ರಾಜ್ಯ

ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಸಾವು

ಹೊಸಕೋಟೆ: ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ತಿರುಮಲಶೆಟ್ಟಿ ಬಳಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದ ಪರಿಣಾಮ ಅಪಾರ್ಟ್ ಮೆಂಟ್ ಪಕ್ಕದಲ್ಲಿ ನಿರ್ಮಿಸಿದ್ದ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತ ಕಾರ್ಮಿಕರು ಉತ್ತರ ಭಾರತ ಮೂಲದ ನಿವಾಸಿಗಳಾಗಿದ್ದಾರೆ. ಶೆಡ್​ನಲ್ಲಿ ಒಟ್ಟು 8 ಕಾರ್ಮಿಕರು ಮಲಗಿದ್ದರು. ಈ ವೇಳೆ ಅಪಾರ್ಟ್​ಮೆಂಟ್ ಗೋಡೆ […]

ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಸಾವು Read More »

ಬಸ್ ಮತ್ತು ಕಾರು ನಡುವೆ ಅಪಘಾತ; ಇಬ್ಬರು ಸಾವು

ಕೋಲಾರ: ತಾಲೂಕಿನ ಚಾಕರಸನಹಳ್ಳಿ ಗೇಟ್ ಬಳಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಹೋಂಡಾ ಕಂಪನಿಗೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ವೇಮಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸ್ ಮತ್ತು ಕಾರು ನಡುವೆ ಅಪಘಾತ; ಇಬ್ಬರು ಸಾವು Read More »

1-8 ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾಚಿಕ್ಕಿ ವಿತರಿಸಲು ಸರ್ಕಾರ ನಿರ್ಧಾರ

ಬೆಂಗಳೂರು – ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾಚಿಕ್ಕಿ ವಿತರಿಸಲು ಸರಕಾರ ನಿರ್ಧರಿಸಿದೆ. ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ 1ರಿಂದ 8ನೇ ತರಗತಿಯಲ್ಲಿ ಓದುತ್ತಿರುವ ಎಲ್ಲಾ ಜಿಲ್ಲೆಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 46 ದಿನಗಳ ಕಾಲ ವಿತರಿಸಲಾಗುತ್ತದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಫ್ಲೆಕ್ಸಿ ಅನುದಾನದಡಿ

1-8 ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾಚಿಕ್ಕಿ ವಿತರಿಸಲು ಸರ್ಕಾರ ನಿರ್ಧಾರ Read More »

ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ವಿದ್ಯಾರ್ಥಿನಿ ಯೊಬ್ಬಳು ಸೇತುವೆ ಮೇಲೆ ತನ್ನ ಡಿಯೋ ನಿಲ್ಲಿಸಿ, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಚಿತ್ತಾಪುರದಲ್ಲಿ ನಡೆದಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗೆ ನದಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಾಗಿದೆ. ಭಾಗ್ಯಶ್ರೀ (21) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ತಾಪುರ ತಾಲೂಕಿನ ಗುಂಡುಗುರ್ತಿ ಗ್ರಾಮದ ನಿವಾಸಿಯಾಗಿದ್ದ ಈಕೆ ಕಲಬುರಗಿಯಲ್ಲಿ ಬಿಎಸ್​ಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈಕೆ ಗುಂಡುಗುರ್ತಿ ತಾಲೂಕು ಪಂಚಾಯಿತಿ ಸದಸ್ಯ ಬಸವರಾಜ್ ಅವರ ಪುತ್ರಿ. ಇಂದು ಮನೆಯಿಂದ ತನ್ನ

ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ ವಿದ್ಯಾರ್ಥಿನಿ Read More »

ಪಶ್ಚಿಮ ಘಟ್ಟಗಳ ಉಳಿವಿಗೆ ಕಸ್ತೂರಿ‌ ರಂಗನ್ ವರದಿ ಜಾರಿ| ಜನ ಯಾಕಿಷ್ಟು ಭಯ ಪಡ್ತಾರೆ ಗೊತ್ತಾ? ಅಂಥಾದ್ದೇನಿದೆ ಈ ವರದಿಯಲ್ಲಿ? ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ಪಶ್ಚಿಮ ಘಟ್ಟಗಳು ಭಾರತೀಯ ಪರ್ಯಾಯ ದ್ವೀಪದ ಪಶ್ಚಿಮ ಕರಾವಳಿಗೆ ಸಮಾನಾಂತರವಾಗಿ ಹಬ್ಬಿದ ಪರ್ವತ ಶ್ರೇಣಿ. ಪಶ್ಚಿಮಘಟ್ಟದ ಶ್ರೇಣಿಯು ಗುಜರಾತ್‌ನಿಂದ ಆರಂಭವಾಗಿ ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯದ ಕನ್ಯಾಕುಮಾರಿವರೆಗೂ ಹಬ್ಬಿದೆ. ಪಶ್ಚಿಮ ಘಟ್ಟಗಳ ಒಟ್ಟು 1,64,280 ಚ.ಕಿ.ಮೀ. ಪ್ರದೇಶದಲ್ಲಿ ಸುಮಾರು 59.940 ಚ.ಕಿ.ಮೀ ವಿಸ್ತೀರ್ಣ ಪ್ರದೇಶ ಅಂದರೆ ಸುಮಾರು ಶೇಕಡಾ 36.49ರಷ್ಟು ಭಾಗವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಪಶ್ಚಿಮ ಘಟ್ಟಗಳ ಈ ಸೂಕ್ಷ್ಮ ಪರಿಸರವು ಅಪರೂಪದ ಪ್ರಾಣಿಗಳು, ಪಕ್ಷಿಗಳು,

