ರಾಜ್ಯ

ಸಾರ್ವಜನಿಕ ಗಣೇಶ ಮಂಟಪ ಕುಸಿದು ಬಿದ್ದು,ಹಲವರಿಗೆ ಗಾಯ

ಸಮಗ್ರ ನ್ಯೂಸ್ : ದರ್ಶನಕ್ಕೆ ಭಕ್ತರ ಭಾರ ತಾಳದೇ ಜಿಲ್ಲೆಯ ಸಾರ್ವಜನಿಕ ಗಣೇಶ ಮಂಟಪ ಕುಸಿದು ಬಿದ್ದು, ಹಲವರಿಗೆ ಗಾಯಗಳಾದ ಘಟನೆಯೊಂದು ಸಿಂದಗಿ ಪಟ್ಟಣದಲ್ಲಿ ಶನಿವಾರ ಸಂಭವಿಸಿದೆ. ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಗೋಪುರ ಸಹಿತ ಸ್ವರ್ಣ ವರ್ಣದ ದೇವಾಲಯ ಮಾದರಿಯಲ್ಲಿ ಗಣೇಶೋತ್ಸವ ಮಂಟಪ ನಿರ್ಮಿಸಲಾಗಿತ್ತು. ಗಣೇಶ ಮಂಟಪ ಇದೇ ಕಾರಣಕ್ಕೆ ಜನಾಕರ್ಷಣೆಗೆ ಕಾರಣವಾಗಿತ್ತು. ಆಕರ್ಷಕ ಅಲಂಕೃತ ಮಂಟಪ ವೀಕ್ಷಿಸಲು ಶನಿವಾರ ಭಾರಿ ಸಂಖ್ಯೆಯಲ್ಲಿ ಜನ ಸಾಗರವೇ ಮಂಟಪಕ್ಕೆ ಆಗಮಿಸಿತ್ತು. ಇದರಿಂದ ಭಾರ ತಾಳಲಾರದೇ ದೇವಾಲಯ […]

ಸಾರ್ವಜನಿಕ ಗಣೇಶ ಮಂಟಪ ಕುಸಿದು ಬಿದ್ದು,ಹಲವರಿಗೆ ಗಾಯ Read More »

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮಾಹಿತಿ

ಸಮಗ್ರ ನ್ಯೂಸ್ : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದರೂ ಇನ್ನೂ 1 ವಾರ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಮಲೆನಾಡಿನಲ್ಲೂ ಸೆ. 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದೊಂದು ತಿಂಗಳಿನಿಂದ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಕಂಗೆಟ್ಟಿರುವ ಜನರಿಗೆ ಇದರಿಂದ ಇನ್ನಷ್ಟು ಆತಂಕ ಎದುರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಮುಂದಿನ

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮಾಹಿತಿ Read More »

ವಿಭಿನ್ನ ರೀತಿಯಲ್ಲಿ ಮದುವೆಯಾದ ಜೋಡಿ ಹಕ್ಕಿಗಳು

ಸಮಗ್ರ ನ್ಯೂಸ್: ಸಂವಿಧಾನ ಶಿಲ್ಪಿ ಡಾ. ಬಿ.ಆರ್​.ಅಂಬೇಡ್ಕರ್ ಅವರ ಭಾವಚಿತ್ರದ ಮುಂದೆ ಪ್ರೇಮಿಗಳಿಬ್ಬರು ವಿವಾಹವಾಗಿದ್ದಾರೆ. ಆನೇಕಲ್ ತಾಲೂಕಿನ ಬಳ್ಳೂರು ಗ್ರಾಮದ ಯುವಕ ವಿರೇಶ್ ಮತ್ತು ಬಾಗಲಕೋಟೆ ಮೂಲದ ಅನುಪಮಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಹತ್ತು ವರ್ಷದಿಂದ ಅನುಪಮಾ ಕುಟುಂಬಸ್ಥರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದರು. ಆಗ ಪಿಯುಸಿ ಯಲ್ಲಿದ್ದಾಗ ಇವರಿಬ್ಬರ ನಡುವೆ ಪ್ರೀತಿ ಆರಂಭವಾಯಿತು. ಪಿಯು ಮುಗಿದ ಬಳಿಕ ವಿರೇಶ್ ಆಟೋ ಚಾಲಕನಾಗಿ ಕೆಲಸ ಮಾಡಲಾರಂಭಿಸಿದ, ಅನುಪಮಾ ಕಾಲೇಜು ಮುಗಿಸಿ ಮನೆಯಲ್ಲಿಯೇ ಇದ್ದಳು. ಆದರೆ ಇವರಿಬ್ಬರ ಪ್ರೀತಿಗೆ ಎರಡೂ ಕುಟುಂಬಸ್ಥರಿಂದಲೂ

