ರಾಜ್ಯ

ಕೊಡಗು: ಭೂಕಂಪನದ ಬಳಿಕ ಗುಡ್ಡ ಕುಸಿತದ ಆತಂಕ| ಮನೆ ಮೇಲೆ ಬಿದ್ದ ಬಂಡೆಕಲ್ಲು

ಸಮಗ್ರ ನ್ಯೂಸ್: ಲಘು ಭೂಕಂಪನದ ಅನುಭವದಿಂದ ಕಂಗಾಲಾಗಿರುವ ಕೊಡಗು ಜಿಲ್ಲೆಯ ಜನತೆಗೆ ಈಗ ಮತ್ತೊಂದು ಆಘಾತ ಉಂಟಾಗಿದೆ. ಭಾರಿ ಗಾತ್ರದ ಬಂಡೆ ಕಲ್ಲು ಮನೆಯ ಮೇಲೆ ಉರುಳಿಬಿದ್ದ ಪರಿಣಾಮ ಮನೆಗೆ ಭಾಗಶಃ ಹಾನಿಯಾಗಿರುವ ಘಟನೆ ಜಿಲ್ಲೆಯ ಕರಿಕೆಯ ಕುಂಡತ್ತಿಕಾನ ಗ್ರಾಮದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಮನೆ ಮಾಲೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಲ್ಲಿನ ಕರಿಕೆ ನಿವಾಸಿ ಜಾನಕಿ ಎಂಬುವರ ಮನೆ ಮೇಲೆ ರಾತ್ರಿ ವೇಳೆ ಬಂಡೆಕಲ್ಲು ಉರುಳಿ ಬಿದ್ದಿದೆ. ರಾತ್ರಿ‌ ಮನೆ ವೇಲೆ ಬಂಡೆ ಬಿದ್ದಿದ್ದು, ಮನೆಯ ಮಾಲೀಕರು […]

ಕೊಡಗು: ಭೂಕಂಪನದ ಬಳಿಕ ಗುಡ್ಡ ಕುಸಿತದ ಆತಂಕ| ಮನೆ ಮೇಲೆ ಬಿದ್ದ ಬಂಡೆಕಲ್ಲು Read More »

ಸಂಪಾಜೆ: ಮತ್ತೆ ಭೂಕಂಪನ!; ಆತಂಕದಲ್ಲಿ ಜನತೆ

ಸಮಗ್ರ ನ್ಯೂಸ್: ಇಂದು ಮುಂಜಾನೆ ಸುಳ್ಯ, ಸಂಪಾಜೆ, ಕೊಡಗು ಗಡಿಭಾಗದಲ್ಲಿ ಭೂಕಂಪನವಾಗಿದ್ದು, ಇದೀಗ ಸಂಜೆ ಸಂಪಾಜೆ ಪರಿಸರದ ಕೆಲವೆಡೆ ಮತ್ತೆ ಭೂಮಿ ಕಂಪಿಸಿದೆ ಎನ್ನಲಾಗಿದೆ. ಸಂಜೆ 4.40ರ ಸುಮಾರಿಗೆ ಭೂಮಿ ಕಂಪಿಸಿರುವ ಬಗ್ಗೆ ಸ್ಥಳೀಯರು ವಾಟ್ಸಪ್ ಮೂಲಕ ಸಂದೇಶ ನೀಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಸಂಪಾಜೆ, ಶೆಟ್ಯಡ್ಕ, ದಬ್ಬಡ್ಕ ಸೇರಿದಂತೆ ಸಂಪಾಜೆ ಹಾಗೂ ಕೊಡಗು ಭಾಗಗಳಲ್ಲಿ ಮತ್ತೆ ಭೂಮಿ‌ ಕಂಪಿಸಿದೆ. ಕೊಡಗಿನಲ್ಲಿ ಪ್ರಾಕೃತಿಕ ವಿಕೋಪದ ತುರ್ತು ಸಹಾಯವಾಣಿ ತೆರೆಯಲಾಗಿದ್ದು, ಜನರು ಭಯಭೀತರಾಗಿದ್ದಾರೆ.

