ರಾಜ್ಯ

ಸೆಂಚುರಿ ಬಾರಿಸಿದ ಟೊಮೊಟೊ| ಈ ಕೆಂಪು ಸುಂದರಿಯನ್ನು ಮುಟ್ಟೋರಿಲ್ಲ!

ಸಮಗ್ರ ನ್ಯೂಸ್: ತೈಲದರ ಸೇರಿದಂತೆ ಹಲವು ಉತ್ಪನ್ನಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ‌ ಎದುರಾಗಿದೆ. ದಿನಬಳಕೆಯ ಅಗತ್ಯ ತರಕಾರಿಯಾದ ಟೊಮೊಟೊ ಬೆಲೆ ರಾಜ್ಯ ರಾಜಧಾನಿಯಲ್ಲಿ 100 ರೂಪಾಯಿ ಗಡಿ ಮುಟ್ಟಿದ್ದು, ಇನ್ನುಳಿದ ನಗರಗಳಲ್ಲೂ ಸಹ 100 ರೂ. ಆಸುಪಾಸಿನಲ್ಲಿದೆ. ಚಂಡಮಾರುತದ ಕಾರಣಕ್ಕೆ ಭಾರಿ ಮಳೆಯಾಗಿರುವ ಕಾರಣ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ರೈತರು ಬೆಳೆದ ಟೊಮೊಟೊ ಬೆಳೆ ಹಾಳಾಗಿದೆ. ಇದೀಗ ಮಾರುಕಟ್ಟೆಗೆ ಟೊಮೆಟೊ ಅತಿ ಕಡಿಮೆ ಪ್ರಮಾಣದಲ್ಲಿ ಬರುತ್ತಿದ್ದು, ಇದರ ಬೆಲೆ ಮುಗಿಲು […]

ಸೆಂಚುರಿ ಬಾರಿಸಿದ ಟೊಮೊಟೊ| ಈ ಕೆಂಪು ಸುಂದರಿಯನ್ನು ಮುಟ್ಟೋರಿಲ್ಲ! Read More »

ದತ್ತಪೀಠದ ಬಳಿ ಬಿರಿಯಾನಿ ಬಾಡೂಟ| ಹಿಂದೂ ಸಂಘಟನೆಗಳ‌ ಆಕ್ರೋಶ

ಸಮಗ್ರ ನ್ಯೂಸ್: ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಪೀಠದ ಸ್ಥಳ ಮತ್ತೆ ಚರ್ಚೆಗೆ ಕಾರಣವಾಗಿದೆ. ದತ್ತಪೀಠದ ಹೋಮ-ಹವನ ನಡೆಯುವ ಜಾಗದಲ್ಲಿ ಮಾಂಸಹಾರ ಮಾಡಿರೋದು ಸದ್ಯ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ವಿವಾದಿತ ಜಾಗದಲ್ಲಿ ಕೋರ್ಟ್ ಆದೇಶ ಉಲ್ಲಂಘನೆ ಮಾಡಿರುವ ಸಮುದಾಯದ ಕೆಲವರು ಹೋಮ-ಹವನ ನಡೆಯುವ ಸ್ಥಳದಲ್ಲಿ ತಾತ್ಕಾಲಿಕ ಶೆಡ್ ಹಾಕಿ ಮಾಂಸಹಾರ ತಯಾರಿಸಿದ್ದಾರೆ. ಅಲ್ಲದೇ ದತ್ತಪೀಠದ ಗೋರಿಗಳಿಗೆ ಪೂಜೆ ಮಾಡಿದ್ದಾರೆ ಎಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಹೋಮ-ಹವನ ನಡೆಯುವ ಸ್ಥಳದಲ್ಲಿ ಬಿರಿಯಾನಿ ತಯಾರು

ದತ್ತಪೀಠದ ಬಳಿ ಬಿರಿಯಾನಿ ಬಾಡೂಟ| ಹಿಂದೂ ಸಂಘಟನೆಗಳ‌ ಆಕ್ರೋಶ Read More »

