ರಾಜ್ಯ

ಮುನಿಸಿಕೊಂಡ ಪ್ರೇಯಸಿಯನ್ನು ಉಸಿರುಗಟ್ಟಿಸಿ ಕೊಂದ ಪ್ರಿಯಕರ

ಸಮಗ್ರ ನ್ಯೂಸ್: ಪ್ರೀತಿ ನಿರಾಕರಿಸಿದ ಪ್ರೇಯಸಿಯನ್ನು ಮಾಜಿ ಪ್ರಿಯಕರನೊಬ್ಬ ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಕೊನ್ನಲ್ಲೂರು ಗ್ರಾಮದಲ್ಲಿ ಬುಧವಾರ ನಡೆದಿದೆ. ಸೂರ್ಯಪ್ರಿಯಾ (24) ಕೊಲೆಯಾದ ದುರ್ದೈವಿ. ಈಕೆ ಕೊನ್ನಲ್ಲೂರಿನ ಶಿವದಾಸನ್​ ಮತ್ತು ಗೀತಾ ದಂಪತಿಯ ಪುತ್ರಿ. ತನ್ನ ನಿವಾಸದಲ್ಲಿ ಯಾರು ಇಲ್ಲದಿದ್ದಾಗ ಸೂರ್ಯಪ್ರಿಯಾ ಹತ್ಯೆಯಾಗಿದ್ದಾರೆ. ಅಂಜುಮೂರ್ತಿಮಂಗಲದ ಅನಕಪ್ಪರ ನಿವಾಸಿ ಸುಜೀಶ್​ (27) ಕೊಲೆ ಮಾಡಿದ ಬಳಿಕ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ. ಸೂರ್ಯಪ್ರಿಯಾ, ಡೆಮೋಕ್ರೆಟಿಕ್​ ಯೂತ್​ ಫೆಡರೇಶನ್​ ಆಫ್​ ಇಂಡಿಯಾದ ಬ್ಲಾಕ್​ […]

ಮುನಿಸಿಕೊಂಡ ಪ್ರೇಯಸಿಯನ್ನು ಉಸಿರುಗಟ್ಟಿಸಿ ಕೊಂದ ಪ್ರಿಯಕರ Read More »

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| ಶೀಘ್ರದಲ್ಲೇ ಹೆಚ್ಚಳವಾಗಲಿದೆ ತುಟ್ಟಿಭತ್ಯೆ(DA)

ಸಮಗ್ರ ನ್ಯೂಸ್: ಸರ್ಕಾರಿ ನೌಕರರು ಕಾತರದಿಂದ ಕಾಯುತ್ತಿರುವ ಮುಂದಿನ ಸುತ್ತಿನ ತುಟ್ಟಿ ಭತ್ಯೆ ಹೆಚ್ಚಳದ ಕುರಿತಂತೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಒಳ್ಳೆಯ ಸುದ್ದಿ ಕೊಡುವ ಸಾಧ್ಯತೆ ಇದೆ. ಇತ್ತೀಚಿನ ಹಣದುಬ್ಬರದ ಅಂಕಿಅಂಶಗಳನ್ನು ಆಧರಿಸಿ ಶೇಕಡಾ 4 ರಷ್ಟು ತುಟ್ಟಿ ಭತ್ಯೆ ಹೆಚ್ಚಳವಾಗಲಿದ್ದು, 38 ಪ್ರತಿಶತದವರೆಗೆ ತುಟ್ಟಿಭತ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಜನವರಿಯಲ್ಲಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇಕಡಾ 3 ರಷ್ಟು ಡಿಎ ಹೆಚ್ಚಳ ಮಾಡಿತ್ತು. ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (ಎಐಸಿಪಿಐ) ಅಂಕಿಅಂಶಗಳನ್ನು ಆಧರಿಸಿ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| ಶೀಘ್ರದಲ್ಲೇ ಹೆಚ್ಚಳವಾಗಲಿದೆ ತುಟ್ಟಿಭತ್ಯೆ(DA) Read More »

