ರಾಜ್ಯ

ಮಹಿಳಾ ಪೊಲೀಸರ ಸಮವಸ್ತ್ರ ಅಳತೆ ತೆಗೆದ ಪುರುಷ ಟೈಲರ್‌ಗಳು| ಮಹಿಳಾ ಅಧಿಕಾರಿಗಳಿಂದ ಆಕ್ಷೇಪ

ಸಮಗ್ರ ನ್ಯೂಸ್ ಡೆಸ್ಕ್: ಸಮವಸ್ತ್ರಕ್ಕಾಗಿ ಪುರುಷ ಟೈಲರ್‌ಗಳು ಮಹಿಳಾ ಪೊಲೀಸ್ ಸಿಬ್ಬಂದಿಯ ಅಳತೆ ತೆಗೆದುಕೊಳ್ಳುತ್ತಿರುವ ಚಿತ್ರಗಳು ಮತ್ತು ವಿಡಿಯೊಗಳು ವೈರಲ್ ಆಗಿವೆ. ಆಂದ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಅಳತೆ ತೆಗೆದುಕೊಳ್ಳಲು ಪುರುಷ ಟೈಲರ್‌ಗಳನ್ನು ನಿಯೋಜಿಸಿದ್ದನ್ನು ಗಮನಿಸಿದ ಮಹಿಳಾ ಅಧಿಕಾರಿಗಳು ಇದಕ್ಕೆ ಆಕ್ಷೇಪದ ಜೊತೆ ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ, ಪೊಲೀಸ್ ಅಧೀಕ್ಷಕ (ಎಸ್‌ಪಿ) ವಿಜಯ ರಾವ್ ಅವರು ಮಧ್ಯಪ್ರವೇಶಿಸಿ ಪುರುಷ ಟೈಲರ್‌ಗಳ ತಂಡವನ್ನು ಬದಲಾಯಿಸಿದರು. ಜೊತೆಗೆ ಈ ಘಟನೆಯನ್ನು ಸಂಪೂರ್ಣವಾಗಿ ಬಗೆಹರಿಸಲು ಹೆಚ್ಚುವರಿ ಎಸ್‌ಪಿ […]

ಮಹಿಳಾ ಪೊಲೀಸರ ಸಮವಸ್ತ್ರ ಅಳತೆ ತೆಗೆದ ಪುರುಷ ಟೈಲರ್‌ಗಳು| ಮಹಿಳಾ ಅಧಿಕಾರಿಗಳಿಂದ ಆಕ್ಷೇಪ Read More »

ಬಟ್ಟೆ ಧರಿಸುವುದು ಮಹಿಳೆಯ ಹಕ್ಕು; ಬಿಕಿನಿ, ಹಿಜಾಬ್ ಯಾವುದೂ ತೊಟ್ಟರೂ ಅಡ್ಡಿಯಿಲ್ಲ – ಪ್ರಿಯಾಂಕ ಗಾಂಧಿ

ಸಮಗ್ರ ನ್ಯೂಸ್ ಡೆಸ್ಕ್: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ಗದ್ದಲ ಕುರಿತು ರಾಹುಲ್ ಗಾಂಧಿ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಪ್ರತಿಕ್ರಿಯಿಸಿದ್ದು, ಬಲವಂತದ ವಸ್ತ್ರ ಸಂಹಿತೆಯನ್ನು ವಿರೋಧಿಸಿದ್ದಾರೆ. ಲಡಕಿ ಹೂಂನಾ ಲಡ್ ಸಕ್ತಿಹೂ ಎಂಬ ಹ್ಯಾಸ್ ಟ್ಯಾಗ್ ನಲ್ಲಿ ಟ್ವಿಟ್ ಮಾಡಿರುವ ಪ್ರಿಯಾಂಕ ಅವರು, ಬಿಕಿನಿ, ಘೂಂಘಾಟ್, ಜೀನ್ಸ್ ಅಥವಾ ಹಿಜಾಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ”

ಬಟ್ಟೆ ಧರಿಸುವುದು ಮಹಿಳೆಯ ಹಕ್ಕು; ಬಿಕಿನಿ, ಹಿಜಾಬ್ ಯಾವುದೂ ತೊಟ್ಟರೂ ಅಡ್ಡಿಯಿಲ್ಲ – ಪ್ರಿಯಾಂಕ ಗಾಂಧಿ Read More »

