ರಾಜ್ಯ

ಮತ್ತೆ ಸುದ್ದಿಯಾಗುತ್ತಿರುವ ಚೆಂಬು ಗ್ರಾಮ| ಈ ಬಾರಿ ಮತ್ತೆ ಭೂಮಿಯೊಳಗೆ ನಿಗೂಢ ಶಬ್ದ

ಸಮಗ್ರ ನ್ಯೂಸ್: ಭೂಕಂಪನದಿಂದ ದಿಗಿಲುಗೊಂಡಿದ್ದ ಗಡಿಗ್ರಾಮ ಚೆಂಬುವಿನಲ್ಲಿ ಮತ್ತೆ ನಿಗೂಢ ಸದ್ದು ಪುನರಾವರ್ತನೆಗೊಂಡಿದೆ. ಇಂದು ಮುಂಜಾನೆ 4.40ರ ಸುಮಾರಿಗೆ ಭೂಮಿಯಾಳದಿಂದ ಸದ್ದು ಕೇಳಿಬಂದಿದ್ದು, ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಕೊಡಗು ಭೂಗರ್ಭ ಶಾಸ್ತ್ರಜ್ಞ ಅನನ್ಯಾ ವಾಸುದೇವ್ ಪ್ರತಿಕ್ರಿಯೆ ನೀಡಿದ್ದು, ಭೂಕಂಪವಾದ ಭೂಮಿಯೊಳಗೆ ರಾಸಾಯನಿಕ ಪ್ರಕ್ರಿಯೆಗಳು ನಡೆಯುತ್ತಿರುತ್ತದೆ. ಇದರಿಂದ ಆಗಾಗ್ಗೆ ಶಬ್ದ, ಕಂಪನಗಳು ಸಣ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಜನರು ಆತಂಕ ಪಡಬೇಕಿಲ್ಲ. ಇದರಿಂದ ಯಾವುದೇ ಅನಾಹುತ ಸಂಭವಿಸಲಾರದು ಎಂದಿದ್ದಾರೆ. ಚೆಂಬು ಗ್ರಾಮದ ಜನತೆಯೂ ಈಗೀಗ ಪ್ರಕೃತಿಯೊಂದಿಗೆ ಹೊಂದಿಕೊಳ್ಳುತ್ತಿದ್ದು, […]

ಮತ್ತೆ ಸುದ್ದಿಯಾಗುತ್ತಿರುವ ಚೆಂಬು ಗ್ರಾಮ| ಈ ಬಾರಿ ಮತ್ತೆ ಭೂಮಿಯೊಳಗೆ ನಿಗೂಢ ಶಬ್ದ Read More »

ಹಳ್ಳದಲ್ಲಿ ನಿಂತು ಸೇತುವೆ ನಿರ್ಮಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಪದ್ಮಶ್ರೀ ತುಳಸಿ ಗೌಡ| ಖಾಸಗಿ ಜಾಗದ ಮಾಲೀಕರು ಒಪ್ಪಬೇಕು: ಜಿಲ್ಲಾಡಳಿತ

ಸಮಗ್ರ ನ್ಯೂಸ್: ತಮ್ಮ ಮನೆಯ ಮುಂದೆ ಹರಿಯುವ ಹಳ್ಳಕ್ಕೆ ಸೇತುವೆ ನಿರ್ಮಿಸಿಕೊಡುವಂತೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಪರಿಸರ ಪ್ರೇಮಿ ತುಳಸಿ ಗೌಡ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರಿನ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲೇ ತುಳಸಿ ಗೌಡರವರ ಮನೆಯಿದ್ದು ಅದರ ಮುಂದೆ ಸಣ್ಣದೊಂದು ಹಳ್ಳ ಹರಿಯುತ್ತಿದೆ. ಈ ಹಳ್ಳವನ್ನು ಮಳೆಗಾಲದಲ್ಲಿ ದಾಟಲು ಆಗುವುದಿಲ್ಲ. ಹಾಗಾಗಿ ಹರಿಯುವ ಹಳ್ಳದಲ್ಲಿ ತಮ್ಮ ಮೊಮ್ಮಕ್ಕಳೊಂದಿಗೆ ನಿಂತು ಸೇತುವೆ ನಿರ್ಮಿಸಿ ಕೊಡುವಂತೆ ವೀಡಿಯೋ ಮಾಡಿ ಮನವಿ ಮಾಡಿಕೊಂಡಿದ್ದಾರೆ. ಪ್ರತಿ

