ರಾಜ್ಯ

ಆಗುಂಬೆ ಘಾಟ್ ನಲ್ಲಿ ಇಂದಿನಿಂದ ವಾಹನ ಸಂಚಾರ ನಿಷೇಧ

ಸಮಗ್ರ ನ್ಯೂಸ್: ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ತಿ ಕಾಮಗಾರಿಯ ಹಿನ್ನಲೆಯಲ್ಲಿ ವಾಹನ ಸಂಚಾರ ನಿಷೇಧಗೊಳಿಸಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 5ರಿಂದ ಮಾರ್ಚ್ 15ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದ್ದು, ಲಘು ಮತ್ತು ಭಾರಿ ವಾಹನಗಳಿಗೆ ಪ್ರತ್ಯೇಕ ಮಾರ್ಗವನ್ನು ಸೂಚಿಸಲಾಗಿದೆ. ಆಗುಂಬೆ ಘಾಟಿಯ ತಪಾಸಣಾ ಕೇಂದ್ರದಿಂದ ಹೆಬ್ರಿವರೆಗೆ 5.25 ಕೋಟಿ ರೂ. ವೆಚ್ಚದಲ್ಲಿ 20 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗುತ್ತಿದೆ. ಸಂಜೆ 7ರಿಂದ […]

ಆಗುಂಬೆ ಘಾಟ್ ನಲ್ಲಿ ಇಂದಿನಿಂದ ವಾಹನ ಸಂಚಾರ ನಿಷೇಧ Read More »

ರಾಜ್ಯ ಬಜೆಟ್; ಯಾವ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ಬಜೆಟ್ ಕಂಪ್ಲೀಟ್ ಹೈಲೈಟ್ಸ್…

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡನೆ ಮಾಡಿದರು. ಬಜೆಟ್​ ಮಂಡನೆ ಪ್ರಾರಂಭಿಸುವ ಮುನ್ನ ಸಿಎಂ ಬೊಮ್ಮಾಯಿ ಸರ್ಕಾರದ ಹಾಗೂ ಸರ್ಕಾರದ ಆಡಳಿತದ ಕುರಿತು ಮಾತನಾಡಿ, ಸ್ಥಿರ, ದಕ್ಷ ಆಡಳಿತದಿಂದ ಸರ್ಕಾರ ಯಶಸ್ವಿಯಾಗಿ ನಡೆಯುತ್ತಿದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಾಯಕತ್ವದಿಂದ ಕೋವಿಡ್​-19 ನಿರ್ವಹಣೆಗೊಂಡಿದ್ದು, ರಾಜ್ಯದಲ್ಲಿ ಮಾಡಿದ ಎಲ್ಲಾ ಪ್ರಯೋಗಗಳು ಯಶಸ್ಸು ಕಂಡಿದೆ ಎಂದಿದ್ದಾರೆ. 2022-23ರಲ್ಲಿ ರಾಜ್ಯದ ಆರ್ಥಿಕತೆಯಲ್ಲಿ ಎಲ್ಲಾ ಸ್ಥರದ ಜನರು ಭಾಗಿ ಹಾಗೂ ದುರ್ಬಲ ವರ್ಗದ ಅಭಿವೃದ್ಧಿಗೆ, ಶಿಕ್ಷಣ, ಉದ್ಯೋಗ,

ರಾಜ್ಯ ಬಜೆಟ್; ಯಾವ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ಬಜೆಟ್ ಕಂಪ್ಲೀಟ್ ಹೈಲೈಟ್ಸ್… Read More »

ಚಾಮರಾಜನಗರ: ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿತ; 10 ಕ್ಕೂ ಹೆಚ್ಚು ಸಾವಿನ ಶಂಕೆ

