ರಾಜ್ಯ

ಮಡಿಕೇರಿ: ಕುಸಿಯುವ ಭೀತಿಯಲ್ಲಿ ಬಹುಕೋಟಿ ವೆಚ್ಚದ ತಡೆಗೋಡೆ| ಮಡಿಕೇರಿ – ಮಂಗಳೂರು ಸಂಚಾರಕ್ಕೆ ಬದಲಿ ಮಾರ್ಗ!

ಸಮಗ್ರ ನ್ಯೂಸ್: ಬಹುಕೋಟಿ ವೆಚ್ಚದಲ್ಲಿ ವಿನೂತನ ರೀತಿ ನಿರ್ಮಿಸಿದ ಕೊಡಗು ಜಿಲ್ಲಾಧಿಕಾರಿ ಕಚೇರಿಯ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆಹಿಡಿಯಲಾಗಿದೆ. ಮಂಗಳೂರು ಸಂಚರಿಸುವ ಆ ರಸ್ತೆ ಬಂದ್ ಮಾಡಲಾಗಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಮಡಿಕೇರಿ ಪೇಟೆಯ ತಿಮ್ಮಯ್ಯ ವೃತ್ತದಲ್ಲಿ ಬ್ಯಾರಿಕೇಡ್ ಅಳವಡಿಸಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ರಸ್ತೆ ಬಂದ್ ಮಾಡಿದ್ದಾರೆ. ಮಡಿಕೇರಿಯಿಂದ ಮಂಗಳೂರಿಗೆ ತೆರಳುವವರು ಮತ್ತು ಮಡಿಕೇರಿಗೆ ಮಂಗಳೂರಿನಿಂದ ಬರುವವರು ಮೇಕೆರಿ ತಾಳತ್ತಮನೆ ಅಪ್ಪಂಗಳ ಮಾರ್ಗವಾಗಿ […]

ಮಡಿಕೇರಿ: ಕುಸಿಯುವ ಭೀತಿಯಲ್ಲಿ ಬಹುಕೋಟಿ ವೆಚ್ಚದ ತಡೆಗೋಡೆ| ಮಡಿಕೇರಿ – ಮಂಗಳೂರು ಸಂಚಾರಕ್ಕೆ ಬದಲಿ ಮಾರ್ಗ! Read More »

ಮಂಗಳೂರು; ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ,ಇಬ್ಬರ ಸೆರೆ ಹಿಡಿದ ಸಿಸಿಬಿ ಪೋಲಿಸ್

ಸಮಗ್ರ ನ್ಯೂಸ್ : ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಬಿ ರವರ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ನಗರದ ಕಾವೂರು ಶಂಕರ ನಗರ ಕೆ ಸಿ ಆಳ್ವ ಲೇಔಟ್ ನ ಮನೆಯೊಂದಕ್ಕೆ ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಹೊಂದಿದ

ಮಂಗಳೂರು; ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ,ಇಬ್ಬರ ಸೆರೆ ಹಿಡಿದ ಸಿಸಿಬಿ ಪೋಲಿಸ್ Read More »

ಸರ್ಕಾರಿ‌ ಆದೇಶದಲ್ಲಿ ಕನ್ನಡದ ಕಗ್ಗೊಲೆ| ಆಕ್ರೋಶದ ಬೆನ್ನಲ್ಲೇ ಹೊಸ ಆದೇಶ ಪ್ರತಿ ಪ್ರಕಟ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶದ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕೆಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಅನೇಕರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಸಿಎಂ ಬೊಮ್ಮಾಯಿ ತಕ್ಷಣವೇ ಆದೇಶ ವಾಪಸ್ ಪಡೆಯುವಂತೆ ಸೂಚಿಸಿದ್ದರು.

ಸರ್ಕಾರಿ‌ ಆದೇಶದಲ್ಲಿ ಕನ್ನಡದ ಕಗ್ಗೊಲೆ| ಆಕ್ರೋಶದ ಬೆನ್ನಲ್ಲೇ ಹೊಸ ಆದೇಶ ಪ್ರತಿ ಪ್ರಕಟ Read More »

ಭಾರೀ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬೃಹದಾಕಾರದ ಮರ

ಶಿವಮೊಗ್ಗ: ನಗರದ ರಾಜೇಂದ್ರ ನಗರ ಬಡಾವಣೆಯಲ್ಲಿ ಭಾರೀ ಮಳೆಯಿಂದಾಗಿ ಬೃಹದಾಕಾರದ ಮರವೊಂದು ಇಂದು ಬೆಳಗಿನ ಜಾವ ಬುಡ ಸಮೇತ ಬಿದ್ದಿದೆ. ಕೆ.ಹೆಚ್.ಬಿ. ಕ್ವಾಟ್ರಸ್ ಮನೆ ಹಾಗೂ ರಸ್ತೆ ಮೇಲೆ ಮರ ಬಿದ್ದಿದ್ದು, ಮರ ಬಿದ್ದಿರುವ ಮನೆಯಲ್ಲಿ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಧಾವಿಸಿ ಮರ ತೆರವುಗೊಳಿಸಿದ್ದಾರೆ. ಮರ ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಸಂಚಾರಕ್ಕೆ ತೊಂದರೆಯಾಗಿತ್ತು.