ವಿಭಿನ್ನ ರೀತಿಯಲ್ಲಿ ಮದುವೆಯಾದ ಜೋಡಿ ಹಕ್ಕಿಗಳು Read More »

ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರ ಆರಂಭಕ್ಕೆ ಆದೇಶ

ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭಿಸಲಾಗುವುದು. ಹಾಗೆ ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು. ಇನ್ನು ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶದಲ್ಲಿ, ವಲಸೆ ಮತ್ತು ಭೂರಹಿತ ಕಾರ್ಮಿಕರಿರುವ ಸ್ಥಳದಲ್ಲಿ 1,655 ಕೇಂದ್ರಗಳನ್ನು ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 1,655 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು. ರಾಜ್ಯ ಸರ್ಕಾರ ಅಂಗನವಾಡಿಗಳಿಗೆ

ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರ ಆರಂಭಕ್ಕೆ ಆದೇಶ Read More »

65 ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ್

ಸಮಗ್ರ ನ್ಯೂಸ್ : ಹುಟ್ಟುಹಬ್ಬದ ಸಂಭ್ರಮದಲ್ಲಿರುವ, ಸದ್ಗುರು ಎಂದೇ ಚಿರಪರಿಚಿತರಾಗಿರುವ ಜಗ್ಗಿ ವಾಸುದೇವ್ ಅವರು ಇಂದು 65ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಜಗ್ಗಿ ವಾಸುದೇವ್ ಅವರು ಸೆಪ್ಟೆಂಬರ್ 3, 1957ರಂದು ಕರ್ನಾಟಕದ ಮೈಸೂರಿನಲ್ಲಿ ಜನಿಸಿದರು. ಸದ್ಗುರುಗಳು 1982ರಿಂದ ದಕ್ಷಿಣ ಭಾರತದಲ್ಲಿ ಯೋಗವನ್ನು ಕಲಿಸುತ್ತಿದ್ದರು. ಬಳಿಕ 1992ರಲ್ಲಿ ಕೊಯಮತ್ತೂರು ಬಳಿ ‘ಇಶಾ ಫೌಂಡೇಶನ್’ ಸ್ಥಾಪಿಸಿದರು. ಇದು ಆಶ್ರಮ & ಯೋಗ ಕೇಂದ್ರವೂ ಹೌದು. 2017ರಲ್ಲಿ ಇವರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರಕಿವೆ.

65 ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ್ Read More »

ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿ ನಟ ಧೃವಾ ಸರ್ಜಾ ಹಾಗೂ ಪ್ರೇರಣಾ ದಂಪತಿ

ಬೆಂಗಳೂರು: ಧೃವಾ ಸರ್ಜಾ ಹಾಗೂ ಪ್ರೇರಣಾ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಳ್ಳುವ ಖುಷಿಯಲ್ಲಿದ್ದಾರೆ. ತಾವು ಪೋಷಕರಾಗುತ್ತಿರುವ ವಿಚಾರವನ್ನು ಪತ್ನಿ ಪ್ರೇರಣಾ ಬೇಬಿ ಬಂಪ್ ಫೋಟೋ ಶೂಟ್ ಮೂಲಕ ಧೃವಾ ಸರ್ಜಾ ತಿಳಿಸಿದ್ದಾರೆ. ಕನ್ನಡ ಚಿತ್ರರಂಗದ ಸ್ಟಾರ್ ನಟ ಧೃವಾ ಸರ್ಜಾ ತಂದೆಯಾಗುತ್ತಿದ್ದಾರೆ. ಈ ಸಿಹಿ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ನಾವು ಜೀವನದ ಹಂತಕ್ಕೆ ಪ್ರವೇಶಿಸಿದ್ದೇವೆ. ಶೀಘ್ರದಲ್ಲಿ ಬರಲಿರುವ ಮಗುವನ್ನು ಆಶೀರ್ವದಿಸಿ ಎಂದು ಧೃವಾ ಸರ್ಜಾ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಈ ಬೇಬಿ

ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿ ನಟ ಧೃವಾ ಸರ್ಜಾ ಹಾಗೂ ಪ್ರೇರಣಾ ದಂಪತಿ Read More »

ಮನೆಯಲ್ಲಿದ್ದ ಕುರಿಯನ್ನು ಮಾರಿದ ತಾಯಿ| ಸಿಟ್ಟಿಗೆದ್ದ ಮಗ ಮಾಡಿದ್ದೇನು ಗೊತ್ತ..?

ಸಮಗ್ರ ನ್ಯೂಸ್ : ಮನೆಯಲ್ಲಿದ್ದ ಕುರಿ ಮಾರಿದಳು ಎಂಬ ಸಿಟ್ಟಿನಿಂದ ಮಗನೇ ತಾಯಿಯನ್ನು ಕೊಂದ ಘಟನೆಯೊಂದು ರಾಜಸ್ಥಾನದ ಜಲ್ವಾರ ಜಿಲ್ಲೆಯಲ್ಲಿ ನಡೆದಿದೆ. ಸೆಮ್ಲಿಯಾ ಗ್ರಾಮದ ನೊದಯಾಂಭಿ ಮೇಘ್ವಾಲ್‌(40) ಮೃತ ಮಹಿಳೆ. ಆಕೆಯ ಪುತ್ರ 12ನೇ ತರಗತಿಯಲ್ಲಿ ಓದುತ್ತಿದ್ದು, ಅಮ್ಮ ಮನೆಯಲ್ಲಿದ್ದ ಕುರಿಯನ್ನು ಮಾರಿದ್ದರಿಂದಾಗಿ ಸಿಟ್ಟಾಗಿದ್ದ ಆತ ಗುರುವಾರ ಸಂಜೆ ಅಮ್ಮನಿಗೆ ಚಾಕು ಚುಚ್ಚಿದ್ದಾನೆ.ನಂತರ ಆಕೆಯ ಶವವನ್ನು ಬಾಕ್ಸ್‌ ಒಂದರಲ್ಲಿ ಮುಚ್ಚಿಟ್ಟಿದ್ದಾನೆ. ಮನೆಗೆ ಬಂದ ತಂದೆಯು ತಾಯಿಯ ಬಗ್ಗೆ ವಿಚಾರಿಸಿದಾಗ ಆಕೆ ಹೊಲಕ್ಕೆ ತೆರಳಿದ್ದಾಳೆ ಎಂದು ಹೇಳಿದ್ದಾನೆ. ಗದರಿಸಿ ಕೇಳಿದಾಗ

ಮನೆಯಲ್ಲಿದ್ದ ಕುರಿಯನ್ನು ಮಾರಿದ ತಾಯಿ| ಸಿಟ್ಟಿಗೆದ್ದ ಮಗ ಮಾಡಿದ್ದೇನು ಗೊತ್ತ..? Read More »

ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ, 4 ಮಂದಿ ಸಾವು, 24 ಮಂದಿಗೆ ಗಾಯ

