ ಬಾಸ್‌ ಓಟಿಟಿ ಶೋ ಕೊನೆಯ ಹಂತಕ್ಕೆ ತಲುಪಿದ್ದು, ಈ ವಾರ ಫಿನಾಲೆ ನಡೆಯಲಿದೆ. ಇದರ ಬೆನ್ನಲ್ಲೇ ಟಿವಿಯಲ್ಲಿ ಪ್ರಸಾರವಾಗುವ 100 ದಿನಗಳ ರಿಯಾಲಿಟಿ ಶೋನಲ್ಲಿ ಅನಿರುದ್ಧ್‌ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ಆವೃತ್ತಿಯಲ್ಲೇ ಅನಿರುದ್ಧ್‌ ಬಿಗ್‌

ಬಿಗ್ ಬಾಸ್ ರಿಯಾಲಿಟಿ ಶೋ ಗೆ ಕಾಲಿಡಲಿದ್ದಾರಾ ಅನಿರುದ್ಧ್ Read More »

ಕನ್ನಡದ ಖ್ಯಾತ ಲೇಖಕ, ಸಮಾಜಸೇವಕ ಡಾ.ರಾಮಕೃಷ್ಣ ರಾವ್ ನಿಧನ

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಕನ್ನಡದ ಮಹಾನ್ ವಿಜ್ಞಾನ ಬರಹಗಾರ, ಪ್ರಾಧ್ಯಾಪಕ, ಸಮಾಜಸೇವಕ ಡಾ.ರಾಮಕೃಷ್ಣರಾವ್(87) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ​ ನಿಧನರಾಗಿದ್ದಾರೆ. ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಭೌತಶಾಸ್ತ್ರ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳ ಮುಖ್ಯಸ್ಥರಾಗಿ ಸೇವೆಸಲ್ಲಿಸಿ ನಿವೃತ್ತರಾಗಿದ್ದಾರೆ. ನಿವೃತ್ತಿಯ ನಂತರ ಸಂದರ್ಶಕ ಪ್ರಾಧ್ಯಾಪಕರಾಗಿ ಬೆಂಗಳೂರು ನಗರದ ಯುವ ವಿದ್ಯಾರ್ಥಿಗಳಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸಲು ಬೆಂಗಳೂರು ಆಕಾಶವಾಣಿಯನ್ನು ಬಳಸಿಕೊಂಡು ವಿಜ್ಞಾನ ಪ್ರಸಾರದಲ್ಲಿ ಖಗೋಳಶಾಸ್ತ್ರ,ನಕ್ಷತ್ರಗಳು, ಗ್ರಹಗಳಿಗೆ ಸಂಬಂಧಿಸಿದ ನಕ್ಷತ್ರ ವೀಕ್ಷಣೆ, ಮುಂತಾದ ಕಾರ್ಯಕ್ರಮಗಳನ್ನು ಸತತವಾಗಿ ನಡೆಸಿಕೊಟ್ಟ ಪ್ರಮುಖರಾಗಿದ್ದಾರೆ.

ಕನ್ನಡದ ಖ್ಯಾತ ಲೇಖಕ, ಸಮಾಜಸೇವಕ ಡಾ.ರಾಮಕೃಷ್ಣ ರಾವ್ ನಿಧನ Read More »

ಗದರಿದ ಟೀಚರ್ ಗೆ ಅಪ್ಪಿ ಮುತ್ತಿಕ್ಕಿದ ಪುಟಾಣಿ| ಈ ಗುರುಶಿಷ್ಯರ ನಿಷ್ಕಲ್ಮಶ ಪ್ರೀತಿಯ ವಿಡಿಯೋ ವೈರಲ್