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್ ಡೆಸ್ಕ್: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳವಾರ ಪ್ರಕಟಿಸಿದೆ. ಏಪ್ರಿಲ್ 16 ರಿಂದ ಮೇ 6ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಪರೀಕ್ಷಾ ವೇಳಾಪಟ್ಟಿ16-4-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ 18-4-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ 19-4-2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ Read More »

ರಾಜ್ಯದಲ್ಲಿ 3 ದಿನ ಹೈಸ್ಕೂಲ್ ಮತ್ತು ಪದವಿ ಕಾಲೇಜಿಗೆ ರಜೆ – ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ಕಂಡುಬಂದಿರುವ ಹಿನ್ನಲೆಯಲ್ಲಿ 3 ದಿನ ಹೈಸ್ಕೂಲ್ ಹಾಗೂ ಪದವಿ ಕಾಲೇಜುಗಳಿಗೆ‌ ರಜೆ‌ ಘೋಷಿಸಿದ್ದಾರೆ. ಹಿಜಾಬ್‌ ವಿವಾದ ರಾಜ್ಯದಲ್ಲಿ ಹೆಚ್ಚಿದ್ದು, ಈ ವಿವಾದ ಹೈ ಸ್ಕೂಲ್‌, ಪ.ಪೂರ್ವ, ಪದವಿ ಎಂಜಿನಿಯರ್‌ ಕಾಲೇಜುಗಳಿಗೆ ಗಳಿಗೆ ವಿಸ್ತರಣೆಯಾಗಬಾರದು ಎನ್ನುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ಇತರೆ ಕಡೆ ಈ ಪ್ರತಿಭಟನೆ ನಡೆದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲಿದೆ ಹೀಗಾಗಿ ಮುಂಜಾಗ್ರತ ಕ್ರಮವಾಗಿ ಈ ನಿರ್ಧಾರವನ್ನು

ರಾಜ್ಯದಲ್ಲಿ 3 ದಿನ ಹೈಸ್ಕೂಲ್ ಮತ್ತು ಪದವಿ ಕಾಲೇಜಿಗೆ ರಜೆ – ಸಿಎಂ ಬೊಮ್ಮಾಯಿ Read More »

ಹಿಜಾಬ್ ವಿವಾದ: ಉದ್ವಿಗ್ನಗೊಂಡ ಶಿಕ್ಷಣ ಸಂಸ್ಥೆಗಳು| ಹಲವೆಡೆ ಬಿಗು ವಾತಾವರಣ

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್​ ಪರ-ವಿರೋಧ ಜಟಾಪಟಿ ರಾಜ್ಯದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಸರ್ಕಾರದ ನಿರ್ದೇಶನದ ಹೊರತಾಗಿಯೂ ಹಲವು ವಿದ್ಯಾರ್ಥಿನಿಯರು ಇಂದು(ಮಂಗಳವಾರ) ಕೂಡ ಹಿಜಾಬ್​ ಧರಿಸಿ ಕಾಲೇಜಿಗೆ ಬಂದರೆ, ಇದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿ ಹಲವರು ಕಾಲೇಜು ಪ್ರವೇಶಿಸಿದ್ದಾರೆ. ಇದರಿಂದ ಹಲವು ಕಾಲೇಜುಗಳ ಬಳಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಉಡುಪಿ, ಮಂಡ್ಯ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ, ರಾಯಚೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಿಜಾಬ್​ ವಿವಾದ ಭುಗಿಲೆದ್ದಿದೆ. ಹಿಜಾಬ್​ ಧರಿಸಿ ಮುಸ್ಲಿಂ ಯುವತಿಯರು

ಹಿಜಾಬ್ ವಿವಾದ: ಉದ್ವಿಗ್ನಗೊಂಡ ಶಿಕ್ಷಣ ಸಂಸ್ಥೆಗಳು| ಹಲವೆಡೆ ಬಿಗು ವಾತಾವರಣ Read More »

