ರಾಜ್ಯ

ಭಾರೀ ಮಳೆಗೆ ಉದ್ಯೋಗದಲ್ಲಿದ್ದ ಯುವತಿ ಮೃತ್ಯು

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆಯೊಂದು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ. ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಶಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು. ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆದರೆ ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿಕೊಂಡು ಶಾಲೆಯಿಂದ ಹೊರಟಿದ್ದರು. ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ […]

ಭಾರೀ ಮಳೆಗೆ ಉದ್ಯೋಗದಲ್ಲಿದ್ದ ಯುವತಿ ಮೃತ್ಯು Read More »

ಕೌಟುಂಬಿಕ ಕಲಹ; ತಂದೆ ತಲೆಗೆ ಕಟ್ಟಿಗೆಯಿಂದ ಹೊಡೆದ ಮಗ

ಸಮಗ್ರ ನ್ಯೂಸ್: ಕೌಟುಂಬಿಕ ಕಲಹದಿಂದ ಸಿಟ್ಟಿಗೆದ್ದ ಮಗನೇ ತಂದೆ ತಲೆಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಕೂಡ್ಲಿಗಿ ತಾಲೂಕಿನ ಕುದುರೆಡವು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ತಿಪ್ಪೇರುದ್ರಪ್ಪ (70) ಕೊಲೆಯಾದ ವ್ಯಕ್ತಿ. ಕೃತ್ಯವೆಸಗಿದ ಮಗ ನಾಗರಾಜ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಿಪ್ಪೇರುದ್ರಪ್ಪ ಹಾಗೂ ನಾಗರಾಜ್ ನಡುವೆ ಕೌಟುಂಬಿಕ ಕಲಹವಿತ್ತು. ಭಾನುವಾರ ರಾತ್ರಿ ನಾಗರಾಜ್‌ ಊಟಕ್ಕೆ ಮನೆಗೆ ಬಂದಾಗ ತಂದೆ ಅವಹೇಳನ ಮಾಡಿದ್ದಾರೆ. ಇದರಿಂದ ಕುಪಿತಗೊಂಡ ನಾಗರಾಜ್‌ ಕಟ್ಟಿಗೆಯಿಂದ ತಂದೆಯ ಹಣೆ, ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರ

ಕೌಟುಂಬಿಕ ಕಲಹ; ತಂದೆ ತಲೆಗೆ ಕಟ್ಟಿಗೆಯಿಂದ ಹೊಡೆದ ಮಗ Read More »

KPSC ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2017ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 106 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಸೋಮವಾರದಂದು ಪ್ರಕಟಿಸಲಾಗಿದೆ. 2021ರ ಫೆಬ್ರವರಿಯಲ್ಲಿ ಮುಖ್ಯ ಪರೀಕ್ಷೆ ನಡೆದಿದ್ದು, ಇದಾದ ಒಂದು ವರ್ಷ ಎಂಟು ತಿಂಗಳ ಬಳಿಕ ಫಲಿತಾಂಶ ಪ್ರಕಟಿಸಲಾಗಿತ್ತು.ಇತ್ತೀಚೆಗಷ್ಟೇ ಸಂದರ್ಶನ ನಡೆಸಲಾಗಿದ್ದು, ಒಂದೇ ವಾರದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ.

KPSC ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ವೇಳಾಪಟ್ಟಿ ಪ್ರಕಟ Read More »

ಮೊಬೈಲ್ ನೋಡ್ತಾ ನೋಡ್ತಾ ಸ್ಕೂಟರ್ ಗೆ ಡಿಕ್ಕಿ ಹೊಡೆದ ಟ್ಯಾಂಕರ್; ಮಹಿಳೆ ಸಾವು, ಚಾಲಕ ಪರಾರಿ

ಸಮಗ್ರ ನ್ಯೂಸ್: ನಗರದ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಈ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ ಮೇಲೆ ಟ್ಯಾಂಕರ್​ ಹತ್ತಿಸಿದ ಘಟನೆ ಲಗ್ಗೆರೆ ಬಸ್ ನಿಲ್ದಾಣ ಬಳಿಯ ಗ್ರೇಸ್ ಪಬ್ಲಿಕ್ ಸ್ಕೂಲ್ ಮುಂಭಾಗ ಸಂಭವಿಸಿದೆ. ಮೃತರನ್ನು ಆಶಾ ಎಂದು ಗುರುತಿಸಲಾಗಿದೆ. ಆಶಾ ಅವರು ಕಿಮ್ಸ್ ಅಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಬಸ್ ನಿಲ್ದಾಣ ಕಡೆಯಿಂದ ಲಗ್ಗೆರೆಯಲ್ಲಿರುವ ಮನೆ ಕಡೆಗೆ ತೆರಳುತಿದ್ದರು. ಸ್ಕೂಲ್ ಮುಂದೆ ಬಂದಾಗ ರಸ್ತೆ ಬದಿಯಲ್ಲಿ ಎಡಭಾಗದಲ್ಲಿ ತೆರಳುತ್ತಿದ್ದ ಆಶಾ