ಮಡಿಕೇರಿ: ಶಾಲಾ ಆವರಣದಲ್ಲಿ ತ್ರಿಶೂಲ ದೀಕ್ಷೆ, ಬಂದೂಕು ತರಬೇತಿ

ಸಮಗ್ರ ನ್ಯೂಸ್: ಪೊನ್ನಂಪೇಟೆಯ ಖಾಸಗಿ ಶಾಲೆಯೊಂದರಲ್ಲಿ ಇತ್ತೀಚೆಗೆ ಸಂಘ ಪರಿವಾರ, ಭಜರಂಗದಳದಿಂದ ಏರ್ಪಡಿಸಲಾಗಿದ್ದ ಶೌರ್ಯ ಶಿಬಿರ ಕಾರ್ಯಕ್ರಮ ತೀವ್ರ ವಿವಾದಕ್ಕೀಡಾಗಿದ್ದು, ಶಿಬಿರದಲ್ಲಿ ಕಾರ್ಯಕರ್ತರಿಗೆ ಬಂದೂಕು ತರಬೇತಿ, ತ್ರಿಶೂಲ ದೀಕ್ಷೆ ನೀಡಲಾಗಿದೆ. ಶ್ರೀಸಾಯಿ ಶಂಕರ ವಿದ್ಯಾ ಮಂದಿರದಲ್ಲಿ ಶೌರ್ಯ ಪ್ರಶಿಕ್ಷಣವರ್ಗ ಶಿಬಿರ ಎಂಬ ತರಬೇತಿ ಕಾರ್ಯಕ್ರಮ ನಡೆಸಲಾಗಿದ್ದು, ಈ ವೇಳೆ 50ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಶಾಲೆಯಲ್ಲಿ ತ್ರಿಶೂಲ ದೀಕ್ಷೆ, ಏರ್ ರೈಫಲ್ ಮೂಲಕ ಬಂದೂಕು ತರಬೇತಿ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತ ಫೋಟೋಗಳು ವೈರಲ್ ಆಗಿದ್ದು, ಇಂತಹ

ಮಡಿಕೇರಿ: ಶಾಲಾ ಆವರಣದಲ್ಲಿ ತ್ರಿಶೂಲ ದೀಕ್ಷೆ, ಬಂದೂಕು ತರಬೇತಿ Read More »

ನಾಳೆ(ಮೇ.17) ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಾಳೆ(ಮೇ.18) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪ್ರೋತ್ಸಾಹಧನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಯಲಿದೆ. ಕಳೆದ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಿಲ್ಲ. ಸರ್ಕಾರ ಕೆಲಸಕ್ಕೆ ತಕ್ಕ ಸಂಬಳ ಕೊಡದೇ ಅನ್ಯಾಯ ಮಾಡಿದೆ. ಹೀಗಾಗಿ ರಾಜ್ಯ ಸರ್ಕಾರ ಪ್ರೋತ್ಸಾಹಧನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಬೃಹತ್

ನಾಳೆ(ಮೇ.17) ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಪ್ರತಿಭಟನೆ Read More »

ನ್ಯಾಯಕೊಡಿ; ಇಲ್ಲದಿದ್ದರೆ ಉಗ್ರರ ಜೊತೆ ಸೇರಿಕೊಳ್ತೇವೆ| ರಕ್ತದಲ್ಲಿ ಪತ್ರ ಬರೆದು ಪ್ರಧಾನಿಗೆ ಕಳುಹಿಸಿದ ಪಿಎಸ್ಐ ಅಭ್ಯರ್ಥಿಗಳು

ಸಮಗ್ರ ನ್ಯೂಸ್: ಪಿಎಸ್‌ಐ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾದ ಹಲವರನ್ನು ಬಂಧಿಸಿದ್ದಾರೆ. ಆದರೆ ಈ ಮಧ್ಯೆ ಕಷ್ಟಪಟ್ಟು ಓದಿ ಬರೆದ ವಿದ್ಯಾರ್ಥಿಗಳು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಯಾರೋ ಮಾಡಿದ ಕೆಲಸಕ್ಕೆ ಇಷ್ಟು ವರ್ಷದ ಶ್ರಮ, ನಮ್ಮ ಮುಂದಿನ ಭವಿಷ್ಯ ಹಾಳಾಗಿದೆ ಎಂದು ಗೋಳಾಡುತ್ತಿದ್ದು, ಇದೀಗ ಒಂದೆಜ್ಜೆ ಮುಂದೆ ಹೋಗಿ ನೊಂದ ಅಭ್ಯರ್ಥಿಗಳು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದಿದ್ದು, ಪ್ರಧಾನಿ ಮೋದಿಯವರ ಬಗ್ಗೆ ನಮಗೆ ಅಪಾರ ಗೌರವವಿದೆ, ನ್ಯಾಯ ಕೊಡಿಸುತ್ತಾರೆ ಎಂದು

ನ್ಯಾಯಕೊಡಿ; ಇಲ್ಲದಿದ್ದರೆ ಉಗ್ರರ ಜೊತೆ ಸೇರಿಕೊಳ್ತೇವೆ| ರಕ್ತದಲ್ಲಿ ಪತ್ರ ಬರೆದು ಪ್ರಧಾನಿಗೆ ಕಳುಹಿಸಿದ ಪಿಎಸ್ಐ ಅಭ್ಯರ್ಥಿಗಳು Read More »