ಕೊರೊನಾ ಹೆಚ್ಚಳ ಹಿನ್ನಲೆ| ರಾಜ್ಯದಲ್ಲಿ ಮಾಸ್ಕ್ ಧಾರಣೆ ಕಡ್ಡಾಯ – ಸಚಿವ ಡಾ. ಸುಧಾಕರ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆಯಲ್ಲಿಯೇ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ. ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ರಾಜ್ಯದಲ್ಲಿ ಮಾಸ್ಕ್ ಎಲ್ಲರೂ ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಕೊರೋನಾ ಹೆಚ್ಚಳ ಕಾರಣದಿಂದಾಗಿ 60 ವರ್ಷ ಮೇಲ್ಪಟ್ಟವರು ತಪ್ಪದೇ ಶೀಘ್ರವೇ 3ನೇ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಬೇಕು. ಇಂದಿನ ಸಭೆಯಲ್ಲಿ

ಕೊರೊನಾ ಹೆಚ್ಚಳ ಹಿನ್ನಲೆ| ರಾಜ್ಯದಲ್ಲಿ ಮಾಸ್ಕ್ ಧಾರಣೆ ಕಡ್ಡಾಯ – ಸಚಿವ ಡಾ. ಸುಧಾಕರ್ Read More »

ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಭಾರತದ ಹದಿನಾಲ್ಕನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ಕಳೆದ ತಿಂಗಳು ದೇಶದ ಹದಿನೈದನೇ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದ‌್ದರು. ಮಾಜಿ ರಾಜ್ಯಪಾಲ ಮತ್ತು ಮಾಜಿ ಕೇಂದ್ರ ಸಚಿವ ಧಂಕರ್ ಅವರನ್ನು ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್ಡಿಎ ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಾಮನಿರ್ದೇಶನ ಮಾಡಿದೆ. ಆಗಸ್ಟ್ 6 ರಂದು ನಡೆದ ಚುನಾವಣೆಯಲ್ಲಿ 71 ವರ್ಷದ ಅವರು

ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣವಚನ ಸ್ವೀಕಾರ Read More »

ತೊಕ್ಕೊಟ್ಟು; ಕಾರು ಮತ್ತು ಬೈಕ್ ಅಪಘಾತ, ಕಮರಿಗೆ ಉರುಳಿ ಬಿದ್ದ ವಾಹನ, ಸವಾರರಿಬ್ಬರಿಗೆ  ಗಾಯ

ಉಳ್ಳಾಲ : ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಡಿಕ್ಕಿ ಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆಯೊಂದು ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ ಕಮರಿಗೆ ಉರುಳಿ ಬಿದ್ದಿದೆ. ಮಂಜನಾಡಿ ನಿವಾಸಿ ಆಸೀಫ್ ಗಂಭೀರ ಗಾಯಗೊಂಡಿದ್ದು, ಸಹ ಸವಾರ ಅಂಬ್ಲಮೊಗರು ನಿವಾಸಿ ಮಹಮ್ಮದ್ ಅಶ್ರಫ್ ಗಾಯಗೊಂಡಿದ್ದಾರೆ. ಇಬ್ಬರೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ ಪ್ರಯಾಣಿಕನಿಗೆ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಕೆಲಸ ಮುಗಿಸಿಕೊಂಡು ಉಳ್ಳಾಲ ಕಡೆಯಿಂದ

ತೊಕ್ಕೊಟ್ಟು; ಕಾರು ಮತ್ತು ಬೈಕ್ ಅಪಘಾತ, ಕಮರಿಗೆ ಉರುಳಿ ಬಿದ್ದ ವಾಹನ, ಸವಾರರಿಬ್ಬರಿಗೆ  ಗಾಯ Read More »

