ರಾಜ್ಯ

ರಾಜ್ಯ ಸರ್ಕಾರದಿಂದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ| 31 ಶಿಕ್ಷಕರಿಗೆ ಲಭಿಸಿದ ಗೌರವ ಪುರಸ್ಕಾರ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದಿಂದ ಕೊಡಮಾಡಲ್ಪಡುವ ಉತ್ತಮ ಶಿಕ್ಷಕ, ಶಿಕ್ಷಕಿಯರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಶಿವಕುಮಾರ್ ಅವರು ಅಧಿಕೃತ ಅದೇಶ ಹೊರಡಿಸಿದ್ದು, ಉತ್ತಮ ಶಿಕ್ಷಕ, ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ ನೀಡಲಾಗಿದೆ. ಪ್ರಾಥಮಿಕ ಶಾಲೆ ವಿಭಾಗದಿಂದ 20 ಹಾಗೂ ಪ್ರೌಢ ಶಾಲಾ ವಿಭಾಗದಿಂದ 11 ಸೇರಿ ಒಟ್ಟು 31 ಶಿಕ್ಷಕರು ಪ್ರಶಸ್ತಿಗೆ ಅರ್ಹರಾಗಿದ್ದಾರೆ. ವಿಜಯನಗರ ಜಿಲ್ಲೆಯ ಇಬ್ಬರೂ ಶಿಕ್ಷಕರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹೊಸಪೇಟೆ ತಾಲೂಕಿನ ವೆಂಕಟಪೂರ ಕ್ಯಾಂಪ್ […]

ರಾಜ್ಯ ಸರ್ಕಾರದಿಂದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ| 31 ಶಿಕ್ಷಕರಿಗೆ ಲಭಿಸಿದ ಗೌರವ ಪುರಸ್ಕಾರ Read More »

ಬಾಲಕನ ಚಿಕಿತ್ಸೆಗೆ ಹರಿದು ಬಂದ ನೆರವಿನ ಮಹಾಪೂರ/ಅಪರೂಪದ ಥಲೆಸ್ಸೀಮಿಯ ರೋಗದಿಂದ ಬಳಲುತ್ತಿರುವ ಕೂವೆ ಗ್ರಾಮದ ರಿತ್ವಿಕ್

ಕೊಟ್ಟಿಗೆಹಾರ:ಅಪರೂಪದ ಥಲೆಸ್ಸೀಮಿಯ ರೋಗದಿಂದ ಬಳಲುತ್ತಿರುವ ಕೂವೆ ಗ್ರಾಮದ ರಿತ್ವಿಕ್ ಚಿಕಿತ್ಸೆಗೆ ಧಾನಿಗಳಿಂದ ನೆರವಿನ ಮಹಾಪೂರವೇ ಹರಿದು ಬಂದಿದೆ. ದಾನಿಗಳಿಂದ, ಸಂಘ ಸಂಸ್ಥೆಗಳಿಂದ, ಪಕ್ಷದ ಮುಖಂಡರಿಂದ ಸುಮಾರು ೪೧ ಲಕ್ಷ ನೆರವು ಹರಿದು ಬಂದಿದೆ. ಕೂವೆ ಗ್ರಾಮದ ದಿವಾಕರ ಮತ್ತು ಶಾಲಿನಿ ದಂಪತಿಗಳ ಪುತ್ರ ಏಳು ವರ್ಷದ ರಿತ್ವಿಕ್‌ ಬಿಳಿರಕ್ತ ಕಣಗಳು ಉತ್ಪತ್ತಿಯಾಗದ ಅಪರೂಪದ ಥಲೇಸ್ಸಿಮಿಯ ಎಂಬ ರೋಗದಿಂದ ಬಳಲುತ್ತಿದ್ದು ತಿಂಗಳಿಗೆ ಎರಡು ಬಾರಿ ರಕ್ತ ಕೊಡಿಸಲು ಮಂಗಳೂರಿನ ಆಸ್ಪತ್ರೆಗೆ ಹೋಗಿ ಬರುತ್ತಿದ್ದರು. ಬಾಲಕ ರಿತ್ವಿಕ್‌ನ ರೋಗ ಗುಣವಾಗಬೇಕಾದರೆ

ಬಾಲಕನ ಚಿಕಿತ್ಸೆಗೆ ಹರಿದು ಬಂದ ನೆರವಿನ ಮಹಾಪೂರ/ಅಪರೂಪದ ಥಲೆಸ್ಸೀಮಿಯ ರೋಗದಿಂದ ಬಳಲುತ್ತಿರುವ ಕೂವೆ ಗ್ರಾಮದ ರಿತ್ವಿಕ್ Read More »

ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ಲೋಪ ಆಗದೆ ಸಕ್ಸಸ್| ಆದರೆ ಜನಸಾಮಾನ್ಯನಿಗೆ ಆದ ಲೋಪಕ್ಕೆ ಯಾರು ಹೊಣೆ?