ಸಮಗ್ರ ನ್ಯೂಸ್:  ಶನಿವಾರ ಮುಂಜಾನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ನೇಪಾಳಿ ಪ್ರಯಾಣಿಕರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ವರದಿ ಪ್ರಕಾರ, 60 ನೇಪಾಳದ ವಲಸೆ ಕಾರ್ಮಿಕರನ್ನು ಹೊತ್ತ ಸ್ಲೀಪರ್ ಬಸ್ ಗೋವಾಕ್ಕೆ ತೆರಳುತ್ತಿದ್ದಾಗ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಂಗುಪುರ ಗ್ರಾಮದಲ್ಲಿ ಅದರ ಒಂದು ಟೈರ್ ಪಂಕ್ಚರ್ ಆಗಿದೆ. ಬಸ್ಸಿನ ಚಾಲಕ ವಾಹನವನ್ನು ರಸ್ತೆಬದಿಯಲ್ಲಿ ನಿಲ್ಲಿಸಿ ಟೈರ್ ಬದಲಾಯಿಸುವ ವೇಳೆ

ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ, 4 ಮಂದಿ ಸಾವು, 24 ಮಂದಿಗೆ ಗಾಯ Read More »

ಬಸ್ ಪಾಸ್ ಅವಧಿ ವಿಸ್ತರಿಸುವಂತೆ ಎಬಿವಿಪಿಯಿಂದ ಸಚಿವ ಶ್ರೀರಾಮುಲುಗೆ ಮನವಿ| ಒಂದು ತಿಂಗಳು ತನಕ ಅವಧಿ ವಿಸ್ತರಿಸಿ

ಸಮಗ್ರ ನ್ಯೂಸ್: ಕೆ.ಎಸ್.ಆರ್.ಟಿ.ಸಿ ಬಸ್ ಪಾಸ್ ಅವಧಿಯನ್ನು ಎಲ್ಲಾ ವರ್ಷದ, ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಮುಗಿಯುವವರೆಗೆ ವಿಸ್ತರಿಸಬೇಕಾಗಿ, ಸಾರಿಗೆ ಸಚಿವರಾದ ಶ್ರೀರಾಮುಲು ಅವರಿಗೆ, ಎಬಿವಿಪಿ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ ನೇತೃತ್ವದ ನಿಯೋಗವು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿದ ನಂತರ ಸಾರಿಗೆ ಸಚಿವರು 1 ತಿಂಗಳುಗಳ ಕಾಲ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ , ನೂತನ ಬಸ್ ಪಾಸ್ ಅನ್ನು ಮಾಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯಾವಕಾಶವನ್ನು ನೀಡುವುದಾಗಿ ಆದೇಶವನ್ನು ನೀಡಿದ್ದಾರೆ. ಈ ಸಮಯದಲ್ಲಿ ವಿಭಾಗ

ಬಸ್ ಪಾಸ್ ಅವಧಿ ವಿಸ್ತರಿಸುವಂತೆ ಎಬಿವಿಪಿಯಿಂದ ಸಚಿವ ಶ್ರೀರಾಮುಲುಗೆ ಮನವಿ| ಒಂದು ತಿಂಗಳು ತನಕ ಅವಧಿ ವಿಸ್ತರಿಸಿ Read More »

ನ.6ಕ್ಕೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2022 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನವೆಂಬರ್ 6 ರಂದು ನಡೆಸಲಾಗುವುದು. ಈ ಕುರಿತಂತೆ ಸಾರ್ವಜನಿಕ ಇಲಾಖೆ ಅಧಿಸೂಚನೆ ಪ್ರಕಟಿಸಿದೆ. ಒಂದರಿಂದ ಐದನೇ ತರಗತಿವರೆಗೆ ಪಾಠ ಮಾಡುವ ಶಿಕ್ಷಕರಿಗೆ ಪತ್ರಿಕೆ -1 ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಆರರಿಂದ ಎಂಟನೇ ತರಗತಿಗೆ ಪಾಠ ಮಾಡುವ ಶಿಕ್ಷಕರಿಗೆ ಪತ್ರಿಕೆ -2 ಮಧ್ಯಾಹ್ನ 2 ರಿಂದ ಸಂಜೆ 4:30ರ ವರೆಗೆ ಪರೀಕ್ಷೆ ನಡೆಯಲಿದೆ.

ನ.6ಕ್ಕೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ| ಇಲ್ಲಿದೆ ಫುಲ್ ಡೀಟೈಲ್ಸ್ Read More »