ಮೊಬೈಲ್ ನೋಡ್ತಾ ನೋಡ್ತಾ ಸ್ಕೂಟರ್ ಗೆ ಡಿಕ್ಕಿ ಹೊಡೆದ ಟ್ಯಾಂಕರ್; ಮಹಿಳೆ ಸಾವು, ಚಾಲಕ ಪರಾರಿ Read More »

ನವೆಂಬರ್ 1ರಿಂದ ಐದೇ ನಿಮಿಷದಲ್ಲಿ ಆಸ್ತಿ ನೋಂದಣಿ ಪದ್ಧತಿ ಜಾರಿಗೆ – ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು: ಆಸ್ತಿ ನೋಂದಣಿಗಾಗಿ ಜನ ಅಲೆಯುವುದನ್ನು ತಪ್ಪಿಸಲು ಕೇವಲ ಐದೇ ನಿಮಿಷಗಳ ನೋಂದಣಿ ಪದ್ಧತಿಯನ್ನು ಜಾರಿಗೊಳಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಆಸ್ತಿನೋಂದಣಿಗಾಗಿ ರಾಜ್ಯಾದ್ಯಂತ ಜನರ ಅಲೆದಾಟ ನಡೆಯುತ್ತಲೇ ಇದ್ದು ಇದನ್ನು ತಪ್ಪಿಸಲು ಕಾವೇರಿ-2 ಎಂಬ ಕಾರ್ಯಕ್ರಮ ಜಾರಿಗೊಳಿಸಲಾಗುವುದು. ಇದರಡಿ ಇನ್ನು ಮುಂದೆ ಆಸ್ತಿ ನೋಂದಣಿ ಮಾಡಿಸಲು ಜನ ಉಪನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಡಬೇಕಿಲ್ಲ. ಬದಲಿಗೆ ಮನೆಯಲ್ಲಿ ಕುಳಿತು ಆನ್​ಲೈನ್ ಮೂಲಕ ಆಸ್ತಿ ನೋಂದಣಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯ ಜತೆ ದಾಖಲೆ

ನವೆಂಬರ್ 1ರಿಂದ ಐದೇ ನಿಮಿಷದಲ್ಲಿ ಆಸ್ತಿ ನೋಂದಣಿ ಪದ್ಧತಿ ಜಾರಿಗೆ – ಕಂದಾಯ ಸಚಿವ ಆರ್.ಅಶೋಕ್ Read More »

ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ವೇಳೆ ಡಿಜೆ ಬಂದ್ ಮಾಡಿದ ಗಣೇಶ ಭಕ್ತರು

ಸಮಗ್ರ ನ್ಯೂಸ್: ಗಣಪತಿ ವಿಸರ್ಜನೆ ವೇಳೆ ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ಕಂಡು ಡಿಜೆ ಬಂದ್ ಮಾಡಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ನಡೆದಿದ್ದು, ಹಿಂದೂ-ಮುಸ್ಲಿಮರ ಸೌಹಾರ್ದ ಮನೋಭಾವಕ್ಕೆ ಸಾಕ್ಷಿಯಾಗಿದೆ. ಗಜಾನನ ಯುವಕ ಮಂಡಳಿಯ ಸದಸ್ಯರು ಇಲ್ಲಿನ ಉಮಾಶಂಕರ ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು. ಗಣೇಶ ವಿಸರ್ಜನೆಯ ಮೆರವಣಿಗೆ ಎಂ ಜಿ ರಸ್ತೆಗೆ ಬಂದಾಗ ಅದೇ ಮಾರ್ಗದಲ್ಲಿ ಮುಸ್ಲಿಂ ವ್ಯಕ್ತಿಯ ಪಾರ್ಥಿವ ಶರೀರವನ್ನು ಕಬರಸ್ತಾನ ಕಡೆಗೆ ಹೊತ್ತೊಯ್ಯುತ್ತಿದ್ದರು.  ಯುವಕ ಮಂಡಳಿಯವರು ಮುಸ್ಲಿಂ ವ್ಯಕ್ತಿಯ ಶವಯಾತ್ರೆ ದಾಟಿ

ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ವೇಳೆ ಡಿಜೆ ಬಂದ್ ಮಾಡಿದ ಗಣೇಶ ಭಕ್ತರು Read More »

