ರಾಜ್ಯ

ಬೆಂಗಳೂರು: ಹೃದಯಾಘಾತದಿಂದ ಆರ್.ಜೆ ರಚನಾ ಸಾವು| ಲೀನವಾದ ಮದುರ ಧ್ವನಿ

ಸಮಗ್ರ ನ್ಯೂಸ್: ಎಫ್.ಎಂ. ಕೇಳುಗರ ಪ್ರೀತಿಯ ಆರ್.ಜೆ., ನಟಿ ರಚನಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರೇಡಿಯೋ ಜಾಕಿಯಾಗಿ ರಚನಾ ರೇಡಿಯೋ ಮಿರ್ಚಿಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಮುದ್ದಾದ ಮಾತಿನ ಮೂಲಕ ಅನೇಕ ಕೇಳುಗರನ್ನು ಸೆರೆಹಿಡಿದಿದ್ದರು. ಹೀಗೆ ಕೆಲಸ ಮಾಡಿ ಕೆಲಸ ಬಿಟ್ಟು ಮನೆಯಲ್ಲಿದ್ದಂತ ಅವರು ಡಿಪ್ರೆಷನ್ ಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಮಾನಸಿಕ ಒತ್ತಡಕ್ಕೆ ಒಳಗಾದ ಕಾರಣ, ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಜೆ.ಪಿ.ನಗರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಖ್ಯಾತ ರೆಡಿಯೋ ಜಾಕಿ […]

ಬೆಂಗಳೂರು: ಹೃದಯಾಘಾತದಿಂದ ಆರ್.ಜೆ ರಚನಾ ಸಾವು| ಲೀನವಾದ ಮದುರ ಧ್ವನಿ Read More »

ಎಂಸ್ಸಿ, ಪಿಯುಸಿ ಆದವರಿಗೆ ಸರ್ಕಾರಿ ಉದ್ಯೋಗ – ತಿಂಗಳಿಗೆ 1 ಲಕ್ಷದವರೆಗೆ ಸಂಬಳ

ಉದ್ಯೋಗ : ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ( Karnataka State Sericulture Research & Development Institute) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಸೀನಿಯರ್ ರಿಸರ್ಚ್​ ಅಸಿಸ್ಟೆಂಟ್ಸ್​, ಸೈಂಟಿಸ್ಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ

ಎಂಸ್ಸಿ, ಪಿಯುಸಿ ಆದವರಿಗೆ ಸರ್ಕಾರಿ ಉದ್ಯೋಗ – ತಿಂಗಳಿಗೆ 1 ಲಕ್ಷದವರೆಗೆ ಸಂಬಳ Read More »

ಕರ್ನಾಟಕ ನೀರಾವರಿ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ : ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ಮ್ಯಾನೇಜರ್ ಡಿಜಿಎಂ, ಡಿಇಒ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಯ ಮಾಹಿತಿ:ಡೆಪ್ಯುಟಿ ಜನರಲ್ ಮ್ಯಾನೇಜರ್(ಫೈನಾನ್ಸ್​)ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಫೈನಾನ್ಸ್)ಮ್ಯಾನೇಜರ್ (ಫೈನಾನ್ಸ್​​)ಅಸಿಸ್ಟೆಂಟ್ ಮ್ಯಾನೇಜರ್ (ಹಣಕಾಸು)ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್

ಕರ್ನಾಟಕ ನೀರಾವರಿ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕೊಲೆಯಾಗಿರುವ ಹರ್ಷನನ್ನು ಟೆರರಿಸ್ಟ್ ಎಂದು ಬರೆದುಕೊಂಡ ವಿದೇಶಿ ಪತ್ರಕರ್ತ – ಇದಕ್ಕೆ ಡಿಜಿಪಿ ಸ್ಪಷ್ಟನೆ ಡಿಜಿಪಿ

ಬೆಂಗಳೂರು: ಶಿವೆಮೊಗ್ಗದಲ್ಲಿ ಕೊಲೆಯಾಗಿರುವ ಹಿಂದೂ ಕಾರ್ಯಕರ್ತನನ್ನು ವಿದೇಶಿ ಪತ್ರಕರ್ತನೊಬ್ಬ ಟೆರರಿಸ್ಟ್ aಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟಣೆ ನೀಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಸಿಜೆ ವಾರ್ಲೆನ್ ಎಂಬಾತ ತನ್ನ ಟ್ವಿಟ್ಟರ್ ಖಾತೆಯಲ್ಲಿ, ನವೆಂಬರ್ ತಿಂಗಳಲ್ಲಿ ತ್ರಿಪುರಾದಲ್ಲಿ ಭಯೋತ್ಪಾದಕ ದಾಳಿಯನ್ನು ನಡೆಸಿರುವ ಹಿಂದೂ ಉಗ್ರಗಾಮಿ ಸಂಘಟನೆಯಾಗಿರುವ ಭಜರಂಗದಳಕ್ಕೆ ಸೇರಿದ ಭಯೋತ್ಪಾದಕನನ್ನು ಭಾನುವಾರ ರಾತ್ರಿ ಕೊಲ್ಲಲಾಗಿದೆ ಎಂದು ಬರೆದುಕೊಂಡಿದ್ದನು. ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರವೀಣ್ ಸೂದ್, ಇದು ಸಂಪೂರ್ಣವಾಗಿ ಸುಳ್ಳು ಸುದ್ದಿಯಾಗಿದೆ.