ಹಳ್ಳದಲ್ಲಿ ನಿಂತು ಸೇತುವೆ ನಿರ್ಮಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಪದ್ಮಶ್ರೀ ತುಳಸಿ ಗೌಡ| ಖಾಸಗಿ ಜಾಗದ ಮಾಲೀಕರು ಒಪ್ಪಬೇಕು: ಜಿಲ್ಲಾಡಳಿತ Read More »

ನಡುಗಿದ ಬಸವನಾಡು; ಬೆಳ್ಳಂಬೆಳಗ್ಗೆ ವಿಜಯಪುರದಲ್ಲಿ ಭೂಕಂಪನ

ಸಮಗ್ರ ನ್ಯೂಸ್: ಶನಿವಾರ ಬೆಳ್ಳಂಬೆಳಿಗ್ಗೆ ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭೂಕಂಪನದ ಅನುಭವವಾಗಿದೆ. ಬೆಳಿಗ್ಗೆ 6.22ರಿಂದ 6.23ರ ವೇಳೆಗೆ ಭೂಮಿ 10 ಸೆಕೆಂಡ್ ಗೂ ಅಧಿಕ ಸಮಯ ಕಂಪಿಸಿದೆ. ಜೊತೆಗೆ ಭಾರೀ ಶಬ್ಧ ಭೂಮಿಯೊಳಗಿಂದ ಕೇಳಿಬಂದಿತು. ನಿದ್ರೆಯಿಂದ ಆಗ ತಾನೆ ಎದ್ದವರು, ಏಳದವರು ಭೂಮಿಯ ಕಂಪನ ಮತ್ತು ಭಾರೀ ಶಬ್ಧದಿಂದ ಬೆಚ್ಚಿ ಬಿದ್ದು ಆತಂಕದಿಂದ ಮನೆಯಿಂದ ಓಡಿ ಹೊರಬಂದರು. ಭೂಕಂಪನದ ಕೇಂದ್ರಬಿಂದು ಯಾವುದು ಮತ್ತು ಭೂಕಂಪನದ ತೀವ್ರತೆ ಎಷ್ಟಿತ್ತು ಎಂಬುದು ಇನ್ನು ಖಚಿತವಾಗಿಲ್ಲ. ಎರಡು ವರ್ಷಗಳಿಂದ

ನಡುಗಿದ ಬಸವನಾಡು; ಬೆಳ್ಳಂಬೆಳಗ್ಗೆ ವಿಜಯಪುರದಲ್ಲಿ ಭೂಕಂಪನ Read More »

“ಪುನೀತ್ ರಾಜ್ ಕುಮಾರ್ ಕಾಣೆಯಾಗಿದ್ದಾರೆ ಹುಡುಕಿ ಕೊಟ್ಟವರಿಗೆ ಕೇಳಿದ್ದನ್ನು ಕೊಡಲಾಗುವುದು” -ಪೋಸ್ಟರ್ ವೈರಲ್

ಸಮಗ್ರ ನ್ಯೂಸ್: ಪುನೀತ್ ರಾಜ್ ಕುಮಾರ್ ನಿಧನವನ್ನು ಇನ್ನೂ ಅವರ ಅಭಿಮಾನಿಗಳು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಪ್ಪು ಅಗಲಿ ಎಂಟು ತಿಂಗಳು ಕಳೆದರೂ, ಅಭಿಮಾನಿಗಳು ಇನ್ನೂ ಅವರನ್ನು ನಾನಾ ರೀತಿಯಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ‘ಕಾಣೆಯಾಗಿದ್ದಾರೆ’ ಎನ್ನುವ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಪ್ಪು ಅಭಿಮಾನಿಗಳು ತಮ್ಮ ನೆಚ್ಚಿನ ನಟ ಕಾಣೆಯಾಗಿದ್ದಾರೆ ಹುಡುಕಿಕೊಟ್ಟವರಿಗೆ ಕೇಳಿದ್ದನ್ನು ಕೊಡಲಾಗುವುದು ಎಂದು ಭಿತ್ತಿ ಪತ್ರವನ್ನು ಅಂಟಿಸುತ್ತಿದ್ದಾರೆ. ಹುಡುಗನೊಬ್ಬ ಭಿತ್ತಿ ಪತ್ರವನ್ನು ಗೋಡೆಗೆ ಅಂಟಿಸಿ ಕಾಣೆಯಾಗಿರುವ ತಮ್ಮ ನೆಚ್ಚಿನ ನಟನನ್ನು ಹುಡುಕಿಕೊಡಿ ಎಂದು