ಮುಳುಗಿದ ಬೆಂಗಳೂರು; ಮಳೆಹಾನಿ ನಿರ್ವಹಣೆಗೆ 600 ಕೋಟಿ ಬಿಡುಗಡೆ

ಸಮಗ್ರ ನ್ಯೂಸ್: ಸಿಎಂ ಬೊಮ್ಮಾಯಿ ಬೆಂಗಳೂರು ಮಳೆ ಹಾನಿ ಮಾಹಿತಿ ಪಡೆದಿದ್ದು, ರಾಜ್ಯದ ಮಳೆ ಪರಿಸ್ಥಿತಿ ನಿರ್ವಹಣೆಗೆ 600 ಕೋಟಿ ರಿಲೀಸ್​ ಮಾಡಿದೆ. ಬೆಂಗಳೂರಿಗೆ 300 ಕೋಟಿ ಬಿಡುಗಡೆ ಮಾಡಲು ತೀರ್ಮಾನ ಮಾಡಿದೆ. ಸ್ಟಾರ್ಮ್​​​ ವಾಟರ್ ಡ್ರೈನ್ ಮಾಡಲು 300 ಕೋಟಿ ಬಿಡುಗಡೆ ಮಾಡಲಾಗುತ್ತದೆ. ಬೆಂಗಳೂರಿಗೆ ಕಾವೇರಿ ನೀರು ಪಂಪ್​ ಮಾಡುವ ಸ್ಥಳಕ್ಕೂ ಭೇಟಿ ನೀಡಿದ್ಧಾರೆ. ತೊರೆಕಾಡನಹಳ್ಳಿಯಲ್ಲಿ BWSSB ಪಂಪ್​​ ಹೌಸ್​ ಮುಳುಗಿದೆ. ಸೆಪ್ಟೆಂಬರ್​​ ಆರಂಭದಲ್ಲೇ ಶೇ.51ರಷ್ಟು ದಾಖಲೆ ಮಳೆ ಆಗಿದೆ. 17 ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ

ಮುಳುಗಿದ ಬೆಂಗಳೂರು; ಮಳೆಹಾನಿ ನಿರ್ವಹಣೆಗೆ 600 ಕೋಟಿ ಬಿಡುಗಡೆ Read More »

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ಯಿಂದ 32 ಕಡೆ ದಾಳಿ, ಚುರುಕುಗೊಂಡ ತನಿಖೆ

ಸಮಗ್ರ ನ್ಯೂಸ್: ಜುಲೈ 26ರ ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು(34ವ) ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ಬೆನ್ನತ್ತಿ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ. ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದ 32 ಕಡೆ ಮನೆ, ಕಟ್ಟಡಗಳಿಗೆ ಮಿಂಚಿನ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ. ಸೆ.6ರ ಮುಂಜಾನೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ಯಿಂದ 32 ಕಡೆ ದಾಳಿ, ಚುರುಕುಗೊಂಡ ತನಿಖೆ Read More »

ಮಾರಕಾಸ್ತ್ರಗಳಿಂದ ಯುವಕನ ಕೊಚ್ಚಿ‌ ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆಯೊಂದು ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ವಿನಾಯಕ ಸೋಮಶೇಖರ ಹೋರಕೇರಿ (28) ಎಂದು ಗುರುತಿಸಲಾಗಿದೆ. ಯುವಕ ಬೈಕ್‌ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಹಲ್ಲೆ ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶನಿವಾರವಷ್ಟೇ ಯುವಕ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಯಮಕನಮರಡಿ

ಮಾರಕಾಸ್ತ್ರಗಳಿಂದ ಯುವಕನ ಕೊಚ್ಚಿ‌ ಕೊಲೆಗೈದ ದುಷ್ಕರ್ಮಿಗಳು Read More »

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಿಧನ

ಸಮಗ್ರ ನ್ಯೂಸ್: ಅಂಕೋಲಾ ತಾಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಾಯಕ (102) ಅವರು ವಯೋಸಹಜ ಅನಾರೋಗ್ಯದಿಂದ ತಮ್ಮ ಸ್ವಗೃಹ ಸೂರ್ವೆಯಲ್ಲಿ ನಿಧನ ಹೊಂದಿದರು. ಕಳೆದ 2-3 ದಿನಗಳ ಹಿಂದೆ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ವೆಂಟಿಲೇಟರ್ ಚಿಕಿತ್ಸೆ ನೀಡಿ ನಂತರ ಮನೆಗೆ ಕರೆದುಕೊಂಡು ಬರಲಾಗಿತ್ತು. ವೆಂಕಣ್ಣ ನಾಯಕ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ವಿಧಾನಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ,

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಿಧನ Read More »