ರಾಜ್ಯ

ತಿರುವು ಪಡೆದುಕೊಂಡ ಪಠ್ಯಪುಸ್ತಕ ಪರಿಷ್ಕರಣೆ ವಿವಾದ| ನನ್ನ ಲೇಖನ ಪ್ರಕಟಿಸಬೇಡಿ – ದೇವನೂರ ಮಹಾದೇವ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಶಾಲಾ ಮಕ್ಕಳ ಪಠ್ಯ ಪುಸ್ತಕದ ಪಾಠಗಳ ಪರಿಷ್ಕರಣಾ ವಿವಾದಕ್ಕೆ ಇನ್ನೊಂದು ತಿರುವು ಸಿಕ್ಕಿದ್ದು, ಸಾಹಿತಿ ದೇವನೂರ ಮಹಾದೇವ ತನ್ನ ಲೇಖನಗಳನ್ನು ಪ್ರಕಟಿಸದಂತೆ ಪ್ರಕಟಣೆ ಹೊರಡಿಸಿದ್ದಾರೆ. ಈ ಹಿಂದೆ ಎಡಪಂಥೀಯ ಒಲವಿನ ಸಾಹಿತಿಗಳು ಒಂದಷ್ಟು ಮಂದಿ ಬಿಜೆಪಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸುವ ಸಲುವಾಗಿ ಪ್ರಶಸ್ತಿಯನ್ನು ಹಿಂದಿರುಗಿಸಿ ಗಮನ ಸೆಳೆದಿದ್ದರು. ಈಗ ಅದೇ ವಲಯದ ಕೆಲವರು ಪಠ್ಯ ಪರಿಷ್ಕರಣೆ ವಿವಾದದ ಹಿನ್ನೆಲೆಯಲ್ಲಿ ಪಾಠ ವಾಪಾಸಾತಿಗೆ ಮುಂದಾಗಿದ್ದಾರೆ. ನಿಟ್ಟಿನಲ್ಲಿ ಸಾಹಿತಿ ದೇವನೂರ ಮಹಾದೇವ ಅವರು ತಮ್ಮ […]

ತಿರುವು ಪಡೆದುಕೊಂಡ ಪಠ್ಯಪುಸ್ತಕ ಪರಿಷ್ಕರಣೆ ವಿವಾದ| ನನ್ನ ಲೇಖನ ಪ್ರಕಟಿಸಬೇಡಿ – ದೇವನೂರ ಮಹಾದೇವ Read More »

ನಾಳೆ(ಮೇ.25) ಭಾರತ ಬಂದ್|

ಸಮಗ್ರ ನ್ಯೂಸ್: ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯದ ನೌಕರರ ಒಕ್ಕೂಟ (ಬಿಎಎಂಸಿಇಎಫ್​) ಮೇ 25ರಂದು ಭಾರತ್ ಬಂದ್​ ನಡೆಸಬೇಕು ಎಂದು ಕರೆ ನೀಡಿದೆ. ಕೇಂದ್ರ ಸರ್ಕಾರದ ಕ್ರಮವೊಂದನ್ನು ವಿರೋಧಿಸಿ ಈ ಸಂಘಟನೆ ಭಾರತ್ ಬಂದ್​ಗೆ ಕರೆ ನೀಡಿದೆ. ಕೇಂದ್ರ ಸರ್ಕಾರ ಇತರ ಹಿಂದುಳಿದ ವರ್ಗಗಳಿಗಾಗಿ ಜಾತಿ ಆಧಾರಿತ ಜನಗಣತಿ ನಡೆಸದೇ ಇರುವುದನ್ನು ವಿರೋಧಿಸಿ ಈ ಸಂಘಟನೆಯವರು ಭಾರತ್ ಬಂದ್​ಗೆ ಕರೆ ನೀಡಿದ್ದಾರೆ. ಇದರೊಂದಿಗೆ ಇನ್ನೂ ಕೆಲವು ಬೇಡಿಕೆಗಳನ್ನು ಸಂಘಟನೆ ಮುಂದಿಟ್ಟಿದೆ. ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ

ನಾಳೆ(ಮೇ.25) ಭಾರತ ಬಂದ್| Read More »

ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್ ನೀಡಬೇಕು| ವ್ಯಕ್ತಿ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿ, ಆ ವ್ಯಕ್ತಿಗೆ ಗೌರವ ನೀಡಬೇಕು: ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿದ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಅವರಿದ್ದ ಪೀಠವು, ಲೈಂಗಿಕ ಕಾರ್ಯಕರ್ತರ ಲಿಂಗದ ಗೌಪ್ಯತೆಯನ್ನು ಉಲ್ಲಂಘಿಸಬಾರದು. ಅವರ ಗುರುತನ್ನು ಬಹಿರಂಗಪಡಿಸಬಾರದು. ಪ್ರತಿಯೊಬ್ಬ ವ್ಯಕ್ತಿಯನ್ನೂ ಗೌರವದಿಂದ ಕಾಣಬೇಕಿರುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದೆ ಎಂದು ಹೇಳಿದೆ. ಯುಐಡಿಎಐ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್

ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್ ನೀಡಬೇಕು| ವ್ಯಕ್ತಿ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿ, ಆ ವ್ಯಕ್ತಿಗೆ ಗೌರವ ನೀಡಬೇಕು: ಸುಪ್ರೀಂ ಕೋರ್ಟ್ Read More »

ಜೂನ್ ಮೂರನೇ ವಾರದಲ್ಲಿ ಪಿಯುಸಿ ರಿಸಲ್ಟ್| ಸಚಿವ ಬಿ.ಸಿ ನಾಗೇಶ್ ಟ್ವೀಟ್

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಜೂನ್ 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲು ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಬಿ.ಸಿ.ನಾಗೇಶ್, ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ. ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ. ಜೂನ್ 15 ಕ್ಕೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ, ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ

ಜೂನ್ ಮೂರನೇ ವಾರದಲ್ಲಿ ಪಿಯುಸಿ ರಿಸಲ್ಟ್| ಸಚಿವ ಬಿ.ಸಿ ನಾಗೇಶ್ ಟ್ವೀಟ್ Read More »

ಮಹಾಮಳೆಗೆ ತತ್ತರಿಸಿದ ಕರ್ನಾಟಕ| ಸಿಡಿಲಿಗೆ ಮೂರು ಬಲಿ| ಐದು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ರಾಜ್ಯದ 22 ಜಿಲ್ಲೆಗಳಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನತೆ ತತ್ತರಿಸಿ ಹೋಗಿದ್ದಾರೆ. ನಿನ್ನೆ ಭಾರೀ ಮಳೆಯಿಂದಾಗಿ ಮೈಸೂರು, ಮಂಡ್ಯ, ಶಿವಮೊಗ್ಗ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಶುಕ್ರವಾರದ ಇಂದು ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಮಳೆಯ ಆರ್ಭಟದ ನಡುವೆ ಸಿಡಿಲ ಆರ್ಭಟಕ್ಕೆ ಮೂವರು ಸಾವನ್ನಪ್ಪಿದ್ದಾರೆ.

ಮಹಾಮಳೆಗೆ ತತ್ತರಿಸಿದ ಕರ್ನಾಟಕ| ಸಿಡಿಲಿಗೆ ಮೂರು ಬಲಿ| ಐದು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ Read More »

ಎಸ್ಎಸ್ಎಲ್ಸಿ ಫಲಿತಾಂಶ; ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೀಗೆ.

ಸಮಗ್ರ ನ್ಯೂಸ್: 2021-22 ನೇ ಸಾಲಿನ ಎಸ್‌ಎಸ್‌ಎಲ್ ಸಿ(SSLC) ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರುಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 20-05-2022 ಆಗಿದ್ದು, ಮೌಲ್ಯಮಾಪನ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-05-2022 ಆಗಿದೆ.

ಎಸ್ಎಸ್ಎಲ್ಸಿ ಫಲಿತಾಂಶ; ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೀಗೆ. Read More »

ಭಾರೀ ಮಳೆ ಹಿನ್ನಲೆ: ಉಡುಪಿಯಲ್ಲಿ ನಾಳೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮೇ.20ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಎಂ. ಕೂರ್ಮರಾವ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದೆರಡು ದಿನದಿಂದ ಧಾರಾಕಾರ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದ ಅಲ್ಲಲ್ಲಿ ಅವಘಡಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿರುವುದಾಗಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಭಾರೀ ಮಳೆ ಹಿನ್ನಲೆ: ಉಡುಪಿಯಲ್ಲಿ ನಾಳೆ ಶಾಲಾ-ಕಾಲೇಜಿಗೆ ರಜೆ ಘೋಷಣೆ Read More »