ಮೂರು ವರ್ಷದ ಮಕ್ಕಳಿಗೆ ಕೆಎಸ್ಆರ್ ಟಿಸಿಯಲ್ಲಿ ಹಾಫ್ ಟಿಕೆಟ್| ಸ್ಪಷ್ಟನೆ ನೀಡಿದ ಸಾರಿಗೆ ಸಂಸ್ಥೆ

ಸಮಗ್ರ ನ್ಯೂಸ್ : ಕೆಎಸ್​ಆರ್​​ಟಿಸಿ ಬಸ್​​ನಲ್ಲಿ ಮಕ್ಕಳ ಪ್ರಯಾಣ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಕೆಲ ವದಂತಿಗಳು ಹರಿದಾಡುತ್ತಿದ್ದ ಹಿನ್ನೆಲೆ ಈ ಸಂಬಂಧ ಪ್ರಕಟಣೆ ಹೊರಡಿಸಿದೆ.‌ ಮಕ್ಕಳಿಗೆ ಪ್ರಯಾಣ ದರ ವಿಧಿಸುವಾಗ 6 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣ. 6-12 ವರುಷದೊಳಗಿನ‌ ಮಕ್ಕಳಿಗೆ ಆಫ್ ಟಿಕೆಟ್, 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಪುಲ್ ಟಿಕೆಟ್ ದರವನ್ನು ವಿಧಿಸಲಾಗುತ್ತಿದೆ. ಕೆಲ ಸಂದರ್ಭಗಳಲ್ಲಿ ಮಕ್ಕಳು 4-5 ವರುಷ ಆಗಿದ್ದಾಗ, 6 ವರುಷವಾಗಿರುವ ಮಕ್ಕಳಂತೆ, ಅದೇ ರೀತಿ

ಮೂರು ವರ್ಷದ ಮಕ್ಕಳಿಗೆ ಕೆಎಸ್ಆರ್ ಟಿಸಿಯಲ್ಲಿ ಹಾಫ್ ಟಿಕೆಟ್| ಸ್ಪಷ್ಟನೆ ನೀಡಿದ ಸಾರಿಗೆ ಸಂಸ್ಥೆ Read More »

ಮೇ.16ರಿಂದ ಶಾಲಾರಂಭ| ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ| ಶಾಲೆಗೆ ಹೊರಡಲಿದ್ದಾರೆ ಚಿಣ್ಣರು

ಸಮಗ್ರ ನ್ಯೂಸ್: ಕೋವಿಡ್‌ನಿಂದಾಗಿ ಕಳೆದ ಎರಡೂವರೆ ವರ್ಷಗಳಲ್ಲಿ ಶಾಲೆಗಳಲ್ಲಿ ಸರಿಯಾಗಿ ಭೌತಿಕ ತರಗತಿಗಳು ನಡೆದಿಲ್ಲ. ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಬಹಳ ಹಿಂದೆ ಉಳಿದಿದ್ದಾರೆ. ಇದರಿಂದಾಗಿ 2022-23 ನೇ ಶೈಕ್ಷಣಿಕ ವರ್ಷವನ್ನು ಮೇ 16ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ನಾಳೆ(ಮೇ 16) ಸೋಮವಾರ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭವಾಗಲಿದ್ದು ಮಕ್ಕಳನ್ನು ಬಹಳ ಸಂತೋಷದಿಂದ ಬರಮಾಡಿಕೊಳ್ಳಲು ಸರ್ಕಾರಿ ಶಾಲೆಗಳಲ್ಲಿ ಸಿಹಿ ಖಾದ್ಯವನ್ನು ನೀಡಲು ಶಿಕ್ಷಣ ಇಲಾಖೆ ಸೂಚಿಸಿದೆ. ಮಕ್ಕಳು ಶಾಲೆಗೆ ಬರುವುದು ಸಂಭ್ರಮದ ಕ್ಷಣ. ಮೊದಲ ಸಲವಂತು ಶಾಲೆಗೆ

ಮೇ.16ರಿಂದ ಶಾಲಾರಂಭ| ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ| ಶಾಲೆಗೆ ಹೊರಡಲಿದ್ದಾರೆ ಚಿಣ್ಣರು Read More »

ವಕೀಲೆ ಮೇಲೆ ನಡುರಸ್ತೆಯಲ್ಲೇ ಹಲ್ಲೆ| ಪೊಲೀಸರಿಗೆ ಮನೆ ತೋರಿಸಿದ್ದಕ್ಕೆ ಹಿಗ್ಗಾಮುಗ್ಗ ಥಳಿತ

ಸಮಗ್ರ ನ್ಯೂಸ್: ಪೊಲೀಸರಿಗೆ ಮನೆ ತೋರಿಸಿದರು ಎಂಬ ಕಾರಣಕ್ಕೆ ಪಕ್ಕದ ಮನೆಯವರ ಜೊತೆ ವಕೀಲೆ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆಸಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಬಾಗಲಕೋಟೆಯ ವಿನಾಯಕ ನಗರದಲ್ಲಿ ಸಂಭವಿಸಿದೆ. ಜಗಳದಲ್ಲಿ ವಕೀಲೆ, ಕುಟುಂಬಸ್ಥರು ಹಾಗೂ ಇನ್ನೋರ್ವ ವ್ಯಕ್ತಿ ಮಧ್ಯೆ ಮಾರಾಮಾರಿ ನಡೆದಿದೆ. ಈ ವೇಳೆ ವಕೀಲೆ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಾಂತೇಶ ಚೊಳಚಗುಡ್ಡ ಎಂಬ ವ್ಯಕ್ತಿ ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಪತಿ ಹಾಗೂ