ಕೊಲೆಯಾಗಿರುವ ಹರ್ಷನನ್ನು ಟೆರರಿಸ್ಟ್ ಎಂದು ಬರೆದುಕೊಂಡ ವಿದೇಶಿ ಪತ್ರಕರ್ತ – ಇದಕ್ಕೆ ಡಿಜಿಪಿ ಸ್ಪಷ್ಟನೆ ಡಿಜಿಪಿ Read More »

ಹೊತ್ತಿ ಉರಿಯುತ್ತಿರುವ ಶಿವಮೊಗ್ಗ| ವಾಹನಗಳಿಗೆ ಬೆಂಕಿ ಕೊಟ್ಟು ಆಕ್ರೋಶ

ಸಮಗ್ರ ನ್ಯೂಸ್ ಡೆಸ್ಕ್: ಶಿವಮೊಗ್ಗದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು, ಧಗಧಗ ಹೊತ್ತಿ ಉರಿಯುತ್ತಿದೆ. ಇಂದು ಮತ್ತೆ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಲಾಗುತ್ತಿದ್ದು, ಶಿವಮೊಗ್ಗದ ಸೀಗೆ ಹಟ್ಟಿ ಬಳಿ ಬೈಕ್​ಗಳಿಗೆ ಬೆಂಕಿ ಹಚ್ಚಲಾಗಿದೆ. ರಸ್ತೆ ಬದಿ ನಿಂತಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗುತ್ತಿದ್ದು, ಕಲ್ಲು ತೂರಾಟದಿಂದ ಅಂಗಡಿ, KSRTC ಬಸ್​, ಹಲವು ಮನೆಗಳಿಗೆ ಹಾನಿ ಉಂಟಾಗಿದೆ. ಸಿಕ್ಕ ಸಿಕ್ಕ ಕಡೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಕಲ್ಲು ತೂರಿದ್ದು, ಹರ್ಷ ಕೊಲೆ ಖಂಡಿಸಿ ಮೆರವಣಿಗೆ ವೇಳೆ ಆಕ್ರೋಶ

ಹೊತ್ತಿ ಉರಿಯುತ್ತಿರುವ ಶಿವಮೊಗ್ಗ| ವಾಹನಗಳಿಗೆ ಬೆಂಕಿ ಕೊಟ್ಟು ಆಕ್ರೋಶ Read More »

ಸುಳ್ಯ: ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸಲು ನಿಷೇಧ| ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿನಿಯರು

ಸಮಗ್ರ ನ್ಯೂಸ್ : ರಾಜ್ಯದಾದ್ಯಂತ ಹಿಜಾಬ್ ಗಲಾಟೆ ಮತ್ತೆ ಮುಂದುವರಿದಿದ್ದು, ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲೂ ಪ್ರಕ್ಷುಬ್ದ ವಾತಾವರಣ ಸೃಷ್ಟಿಸಿದೆ. ಕಾಲೇಜಿನ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬಂದಿದ್ದರು. ಹೈಕೋರ್ಟ್ ಆದೇಶ ಇರುವುದರಿಂದ ಹಿಜಾಬ್ ಹಾಕಿ ತರಗತಿಯ ಒಳಗಡೆ ಬರುವ ಹಾಗಿಲ್ಲ. ಕ್ಲಾಸ್ ಗೆ ಬರುವ ಹಾಗಿದ್ದರೆ ಹಿಜಾಬ್ ತೆಗೆದು ಬರಬೇಕೆಂದು ಕಾಲೇಜಿನ ಆಡಳಿತ ಮಂಡಳಿಯವರು ಸೂಚಿಸಿದರು. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ಹೊರನಡೆದಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯ: ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸಲು ನಿಷೇಧ| ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿನಿಯರು Read More »

ನಾಳೆಯಿಂದ ಪಿಯುಸಿ ಪ್ರಾಯೋಗಿಕ ಪರೀಕ್ಷೆ

ಸಮಗ್ರ ನ್ಯೂಸ್ ಡೆಸ್ಕ್ : ನಾಳೆಯಿಂದ ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಹಿಜಾಬ್ ವಿವಾದದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎನ್ನಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ವೇಳಾಪಟ್ಟಿಯಂತಯೇ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದಿಂದ

ನಾಳೆಯಿಂದ ಪಿಯುಸಿ ಪ್ರಾಯೋಗಿಕ ಪರೀಕ್ಷೆ Read More »