ಪೊಲೀಸ್ ನೇಮಕಾತಿಯಲ್ಲಿ ಅಕ್ರಮ – 545 ಸಬ್ ಇನ್ಸ್ ಪೆಕ್ಟರ್ ಹುದ್ದೆ‌ ನೇಮಕಾತಿಗೆ ತಡೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಸಂಬಂಧ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್ ಅವರು ರಾಜ್ಯದ ಹಿರಿಯ ಅಧಿಕಾರಿಗಳಿಗೆ ತುರ್ತು ಸಂದೇಶ ಕಳುಹಿಸಿದ್ದಾರೆ. 545 ಪಿಎಸ್ ಐ ಹುದ್ದೆಗಳ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 371 (ಜೆ) ಮೀಸಲಾತಿಯಲ್ಲಿ ಅನ್ಯಾಯ ಮತ್ತು ಪರೀಕ್ಷೆಯಲ್ಲಿ

ಪೊಲೀಸ್ ನೇಮಕಾತಿಯಲ್ಲಿ ಅಕ್ರಮ – 545 ಸಬ್ ಇನ್ಸ್ ಪೆಕ್ಟರ್ ಹುದ್ದೆ‌ ನೇಮಕಾತಿಗೆ ತಡೆ Read More »

ಹೈಕೋರ್ಟ್ ಅಂಗಳದಲ್ಲಿ ಹಿಜಾಬ್| ಇಂದು(ಫೆ.8)ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ

ಸಮಗ್ರ ನ್ಯೂಸ್ ಡೆಸ್ಕ್: ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ವಿಚಾರದಲ್ಲಿ ಉಂಟಾಗಿರುವ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ರಾಷ್ಟ್ರಮಟ್ಟದಲ್ಲೂ ಈ ಬಗ್ಗೆ ಚರ್ಚೆಯಾಗುತ್ತಿದ್ದು, ಇಂದು ರಾಜ್ಯ ಹೈಕೋರ್ಟ್​ನಲ್ಲಿ ಈ ಕುರಿತ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಯಲಿದೆ. ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿದ ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಕ್ರಮ ಪ್ರಶ್ನಿಸಿ ವಿದ್ಯಾರ್ಥಿನಿಯರು, ಪಾಲಕರು ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸಲಿದೆ. ಈ ಮಧ್ಯೆ, ಹಿಜಾಬ್ ಧರಿಸಿದವರಿಗೆ

ಹೈಕೋರ್ಟ್ ಅಂಗಳದಲ್ಲಿ ಹಿಜಾಬ್| ಇಂದು(ಫೆ.8)ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ Read More »

‘ಮುಸ್ಲಿಂ ಹೆಣ್ಮಕ್ಳೇ ಹೆದರಬೇಡಿ, ಮುನ್ನುಗ್ಗಿ’; ಹಿಜಾಬ್ ವಿವಾದ ಕುರಿತು ಹಿಂದೂ ಸಹೋದರಿ ಹೇಳೋದೇನು ಗೊತ್ತಾ?

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್ ಕುರಿತ ಮೇಲಾಟಗಳು ತಾರಕಕ್ಕೆ ಏರುತ್ತಿರುವಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧಗಳ ಚರ್ಚೆ ಜೋರಾಗುತ್ತಿದೆ. ಕೆಲವು ಮಂದಿ ಹಿಜಾಬ್ ಕುರಿತು ಸಮರ್ಥನೆ ಮಾಡಿಕೊಂಡರೆ ಮತ್ತೆ ಹಲವರು ಇದರ ವಿರುದ್ದ ಮಾತನಾಡುತ್ತಿದ್ದಾರೆ. ಈ ನಡುವೆ ತರಗತಿಯಲ್ಲಿ ಹಿಜಾಬ್ ಧಾರಣೆ ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುತ್ತಾ‌ ಬರುತ್ತಿದ್ದು, ಕಾಲೇಜು ಮುಖ್ಯಸ್ಥರಿಗೆ ತಲೆನೋವಾಗಿ ಪರಿಣಮಿಸಿದೆ. ಸರ್ಕಾರ ಸಮವಸ್ತ್ರ ಕುರಿತು ಕಠಿಣ ಆದೇಶ ತಂದರೂ ಅದ್ಯಾವುದಕ್ಕೂ ಕಿಮ್ಮತ್ತು ನೀಡದೆ ವಿದ್ಯಾರ್ಥಿಗಳು ಬಣ್ಣಗಳ ಹೋರಾಟದಲ್ಲಿ ತೊಡಗಿರುವುದು