“ಪುನೀತ್ ರಾಜ್ ಕುಮಾರ್ ಕಾಣೆಯಾಗಿದ್ದಾರೆ ಹುಡುಕಿ ಕೊಟ್ಟವರಿಗೆ ಕೇಳಿದ್ದನ್ನು ಕೊಡಲಾಗುವುದು” -ಪೋಸ್ಟರ್ ವೈರಲ್ Read More »

ಬಕ್ರೀದ್ ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ಮುಸ್ಲಿಂ ಬಾಂಧವರ ಬಕ್ರೀದ್ ಇದೇ ಜುಲೈ 10ರಂದು ರಾಜ್ಯದಾದ್ಯಂತ ಆಚರಿಸಲಾಗುತ್ತಿದ್ದು, ಹಬ್ಬವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಕೆಲ ಕಾನೂನು ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸರ್ಕಾರ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸುವವರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿ ನೆರವೇರಿಸಬೇಕು. ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ ಕಾಲೇಜು, ಆಸ್ಪತ್ರೆ ಆವರಣಗಳಲ್ಲಿ ಖುರ್ಬಾನಿಯನ್ನು ನಿಷೇಧಿಸಲಾಗಿದೆ. ಸ್ಥಳೀಯಾಡಳಿತ

ಬಕ್ರೀದ್ ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ Read More »

ಸಾಲುಮರದ ತಿಮ್ಮಕ್ಕ ಇನ್ಮುಂದೆ ರಾಜ್ಯಸರ್ಕಾರದ ಪರಿಸರ ರಾಯಭಾರಿ| ವೃಕ್ಷಮಾತೆಗೆ ಸಂಪುಟ ದರ್ಜೆಯ ಸ್ಥಾನಮಾನ

ಸಮಗ್ರ ನ್ಯೂಸ್: ವೃಕ್ಷಮಾತೆ, ರಾಷ್ಟ್ರ, ರಾಜ್ಯ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರನ್ನು, ರಾಜ್ಯ ಸರ್ಕಾರ ಪರಿಸರ ರಾಯಭಾರಿಯಾಗಿ ನೇಮಕ ಮಾಡಿ ಆದೇಶಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನಾಡೋಜ ಪ್ರಶಸ್ತಿ ಪುರಸ್ಕೃತೆ, ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದಂತ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ನೇಮಿಸಲಾಗಿದೆ. ಅವರಿಗೆ ಈ ಕೂಡಲೇ ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಸಾಲುಮರದ ತಿಮ್ಮಕ್ಕ ಇನ್ಮುಂದೆ ರಾಜ್ಯಸರ್ಕಾರದ ಪರಿಸರ ರಾಯಭಾರಿ| ವೃಕ್ಷಮಾತೆಗೆ ಸಂಪುಟ ದರ್ಜೆಯ ಸ್ಥಾನಮಾನ Read More »

ರೈಲ್ವೇ ಅಂಡರ್ ಪಾಸ್ ಗೋಡೆಗೆ ಟೊಮೆಟೊ ತುಂಬಿದ ಲಾರಿ ಡಿಕ್ಕಿ ; ಚಾಲಕನಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್ : ಚಿಕ್ಕಬಳ್ಳಾಪುರ ತಾಲ್ಲೂಕಿನ ಜಾತವಾರ ಬಳಿಯ ಹೊಸಹಳ್ಳಿ ರೈಲ್ವೇ ಅಂಡರ್ ಪಾಸ್‌ ಗೋಡೆಗೆ ಟೊಮೆಟೊ ಲಾರಿ ಡಿಕ್ಕಿ ಹೊಡೆದು ಡಿಕ್ಕಿಯ ರಭಸಕ್ಕೆ ಟೊಮೆಟೊ ತುಂಬಿದ್ದ ಲಾರಿ ಉರುಳಿ ಬಿದ್ದಿದೆ. ಚಾಲಕನಿಗೆ ಗಂಭೀರ ಗಾಯವಾಗಿದೆ. ಲಾರಿ ಉರುಳಿ ಬಿದ್ದ ಪರಿಣಾಮ ಟೊಮೆಟೊ ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಚಿಂತಾಮಣಿಯಿಂದ ಟೊಮೆಟೊ ತುಂಬಿಸಿಕೊಂಡು ಬರುತ್ತಿದ್ದ ಲಾರಿ ಇದಾಗಿದ್ದು, ರಾತ್ರಿ ವೇಳೆ ಹಂಪ್ಸ್‌ನಲ್ಲಿ ಲಾರಿ ನಿಯಂತ್ರಣ ತಪ್ಪಿದ ಪರಿಣಾಮ ಲಾರಿ ರೈಲ್ವೇ ಅಂಡರ್ ಪಾಸ್‌ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ರೈಲ್ವೇ ಅಂಡರ್ ಪಾಸ್ ಗೋಡೆಗೆ ಟೊಮೆಟೊ ತುಂಬಿದ ಲಾರಿ ಡಿಕ್ಕಿ ; ಚಾಲಕನಿಗೆ ಗಂಭೀರ ಗಾಯ Read More »