ಪಶ್ಚಿಮ ಘಟ್ಟಗಳ ಉಳಿವಿಗೆ ಕಸ್ತೂರಿ‌ ರಂಗನ್ ವರದಿ ಜಾರಿ| ಜನ ಯಾಕಿಷ್ಟು ಭಯ ಪಡ್ತಾರೆ ಗೊತ್ತಾ? ಅಂಥಾದ್ದೇನಿದೆ ಈ ವರದಿಯಲ್ಲಿ? ಕಂಪ್ಲೀಟ್ ಸ್ಟೋರಿ… Read More »

ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ಶೇ.39.59 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಸಮಗ್ರ ನ್ಯೂಸ್: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಜುಲೈ 21ರಂದು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಜು.21ರ ಮಧ್ಯಾಹ್ನ 12 ಗಂಟೆ ನಂತರ ಈ ವೆಬ್‌ಸೈಟ್‌ನಲ್ಲಿ (https://karresults.nic.in/

ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ಶೇ.39.59 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ Read More »

ಇಂದು ರಾಜ್ಯಸಭಾ ಸದಸ್ಯರಾಗಿ ಪಿ.ಟಿ.ಉಷಾ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಿಂದ ನಾಮನಿರ್ದೇಶನಗೊಂಡಿರುವ ಮಾಜಿ ಅಥ್ಲೀಟ್ ಪಿ.ಟಿ. ಉಷಾ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ, ಪಿ.ಟಿ. ಉಷಾ ಸೇರಿದಂತೆ ಇಳೆಯರಾಜ, ವಿಜಯೇಂದ್ರ ಪ್ರಸಾದ್ ಹಾಗೂ ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿತ್ತು. ಪಯ್ಯೊಳಿ ಎಕ್ಸ್ ಪ್ರೆಸ್’ ಎಂದೇ ಖ್ಯಾತರಾದ ಪಿ.ಟಿ. ಉಷಾ ಅವರನ್ನು ಕ್ರೀಡಾಕೂಟದಲ್ಲಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದ್ದು, ಇವರ ಅವಧಿಯಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದಾರೆ

ಇಂದು ರಾಜ್ಯಸಭಾ ಸದಸ್ಯರಾಗಿ ಪಿ.ಟಿ.ಉಷಾ ಪ್ರಮಾಣವಚನ ಸ್ವೀಕಾರ Read More »

ಬಸ್ಸ್ ನಲ್ಲಿ ಪ್ರಯಾಣಿಸಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಯ ದರ್ಶನ ಪಡೆದರು. ಚಾಮುಂಡೇಶ್ವರಿ ಯ ವರ್ಧಂತಿ ಆದ ಇಂದು ಮೈಸೂರಿಗೆ ಆಗಮಿಸಿ, ಲಲಿತ ಮಹಲ್ ಹೆಲಿಪ್ಯಾಡ್ ನಿಂದ ಸಾರ್ವಜನಿಕ ರೊಂದಿಗೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಬಸ್ಸ್ ನಲ್ಲಿ ಪ್ರಯಾಣಿಸಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ Read More »

ಬೈಕ್ ಮತ್ತು ಕಾರು ಅಪಘಾತ; ಒಂದೇ ಕುಟುಂಬದ ಇಬ್ಬರು ಸಾವು

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 11 ವರ್ಷದ ಬಾಲಕ‌ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಾಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದ ಸಂದೀಪ ಸಿದ್ದಪ್ಪ ಮಲ್ಲೂರ (11) ಸ್ಥಳದಲ್ಲೇ ಸಾವನ್ನಪ್ಪಿದ್ದು, ಶಿವಪ್ಪ ಬಸವಂತಗೌಡ ಮಲ್ಲೂರ (46) ಬೆಳಗಾವಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿರುವ ಮತ್ತೊಬ್ಬ ಸವಾರ ವೀರಣ್ಣ ಚನ್ನಬಸಪ್ಪ ಬಗನಾಳ

ಬೈಕ್ ಮತ್ತು ಕಾರು ಅಪಘಾತ; ಒಂದೇ ಕುಟುಂಬದ ಇಬ್ಬರು ಸಾವು Read More »

ಮಂಡ್ಯ ಜಿಲ್ಲೆ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ಇಂದು ಮೈಸೂರು, ಮಂಡ್ಯ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಮಾಡಿ ಆಶೀರ್ವಾದ ಪಡೆದರು. ಬೆಳಗ್ಗೆ 8.30ಕ್ಕೆ‌ ಬೆಂಗಳೂರಿನ ಹೆಚ್​​​​ಎಎಲ್ ವಿಮಾನ‌ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ‌ ಬೆಳಗ್ಗೆ 9.20ಕ್ಕೆ ಮೈಸೂರು ಮಂಡಕಹಳ್ಳಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದರು. ರಸ್ತೆ ಮೂಲಕ ಬೆಳಗ್ಗೆ 9.45ಕ್ಕೆ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವರ್ಧಂತಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅರ್ಚನೆಯನ್ನು ಮಾಡಿಸಿದರು. ಸಚಿವರಾದ ಗೋವಿಂದ

ಮಂಡ್ಯ ಜಿಲ್ಲೆ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ Read More »