ವಕೀಲೆ ಮೇಲೆ ನಡುರಸ್ತೆಯಲ್ಲೇ ಹಲ್ಲೆ| ಪೊಲೀಸರಿಗೆ ಮನೆ ತೋರಿಸಿದ್ದಕ್ಕೆ ಹಿಗ್ಗಾಮುಗ್ಗ ಥಳಿತ Read More »

ರಾಜ್ಯಸರ್ಕಾರದಿಂದ ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಜಾರಿ| ಸುಗ್ರೀವಾಜ್ಞೆ ತಿರಸ್ಕರಿಸಲು ಸಿದ್ದರಾಮಯ್ಯ ಆಗ್ರಹ

ಸಮಗ್ರ ನ್ಯೂಸ್: ಕೆಲ ಸಮಯದಿಂದ ಪರ-ವಿರೋಧಕ್ಕೆ ಕಾರಣವಾಗಿದ್ದ ಬಲವಂತದ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ವಿಧಾನಸಭೆಯಲ್ಲಿ ಅನುಮೋದನೆಗೊಂಡು, ಪರಿಷತ್ತಿನಲ್ಲಿ ಬಾಕಿ ಉಳಿದುಕೊಂಡಿದ್ದ ‘ಕರ್ನಾಟಕ ಧಾರ್ವಿುಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧ್ಯಾದೇಶ, 2022’ಕ್ಕೆ ಮೇ 12ರಂದು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಂಪುಟದ ತೀರ್ವನವನ್ನು ಶುಕ್ರವಾರ ರಾಜಭವನಕ್ಕೆ ಕಳಿಸಲಾಗುತ್ತದೆ. ರಾಜ್ಯಪಾಲರು ಕಾನೂನು ತಂಡದ ಜತೆ ಸಮಾಲೋಚಿಸಿ ಸುಗ್ರೀವಾಜ್ಞೆಗೆ ಸಹಿ ಹಾಕಿದ ಕೂಡಲೇ ಮತಾಂತರ ನಿಷೇಧ ಕಾನೂನು ಜಾರಿಗೆ

ರಾಜ್ಯಸರ್ಕಾರದಿಂದ ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಜಾರಿ| ಸುಗ್ರೀವಾಜ್ಞೆ ತಿರಸ್ಕರಿಸಲು ಸಿದ್ದರಾಮಯ್ಯ ಆಗ್ರಹ Read More »

ಇನ್ಮುಂದೆ ಬೆಳಗ್ಗಿ‌ನ ಆಜಾನ್ ಗೆ ಧ್ವನಿವರ್ಧಕ ಉಪಯೋಗಿಸದಿರಲು ಮುಸ್ಲಿಂ ಮುಖಂಡರ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆಯ ಬಗ್ಗೆ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. ಬೆಳಗಿನ ಜಾವದಲ್ಲಿ ಇಂತಿಷ್ಟೇ ಡೆಸಿಬಲ್ ಶಬ್ದವನ್ನು ಹೊರಸೂಸುವಂತೆ ಧ್ವನಿ ವರ್ಧಕ ಬಳಕೆಗೂ ಖಡಕ್ ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಮುಸ್ಲೀಂ ಮುಖಂಡರು, ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಯ ಆಜಾನ್ ಕೂಗೋದನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ. ಈ ಕುರಿತಂತೆ ಮುಸ್ಲೀಂ ಮುಖಂಡರು ಸಭೆ ನಡೆಸಿದ ಬಳಿಕ, ಸುದ್ದಿಗಾರರಿಗೆ ಮಾಹಿತಿ ನೀಡಿದಂತ ಇಮಾಮ್ ಮೌಲಾನ್ ಮಕ್ಸೂದ್ ಇಮ್ರಾನ್ ರಶಾದಿ

ಇನ್ಮುಂದೆ ಬೆಳಗ್ಗಿ‌ನ ಆಜಾನ್ ಗೆ ಧ್ವನಿವರ್ಧಕ ಉಪಯೋಗಿಸದಿರಲು ಮುಸ್ಲಿಂ ಮುಖಂಡರ ನಿರ್ಧಾರ Read More »