ಸಮಗ್ರ ನ್ಯೂಸ್: ಸೆ.2 ರಂದು ನಡೆದ ಪ್ರಧಾನ ಮಂತ್ರಿಯವರ ಸಮಾವೇಶದಲ್ಲಿ ಯಾವುದೇ ಲೋಪ ಆಗದಂತೆ ಭದ್ರತೆ ಕಲ್ಪಿಸಲಾಗಿತ್ತು. ಆದರೆ ಈ ಕಾರ್ಯಕ್ರಮದಿಂದ ಸಮಾಜಕ್ಕೆ, ಸಾರ್ವಜನಿಕರಿಗೆ ಆದ ಲೋಪಕ್ಕೆ ಯಾರು ಹೊಣೆ?ಎಂಬ ಪ್ರಶ್ನೆ ಎದುರಾಗಿದೆ. ಪ್ರಧಾನ ಮಂತ್ರಿ ಮಂಗಳೂರಿಗೆ ಬರುತ್ತಿರುವ ಸುದ್ದಿ ಆಗುತ್ತಿದಂತೆ ದ.ಕ ಜಿಲ್ಲೆ ಸೇರಿದಂತೆ ಅಕ್ಕ ಪಕ್ಕ ಜಿಲ್ಲೆಯ ಲಕ್ಷಾಂತರ ಜನ ವಿಶ್ವ ನಾಯಕನಿಗೆ ಸ್ವಾಗತ ಕೋರಲು ಸಿದ್ದರಾಗಿದ್ದರು. ಈ ಹಿನ್ನಲೆ ಪ್ರಧಾನ ಮಂತ್ರಿಯವರ ಸಮಾವೇಶದಲ್ಲಿ ಯಾವುದೇ ಲೋಪ ಉಂಟಾಗದಂತೆ ಬಿಜೆಪಿ ಘಟಾನುಘಟಿ ನಾಯಕರ ಆದೇಶದಂತೆ

ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ಲೋಪ ಆಗದೆ ಸಕ್ಸಸ್| ಆದರೆ ಜನಸಾಮಾನ್ಯನಿಗೆ ಆದ ಲೋಪಕ್ಕೆ ಯಾರು ಹೊಣೆ? Read More »

ಸಾಂಪ್ರದಾಯಿಕ ಉಡುಗೆ ತೊಟ್ಟು ಶಂಕರಾಚಾರ್ಯರ ಜನ್ಮ ಸ್ಥಳಕ್ಕೆ ಭೇಟಿ ನೀಡಿದ ನರೇಂದ್ರ ಮೋದಿ

ಕೇರಳ: ಪೂಜ್ಯ ಸಂತರಾದ ತತ್ವಜ್ಞಾನಿ ಆದಿ ಶಂಕರಾಚಾರ್ಯರ ಜನ್ಮಸ್ಥಳವಾದ ಶ್ರೀ ಕಂಚಿ ಕಾಮಕೋಟಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಸುಮಾರು 45 ನಿಮಿಷಗಳ ಕಾಲ ಅವರು ದೇವಾಲಯದಲ್ಲಿ ಸಮಯ ಕಳೆದಿದ್ದಾರೆ. ಕೇರಳದ ಸಾಂಪ್ರದಾಯಿಕ ಉಡುಗೆ ತೊಟ್ಟು ರುದ್ರಾಕ್ಷಿ ಮಾಲೆ ತೊಟ್ಟಿದ್ದು ವಿಶೇಷವಾಗಿದೆ. ಎರ್ನಾಕುಲಂ ಜಿಲ್ಲೆಯ ಕಾಲಡಿ ಗ್ರಾಮದಲ್ಲಿ ಶಂಕರಾಚಾರ್ಯರ ಜನ್ಮಸ್ಥಳವಿದೆ. ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಫೋಟೋಗಳನ್ನು ಟ್ವಿಟ್ಟರ್‌ನಲ್ಲಿ ಪ್ರಧಾನಿ ಹಂಚಿಕೊಂಡಿದ್ದಾರೆ. ಮಹಾನ್ ಸಂತರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ನಮ್ಮ ಸಂಸ್ಕೃತಿಯನ್ನು ರಕ್ಷಿಸಲು ಅವರು ನೀಡಿದ ಕೊಡುಗೆಗಳಿಗಾಗಿ