ಕೇರಳ; ಸ್ಕ್ರ್ಯಾಪ್ ಸಂಗ್ರಹಿಸಲು ತೊಡಗಿದ್ದ ತಂದೆ ಮತ್ತು ಮಗ ಸ್ಫೋಟದಲ್ಲಿ ಬಲಿ

ಸಮಗ್ರ ನ್ಯೂಸ್ : ಕೇರಳದ ಕಣ್ಣೂರು ಜಿಲ್ಲೆಯ ಮಟ್ಟನ್ನೂರಿನ ಕಾಸಿಮುಕ್ಕು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ತಂದೆ ಮತ್ತು ಮಗ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಮಾಹಿತಿಗಳ ಪ್ರಕಾರ, ಸ್ಕ್ರ್ಯಾಪ್ ಸಂಗ್ರಹಿಸಲು ತೊಡಗಿದ್ದ ಅಸ್ಸಾಂ ಮೂಲದ ಫಸಲ್ ಹಕ್ (45) ಮತ್ತು ಮಗ ಶಹೀದುಲ್ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಇವರು ಗುಜರಿ ಹೆಕ್ಕಿ ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದು, ಸ್ಕ್ರ್ಯಾಪ್ ಸಂಗ್ರಹದ ವೇಳೆ ತಮಗೆ ದೊರೆತಿದ್ದ ಸ್ಟೀಲ್‌ ಬಾಕ್ಸ್‌ವೊಂದನ್ನು ಮನೆಗೆ ತಂದು ಓಪನ್‌ ಮಾಡಿದ ತಕ್ಷಣ ಅದು

ಕೇರಳ; ಸ್ಕ್ರ್ಯಾಪ್ ಸಂಗ್ರಹಿಸಲು ತೊಡಗಿದ್ದ ತಂದೆ ಮತ್ತು ಮಗ ಸ್ಫೋಟದಲ್ಲಿ ಬಲಿ Read More »

ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆ; ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಸಮಗ್ರ ನ್ಯೂಸ್ : ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೋಳಿ ಬಿಕ್ಕೋ ಬಳಿ ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗುತ್ತಿದ್ದು, ಸುತ್ತಲೂ ಹೊಗೆ ಆವರಿಸಿಕೊಂಡಿತ್ತು. ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು. ಕಾಪು‌ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿದ್ದು, ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ.

ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆ; ವಾಹನ ಸಂಚಾರಕ್ಕೆ ಬದಲಿ ಮಾರ್ಗ Read More »

ಮಳೆ, ಪ್ರಕೃತಿ ವಿಕೋಪ ಹಿನ್ನಲೆ; ಇಂದು ಸಿಎಂ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 13 ಜಿಲ್ಲೆಗಳ ಉಸ್ತುವಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಮತ್ತು ಇತರೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಕರೆದಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಾಳೆ ಮಧ್ಯಾಹ್ನ 2:30ಕ್ಕೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ? ಎಷ್ಟು ಹಾನಿಯಾಗಿದೆ? ಈಗಾಗಕೇ ಕೈಗೊಳ್ಳಲಾಗಿರುವ

ಮಳೆ, ಪ್ರಕೃತಿ ವಿಕೋಪ ಹಿನ್ನಲೆ; ಇಂದು ಸಿಎಂ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ Read More »