ರಾಜ್ಯ

5-12 ವರ್ಷ ವಯೋಮಿತಿ ಮಕ್ಕಳಿಗೂ ವಾಕ್ಸಿನ್

ಸಮಗ್ರ ನ್ಯೂಸ್: ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಹೆಚ್ಚಾಗುತ್ತಿದ್ದು 5-12 ವರ್ಷ ವಯೋಮಿತಿಯ ಮಕ್ಕಳಿಗೆ ಕೊರ್ಬೊವ್ಯಾಕ್ಸ್‌ ನೀಡಬಹುದು ಎಂದು ಭಾರತೀಯ ಔಷಧ ನಿಯಂತ್ರಕರ ವಿಷಯ ತಜ್ಞರ ಸಮಿತಿ ಶಿಫಾರಸು ಮಾಡಿದೆ. ದೇಶದಲ್ಲಿ ಸದ್ಯ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಸೋಂಕು ಹೆಚ್ಚಾಗಲು ಒಮಿಕ್ರಾನ್‌ ರೂಪಾಂತರಿಯ ಉಪ ತಳಿ ಬಿಎ.2.12 ಕಾರಣ ಎಂದು ಅಧ್ಯಯನದಲ್ಲಿ ಅಭಿಪ್ರಾಯಪಡಲಾಗಿದೆ. ಈ ಹಿನ್ನಲೆಯಲ್ಲಿ ಸೋಂಕು ನಿಯಂತ್ರಿಸಲು ಕೊರೊನಾ ಮಾರ್ಗಸೂಚಿಯ ಜೊತೆಗೆ ಮಕ್ಕಳಿಗೆ ವ್ಯಾಕ್ಸಿನೇಷನ್‌ ಕೂಡಾ ಅಗತ್ಯ ಎಂದು ಹೇಳಲಾಗಿದೆ.

5-12 ವರ್ಷ ವಯೋಮಿತಿ ಮಕ್ಕಳಿಗೂ ವಾಕ್ಸಿನ್ Read More »

ಇಲ್ಲಿ ಮೊಬೈಲ್ ಖರೀದಿಸಿದರೆ ಪೆಟ್ರೋಲ್ ಉಚಿತ ! ; ವಿಶಿಷ್ಟ ಆಫರ್ ಪೋಸ್ಟರ್ ವೈರಲ್

ಸಮಗ್ರ ನ್ಯೂಸ್: ನಿಂಬೆ, ಪೆಟ್ರೋಲ್ ಬೆಲೆ ದಿನ ದಿನ ಏರುತ್ತಲೇ ಇದೆ. ಈ ಕಾರಣ ವಾರಾಣಸಿಯಲ್ಲಿ ಮೊಬೈಲ್ ಶಾಪ್ ಒಂದು ವಿಶಿಷ್ಟ ಆಫರ್ ಒಂದು ನೀಡಿದೆ. ಈ ವರ್ಷ ಅನೇಕ ರಾಜ್ಯಗಳಲ್ಲಿ ನಿಂಬೆ ಹಣ್ಣಿನ ಬೆಲೆ ಗಗನಕ್ಕೇರಿದೆ, ಒಂದು ನಿಂಬೆಹಣ್ಣಿಗೆ 10 ರಿಂದ 15 ರೂ.ಗಳ ನಡುವೆ ಬೆಲೆ ಇದೆ. ಇನ್ನು ಮಧ್ಯಮ ವರ್ಗದವರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಗ್ರಾಹಕರನ್ನು ಸೆಳೆಯಲು ಹಲವು ಅಂಗಡಿಗಳು ವಿಶಿಷ್ಟ ಕೊಡುಗೆಗಳನ್ನು ನೀಡಿವೆ.

ಇಲ್ಲಿ ಮೊಬೈಲ್ ಖರೀದಿಸಿದರೆ ಪೆಟ್ರೋಲ್ ಉಚಿತ ! ; ವಿಶಿಷ್ಟ ಆಫರ್ ಪೋಸ್ಟರ್ ವೈರಲ್ Read More »

15ದಿನ ಮೊದಲೇ ಶಾಲೆಗೆ ತೆರಳಲಿದ್ದಾರೆ ಚಿಣ್ಣರು| ‘ಕಲಿಕಾ ಚೇತರಿಕೆ’ ಜೊತೆಗೆ ವಿನೂತನ ಕಾರ್ಯಕ್ರಮ; ನವೀನ ಪರಿಕಲ್ಪನೆಯಲ್ಲಿ ಮೇ.16ರಿಂದ ಹೊಸ ಶೈಕ್ಷಣಿಕ ವರ್ಷ

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಜೂ.1 ರಿಂದ ಆರಂಭವಾಗಬೇಕಿದ್ದ ಶೈಕ್ಷಣಿಕ ವರ್ಷವನ್ನು ಪುನರ್ ಪರಿಶೀಲಿಸಿ ಈ ವರ್ಷ ಶಿಕ್ಷಣ ಇಲಾಖೆಯು 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಅಧಿಕೃತ ವೇಳಾಪಟ್ಟಿ ಪ್ರಕಟಿಸಿದೆ. ಮೇ 16 ರಿಂದ ಶಾಲೆ ಪ್ರಾರಂಭೋತ್ಸವದ ಜೊತೆಗೆ ‘ಕಲಿಕಾ ಚೇತರಿಕೆ’ ವಿಶೇಷ ಕಾರ್ಯಕ್ರಮದ ಮೂಲಕ ಶಾಲೆಗಳಲ್ಲಿ ತರಗತಿ ಚಟುವಟಿಕೆಗಳು ಆರಂಭವಾಗಲಿವೆ. ಇದರಿಂದ ಈ ಸಾಲಿನಲ್ಲಿ ಪ್ರತಿ ವರ್ಷಕ್ಕಿಂತ 15 ದಿನ ಮೊದಲೇ ಶಾಲೆಗಳು ಆರಂಭವಾಗಲಿವೆ. ಆರಂಭದಿಂದಲೇ ಕ್ಷೀರಭಾಗ್ಯ, ಬಿಸಿಯೂಟ ಯೋಜನೆಗಳು ಶುರುವಾಗಲಿದ್ದು, ಮಕ್ಕಳ ದಾಖಲಾತಿಗಾಗಿ ವಿಶೇಷ ಕಾರ್ಯಕ್ರಮವನ್ನು