ಆಷಾಢ ಮಾಸಕ್ಕೆ ತವರು ಮನೆ ಬಂದಿದ್ದ ನವವಧು ಪ್ರಿಯಕರ ಜೊತೆ ಪರಾರಿಯಾಗಿ ಸಿಕ್ಕಿ ಬಿದ್ದು ಮನನೊಂದು ನೇಣಿಗೆ ಶರಣು

ಮೈಸೂರು: ನವವಧು ಆಷಾಢ ಮಾಸಕ್ಕಾಗಿ ತವರು ಮನೆಗೆ ಬಂದಿದ್ದು, ಈ ವೇಳೆ ಪಕ್ಕದ ಮನೆಯಲ್ಲಿದ್ದ ಪ್ರಿಯಕರನ ಜೊತೆ ಪರಾರಿಯಾಗಿದ್ದಳು. ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡ ಪೊಲೀಸರು ಒಂದು ವಾರದಲ್ಲಿ ಪತ್ತೆ ಮಾಡಿ ಪ್ರಿಯಕರನಿಂದ ಬೇರ್ಪಡಿಸಿದ್ದರು. ಪ್ರಿಯಕರನಿಂದ ದೂರವಾದರಿಂದ ಮನನೊಂದ ನವವಧು ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕು ರಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ. 20 ವರ್ಷದ ವರ್ಷಿತಾ(20) ಮೃತಪಟ್ಟಿರುವ ನವವಧು. ವರ್ಷಿತಾ ತನ್ನ ಮನೆಯ ಪಕ್ಕದಲ್ಲಿದ್ದ ಕಿರಣ್ ಎಂಬಾತನನ್ನ ಪ್ರೀತಿಸುತ್ತಿದ್ದಳು. ಮಗಳ ಮನ ಒಲಿಸಿ ಚಾಮರಾಜನಗರದ ಯುವಕನೊಂದಿಗೆ ಮೇ 8

ಆಷಾಢ ಮಾಸಕ್ಕೆ ತವರು ಮನೆ ಬಂದಿದ್ದ ನವವಧು ಪ್ರಿಯಕರ ಜೊತೆ ಪರಾರಿಯಾಗಿ ಸಿಕ್ಕಿ ಬಿದ್ದು ಮನನೊಂದು ನೇಣಿಗೆ ಶರಣು Read More »

ರಾಜ್ಯದಲ್ಲಿ ಮತ್ತೆ ಕೋವಿಡ್ ಸಂಖ್ಯೆ ಹೆಚ್ಚಳ, ಮಾಸ್ಕ್ ಕಡ್ಡಾಯಗೊಳಿಸಲು ಆದೇಶ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಮಾಸ್ಕ್  ಕಡ್ಡಾಯಗೊಳಿಸಿ ಆದೇಶಿಸಿದೆ. ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್ ಎಲ್ಲರೂ ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಕೊರೋನಾ ಹೆಚ್ಚಳ ಕಾರಣದಿಂದಾಗಿ 60 ವರ್ಷ ಮೇಲ್ಪಟ್ಟವರು ತಪ್ಪದೇ ಶೀಘ್ರವೇ 3ನೇ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಬೇಕು. ಇಂದಿನ

ರಾಜ್ಯದಲ್ಲಿ ಮತ್ತೆ ಕೋವಿಡ್ ಸಂಖ್ಯೆ ಹೆಚ್ಚಳ, ಮಾಸ್ಕ್ ಕಡ್ಡಾಯಗೊಳಿಸಲು ಆದೇಶ Read More »