ಸಂಪಾಜೆ: ಮತ್ತೆ ಭೂಕಂಪನ!; ಆತಂಕದಲ್ಲಿ ಜನತೆ Read More »

ನಡುಗಿದ ಸುಳ್ಯ, ಕೊಡಗು| ವರದಿ ಬಿಡುಗಡೆಗೊಳಿಸಿದ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರ| 3.0 ತೀವ್ರತೆಯ ಭೂಕಂಪದ ಕೇಂದ್ರ ಯಾವುದು ಗೊತ್ತಾ?

ಸಮಗ್ರ ನ್ಯೂಸ್: ಇಂದು ಮುಂಜಾನೆ ದ.ಕ ಜಿಲ್ಲೆಯ ಸುಳ್ಯ ಗಡಿಭಾಗ ಮತ್ತು ಕೊಡಗಿನ ಗಡಿ ಪ್ರದೇಶಗಳಲ್ಲಿ ಸಂಭವಿಸಿದ ಭೂಕಂಪನದ ಕುರಿತಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬುಲೆಟಿನ್ ಬಿಡುಗಡೆಗೊಳಿಸಿದೆ. ರಿಕ್ಟರ್ ಮಾಪಕದಲ್ಲಿ 3.0 ದಾಖಲಾಗಿದ್ದು, ಭೂಕಂಪದ ಕೇಂದ್ರ ಬಿಂದು ಕೊಡಗು ಜಿಲ್ಲೆಯ ಚೆಂಬು ಗ್ರಾಮ ಎಂದು ತಿಳಿದುಬಂದಿದೆ. ಬೆಳಿಗ್ಗೆ 7 ಗಂಟೆ 45 ನಿಮಿಷ 47 ಸೆಕೆಂಡಿಗೆ ಈ ಭೂಕಂಪನ ಸಂಭವಿಸಿದ್ದು, ಮಡಿಕೇರಿ – ದಕ್ಷಿಣ ಕನ್ನಡ ಗಡಿಗ್ರಾಮವಾಗಿರುವ ಚೆಂಬುವಿನಿಂದ 5.2 ವಾಯುವ್ಯ ದಿಕ್ಕಿನಲ್ಲಿ

ನಡುಗಿದ ಸುಳ್ಯ, ಕೊಡಗು| ವರದಿ ಬಿಡುಗಡೆಗೊಳಿಸಿದ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರ| 3.0 ತೀವ್ರತೆಯ ಭೂಕಂಪದ ಕೇಂದ್ರ ಯಾವುದು ಗೊತ್ತಾ? Read More »

ಕೆರೆಯಲ್ಲಿ ಕುರಿಯನ್ನು ಸ್ನಾನ ಮಾಡಿಸಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್ : ತುಮಕೂರು ಹೋಬಳಿಯ ತಿಂಗಳೂರು ಗ್ರಾಮದ ತಿಮ್ಮಯ್ಯ (62) ಎಂಬವರು ಕೆರೆಯಲ್ಲಿ ಕುರಿಯ ಮೈ ತೊಳೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆಯೊಂದು ಸೋಮವಾರ ಮಧ್ಯಾಹ್ನ ನಡೆದಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ನೀರಿನಲ್ಲಿ ಶೋಧ ಕಾರ್ಯ ನಡೆಸಿದರೂ ಮೃತದೇಹ ಸಿಗಲಿಲ್ಲ. ಕೊನೆಗೆ ಅಗ್ನಿಶಾಮಕ ಮತ್ತು ತುರ್ತುಸೇವಾ ಕಚೇರಿಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಶವವನ್ನು ಹೊರತೆಗೆದರು.