ಸಾಂಪ್ರದಾಯಿಕ ಉಡುಗೆ ತೊಟ್ಟು ಶಂಕರಾಚಾರ್ಯರ ಜನ್ಮ ಸ್ಥಳಕ್ಕೆ ಭೇಟಿ ನೀಡಿದ ನರೇಂದ್ರ ಮೋದಿ Read More »

ಮುರುಘಾ ಶ್ರೀ ಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿದ್ದ ಮುರುಘಾಮಠದ ಡಾ,ಶಿವಮೂರ್ತಿ ಶರಣರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಮುರುಘಾಶ್ರೀಗಳ ವಿರುದ್ಧ ಇದೀಗ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಮುರುಘಾಶ್ರೀಗಳು ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ಶ್ರೀಗಳ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ಆನಂದ ಕುಮಾರ್ ಎಂಬ ವ್ಯಕ್ತಿಗೆ ಕೆಂಗೇರಿಯ ಸೂಲಿಕೆರೆ ಗ್ರಾಮದಲ್ಲಿನ ಮಠದ ಆಸ್ತಿಯಲ್ಲಿ 7.18 ಎಕರೆ ಜಾಗವನ್ನು ಅಕ್ರಮವಾಗಿ ಮಾರಾಟ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳ

ಮುರುಘಾ ಶ್ರೀ ಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ Read More »

ಹೊಸ ರೀತಿಯಲ್ಲಿ ತಮಿಳಿನಲ್ಲಿ ಕೆಜಿಎಫ್ ಸಿನಿಮಾ ಆರಂಭ

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಕೆಜಿಎಫ್2 ಬಳಿಕ ಕೆಜಿಎಫ್ 3 ಸಿನಿಮಾ ಬರುತ್ತಾ ಎಂದು ಅಭಿಮಾನಿಗಳು ಕಾದು ಕೂತಿದ್ದಾರೆ. ಆದರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಸದ್ಯಕ್ಕೆ ಕೆಜಿಎಫ್ 3 ಇಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾದಲ್ಲಿ ಕಾಲ್ಪನಿಕ ಕಥೆಗೆ ಹೆಚ್ಚು ಒತ್ತು ನೀಡಲಾಗಿತ್ತು. ಕೆಜಿಎಫ್ ಕಥೆಯನ್ನು ಅದು ಒಳಗೊಂಡಿರಲಿಲ್ಲ. ಹಾಗಾಗಿ ಕೆಜಿಎಫ್ ನಲ್ಲಿ ನಡೆದ ರಿಯಲ್ ಘಟನೆಯನ್ನು ಕೆಜಿಎಫ್ ಹೆಸರಿನ

ಹೊಸ ರೀತಿಯಲ್ಲಿ ತಮಿಳಿನಲ್ಲಿ ಕೆಜಿಎಫ್ ಸಿನಿಮಾ ಆರಂಭ Read More »

ಒರಿಸ್ಸಾದ ಸಮುದ್ರ ತೀರದಲ್ಲಿ ಚಿತ್ರ ಕಲಾವಿದನಿಂದ ಮೂಡಿದ ಕಿಚ್ಚ ಸುದೀಪ್ ಅವರ ಮರಳು ಶಿಲ್ಪ ನಿರ್ಮಾಣ

ಬೆಂಗಳೂರು: ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ಹೆಚ್ಚು ಮಾಡಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಶಿಲ್ಪವು 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್

ಒರಿಸ್ಸಾದ ಸಮುದ್ರ ತೀರದಲ್ಲಿ ಚಿತ್ರ ಕಲಾವಿದನಿಂದ ಮೂಡಿದ ಕಿಚ್ಚ ಸುದೀಪ್ ಅವರ ಮರಳು ಶಿಲ್ಪ ನಿರ್ಮಾಣ Read More »