 PUC ಪಾಸ್‌ ಆದವರಿಗೆ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ

  ಸಮಗ್ರ ನ್ಯೂಸ್: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF ನೇಮಕಾತಿ) ವಿವಿಧ ಖಾಲಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ಒಟ್ಟು 323 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಎಚ್‌ಸಿ ಮಿನಿಸ್ಟ್ರಿಯಲ್, ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ ಎಎಸ್‌ಐ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡಬಹುದು. ಮೂಲಕ ಅರ್ಜಿ ಸಲ್ಲಿಸಬಹುದು ಖಾಲಿ ಹುದ್ದೆಗಳ ವಿವರಗಳು ಪೋಸ್ಟ್ – ಹೆಡ್ ಕಾನ್‌ಸ್ಟೆಬಲ್  ಅಂತಿಮ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 6. ಆಗಸ್ಟ್ 8ರಿಂದ ಅರ್ಜಿ ಸಲ್ಲಿಕೆ

 PUC ಪಾಸ್‌ ಆದವರಿಗೆ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ Read More »

ಗಂಡ ತನ್ನ ಹೆಂಡತಿ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ

ಕೊಡಗು: ಗಂಡನೊಬ್ಬ ತನ್ನ ಹೆಂಡ್ತಿ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ ಮಾಡಿದ ಘಟನೆಯೊಂದು ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ಘಟನೆ ಬುಧವಾರ ರಾತ್ರಿ ನಡೆದಿದೆ. ಚಸ್ಮಾ(43) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಕಿಶನ್ ಅಲಿಯಾಸ್ ಗೋಪಾಲ್ ನನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ. ಕಳೆದ ರಾತ್ರಿ ಇಬ್ಬರ ಮಧ್ಯೆ ಯಾವುದೋ ವಿಷಯಕ್ಕೆ ಜಗಳ ನಡೆದಿದ್ದು, ಈ ವೇಳೆ, ಗಂಡ ಮತ್ತು ಹೆಂಡ್ತಿ ಜಗಳ ವಿಕೋಪಕ್ಕೆ ತಿರುಗಿದ್ದು, ಆರೋಪಿ ಕಿಶನ್​ ಕೋಪದಲ್ಲಿ ತನ್ನ ಹೆಂಡ್ತಿ ಚಸ್ಮಾ ಮೇಲೆ

ಗಂಡ ತನ್ನ ಹೆಂಡತಿ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ Read More »

ಈ ವರ್ಷದ ಸೂಪರ್ ಮೂನ್ ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ ! ಇಲ್ಲಿದೆ ವಿವರ

ಸೂಪರ್‌ ಮೂನ್‌ ಪ್ರಪಂಚದಾದ್ಯಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ. ವೈಜ್ಞಾನಿಕವಾಗಿ ಸೂಪರ್‌ ಮೂನ್‌ ಗಳು ಸಾಮಾನ್ಯಕ್ಕಿಂತ 30% ಹೆಚ್ಚು ಬೆಳಕನ್ನು ಭೂಮಿಯ ಮೇಲೆ ಹೊರಸೂಸುತ್ತವೆ. ಒಂದು ವರ್ಷದಲ್ಲಿ ಬರೋಬ್ಬರಿ 3-4 ಸೂಪರ್ ಮೂನ್ ಗಳು ಕಾಣಿಸುತ್ತವೆ. ಈ ವರ್ಷ 11ನೇ ಆಗಸ್ಟ್ 2022 ರಂದು ಕಾಣಿಸಿಕೊಳ್ಳುತ್ತದೆ. 2022 ರ ಕೊನೆಯ ಸೂಪರ್‌ಮೂನ್ ಇಂದು ! ಇಂದು ನಾಸಾ ಪ್ರಕಾರ, ಚಂದ್ರನು ರಾತ್ರಿ 9:36 ಕ್ಕೆ ಕಾಣಿಸಿಕೊಳ್ಳಬಹುದು. ಅಥವಾ 6:36 p.m. ಪಿಟಿ ಸಮಯದಲ್ಲಿ ಕಾಣಿಸಬಹುದು. ಆಗಸ್ಟ್‌ ನಲ್ಲಿ ಸೂಪರ್‌ ಮೂನ್

ಈ ವರ್ಷದ ಸೂಪರ್ ಮೂನ್ ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ ! ಇಲ್ಲಿದೆ ವಿವರ Read More »