ಕೆರೆಯಲ್ಲಿ ಕುರಿಯನ್ನು ಸ್ನಾನ ಮಾಡಿಸಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು Read More »

ರಾಜ್ಯದ ಜನತೆಗೆ ಗುಡ್ ನ್ಯೂಸ್; ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಗೆ ಚಿಂತನೆ

ಸಮಗ್ರ ನ್ಯೂಸ್ : ರಾಜ್ಯ ಸರ್ಕಾರವು ಜನತೆಗೆ ಇದೀಗ ಗುಡ್ ನ್ಯೂಸ್ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿ ಮಾಡುವ ಚಿಂತನೆ ನಡೆಸಿದೆ. ಈ ಬಗ್ಗೆ ಮಾಹಿತಿ ನೀಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ರಾಜ್ಯದಲ್ಲಿ ಅಕ್ಟೋಬರ್ ನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತನೆ ನಡೆಸಲಾಗಿದೆ. ರಾಜ್ಯದಲ್ಲಿ 6 ಸಾವಿರ ಕೋಟಿಗೂ ಅಧಿಕ ಸಾಲ ಮನ್ನಾ ಮಾಡಲಾಗಿದೆ. ಇನ್ನೂ 31 ಸಾವಿರ ರೈತರ ಸಾಲ ಮನ್ನಾ ಬಾಕಿ ಇದ್ದು, ಈ ವಿಚಾರ

ರಾಜ್ಯದ ಜನತೆಗೆ ಗುಡ್ ನ್ಯೂಸ್; ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಗೆ ಚಿಂತನೆ Read More »

ಬಿ.ಕಾಂ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆ

ಸಮಗ್ರ ನ್ಯೂಸ್ : ಬಿ.ಕಾಂ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರು ಹೊರವಲಯ ತಾಲೂಕಿನ ಎಲೆಕ್ಟ್ರಾನ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಶಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಒಳಗಾದ ಬಿಕಾಂ ವಿದ್ಯಾರ್ಥಿ, ಪ್ರಶಾಂತ್ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದು, ಜಯನಗರದ ವಿಜಯ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದನು. ಕಳೆದ ವಾರದಿಂದ ಕಾಲೇಜಿನಲ್ಲಿ ಯುವಕರ ಜೊತೆ ಗಲಾಟೆ ಮಾಡಿಕೊಂಡಿದ್ದರಂತೆ. ಕಾಲೇಜಿನ ವಿದ್ಯಾರ್ಥಿಗಳು ಮಾಹಿತಿ

ಬಿ.ಕಾಂ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆ Read More »

ಶೀಘ್ರವೇ ಬರಲಿದೆ ಇ-ಪಾಸ್‌ಪೋರ್ಟ್|ಹೇಗಿರಲಿದೆ? ಕೆಲಸ ಹೇಗೆ? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಪ್ರಯಾಣವನ್ನು ಸುಗಮಗೊಳಿಸಲು ಹಾಗೂ ಪ್ರಯಣಿಕರ ಡೇಟಾವನ್ನು ಸುರಕ್ಷಿತವಾಗಿಡಲು ಭಾರತ ಸರ್ಕಾರ ಶೀಘ್ರವೇ ಇ-ಪಾಸ್‌ಪೋರ್ಟ್‌ಗಳನ್ನು ಪ್ರಾರಂಭಿಸುವಲ್ಲಿ ಕೆಲಸ ಮಾಡುತ್ತಿದೆ. ಸರ್ಕಾರ ಕಳೆದ ವರ್ಷ ಇ-ಪಾಸ್‌ಪೋರ್ಟ್ ಪರಿಕಲ್ಪನೆಯನ್ನು ಪರಿಚಯಿಸಿ, ಶೀಘ್ರವೇ ಅದನ್ನು ಪ್ರಾರಂಭಿಸುವುದಗಿ ತಿಳಿಸಿತ್ತು. ಶುಕ್ರವಾರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಈ ವರ್ಷದ ಅಂತ್ಯದಲ್ಲಿ ಇ-ಪಾಸ್‌ಪೋರ್ಟ್ ಹೊರಬರಲಿದೆ ಎಂದು ತಿಳಿಸಿದ್ದಾರೆ. ಇದು ನಾಗರಿಕರ ಅನುಭವ ಹಾಗೂ ವಿತರಣೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ. ಚಿಪ್ ಆಧಾರಿತ ಇ-ಪಾಸ್‌ಪೋರ್ಟ್ ಹೊಸ ಪರಿಕಲ್ಪನೆಯಲ್ಲ. 100ಕ್ಕೂ

ಶೀಘ್ರವೇ ಬರಲಿದೆ ಇ-ಪಾಸ್‌ಪೋರ್ಟ್|ಹೇಗಿರಲಿದೆ? ಕೆಲಸ ಹೇಗೆ? ಇಲ್ಲಿದೆ ಮಾಹಿತಿ Read More »