‘ಮುಸ್ಲಿಂ ಹೆಣ್ಮಕ್ಳೇ ಹೆದರಬೇಡಿ, ಮುನ್ನುಗ್ಗಿ’; ಹಿಜಾಬ್ ವಿವಾದ ಕುರಿತು ಹಿಂದೂ ಸಹೋದರಿ ಹೇಳೋದೇನು ಗೊತ್ತಾ? Read More »

ಮಂಗಳೂರು: ಮುಸ್ಲಿಂ ಯುವಕನ‌ ಮೇಲೆ ಹಲ್ಲೆ

ಸಮಗ್ರ ನ್ಯೂಸ್ ಡೆಸ್ಕ್: ಮುಸ್ಲಿಂ ಯುವಕನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ. ಇಬ್ರಾಹೀಂ ಹರ್ಷದ್ (31) ಹಲ್ಲೆಗೊಳಗಾದ ಯುವಕ. ಖಾಸಗಿ ಬಸ್ ನಿರ್ವಾಹಕ ಯಶ್ಚಿತ್ ಹಾಗೂ ಇತರ ಇಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಹಲ್ಲೆಗೊಳಗಾದ ಯುವಕ‌ ಆರೋಪಿಸಿದ್ದಾರೆ. ದುಷ್ಕರ್ಮಿಗಳಲ್ಲಿ‌ ಓರ್ವ ಸಂಘಪರಿವಾರ ಸಂಘಟನೆಯಲ್ಲಿ‌ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಸಂತ್ರಸ್ತ ಯುವ ರಿಕ್ಷಾ ಚಾಲಕನಾಗಿದ್ದು, ತೊಕ್ಕೊಟ್ಟು ಆಟೋ ರಿಕ್ಷಾ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರನ್ನು ಕರೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಈ

ಮಂಗಳೂರು: ಮುಸ್ಲಿಂ ಯುವಕನ‌ ಮೇಲೆ ಹಲ್ಲೆ Read More »

ರಾಜ್ಯದಲ್ಲಿ ತಾರಕಕ್ಕೇರಿದ ಹಿಜಾಬ್ ವಿವಾದ| ಈ ಮುಸ್ಲಿಂ ಸಹೋದರಿ ಹಿಜಾಬ್ ಬಗ್ಗೆ ಹೇಳೋದೇನು ಗೊತ್ತಾ?

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್ ಕುರಿತ ಮೇಲಾಟಗಳು ತಾರಕಕ್ಕೆ ಏರುತ್ತಿರುವಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧಗಳ ಚರ್ಚೆ ಜೋರಾಗುತ್ತಿದೆ. ಕೆಲವು ಮಂದಿ ಹಿಜಾಬ್ ಕುರಿತು ಸಮರ್ಥನೆ ಮಾಡಿಕೊಂಡರೆ ಮತ್ತೆ ಹಲವರು ಇದರ ವಿರುದ್ದ ಮಾತನಾಡುತ್ತಿದ್ದಾರೆ. ಈ ನಡುವೆ ತರಗತಿಯಲ್ಲಿ ಹಿಜಾಬ್ ಧಾರಣೆ ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುತ್ತಾ‌ ಬರುತ್ತಿದ್ದು, ಕಾಲೇಜು ಮುಖ್ಯಸ್ಥರಿಗೆ ತಲೆನೋವಾಗಿ ಪರಿಣಮಿಸಿದೆ. ಸರ್ಕಾರ ಸಮವಸ್ತ್ರ ಕುರಿತು ಕಠಿಣ ಆದೇಶ ತಂದರೂ ಅದ್ಯಾವುದಕ್ಕೂ ಕಿಮ್ಮತ್ತು ನೀಡದೆ ವಿದ್ಯಾರ್ಥಿಗಳು ಬಣ್ಣಗಳ ಹೋರಾಟದಲ್ಲಿ ತೊಡಗಿರುವುದು

ರಾಜ್ಯದಲ್ಲಿ ತಾರಕಕ್ಕೇರಿದ ಹಿಜಾಬ್ ವಿವಾದ| ಈ ಮುಸ್ಲಿಂ ಸಹೋದರಿ ಹಿಜಾಬ್ ಬಗ್ಗೆ ಹೇಳೋದೇನು ಗೊತ್ತಾ? Read More »