ಭಾರೀ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬೃಹದಾಕಾರದ ಮರ Read More »

ಐವರ್ನಾಡು; ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಐತಿಹಾಸಿಕ ಯೋಜನೆಯ “ವಿಜ್ಞಾಪನಾ ಪತ್ರ” ಬಿಡುಗಡೆ

ಸುಳ್ಯ : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮತ್ತು ಶ್ರೀ ಪಂಚಲಿಂಗೇಶ್ವರನಿಗೆ ಪೂಗಮನ ಕಲ್ಪವೃಕ್ಷ ಸೇವೆ ಸಮಿತಿಯ, ಜಂಟಿ ಐತಿಹಾಸಿಕ ಯೋಜನೆಯ ಪ್ರಯುಕ್ತ ” ವಿಜ್ಞಾಪನಾ ಪತ್ರ” ಬಿಡುಗಡೆಯ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ನಡೆಯಿತು. ಪತ್ರದ ಬಿಡುಗಡೆಯನ್ನು ಪೂಗಮನ ಸಮಿತಿಯ ಅಧ್ಯಕ್ಷರಾದ ಶ್ರೀ ದಾಸಪ್ಪ ಗೌಡ ಕೋಡ್ತಿಲು ನೆರವೇರಿಸಿದರು. ಸಮಿತಿಯ ಸಂಯೋಜಕರಾದ ಶ್ರೀ ಕೃಷ್ಣ ಪ್ರಸಾದ್ ಮಡ್ತಿಲ, ಕಾರ್ಯ ಯೋಜನೆಯ ಪೂರ್ವ ತಯಾರಿಯ ಬಗ್ಗೆ ಮಾತನಾಡಿ, ಊರ ಸಮಸ್ತರು ಭಕ್ತಿಪೂರ್ವಕವಾಗಿ ತನು-ಮನ-ಧನಗಳ ಪೂರ್ವಕ ಈ

ಐವರ್ನಾಡು; ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಐತಿಹಾಸಿಕ ಯೋಜನೆಯ “ವಿಜ್ಞಾಪನಾ ಪತ್ರ” ಬಿಡುಗಡೆ Read More »

ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರು ಪೋಟೋ, ವಿಡಿಯೋ ತೆಗೆಯುವುದು ನಿಷೇಧ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

ಬೆಂಗಳೂರು :ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನು ವಾಪಸ್ ಪಡೆದಿದೆ. ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ರಾಜ್ಯ ಸರ್ಕಾರವು ಶುಕ್ರವಾರ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಚಿತ್ರೀಕರಿಸದಂತೆ ಆದೇಶ ಹೊರಡಿಸಿತ್ತು. ಇದೀಗ ರಾಜ್ಯ ಸರ್ಕಾರದ ಈ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆ ತಡರಾತ್ರಿ ಈ ಆದೇಶವನ್ನು ವಾಪಸ್ ಪಡೆದಿದೆ.

ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರು ಪೋಟೋ, ವಿಡಿಯೋ ತೆಗೆಯುವುದು ನಿಷೇಧ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ Read More »

ಸಿಲಿಂಡರ್ ವಿಚಾರವಾಗಿ ಗಲಾಟೆ;  ತಮ್ಮ, ಅಣ್ಣನಿಗೆ ಚಾಕುವಿನಿಂದ ಇರಿದು ಹಲ್ಲೆ

ಹುಬ್ಬಳ್ಳಿ:  ಸಿಲಿಂಡರ್ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ತಮ್ಮ ಅಣ್ಣನಿಗೆ ಚಾಕುವಿನಿಂದ ಇರಿದು, ಸೆಂಟ್ರಿಂಗ್ ಗನ್’ನಿಂದ ಹಲ್ಲೆ ನಡೆಸಿದ ಪ್ರಕರಣ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮುನ್ನಾ ಶಿಗ್ಗಾಂವ (27) ಹಲ್ಲೆಗೆ ಒಳಗಾಗಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಯಾಜ್ ಹಾಗೂ ಅನ್ವರ್ ಆರೋಪಿಗಳಾಗಿದ್ದು ಬಂಧಿಸಲಾಗಿದೆ.ಕಸ್ತೂರಬಾ ನಗರದ ತಾಯಿ ಮನೆಯಲ್ಲಿದ್ದ ಸಿಲಿಂಡರ್’ನ್ನು ತೆಗೆದುಕೊಂಡು ಹೋಗಲು ಬಂದಿದ್ದ ಮುನ್ನಾ ತಾಯಿ ಜೊತೆಗೆ ಜಗಳ ಮಾಡಿ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ತಮ್ಮ ರಿಯಾಜ್ ಹಾಗೂ ಅನ್ವರ್

ಸಿಲಿಂಡರ್ ವಿಚಾರವಾಗಿ ಗಲಾಟೆ;  ತಮ್ಮ, ಅಣ್ಣನಿಗೆ ಚಾಕುವಿನಿಂದ ಇರಿದು ಹಲ್ಲೆ Read More »

