ರಾಜ್ಯ

ಜಾರಿ ಬಿದ್ದು ಶಾಸಕ ಎಂ.ವೈ.ಪಾಟೀಲ್ ಕಾಲು ಮುರಿತ

ಹುಬ್ಬಳ್ಳಿ: ಬೆಳಗ್ಗೆ ಸ್ನಾನ ಮಾಡಲು ಹೋದಾಗ ಸಂಧರ್ಭದಲ್ಲಿ ಜಾರಿಬಿದ್ದು ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಕಾಲು ಮುರಿತಗೊಂಡಿದೆ. ಹುಬ್ಬಳ್ಳಿಯ ಸರ್ಕಿಟ್ ಹೌಸ್​ನಲ್ಲಿ ಬೆಳ್ಳಂಬೆಳಗ್ಗೆ ಘಟನೆ ನಡೆದಿದೆ. ಸ್ನಾನ ಮಾಡಲು ಹೋದಾಗ ಜಾರಿಬಿದ್ದು ಶಾಸಕ ಎಂ.ವೈ.ಪಾಟೀಲ್ ಕಾಲು ಮುರಿತಗೊಂಡಿದೆ. ಶಾಸಕರು ಬೆಂಬಲಿಗರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಾಸಕ ಎಂ.ವೈ.ಪಾಟೀಲ್ ನಿನ್ನೆಯಷ್ಟೇ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವಕ್ಕೆ ತೆರಳಿದ್ದರು. ವಾಪಸ್​ ಊರಿಗೆ ತೆರಳುವ ಸಲುವಾಗಿ ಹುಬ್ಬಳ್ಳಿಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿದೆ

ಜಾರಿ ಬಿದ್ದು ಶಾಸಕ ಎಂ.ವೈ.ಪಾಟೀಲ್ ಕಾಲು ಮುರಿತ Read More »

ಸ್ಕೇಟಿಂಗ್ ಮೂಲಕ ಕಾಶ್ಮೀರ ಕ್ಕೆ ತೆರಳುತ್ತಿದ್ದ ಕೇರಳದ ಯುವಕ ರಸ್ತೆ ಅಪಘಾತ ದಲ್ಲಿ ಬಲಿ

ಬೆಂಗಳೂರು: ಸ್ಕೇಟಿಂಗ್ ಬಗ್ಗೆ ಜಾಗೃತಿ ಮೂಡಿಸಲು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಸ್ಕೇಟಿಂಗ್ ಮೂಲಕ ತೆರಳುತ್ತಿದ್ದ ಕೇರಳದ ಯುವಕ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಕೇರಳದ ಅನಾಸ್ ಹಜಾಸ್(31) ಮೇ 29ರಂದು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಪ್ರವಾಸ ಹೊರಟಿದ್ದರು. ಸ್ಕೇಟಿಂಗ್ ಮೂಲಕವೇ 3,700 ಕಿ.ಮೀ. ದೂರ ಕ್ರಮಿಸುವುದು ಅವರ ಗುರಿಯಾಗಿತ್ತು. ಹರಿಯಾಣ ತಲುಪಿದ್ದ ಅನಾಸ್, ಅಲ್ಲಿನ ಕಾಲ್ಕಾದಲ್ಲಿ ನಡೆದ ಟ್ರಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸ್ಕೇಟಿಂಗ್ ಮೂಲಕ ತೆರಳುತ್ತಿದ್ದ ಅವರಿಗೆ ಟ್ರಕ್ ಬಡಿದಿತ್ತು. ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸ್ಕೇಟಿಂಗ್ ಮೂಲಕ ಕಾಶ್ಮೀರ ಕ್ಕೆ ತೆರಳುತ್ತಿದ್ದ ಕೇರಳದ ಯುವಕ ರಸ್ತೆ ಅಪಘಾತ ದಲ್ಲಿ ಬಲಿ Read More »

ಕೇವಲ 28 ಸೆ.ಮೀ. ಮಳೆ ; ಇಷ್ಟಕ್ಕೇ ಪ್ರಕೃತಿ ಮುನಿದಿದ್ದು ಯಾಕೆ ? ಯಾರೋ ಮಾಡಿದ ಕರ್ಮಕ್ಕೆ ಇನ್ಯಾರೋ ಬಲಿಪಶು !! ಪಶ್ಚಿಮ ಘಟ್ಟಗಳಲ್ಲಿ ಬಿರುಕು, ಗೀರು ಗಾಯಕ್ಕೆ ಹೊಣೆ ಯಾರು ? ರಾಜಕಾರಣಿಗಳ ತೀಟೆಗೆ ಜನಸಾಮಾನ್ಯರ ಬಲಿಯೇ?