ಸಮಗ್ರ ನ್ಯೂಸ್: ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯಲ್ಲಿ ಗುರುವಾರ ಬಂಡೆ ಕುಸಿದಿದ್ದು, 10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬೊಮ್ಮಲಾಪುರ ಗ್ರಾಮದ ಮಹೇಂದ್ರಪ್ಪ ಎಂಬುವವರ ಜಾಗದಲ್ಲಿ ಕೇರಳ ಮೂಲದ ಉದ್ಯಮಿ ಹಕೀಮ್​ ಎಂಬಾತ ಗುತ್ತಿಗೆ ಪಡೆದು ಬಿಳಿಕಲ್ಲು ಗಣಿಗಾರಿಕೆ ನಡೆಸುತ್ತಿದ್ದರು ಎಂದು ಹೇಳಲಾಗಿದೆ. ಗಣಿಗಾರಿಕೆ ವೇಳೆ ಬಂಡೆಯೊಂದು ಜೆಸಿಬಿ ಮತ್ತು ಟಿಪ್ಪರ್​ ಮೇಲೆ ಬಿದ್ದಿದ್ದು, 10ಕ್ಕೂ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಕಾರ್ಮಿಕರು ರಾಜಸ್ಥಾನ, ಉತ್ತರ

ಚಾಮರಾಜನಗರ: ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿತ; 10 ಕ್ಕೂ ಹೆಚ್ಚು ಸಾವಿನ ಶಂಕೆ Read More »

ಇಂದು ರಾಜ್ಯ‌ ಬಜೆಟ್ ಅಧಿವೇಶನ| ಆರ್ಥಿಕ ಪುನಶ್ಚೇತನಕ್ಕೆ ಹೊಸ ಸೂತ್ರ ತರುತ್ತಾರಾ ಸಿಎಂ?

ಸಮಗ್ರ ನ್ಯೂಸ್: ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಎದುರಾಗಿರುವ ಆರ್ಥಿಕ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಶುಕ್ರವಾರ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮೇಲೆ ಸಹಜವಾಗಿಯೇ ರಾಜ್ಯದ ಜನತೆಯಲ್ಲಿ ಕುತೂಹಲ ಮೂಡಿಸಿದೆ. ಮಧ್ಯಾಹ್ನ 12.30ಕ್ಕೆ ಸಿಎಂ ಬೊಮ್ಮಾಯಿಯವರು ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯವರೆಗೂ ಅಧಿಕಾರಿಗಳೊಂದಿಗೆ ಕೊನೆಯ ಕ್ಷಣದ ಕಸರತ್ತು ನಡೆಸಿದರು. ಈ ಬಾರಿ ಸಿಎಂ ಬೊಮ್ಮಾಯಿಯವರು ಚಿಕ್ಕದಾದ, ಚೊಕ್ಕವಾದ ಜನಪರ ಬಜೆಟ್​​ ನೀಡಲು ಮುಂದಾಗಿದ್ದಾರೆ. 2023ರ

ಇಂದು ರಾಜ್ಯ‌ ಬಜೆಟ್ ಅಧಿವೇಶನ| ಆರ್ಥಿಕ ಪುನಶ್ಚೇತನಕ್ಕೆ ಹೊಸ ಸೂತ್ರ ತರುತ್ತಾರಾ ಸಿಎಂ? Read More »

ಹರ್ಷ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಪರಿಹಾರ – ಸಚಿವ ಈಶ್ವರಪ್ಪ

ಸಮಗ್ರ ನ್ಯೂಸ್: ಫೆ.20ರಂದು ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರಿಗೆ, ರಾಜ್ಯ ಸರ್ಕಾರ ಇದೀಗ 25 ಲಕ್ಷ ಪರಿಹಾರವನ್ನು ಘೋಷಿಸಿದೆ. ಈ ಕುರಿತಂತೆ ಮಾಹಿತಿ ನೀಡಿದ ಸಚಿವ ಈಶ್ವರಪ್ಪ ಮಾಹಿತಿ ನೀಡಿದ್ದಾರೆ. ಮಾರ್ಚ್ 6ರಂದು ಹರ್ಷ ಮನೆಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ನಾನು ಹೋಗಿ ಪರಿಹಾರ ನೀಡುವುದಾಗಿ ಈಶ್ವರಪ್ಪ ತಿಳಿಸಿದರು. ಅಂದ ಹಾಗೇ ಹರ್ಷ ಹತ್ಯೆಯ ಬಳಿಕ, ಉದ್ವಿಗ್ನ ಸ್ಥಿತಿ ಶಿವಮೊಗ್ಗ ನಗರದಲ್ಲಿ ಉಂಟಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಶಾಲಾ-ಕಾಲೇಜು ಬಂದ್ ಕೂಡ