ಶಿರಾಡಿ ಘಾಟ್ ಸಂಚಾರ ಸ್ಥಗಿತ| ಕಿ.ಮೀ ಗಟ್ಟಲೆ ಟ್ರಾಫಿಕ್ ಜ್ಯಾಂ

ಸಮಗ್ರ ನ್ಯೂಸ್: ಸಕಲೇಶಪುರದ ದೋಣಿಗಲ್ ಬಳಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜ್ಯಾಂ ಉಂಟಾಗಿದೆ. ಭಾರೀ ಗಾತ್ರದ ಟ್ರಕ್ಕ್ ಗಳು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದು, ಸಂಚಾರ ಅಸ್ತವ್ಯಸ್ಥವಾಗಿದೆ. ಇದರಿಂದ ಗುಂಡ್ಯ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ- ಧರ್ಮಸ್ಥಳ ಪ್ರಯಾಣಿಸುವ ವಾಹನಗಳಿಗೆ ತೊಂದರೆಯುಂಟಾಗಿದ್ದು, ಗಂಟೆಗಟ್ಟಲೆ ಟ್ರಾಫಿಕ್ ಜ್ಯಾಂ ಉಂಟಾಗಿದೆ. ಅಡ್ಡಹೊಳೆಯಿಂದ ಗುಂಡ್ಯ ಸಕಲೇಶಪುರ ರಸ್ತೆಯ ತುಂಬಾ ಟ್ರಕ್ಕುಗಳು ಸಾಲುಗಟ್ಟಿವೆ

ಶಿರಾಡಿ ಘಾಟ್ ಸಂಚಾರ ಸ್ಥಗಿತ| ಕಿ.ಮೀ ಗಟ್ಟಲೆ ಟ್ರಾಫಿಕ್ ಜ್ಯಾಂ Read More »

ರಾಜ್ಯದಲ್ಲಿ ಮುಂದುವರಿದ ಮಳೆಯಾರ್ಭಟ| ಹಲವೆಡೆ ಜನಜೀವನ ಅಸ್ತವ್ಯಸ್ತ| ಮಲೆನಾಡಿನ ಕೆಲವೆಡೆ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಎರಡು ದಿನಗಳಿಂದ ಕೊಂಚ ವಿರಾಮ ನೀಡಿದ್ದ ವರುಣ ಮತ್ತೆ ಅಬ್ಬರಿಸುತ್ತಿದ್ದಾನೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಸಿಂಚನ ಆಗಲಿದೆ. ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎಂದಿನಂತೆ ಮಳೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಮೋಡ ಮತ್ತು ಸೂರ್ಯನ ನಡುವೆ ಕಣ್ಣಾಮುಚ್ಚಾಲೆಯ ಆಟ ಇರಲಿದ್ದು, ಚದುರಿದ ರೀತಿಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಮಳೆ ಬೀಳುತ್ತಿದ್ದು ಬೆಳಗಾವಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬೆಳಗಾವಿಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಮತ್ತೊಂದು

ರಾಜ್ಯದಲ್ಲಿ ಮುಂದುವರಿದ ಮಳೆಯಾರ್ಭಟ| ಹಲವೆಡೆ ಜನಜೀವನ ಅಸ್ತವ್ಯಸ್ತ| ಮಲೆನಾಡಿನ ಕೆಲವೆಡೆ ಶಾಲೆಗಳಿಗೆ ರಜೆ Read More »

ಭ್ರಷ್ಟರ ರಕ್ಷಣೆಗೆ ಮುಂದಾಗಿದ್ದ ರಾಜ್ಯಸರ್ಕಾರದ ನಡೆಗೆ ಆಕ್ರೋಶ| ಕಚೇರಿಗಳಲ್ಲಿ ಫೋಟೋ ವಿಡಿಯೋ ಶೂಟಿಂಗ್ ನಿಷೇಧ ಆದೇಶ ವಾಪಾಸ್

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನು ವಾಪಸ್ ಪಡೆದಿದೆ. ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ರಾಜ್ಯ ಸರ್ಕಾರವು ಶುಕ್ರವಾರ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಚಿತ್ರೀಕರಿಸದಂತೆ ಆದೇಶ ಹೊರಡಿಸಿತ್ತು. ಆದರೆ ಭ್ರಷ್ಟರಿಗೆ ಅನುಕೂಲವಾಗಬಲ್ಲ ರಾಜ್ಯ ಸರ್ಕಾರದ ಈ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಡರಾತ್ರಿ ಈ ಆದೇಶವನ್ನು ವಾಪಸ್

ಭ್ರಷ್ಟರ ರಕ್ಷಣೆಗೆ ಮುಂದಾಗಿದ್ದ ರಾಜ್ಯಸರ್ಕಾರದ ನಡೆಗೆ ಆಕ್ರೋಶ| ಕಚೇರಿಗಳಲ್ಲಿ ಫೋಟೋ ವಿಡಿಯೋ ಶೂಟಿಂಗ್ ನಿಷೇಧ ಆದೇಶ ವಾಪಾಸ್ Read More »