ರಾಜ್ಯ

ಪೋಲಿಸರ ರಾತ್ರಿ ಪ್ರಯಾಣ ನಿರ್ಬಂಧ

ಬೆಂಗಳೂರು : ಆಂಧ್ರಪ್ರದೇಶದ ಚಿತ್ತೂರು ಬಳಿಯಲ್ಲಿ ಗಾಂಜಾ ಗ್ಯಾಂಗ್ ಹಿಡಿಯುವ ವೇಳೆ ಪೊಲೀಸರ ಕಾರು ಅಪಘಾತವಾಯಿತು. ಈ ಘಟನೆಯಲ್ಲಿ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಸೇರಿ ಮೂವರು ಸಾವನ್ನಪ್ಪಿದ್ದರು. ಈ ಬಳಿಕ ಎಚ್ಚೆತ್ತುಕೊಂಡಿರುವಂತ ಸರ್ಕಾರ, ಪೊಲೀಸರ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ರಾಜ್ಯ ಪೊಲೀಸ್ ಇಲಾಖೆಯ ಸಿಐಡಿ, ಡಿಜಿಪಿ ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆ ಬಂದೋಬಸ್ತ್, ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖೆ ಸೇರಿದಂತೆ ಇನ್ನಿತರ ಅನ್ಯ ಕಾರ್ಯದ ಮೇಲೆ ನಿಯೋಜನೆಗೊಳ್ಳುವಂತ […]

ಪೋಲಿಸರ ರಾತ್ರಿ ಪ್ರಯಾಣ ನಿರ್ಬಂಧ Read More »

ಪಾದಚಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

ಕಾಪು: ಪಾದಚಾರಿಗೆ ಬೈಕ್‌ ಡಿಕ್ಕಿ ಹೊಡೆದು, ಬೈಕ್‌ ಸವಾರ ಮೃತಪಟ್ಟ ಘಟನೆ ಮೂಳೂರು ಬೊಬ್ಬರ್ಯ ದೈವಸ್ಥಾನದ ಬಳಿ ನಡೆದಿದೆ. ಸುರೇಶ ಎಲ್. ಪುತ್ರನ್ ಮೃತಪಟ್ಟವರು. ಸ್ನೇಹಿತನೊಂದಿಗೆ ಬೈಕ್ ನಲ್ಲಿ ಉಡುಪಿಯಿಂದ ಮೂಳೂರು ಕಡೆಗೆ ಹೊರಟಿದ್ದ ವೇಳೆ ಘಟನೆ ಸಂಭವಿಸಿದೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈರಣ್ಣ ರವರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಇದರಿಂದ ಈರಣ್ಣ ರಸ್ತೆಯ ಬದಿಗೆ ಬಿದ್ದು ಗಾಯಗೊಂಡಿದ್ದರು. ಇದೇ ವೇಳೆ ಬೈಕ್‌ ಸಮೇತ ಸವಾರರಿಬ್ಬರು

ಪಾದಚಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು Read More »

ಕರಾವಳಿ, ಉತ್ತರ‌ ಕರ್ನಾಟಕದಲ್ಲಿ ಇಂದೂ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ಉತ್ತರ ಕರ್ನಾಟಕ, ಹಾಗೂ ರಾಜ್ಯಾದ್ಯಂತ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಅರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳುರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ

ಕರಾವಳಿ, ಉತ್ತರ‌ ಕರ್ನಾಟಕದಲ್ಲಿ ಇಂದೂ ಭಾರೀ ಮಳೆ ಸಂಭವ Read More »

ದಾಖಲೆಗಳಿಲ್ಲದೆ ಹಣ ಇಟ್ಟುಕೊಂಡಿದ್ದ ಮೂವರ ಬಂಧನ; 76 ಲಕ್ಷ ಹಣ, 3 ಮೊಬೈಲ್ ಸಿಸಿಬಿ ಪೋಲಿಸ್ ವಶ

ಬೆಂಗಳೂರು:  ದಾಖಲೆ ಇಲ್ಲದೆ ಹಣ ಇಟ್ಟುಕೊಂಡಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ 76 ಲಕ್ಷ ಹಣ ವಶಪಡಿಸಿಕೊಂಡಿದ್ದಾರೆ. ಇದು ಹವಾಲ ಹಣವಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ಈ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ. ಗುಜರಾತ್ ಮೂಲದ ರಾಬಿನ್ ಕುಮಾರ್(26), ರಾಜಸ್ಥಾನದ ಸುಂದರ್‍ಲಾಲ್(39) ಮತ್ತು ಬೆಂಗಳೂರಿನ ಸುದಾಮ ನಗರದ ಸಿಕೆಸಿ ಗಾರ್ಡನ್ ನಿವಾಸಿ ನೀರಜ್ ಮಿಶ್ರಾ(37) ಬಂಧಿತರು. ವಿಲ್ಸನ್‍ಗಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿ ನಗರದ ನಂಜಪ್ಪ ರಸ್ತೆ, ನಿರ್ಮಲ ಇಂಗ್ಲೀಷ್ ಶಾಲೆಯ ಹತ್ತಿರ ಮೂವರು ಹಣವನ್ನಿಟ್ಟುಕೊಂಡು ಒಬ್ಬರಿಗೊಬ್ಬರು ಸನ್ನೆ