ಹರ್ಷ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಪರಿಹಾರ – ಸಚಿವ ಈಶ್ವರಪ್ಪ Read More »

ನಾಳೆ(ಮಾ.04) ರಾಜ್ಯ ಬಜೆಟ್| ಸಿಎಂ ಬೊಮ್ಮಾಯಿಯಿಂದ ಚೊಚ್ಚಲ ಬಜೆಟ್ ಮಂಡನೆ|

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿದ್ದು, ಅವರು ತಮ್ಮ ಮೊದಲ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಮಾರ್ಚ್ 4ರಂದು ಮಧ್ಯಾಹ್ನ 12.30ಕ್ಕೆ 2022-23ರ ರಾಜ್ಯ ಬಜೆಟ್ ಅನ್ನು ವಿಧಾನಮಂಡಲದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿದ್ದಾರೆ. ಹಾಲಿನ ಪ್ರೋತ್ಸಾಹಧನ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ಮಹತ್ವದ ಯೋಜನೆಗಳನ್ನು ಬಜೆಟ್ ನಲ್ಲಿ ಘೋಷಿಸುವ ನಿರೀಕ್ಷೆ ಇದೆ.

ನಾಳೆ(ಮಾ.04) ರಾಜ್ಯ ಬಜೆಟ್| ಸಿಎಂ ಬೊಮ್ಮಾಯಿಯಿಂದ ಚೊಚ್ಚಲ ಬಜೆಟ್ ಮಂಡನೆ| Read More »

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಮುಂದಿನ ವರ್ಷದೊಳಗಾಗಿ ದೇಶದಲ್ಲಿ 5ಜಿ ಮೊಬೈಲ್‌ ಸೇವೆ ಆರಂಭಕ್ಕೆ ಅಗತ್ಯವಿರುವ ತರಂಗಾಂತರಗಳ ಹರಾಜನ್ನು ಇದೇ ವರ್ಷ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು. ನವದೆಹಲಿಯಲ್ಲಿ ನಡೆದ ‘ತಂತ್ರಜ್ಞಾನ ಆಧಾರಿತ ಅಭಿವೃದ್ಧಿ’ ಎಂಬ ವಿಷಯ ಕುರಿತ ವೆಬಿನಾರ್‌ನಲ್ಲಿ ಅವರು ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ. 5ಜಿ ತಂತ್ರಜ್ಞಾನದಿಂದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಾಕಷ್ಟು ವೇಗ ಸಿಗಲಿದೆ. ವೈದ್ಯ ವಿಜ್ಞಾನದಲ್ಲಿಯೂ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದ್ದು, ವೈದ್ಯಕೀಯ ಸಾಧನಗಳ ಉತ್ಪಾದನೆಗೂ ಗಮನ ಹರಿಸಬೇಕು’

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ Read More »

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ| ಪರೀಕ್ಷೆ ದಿನಾಂಕ ಮುಂದೂಡಿದ ಪಿಯು ಬೋರ್ಡ್

ಸಮಗ್ರ ನ್ಯೂಸ್. ಕಾಂ : ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಬದಲಾವಣೆಯಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತೊಂದು ಪರೀಕ್ಷಾ ದಿನಾಂಕದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಹಾಗೂ ಜೆಇಇ ಪರೀಕ್ಷೆಯು ಒಟ್ಟಿಗೆ ಬಂದ ಕಾರಣ ಪರೀಕ್ಷೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ. ಏಪ್ರಿಲ್ 22 ರಿಂದ ಮೇ 11ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆಕ್ಷೇಪಣೆ ಸಲ್ಲಿಸಲು ಮಾರ್ಚ್ 5ರ ವರೆಗೆ ಅವಕಾಶ ನೀಡಿರೋದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ| ಪರೀಕ್ಷೆ ದಿನಾಂಕ ಮುಂದೂಡಿದ ಪಿಯು ಬೋರ್ಡ್ Read More »