ಸುಳ್ಯ: ಮತ್ತೆ ಕಂಪಿಸಿದ ಭೂಮಿ

ಸಮಗ್ರ ನ್ಯೂಸ್: ಎರಡು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಮುಂಜಾನೆ 7.46 ರ ಸುಮಾರಿಗೆ ಕಂಪನವಾಗಿದ್ದು ಜನ ಭಯಬೀತರಾಗಿ ಮನೆಗಳಿಂದ ಹೊರಗೋಡಿದ್ದಾರೆ. ತಾಲೂಕಿನ ಸುಳ್ಯ ಪಟ್ಟಣ, ಉಬರಡ್ಕ, ಮಡಪ್ಪಾಡಿ, ಕೊಲ್ಲಮೊಗ್ರು, ಕಲ್ಮಕಾರು, ದೇವಚಳ್ಳ, ಜಾಲ್ಸುರು, ಆಲೆಟ್ಟಿ, ಐವರ್ನಾಡು, ಅಮರಮುಡ್ನೂರು, ಸಂಪಾಜೆ ,ಗುತ್ತಿಗಾರು ಸೇರಿದಂತೆ ಬಹುತೇಕ ಕಡೆ ಭೂಮಿ ಕಂಪಿಸಿದೆ. 10-15 ಸೆಕೆಂಡುಗಳ ಕಾಲ ಈ ವಿದ್ಯಮಾನ ನಡೆದಿದ್ದು, ಜನರು ಭಯಗೊಂಡಿದ್ದಾರೆ. ಕಡಬ ತಾಲೂಕಿನ ಸುಬ್ರಹ್ಮಣ್ಯ,

ಸುಳ್ಯ: ಮತ್ತೆ ಕಂಪಿಸಿದ ಭೂಮಿ Read More »

SDA ಹುದ್ದೆಗಳ ನೇಮಕಾತಿ ಗೆ ಅರ್ಜಿ ಅಹ್ವಾನ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್ ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಪತ್ರದಲ್ಲಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಪ್ರಕಟಿಸಲಾಗಿದ್ದು, 155 SDA ಹುದ್ದೆಗಳ ನೇಮಕಾತಿಗೆ ಜುಲೈ 11 ರಿಂದ ಆಗಸ್ಟ್ 10 ರ ವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಇ, ಐಸಿಎಸ್‌ಇ ಮಂಡಳಿ ನಡೆಸುವ 10 ಪ್ಲಸ್ ಪರೀಕ್ಷೆ ಅಥವಾ ನ್ಯಾಷನಲ್

SDA ಹುದ್ದೆಗಳ ನೇಮಕಾತಿ ಗೆ ಅರ್ಜಿ ಅಹ್ವಾನ Read More »

ವಿಶ್ವ ಪ್ರಸಿದ್ಧ ಹಂಪಿಗೆ ಭೇಟಿ ಕೊಟ್ಟ ಮೈಸೂರು ಒಡೆಯರ್ ಕುಟುಂಬ

ಸಮಗ್ರ ನ್ಯೂಸ್: ಮೈಸೂರಿನ ಒಡೆಯರಾದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಅವರು ಸೋಮವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು. ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಬಂದು ವಿರೂಪಾಕ್ಷನಿಗೆ ವಿಶೇಷ ಪೂಜೆ ಸಲ್ಲಿಸಿದರು ವಿಜಯ ವಿಠಲ ದೇವಸ್ಥಾನ, ಸಪ್ತಸ್ವರ ಮಂಟಪ, ಕಲ್ಲಿನ ರಥ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಇದಕ್ಕೂ ಮುನ್ನ ಅವರು ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಆಂಜನೇಯನ ದರ್ಶನ ಪಡೆದರು.

ವಿಶ್ವ ಪ್ರಸಿದ್ಧ ಹಂಪಿಗೆ ಭೇಟಿ ಕೊಟ್ಟ ಮೈಸೂರು ಒಡೆಯರ್ ಕುಟುಂಬ Read More »