ದಾಖಲೆಗಳಿಲ್ಲದೆ ಹಣ ಇಟ್ಟುಕೊಂಡಿದ್ದ ಮೂವರ ಬಂಧನ; 76 ಲಕ್ಷ ಹಣ, 3 ಮೊಬೈಲ್ ಸಿಸಿಬಿ ಪೋಲಿಸ್ ವಶ Read More »

ನೀಟ್ ಯುಜಿ ಪರೀಕ್ಷೆ ಯಲ್ಲಿ ಫೇಲ್; ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್ : ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​) ಫಲಿತಾಂಶ ಪ್ರಕಟಗೊಂಡಿದ್ದು, 9.93 ಲಕ್ಷ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪರೀಕ್ಷೆಯಲ್ಲಿ ಫೇಲ್​ ಆದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆಯೊಂದು ತಮಿಳುನಾಡಿನ ತಿರುವಳ್ಳೂರ್​​​​ನ ಇಂದಿರಾ ನಗರದಲ್ಲಿ ನಡೆದಿದೆ. 19 ವರ್ಷದ ವಿದ್ಯಾರ್ಥಿನಿ ಫಲಿತಾಂಶದಿಂದ ನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ಲಕ್ಷಣ ಸ್ವೇಧ ಎಂದು ಗುರುತಿಸಲಾಗಿದೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೈದ್ಯಕೀಯ ಕಾಲೇಜಿ​​ಗೆ ರವಾನಿಸಲಾಗಿದೆ.

ನೀಟ್ ಯುಜಿ ಪರೀಕ್ಷೆ ಯಲ್ಲಿ ಫೇಲ್; ನೇಣು ಬಿಗಿದು ಆತ್ಮಹತ್ಯೆಗೆ ಶರಣು Read More »

ಮಂಡ್ಯದ ಮಾಜಿ ಶಾಸಕ ಕೆ.ಕೆಂಪೇಗೌಡ ನಿಧನ

ಮಂಡ್ಯ: ಪಾಂಡವಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಕೆಂಪೇಗೌಡ(96) ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬುಧವಾರ ಸಾವನ್ನಪ್ಪಿದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಇಂದು ಮಧ್ಯಾಹ್ನ 3 ರಿಂದ 4 ಗಂಟೆಯೊಳಗೆ ಸ್ವಗ್ರಾಮ ಪಾಂಡವಪುರ ತಾಲೂಕು ಚಿನಕುರಳಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ನಾಲ್ವರು ಪುತ್ರರು, ಐದು ಮಂದಿ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಕೆಂಪೇಗೌಡ ಅವರು ಮೂರು ಬಾರಿ ಶಾಸಕರಾಗಿ ಜನಮನ್ನಣೆ ಗಳಿಸಿದ್ದರು. ತಾಲೂಕು ಬೋರ್ಡ್ ಸದಸ್ಯರಾಗಿಯೂ ಸೇವೆ

ಮಂಡ್ಯದ ಮಾಜಿ ಶಾಸಕ ಕೆ.ಕೆಂಪೇಗೌಡ ನಿಧನ Read More »

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ; ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು

ಬೆಂಗಳೂರು : ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ ನೀಡಿ, ಆರೋಗ್ಯ ವಿಚಾರಿಸಿದರು. ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ.