ಸಮಗ್ರ ಡಿಜಿಟಲ್ ಡೆಸ್ಕ್: ಮಕ್ಕಳು ತಮ್ಮ ಮನಸ್ಸಿನ ಭಾವನೆ ವ್ಯಕ್ತಪಡಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ. ಅದು ಕೋಪವಾದರೂ ಸರಿ, ಪ್ರೀತಿಯಾದರೂ ಸರಿ. ತಮ್ಮ ಭಾವನೆಯನ್ನು ಒಂದು ಚೂರೂ ಅಳುಕಿಲ್ಲದೆ ವ್ಯಕ್ತಪಡಿಸಿ ಬಿಡುತ್ತಾರೆ. ಹಿಂದೆಲ್ಲಾ ವಿದ್ಯಾರ್ಥಿಗಳು ತಪ್ಪು ಮಾಡಿದರೆ ಶಿಕ್ಷಕರು, ಹಿಡಿದು ಬಾರಿಸಿಬಿಡುತ್ತಿದ್ದರು. ಶಿಕ್ಷಕರ ಕೈಯಲ್ಲಿ ಯಾವಾಗಲೂ ಒಂದು ಬೆತ್ತ ಇದ್ದೇ ಇರುತ್ತಿತ್ತು. ಆ ಬೆತ್ತಕ್ಕೆ ಹೆದರಿಯೇ ವಿದ್ಯಾರ್ಥಿಗಳು ತೀಟೆ ಮಾಡುವ ಯೋಚನೆ ಕೂಡಾ ಮಾಡುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ. ಶಿಕ್ಷಕರು ಮಕ್ಕಳ ಮೇಲೆ ಕೈ ಮಾಡುವಂತಿಲ್ಲ.

ಗದರಿದ ಟೀಚರ್ ಗೆ ಅಪ್ಪಿ ಮುತ್ತಿಕ್ಕಿದ ಪುಟಾಣಿ| ಈ ಗುರುಶಿಷ್ಯರ ನಿಷ್ಕಲ್ಮಶ ಪ್ರೀತಿಯ ವಿಡಿಯೋ ವೈರಲ್ Read More »

ಕೆಎಸ್ ಪಿ 3484 ಕಾನ್ ಸ್ಟೇಬಲ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ| ತೃತೀಯ ಲಿಂಗಿಗಳಿಗೂ ಅವಕಾಶ

ಸಮಗ್ರ ನ್ಯೂಸ್: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,484 ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪೇದೆ (ಡಿಆರ್) ಹಾಗೂ ನಗರ ಸಶಸ್ತ್ರ ಮೀಸಲು ಪೊಲೀಸ್ (ಸಿಎಆರ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸೋಮವಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿದೆ.ಶೀಘ್ರದಲ್ಲೇ ವೆಬ್‌ಸೈಟ್‌ನಲ್ಲಿ ಪೊಲೀಸ್ ಇಲಾಖೆ ನೋಟಿಫಿಕೇಶನ್‌ನ್ನು ಪ್ರಕಟಿಸಲಿದೆ. ಅರ್ಹ ಅಭ್ಯರ್ಥಿಗಳು ಇದೇ ತಿಂಗಳು ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 31ರವರರೆಗೆ Ksp-recruitment.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯದ ಎಲ್ಲ ಜಿಲ್ಲೆ ಹಾಗೂ ಕಮಿಷನರೇಟ್ ವ್ಯಾಪ್ತಿಯಯಲ್ಲಿ

ಕೆಎಸ್ ಪಿ 3484 ಕಾನ್ ಸ್ಟೇಬಲ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ| ತೃತೀಯ ಲಿಂಗಿಗಳಿಗೂ ಅವಕಾಶ Read More »

2500 ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

2500 ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ Read More »