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಆಸುಪಾಸಿನಲ್ಲಿ ಇತಿಹಾಸ ಕಂಡು ಕೇಳರಿಯದ ರೀತಿ ಮಳೆಯಾಗಿದೆ ಅಂದ್ರೆ ತಪ್ಪು ಹೇಳಿದಂತಾಗುತ್ತದೆ. ಆಗಸ್ಟ್ 1ರ ಸೋಮವಾರ ಒಂದೇ ದಿನ ಬಿದ್ದ ಮಳೆ 28 ಸೆಂಟಿ ಮೀಟರ್. ಆದರೆ ಅಷ್ಟಕ್ಕೇ ಸುಬ್ರಹ್ಮಣ್ಯ ಆಸುಪಾಸಿನ ಗ್ರಾಮಗಳಲ್ಲಿ ಅನಾಹುತವನ್ನೇ ಸೃಷ್ಟಿಸಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಸುಬ್ರಹ್ಮಣ್ಯ ಆಸುಪಾಸಿನಲ್ಲಿ 28 ಸೆಂಟಿ ಮೀಟರ್ ಮಳೆಯಾಗಿದ್ದರೆ, ಸಂಪಾಜೆ, ಕಲ್ಲುಗುಂಡಿ ಆಸುಪಾಸಿನಲ್ಲಿ 140 ಸೆಂಟಿ ಮೀಟರ್ ಮಳೆ ಬಿದ್ದಿದೆ. ಇದೇ ವೇಳೆ, ಭಟ್ಕಳ ಆಸುಪಾಸಿನಲ್ಲಿ 50 ಸೆಂಟಿ ಮೀಟರ್ ಮಳೆಯಾಗಿದೆ.

ಕೇವಲ 28 ಸೆ.ಮೀ. ಮಳೆ ; ಇಷ್ಟಕ್ಕೇ ಪ್ರಕೃತಿ ಮುನಿದಿದ್ದು ಯಾಕೆ ? ಯಾರೋ ಮಾಡಿದ ಕರ್ಮಕ್ಕೆ ಇನ್ಯಾರೋ ಬಲಿಪಶು !! ಪಶ್ಚಿಮ ಘಟ್ಟಗಳಲ್ಲಿ ಬಿರುಕು, ಗೀರು ಗಾಯಕ್ಕೆ ಹೊಣೆ ಯಾರು ? ರಾಜಕಾರಣಿಗಳ ತೀಟೆಗೆ ಜನಸಾಮಾನ್ಯರ ಬಲಿಯೇ? Read More »

ಭಾರಿ ಮಳೆ ಹಿನ್ನೆಲೆ; ಸಂಪಾಜೆ ಘಾಟ್ ನಲ್ಲಿ ಘನ ವಾಹನ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಭಾರೀ ಮಳೆ ಮತ್ತು ಭೂಕುಸಿತ ಹಿನ್ನೆಲೆಯಲ್ಲಿ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಘಾಟ್ ನಲ್ಲಿ ಘನ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸಂಪಾಜೆ ಘಾಟ್ ನ ಕೊಯನಾಡು, ದೇವರಕೊಲ್ಲಿ, ಮದೆನಾಡು ಭಾಗಗಳಲ್ಲಿ ರಸ್ತೆ ಮಧ್ಯೆ ಬಿರುಕು ಕಂಡುಬಂದಿದ್ದು, ಇದರಿಂದಾಗಿ ಘನ ವಾಹನ ಸಂಚಾರ ನಿರ್ಭಂಧಿಸಲಾಗಿದೆ. ಬಸ್, ಹಾಗೂ ಲಘುವಾಹನಗಳಿಗಷ್ಟೇ ಸಂಚಾರ ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಭಾರಿ ಮಳೆ ಹಿನ್ನೆಲೆ; ಸಂಪಾಜೆ ಘಾಟ್ ನಲ್ಲಿ ಘನ ವಾಹನ ಸಂಚಾರಕ್ಕೆ ನಿರ್ಬಂಧ Read More »

ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್| ಆ.4 ಮತ್ತು 5ಕ್ಕೆ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆ ಬಿರುಸು ಪಡೆದಿದ್ದು, ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಇಂದು ಮತ್ತು ನಾಳೆ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಶಿವಮೊಗ್ಗ, ಹಾಸನ, ತುಮಕೂರು, ಹಾವೇರಿ, ಬೆಳಗಾವಿ,

ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್| ಆ.4 ಮತ್ತು 5ಕ್ಕೆ ಭಾರೀ ಮಳೆ ಸಂಭವ Read More »

ರಾತ್ರಿ ಮಲಗಿದ್ದ ವೇಳೆ ಎಸಿ ಸ್ಫೋಟ; ನವ ವಿವಾಹಿತ ಸಾವು

ಚೆನ್ನೈ (ತಮಿಳುನಾಡು): ಮನೆಯಲ್ಲಿ ರಾತ್ರಿ ಮಲಗಿದ್ದಾಗ ಎಸಿ ಸ್ಫೋಟಗೊಂಡು ನವ ವಿವಾಹಿತ ಸಾವನ್ನಪ್ಪಿದ ಘಟನೆಯೊಂದು ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. 28 ವರ್ಷದ ಶ್ಯಾಮ್​ ಎಂಬಾತ ಮೃತ ದುರ್ದೈವಿ. ಇಲ್ಲಿನ ಪೆರಂಬೂರ್​ನ ಮನವಲನ್​ ಬಡಾವಣೆಯ ನಿವಾಸಿಯಾದ ಶ್ಯಾಮ್​ ತಮ್ಮ ಮನೆಯ ಕೆಳ ಮಹಡಿಯಲ್ಲಿ ರವಿವಾರ ಮಲಗಿದ್ದರು. ತಂದೆ ಪ್ರಭಾಕರನ್​ ಮೇಲ್ಮಹಡಿಯಲ್ಲಿ ನಿದ್ರಿಸುತ್ತಿದ್ದರು. ಆದರೆ, ರಾತ್ರಿ ಕೆಳ ಮಹಡಿಯಿಂದ ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು ತಂದೆ ಕೆಳಗಡೆ ಓಡಿ ಬಂದಿದ್ದಾರೆ. ಆಗ ದಟ್ಟ ಹೊಗೆ ಆವರಿಸಿದ್ದನ್ನು ಕಂಡ ಪ್ರಭಾಕರನ್​ ಬಾಗಿಲು

ರಾತ್ರಿ ಮಲಗಿದ್ದ ವೇಳೆ ಎಸಿ ಸ್ಫೋಟ; ನವ ವಿವಾಹಿತ ಸಾವು Read More »

ಸಿದ್ದರಾಮಯ್ಯ ಅವರ ಕಾರ್ಯಕ್ರಮ ಕ್ಕೆ ಬರುತ್ತಿದ್ದ ಕಾರ್ಯಕರ್ತನ ವಾಹನ ಅಪಘಾತ; ಓರ್ವ ಸಾವು, ನಾಲ್ವರಿಗೆ ಗಾಯ

ಬಾಗಲಕೋಟೆ : ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜನ್ಮದಿನದ ನಿಮಿತ್ತ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಜಿಲ್ಲೆಯ ಕಾರ್ಯಕರ್ತರ ವಾಹನ ಅಪಘಾತಕ್ಕೆ ಈಡಾಗಿದ್ದು, ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು ನಾಲ್ವರು ಗಾಯಗೊಂಡಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಮುಧೋಳ ತಾಲೂಕಿನ ಆಲಗುಂಡಿ ಗ್ರಾಮದ, ಕ್ರೂಸರ್ ವಾಹನ ಚಾಲಕ ಪ್ರಕಾಶ ಬಡಿಗೇರ ಎಂದು ಗುರುತಿಸಲಾಗಿದ್ದು, ಗಾಯಗೊಂಡ ವ್ಯಕ್ತಿಗಳನ್ನು ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಲಗುಂಡಿ ಗ್ರಾಮದ ಸುಮಾರು 15ಕ್ಕೂ ಹೆಚ್ಚು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಕ್ರೂಸರ್ ವಾಹನದ ಮೂಲಕ