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ; ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು Read More »

ರಾಜಧಾನಿಯಲ್ಲಿ ಮಳೆ‌ ಅವಾಂತರ| ಕಾಂಗ್ರೆಸ್ ನಿಂದ ಕಾಣೆಯಾದ ಸಚಿವ, ಸಂಸದ, ಶಾಸಕರ ಪಟ್ಟಿ ಬಿಡುಗಡೆ| ಟ್ವೀಟ್ ಮಾಡಿ ಆಡಳಿತದ ಕಾಲೆಳದ ಪ್ರತಿಪಕ್ಷ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಹಾವಳಿಯಿಂದ ಅವಾಂತರ ಸೃಷ್ಟಿಯಾಗಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದಿಗ್ಧತೆಯಲ್ಲಿ ಅವರ ಕಷ್ಟಗಳನ್ನು ಆಲಿಸದೇ ಸಚಿವರು ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಬಿಜೆಪಿ (BJP) ಆಡಳಿತದ ಕೆಲ ಸಚಿವರು, ಸಂಸದರ ಪಟ್ಟಿಯನ್ನು ಕಾಂಗ್ರೆಸ್‌ (Congress) ಬಿಡುಗಡೆ ಮಾಡಿದೆ. ಸಚಿವರು, ಸಂಸದರು ಕಾಣೆಯಾಗಿದ್ದಾರೆ ಎಂದು ಟ್ವೀಟ್‌ ಮಾಡಿ ಕಾಲೆಳೆದಿದೆ. ಟ್ವೀಟ್‌ನಲ್ಲೇನಿದೆ?ಸಚಿವ ಸುಧಾಕರ್‌ ಅವರು ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ವಿಮ್ಮಿಂಗ್ ಮಾಡ್ತಿದ್ರು. ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ

ರಾಜಧಾನಿಯಲ್ಲಿ ಮಳೆ‌ ಅವಾಂತರ| ಕಾಂಗ್ರೆಸ್ ನಿಂದ ಕಾಣೆಯಾದ ಸಚಿವ, ಸಂಸದ, ಶಾಸಕರ ಪಟ್ಟಿ ಬಿಡುಗಡೆ| ಟ್ವೀಟ್ ಮಾಡಿ ಆಡಳಿತದ ಕಾಲೆಳದ ಪ್ರತಿಪಕ್ಷ Read More »

ಬಟ್ಟೆ ಧರಿಸುವುದು‌ ಮೂಲಭೂತ ಹಕ್ಕಾದರೆ, ತೆಗೆಯುವುದೂ ಮೂಲಭೂತ ಹಕ್ಕಾಗುತ್ತದೆ | ಹಿಜಾಜ್ ವಿಚಾರಣೆ ವೇಳೆ ಸುಪ್ರೀಂ ಅಭಿಮತ

ಸಮಗ್ರ ನ್ಯೂಸ್: ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಶ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂವಿಧಾನದ 19ನೇ ವಿಧಿಯಡಿ ಉಡುಗೆ – ತೊಡುಗೆಯನ್ನು ಸಂಪೂರ್ಣ ಮೂಲಭೂತ ಹಕ್ಕು ಎಂದು ಹೇಳಿದರೆ, ಬಟ್ಟೆ ತೆಗೆಯುವುದು ಕೂಡ ಹಕ್ಕಾಗುವ ಅರ್ಹತೆ ಪಡೆಯುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಅರ್ಜಿದಾರರಿಗೆ ಹೇಳಿತು. ಹೀಗೆ ಹೇಳುವ ಮೂಲಕ ನ್ಯಾ. ಹೇಮಂತ್ ಗುಪ್ತಾ ನೇತೃತ್ವದ ಪೀಠ ಸಂವಿಧಾನದ 19ನೇ ವಿಧಿ ಪ್ರಕಾರ ಬಟ್ಟೆ ಧರಿಸುವ ಹಕ್ಕನ್ನು ತರ್ಕಬದ್ಧವಲ್ಲದ ವಿಪರೀತಗಳಿಗೆ ಕೊಂಡೊಯ್ಯಬಹುದೇ ಎಂದು ಅರ್ಜಿದಾರರ ಪರ

ಬಟ್ಟೆ ಧರಿಸುವುದು‌ ಮೂಲಭೂತ ಹಕ್ಕಾದರೆ, ತೆಗೆಯುವುದೂ ಮೂಲಭೂತ ಹಕ್ಕಾಗುತ್ತದೆ | ಹಿಜಾಜ್ ವಿಚಾರಣೆ ವೇಳೆ ಸುಪ್ರೀಂ ಅಭಿಮತ Read More »

ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ; ಹವಾಮಾನ ಕೇಂದ್ರದಿಂದ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಕೇಂದ್ರ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 11.56 ಸೆ.ಮೀ. ನಿಂದ 20.44 ಸೆ.ಮೀ.ವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ‘ಆರೆಂಜ್ ಅಲರ್ಟ್ ನೀಡಲಾಗಿದೆ. ಮಂಡ್ಯ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ, ತುಮಕೂರು, ಬಾಗಲಕೋಟೆ

ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ; ಹವಾಮಾನ ಕೇಂದ್ರದಿಂದ ರೆಡ್ ಅಲರ್ಟ್ Read More »