ಚಾರ್ಮಾಡಿ ಘಾಟ್ ರಸ್ತೆ ಬದಿ ಭೂ ಕುಸಿತ,ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ತೀವ್ರ ಮಳೆಯಿಂದ ಬಿದಿರುತಳ ಸಮೀಪ ಹೆದ್ದಾರಿಯ ಬದಿ ಕುಸಿದಿದ್ದು ಆತಂಕ ಎದುರಾಗಿದೆ.ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟ್ ನಲ್ಲಿ ವಿಪರೀತ ಮಳೆಯಿಂದ ಶನಿವಾರ ರಸ್ತೆಯ ಬದಿ ಕುಸಿದಿದೆ. ಸಂಚಾರಕ್ಕೆ ಯಾವುದೇ ಅಡಚಣೆಯಾಗಿಲ್ಲ:ರಸ್ತೆಯ ಬದಿಗೆ ತಡೆಗೋಡೆ ನಿರ್ಮಾಣವಾದ ಜಾಗದಲ್ಲೇ ಮಳೆಯ ನೀರು ನುಗ್ಗಿದ ಪರಿಣಾಮ ತಡೆಗೋಡೆ ಸಮೇತ ಮಣ್ಣು ಕುಸಿದಿದೆ. ರಾತ್ರಿಯ ಹೊತ್ತಲ್ಲಿ ಸಂಚಾರಕ್ಕೆ ಅನುಕೂಲ ಮಾಡಿ ಕೊಡಲಾಗಿದೆ. ಇನ್ನೂ ರಸ್ತೆ ಕುಸಿದ ಜಾಗದಲ್ಲಿ ಪ್ರಪಾತ

ಚಾರ್ಮಾಡಿ ಘಾಟ್ ರಸ್ತೆ ಬದಿ ಭೂ ಕುಸಿತ,ಸ್ಥಳಕ್ಕೆ ಅಧಿಕಾರಿಗಳ ಭೇಟಿ Read More »

ಸೆ.26 ರಿಂದ ಅ.10ರವರೆಗೆ ದ.ಕ ಜಿಲ್ಲೆಯಲ್ಲಿ ದಸರಾ ರಜೆ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ಮಂಗಳೂರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ದ.ಕ ಜಿಲ್ಲೆಯಲ್ಲಿ ದಸರಾ ರಜೆಯನ್ನು ಪರಿಶೀಲನೆ ಮಾಡಿದ್ದು, ಸೆ.26 ರಿಂದ ಅ.10ರವರೆಗೆ ನೀಡಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವ ರಾಜ್ಯ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಥಳೀಯ ಮಟ್ಟದ ಮನವಿ ಮೇರೆಗೆ ದಸರಾ ರಜೆಯನ್ನು ದ.ಕ ಜಿಲ್ಲೆಗೆ ಪೂರಕವಾಗುವಂತೆ ಪರಿಶೀಲಿಸಲಾಗಿದ್ದು, ಪ್ರಕಟಣೆ ಹೊರಡಿಸುವಂತೆ ಸೂಚಿಸಿದ್ದಾರೆ. ಆದರೆ ಅ.2ರ ಗಾಂಧಿ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ.

ಸೆ.26 ರಿಂದ ಅ.10ರವರೆಗೆ ದ.ಕ ಜಿಲ್ಲೆಯಲ್ಲಿ ದಸರಾ ರಜೆ – ಸಚಿವ ಬಿ.ಸಿ ನಾಗೇಶ್ Read More »

ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಾವಕಾಶ| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಕರ್ನಾಟಕದ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಒನ್ ಆಫೀಸರ್ ಉದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ಪ್ರಕಟಿಸಿದೆ ಪ್ರತಿಯೊಂದು ಹಳ್ಳಿಯಲ್ಲಿ ಎಲ್ಲಾ ರೀತಿಯ ಆನ್ ಲೈನ್ ಸೇವೆಯನ್ನು ಜನರಿಗೆ ಒದಗಿಸಲು ಗ್ರಾಮ ಒನ್ ಆಫೀಸರ್ ಅಧಿಕಾರಿಗಳನ್ನು ಆಯ್ಕೆಮಾಡಲಾಗುತ್ತದೆ ಕರ್ನಾಟಕದಾದ್ಯಂತ 25,000 ಗ್ರಾಮ ಗ್ರಾಮ ಒನ್ ಆಫೀಸರ್ ಗಳನ್ನು ಭರ್ತಿಮಾಡಲು ( ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮತ್ತು ಆಯ್ಕೆ) (ಸಾಮಾನ್ಯ) ನಿಯಮಗಳ, ಅರ್ಹ ಅಭ್ಯರ್ಥಿಗಳಿಂದ

ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಾವಕಾಶ| ಇಲ್ಲಿದೆ ಸಂಪೂರ್ಣ ಮಾಹಿತಿ Read More »