ಗಂಡುಮಗುವಿಗೆ ಜನ್ಮನೀಡಿದ ನಟಿ ಸಂಜನಾ ಗಲ್ರಾನಿ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ತಾಯಿಯಾಗಿದ್ದಾರೆ. ಇಂದು (ಮೇ 19) ಸಂಜನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ವಿಶೇಷ ಎಂದರೆ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ ಮದುವೆ ಇಂದೇ ನೆರವೇರಿದೆ. ಮೇ ತಿಂಗಳಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಸಂಜನಾ ಈ ಮೊದಲೇ ಹೇಳಿದ್ದರು. ಅವರು 7ನೇ ತಿಂಗಳಿಗೆ ಕಾಲಿಟ್ಟಾಗ ಸೋಶಿಯಲ್ ಮೀಡಿಯಾದಲ್ಲಿ ಮಗು ಯಾವಾಗ ಜನಿಸಬಹುದು ಎಂದು ಅಭಿಮಾನಿಯೊಬ್ಬರು ಕಮೆಂಟ್​ ಮೂಲಕ ಪ್ರಶ್ನಿಸಿದ್ದರು. ‘ಪ್ರಾಯಶಃ ಮೇ ತಿಂಗಳ ಅಂತ್ಯದಲ್ಲಿ’ ಎಂದು ಸಂಜನಾ

ಗಂಡುಮಗುವಿಗೆ ಜನ್ಮನೀಡಿದ ನಟಿ ಸಂಜನಾ ಗಲ್ರಾನಿ Read More »

ಎಸ್ಎಸ್ಎಲ್ಸಿ ರಿಸಲ್ಟ್; ವಾಚ್ ಮನ್ ಮಗಳು ರಾಜ್ಯಕ್ಕೆ ಪ್ರಥಮ

ಸಮಗ್ರ ನ್ಯೂಸ್: ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಕಾವಲುಗಾರನಾಗಿ ಕೆಲಸ ಮಾಡುವ ಬಸವರಾಜ ಶೇತಸನದಿ ಅವರ ಮಗಳು ಮಧು ಶೇತಸನದಿ, ಕನ್ನಡ ಮಾಧ್ಯಮದಲ್ಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದಿದ್ದಾಳೆ. ‘ನನ್ನ ಮಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂಬುದನ್ನು ಕೇಳಿ ತುಂಬಾ ಸಂತೋಷವಾಗಿದೆ.ಹಗಲು-ರಾತ್ರಿ ಕಷ್ಟಪಟ್ಟು ಓದಿ ನಮಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಮಗಳು ಡಾಕ್ಟರ್‌ ಆಗಬೇಕು ಎಂದು ಕನಸು ಕಾಣುತ್ತಿದ್ದಾಳೆ. ಆದರೆ ನನ್ನ ಆದಾಯದಲ್ಲಿ ಅವಳನ್ನು ಓದಿಸುವಷ್ಟು ಆರ್ಥಿಕ

ಎಸ್ಎಸ್ಎಲ್ಸಿ ರಿಸಲ್ಟ್; ವಾಚ್ ಮನ್ ಮಗಳು ರಾಜ್ಯಕ್ಕೆ ಪ್ರಥಮ Read More »

ಎಸ್ ಎಸ್ ಎಲ್‌ಸಿ ಫಲಿತಾಂಶ ಪ್ರಕಟ ಶೇ.85.63 ಮಂದಿ ಪಾಸ್

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಎಸ್ಎಸ್ಎಲ್ ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಗೊಂಡಿದೆ. ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ‌ಮಂತ್ರಿ‌ ಬಿ.ಸಿ ನಾಗೇಶ್ ಇಂದು ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ ಶೇ.85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 90% ಬಾಲಕಿಯರು, ಹಾಗೂ 81.63% ಬಾಲಕರು ಪಾಸಾಗಿದ್ದಾರೆ. ಸರ್ಕಾರಿ ಶಾಲೆಗಳ 21 ಮಕ್ಕಳು, ಅನುದಾನಿತ ಶಾಲೆಗಳ 8 ಮಕ್ಕಳು, ಅನುದಾನ ರಹಿತ ಶಾಲೆಗಳ 116 ಮಕ್ಕಳು 625ಕ್ಕೆ 625 ಅಂಕ ಗಳಿಸಿದ್ದಾರೆ. ಸರಕಾರಿ ಶಾಲೆಗಳು 88%,

ಎಸ್ ಎಸ್ ಎಲ್‌ಸಿ ಫಲಿತಾಂಶ ಪ್ರಕಟ ಶೇ.85.63 ಮಂದಿ ಪಾಸ್ Read More »