ಉಡುಪಿ: ಪವರ್ ಮ್ಯಾನ್ ಗಳಿಗೆ ಜೀವವಿಮೆ‌ ಮೌಲ್ಯ ಹೆಚ್ಚಳ – ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ರಾಜ್ಯದ ಪವರ್ ಮನ್ ಗಳ ಜೀವವಿಮೆ ಪರಿಹಾರ ಮೊತ್ತವನ್ನು 25 ಲಕ್ಷ ರೂ.ನಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಪವರ್ ಮ್ಯಾನ್ ಗಳು ವಿದ್ಯುತ್ ಅಪಘಾತದಲ್ಲಿ ಮೃತಪಟ್ಟರೆ 25 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಈ ಜೀವ ಪರಿಹಾರ ಮೊತ್ತವನ್ನು 50 ಲಕ್ಷ ರೂ.ಗೆ ಹೆಚ್ಚಿಸಲಾಗುವುದು. ಗುಜರಾತ್ ಮಾದರಿಯಲ್ಲಿ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳನ್ನು ಒಳಗೊಂಡ ಹೋಲ್ಡಿಂಗ್ ಕಂಪನಿ ನಿರ್ಮಾಣ ಪ್ರಸ್ತಾವನೆ ಇದೆ. ಇಲಾಖೆಯ

ಉಡುಪಿ: ಪವರ್ ಮ್ಯಾನ್ ಗಳಿಗೆ ಜೀವವಿಮೆ‌ ಮೌಲ್ಯ ಹೆಚ್ಚಳ – ಸಚಿವ ಸುನಿಲ್ ಕುಮಾರ್ Read More »

ಅಡುಗೆ ಎಣ್ಣೆಗೂ ಕಾಡಿದ ಯುದ್ಧ ಭೀತಿ| ಸ್ಥಗಿತಗೊಂಡ ಆಮದು; ಏರಿದ ಬೆಲೆ

ಸಮಗ್ರ ನ್ಯೂಸ್: ಉಕ್ರೇನ್‌ನಲ್ಲಿ ರಷ್ಯಾ ದಾಳಿಗೆ ಪ್ರತಿಯಾಗಿ ದಿಂಡುಗಲ್‌ನಲ್ಲಿ ಅಡುಗೆ ಎಣ್ಣೆಯ ಬೆಲೆ ತೀವ್ರವಾಗಿ ಏರಿದೆ. ಹೀಗಾಗಿ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಅಪಾಯವಿದೆ. ಭಾರತಕ್ಕೆ ಸುಮಾರು 70 ಪ್ರತಿಶತ ಅಡುಗೆ ಸೂರ್ಯಕಾಂತಿ ಎಣ್ಣೆ ಉಕ್ರೇನ್‌ನಿಂದ ಮತ್ತು 20 ಪ್ರತಿಶತ ರಷ್ಯಾದಿಂದ ಆಮದಾಗುತ್ತಿದ್ದು, ಇವು ಈಗ ಸ್ಥಗಿತಗೊಂಡಿವೆ. ಇದರಿಂದ ಅಡುಗೆಗೆ ಬಳಸಬಹುದಾದ ರಿಫೈನ್ಡ್ ಎಣ್ಣೆ, ತಾಳೆ ಎಣ್ಣೆ, ಸೀಮೆಎಣ್ಣೆ ಬೆಲೆ ಗಗನಕ್ಕೇರಿದೆ. 15 ಕೆಜಿ ತೂಕದ ಸೂರ್ಯಕಾಂತಿ ಎಣ್ಣೆಯ ಟಿನ್ ಉಕ್ರೇನ್‌ನಲ್ಲಿ ಯುದ್ಧದ ಮೊದಲು 2,150 ಕ್ಕೆ

ಅಡುಗೆ ಎಣ್ಣೆಗೂ ಕಾಡಿದ ಯುದ್ಧ ಭೀತಿ| ಸ್ಥಗಿತಗೊಂಡ ಆಮದು; ಏರಿದ ಬೆಲೆ Read More »