ಕೆಎಸ್ ಆರ್ ಟಿಸಿ ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ

ಶಿವಮೊಗ್ಗ: ಕ.ರಾ.ರ.ಸಾ.ನಿಗಮದಿಂದ ವಿತರಿಸಲಾಗುತ್ತಿರುವ ರಿಯಾಯಿತಿ ಪಾಸ್ ಆಧಾರಿತ ಪ್ರಯಾಣದ ಅವಧಿಯನ್ನು ಆಗಸ್ಟ್ 22 ರಿಂದ ಅಕ್ಟೋಬರ್ 22 ರ ಅಂತ್ಯದವರೆಗೆ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳಿಂದ ನಿಗದಿತ ಮೊತ್ತ ಪಡೆದುಕೊಂಡು ರಶೀದಿ ನೀಡಿ ವಿದ್ಯಾರ್ಥಿಗಳು ರಶೀದಿ ಮತ್ತು ಹಳೆಯ ಪಾಸ್ ಎರಡನ್ನು ತೋರಿಸಿ ಅಕ್ಟೋಬರ್ 22ರ ವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಅಂತಿಮ ವರ್ಷದ ಕೊನೆಯ ಸೆಮಿಸ್ಟರ್ ನಲ್ಲಿ ಅಭ್ಯಸಿಸುತ್ತಿರುವ ಪದವಿ/ಸ್ನಾತಕೋತ್ತರ/ಡಿಪ್ಲೊಮಾ/ಕಾನೂನು ಇತರೆ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅಂತಿಮ ವರ್ಷದ ಪರೀಕ್ಷೆ ಮುಗಿಯುವವರಿಗೆ ಮಾತ್ರ ಅಂದರೆ ಅಕ್ಟೋಬರ್ 22ರ ಅಂತ್ಯದವರೆಗೆ ಹಳೆಯ

ಕೆಎಸ್ ಆರ್ ಟಿಸಿ ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ Read More »

ಸುಳ್ಯ-ಪುತ್ತೂರು ನಡುವಿನ ಸಾಮಾನ್ಯ ಪ್ರಯಾಣಕ್ಕೆ ಎಕ್ಸ್ಪ್ರೆಸ್ ಟಿಕೆಟ್…!ಸಮಯಕ್ಕೆ ಸರಿಯಾಗಿ ಬಸ್ಸಿಲ್ಲದೇ ಪ್ರಯಾಣಿಕರ ಪರದಾಟ

ಪುತ್ತೂರು: ಮಂಗಳೂರಿಗೆ ಪ್ರಧಾನಿ ಆಗಮನದ ಹಿನ್ನಲೆ, ಸರಕಾರಿ ಬಸ್ಸುಗಳೆಲ್ಲವೂ ಅಲ್ಲಿಗೆ ತೆರಳಿದ್ದು ದಕ ಸೇರಿದಂತೆ ಸುತ್ತಮುತ್ತಲಿನ ಕೆಲವು ಜಿಲ್ಲೆಗಳಲ್ಲಿ ಬಸ್ಸಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ ಸಂಪರ್ಕ ದ ಬಗ್ಗೆ ವಿಚಾರಿಸಿದಾಗ, ಸಾರಿಗೆ ಸಿಬ್ಬಂದಿಗಳಿಂದ ಸರಿಯಾದ ಉತ್ತರ ಸಿಗದೆ ಪ್ರಯಾಣಿಕರು ಪರದಾಡುವಂತಾಗಿದೆ. ಅದರಲ್ಲೂ ಹಿರಿಯ ನಾಗರಿಕರು ಅತಿಯಾಗಿ ಕಷ್ಟ ಅನುಭವಿಸುವಂತಾಗಿದೆ. ಪ್ರಧಾನಿ ನೋಡಲು ತೆರಳುವ ಜನರಿಗೆ ಸರಕಾರಿ ಸಾರಿಗೆ ಬಸ್ ಗಳನ್ನು ನಿಯೋಜಸಿಲಾಗಿದೆ. ಆದರೆ ಸಾಮಾನ್ಯ ಜನರ ಪ್ರಯಾಣಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಜನತೆ ಭಾರಿ ತೊಂದರೆಗೀಡಾಗಿದ್ದಾರೆ.

ಸುಳ್ಯ-ಪುತ್ತೂರು ನಡುವಿನ ಸಾಮಾನ್ಯ ಪ್ರಯಾಣಕ್ಕೆ ಎಕ್ಸ್ಪ್ರೆಸ್ ಟಿಕೆಟ್…!ಸಮಯಕ್ಕೆ ಸರಿಯಾಗಿ ಬಸ್ಸಿಲ್ಲದೇ ಪ್ರಯಾಣಿಕರ ಪರದಾಟ Read More »

ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಚಾಟಿ| ಇದು ವಿಕಾಸ ದರ್ಶನವೋ ವಿನಾಶ ದರ್ಶನವೋ ಉತ್ತರಿಸಿ ಮೋದಿ ಎಂದು ಪ್ರಶ್ನೆಗಳ ಸುರಿಮಳೆಗೈದ ಸಿದ್ದು

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮಂಗಳೂರಿಗೆ ಸ್ವಾಗತ, ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು

ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಚಾಟಿ| ಇದು ವಿಕಾಸ ದರ್ಶನವೋ ವಿನಾಶ ದರ್ಶನವೋ ಉತ್ತರಿಸಿ ಮೋದಿ ಎಂದು ಪ್ರಶ್ನೆಗಳ ಸುರಿಮಳೆಗೈದ ಸಿದ್ದು Read More »