ಸಿಂಧೂರ, ಕುಂಕುಮ, ಬಳೆ ಧಾರ್ಮಿಕ ಸಂಕೇತವಲ್ಲ, ಅವನ್ನು ತೆಗೆಸಲು ಪ್ರಯತ್ನಿಸಿದರೆ ಕಠಿಣ ಕ್ರಮ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್ ಡೆಸ್ಕ್: ಸಿಂಧೂರ, ಕುಂಕುಮ, ಬಳೆ ಬಗ್ಗೆ ಪ್ರಶ್ನೆ ಬೇಡ, ಅದು ನಮ್ಮ ಸಂಸ್ಕೃತಿಯ ಪ್ರತೀಕ, ಅದಕ್ಕೂ ಹಿಜಾಬ್‍ಗೂ ಸಂಬಂಧವಿಲ್ಲ, ಅದನ್ನು ಧರಿಸಿ ಶಾಲೆ-ಕಾಲೇಜುಗಳಿಗೆ ಬಂದವರನ್ನು ತಡೆದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಳೆ, ಬಿಂದಿ,ಸಿಂಧೂರ, ಕುಂಕುಮಗಳು ಅಲಂಕಾರಿಕ ವಸ್ತುಗಳು, ಅವುಗಳಿಗೆ ನಿರ್ಬಂಧ ಹಾಕಲು ಸಾಧ್ಯವಿಲ್ಲ. ಹಿಜಾಬ್ ಧಾರ್ಮಿಕ ಗುರುತನ್ನು ಸಂಕೇತಿಸುವ ಬಟ್ಟೆ ಹಿಜಾಬ್‍ಗೆ ಪ್ರತಿಯಾಗಿ ಬಳೆ, ಸಿಂಧೂರ, ಕುಂಕುಮವನ್ನು ಹೋಲಿಸುವುದು

ಸಿಂಧೂರ, ಕುಂಕುಮ, ಬಳೆ ಧಾರ್ಮಿಕ ಸಂಕೇತವಲ್ಲ, ಅವನ್ನು ತೆಗೆಸಲು ಪ್ರಯತ್ನಿಸಿದರೆ ಕಠಿಣ ಕ್ರಮ – ಸಚಿವ ಬಿ.ಸಿ ನಾಗೇಶ್ Read More »

ಹಿರಿಯ ನಟ ರಾಜೇಶ್ ಇನ್ನಿಲ್ಲ

ಸಮಗ್ರ ನ್ಯೂಸ್ ಡೆಸ್ಕ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಯಾಂಡಲ್​ವುಡ್ ಹಿರಿಯ ನಟ ರಾಜೇಶ್ (87) ಶನಿವಾರ ಕೊನೆಯುಸಿರೆಳೆದಿದ್ದಾರೆ. ಶನಿವಾರ ಮುಂಜಾನೆ 2.30ರ ಸುಮಾರಿಗೆ ಇಹಲೋಕವನ್ನು ತ್ಯಜಿಸಿದ್ದಾರೆ ಎಂದು ರಾಜೇಶ್ ಅವರ ಅಳಿಯ ಮತ್ತು ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ. ಮಧ್ಯಾಹ್ನ 3:30ರ ನಂತರ

ಹಿರಿಯ ನಟ ರಾಜೇಶ್ ಇನ್ನಿಲ್ಲ Read More »

ವಿಜಯಪುರ: ಕುಂಕುಮ ಇಟ್ಟು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಕಾಲೇಜು

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ಮುಂದುವರೆದಿದ್ದು, ಇದೀಗ ಹಣೆಗೆ ಕುಂಕುಮ ಇಟ್ಟು ಬಂದ ವಿದ್ಯಾರ್ಥಿಗೆ ಕಾಲೇಜು ಪ್ರವೇಶಕ್ಕೆ ನಿರಾಕರಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಇಂಡಿ ಪಟ್ಟಣದ ಸರ್ಕಾರಿ ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬ ಹಣೆಗೆ ಕುಂಕುಮ ಇಟ್ಟುಕೊಂಡು ಬಂದಿದ್ದ. ಈ ವೇಳೆ ದೈಹಿಕ ಶಿಕ್ಷಕರು ವಿದ್ಯಾರ್ಥಿಯನ್ನು ತಡೆದು ಕುಂಕುಮ ತೆಗೆದು ಕಾಲೇಜಿಗೆ ಬರುವಂತೆ ಹೇಳಿದ್ದಾರೆ. ಹೀಗಾಗಿ ವಿದ್ಯಾರ್ಥಿ ಹಾಗೂ ಶಿಕ್ಷಕರ ನಡುವೆ ವಾಗ್ವಾದ ನಡೆದಿದೆ. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ

ವಿಜಯಪುರ: ಕುಂಕುಮ ಇಟ್ಟು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಕಾಲೇಜು Read More »