ಸಿದ್ದರಾಮಯ್ಯ ಅವರ ಕಾರ್ಯಕ್ರಮ ಕ್ಕೆ ಬರುತ್ತಿದ್ದ ಕಾರ್ಯಕರ್ತನ ವಾಹನ ಅಪಘಾತ; ಓರ್ವ ಸಾವು, ನಾಲ್ವರಿಗೆ ಗಾಯ Read More »

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಹಲವು ಪ್ರಯಾಣಿಕರಿಗೆ ಗಾಯ

ಮೂಡಬಿದಿರೆ:  ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆಯೊಂದು ಇಲ್ಲಿ‌ನ ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗಕ್ಕೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಪಿಯಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಹಲವು ಪ್ರಯಾಣಿಕರಿಗೆ ಗಾಯ Read More »

ಸಿದ್ದರಾಮಯ್ಯ 75ನೇ ಹುಟ್ಟುಹಬ್ಬಕ್ಕೆ ಸಾರಿಗೆ ಇಲಾಖೆ ಹಲವು ಬಸ್ ಗಳು ಬುಕ್; ವಾಹನ ಸಿಗದೆ ಪರದಾಡಿದ ಪ್ರಯಾಣಿಕರು

ಬೆಂಗಳೂರು : ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಜನ್ಮ ದಿನಾಚರಣೆಯ ಸಿದ್ದರಾಮಯ್ಯ ಅಮೃತಮಹೋತ್ಸವ ಕಾರ್ಯಕ್ರಮಕ್ಕೆ 500 ಕ್ಕೂ ಹೆಚ್ಚು ವಾಯುವ್ಯ ರಸ್ತೆ ಸಾರಿಗೆ ಬಸ್‌ಗಳು ಸೇರಿದಂತೆ ಒಟ್ಟು 7,000 ಬಸ್​ಗಳು ಬುಕ್ ಆಗಿದ್ದು, ಬಸ್ ಗಳು, ಬಾಡಿಗೆ ವಾಹನಗಳು ಸಿಗದೇ ವಾಹನ ಸವಾರರು ಪರದಾಡುವಂತಾಗಿದೆ. ದಾವಣಗೆರೆಯಲ್ಲಿ ಇಂದು ಸಿದ್ದರಾಮಯ್ಯ ಅಮೃತಮಹೋತ್ಸವದ ಹಿನ್ನೆಲೆ ರಾಜ್ಯದ ಸಾರಿಗೆ ಇಲಾಖೆಯ ಹಲವು ಬಸ್ ಗಳನ್ನು ಬುಕ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಸಿಗದೇ ವಾಹನ

ಸಿದ್ದರಾಮಯ್ಯ 75ನೇ ಹುಟ್ಟುಹಬ್ಬಕ್ಕೆ ಸಾರಿಗೆ ಇಲಾಖೆ ಹಲವು ಬಸ್ ಗಳು ಬುಕ್; ವಾಹನ ಸಿಗದೆ ಪರದಾಡಿದ ಪ್ರಯಾಣಿಕರು Read More »

ಆ.6 ರವರೆಗೆ ಕರಾವಳಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಸೋಮವಾರ ಮಧ್ಯಾಹ್ನದ ಬಳಿಕ ಕರಾವಳಿಯಲ್ಲಿ ಸುರಿದ ಮಳೆಯೂ ಸುಳ್ಯ, ಕಡಬ ತಾಲೂಕಿನಲ್ಲಿ ಚಿತ್ರಣವನ್ನೇ ಬದಲಿಸಿದ್ದು , ಭೂಕುಸಿತ, ನೆರೆ ಜನ ಜೀವನವನ್ನೇ ಬುಡಮೇಲಾಗಿಸಿದೆ. ಇನ್ನೊಂದೆಡೆ ಆ. 6 ರವರೆಗೆ ಮುಂದಿನ ಮೂರು ದಿನ ಕರಾವಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಕರಾವಳಿಗರು ಮತ್ತಷ್ಟು ಎಚ್ಚರವಾಗಿರುವಂತೆ ಇಲಾಖೆ ಮುನ್ಸೂಚನೆ ನೀಡಿದೆ.

ಆ.6 ರವರೆಗೆ ಕರಾವಳಿಗೆ ರೆಡ್ ಅಲರ್ಟ್ Read More »