15ದಿನ ಮೊದಲೇ ಶಾಲೆಗೆ ತೆರಳಲಿದ್ದಾರೆ ಚಿಣ್ಣರು| ‘ಕಲಿಕಾ ಚೇತರಿಕೆ’ ಜೊತೆಗೆ ವಿನೂತನ ಕಾರ್ಯಕ್ರಮ; ನವೀನ ಪರಿಕಲ್ಪನೆಯಲ್ಲಿ ಮೇ.16ರಿಂದ ಹೊಸ ಶೈಕ್ಷಣಿಕ ವರ್ಷ Read More »

ಇಂದಿನಿಂದ ಪಿಯುಸಿ‌ ಎಕ್ಸಾಂ| ಸುಗಮ ಪರೀಕ್ಷೆಗಾಗಿ ಕಟ್ಟುನಿಟ್ಟಿನ ಕ್ರಮ

ಸಮಗ್ರ ನ್ಯೂಸ್: ಇಂದಿನಿಂದ(ಎ.22) ರಾಜ್ಯದಾದ್ಯಂತ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮೇ 18 ರ ವರೆಗೆ ನಡೆಲಿದೆ. ಪರೀಕ್ಷೆ ಸುಗಮವಾಗಿ ನಡೆಯಲು ಈಗಾಗಲೇ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಸಹಾಯವಾಣಿಯನ್ನೂ ಸಹ ಆರಂಭಿಸಲಾಗಿದ್ದು, ಪಿಯುಸಿ ಬೋರ್ಡ್ ಸಕಲ ಸಿದ್ದತೆ ಮಾಡಿಕೊಂಡಿದೆ. ಬೆಳಿಗ್ಗೆ 10:15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದ್ದು, 6 ಲಕ್ಷದ 84 ಸಾವಿರದ 255 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಇಂದಿನಿಂದ ಪಿಯುಸಿ‌ ಎಕ್ಸಾಂ| ಸುಗಮ ಪರೀಕ್ಷೆಗಾಗಿ ಕಟ್ಟುನಿಟ್ಟಿನ ಕ್ರಮ Read More »

ಶಾಲಾ ಪಠ್ಯದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸಲ್ಲ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸುವುದಿಲ್ಲ. ಅದರ ಬದಲಾಗಿ ನೈತಿಕ ಶಿಕ್ಷಣ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ . ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ರಾಜ್ಯ ಸರ್ಕಾರ ಪಠ್ಯಕ್ರಮದಲ್ಲಿ ರಾಮಾಯಣ , ಭಗವದ್ಗೀತೆ ಅಳವಡಿಸುವುದಾಗಿ ಯಾವತ್ತೂ ಹೇಳಿಲ್ಲ . ಮನುಷ್ಯನ ಶಿಕ್ಷಣಕ್ಕೆ ಅಗತ್ಯವಾಗಿ ಬೇಕಾಗಿರುವ ಶಿಕ್ಷಣವನ್ನು ಕಲಿಸುವಲ್ಲಿ ಗಮನ ಹರಿಸಲಾಗಿದೆ.ಕೆಲ ನೈತಿಕ ಅಂಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಪ್ರಯತ್ನ ಮಾಡಲಾಗುವುದು. ಜೊತೆಗೆ ಜೀವನಕ್ಕೆ ಬೇಕಾದ ಶಿಕ್ಷಣವನ್ನು ನಾವು

ಶಾಲಾ ಪಠ್ಯದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸಲ್ಲ – ಸಚಿವ ಬಿ.ಸಿ ನಾಗೇಶ್ Read More »

ಸುಕ್ಷೇತ್ರ ಸಜ್ಜಲಗುಡ್ಡದ ಸಜ್ಜಲಾಂಬೆ ಶರಣಮ್ಮ ದೇವಿ ಭಕ್ತಿಗೀತೆ ಮ್ಯೂಸಿಕ್ ಆಲ್ಬಮ್ ಬಿಡುಗಡೆ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಮಂಗಳೂರಿನ ಬೊಕ್ಕಪಟ್ಟಣದ ಅಬ್ಬಕ್ಕ ವಿಹಾರ ನೌಕೆಯಲ್ಲಿ ನಡೆದ ರಾಷ್ಟ್ರೀಯ ಸಾಹಿತ್ಯ ಸಮಾರಂಭದಲ್ಲಿ ಜ್ಯೋತಿಷಿ ಮತ್ತು ಸಾಹಿತಿ ಎಚ್ . ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿರುವ ಸಜ್ಜಲಾಂಬೆ ಶ್ರೀ ಶರಣಮ್ಮ ತಾಯಿ ವಿಡಿಯೋ ಭಕ್ತಿಗೀತೆಯನ್ನು ಕರ್ನಾಟಕ ಸರಕಾರದ ಅನಿವಾಸಿ ಕನ್ನಡಿಗರ ಕೋಶ ಇದರ ಮಾಜಿ ಉಪಾಧ್ಯಕ್ಷರಾದ ಕ್ಯಾ . ಗಣೇಶ್ ಕಾರ್ಣಿಕ್ ರವರು ಬಿಡುಗಡೆ ಮಾಡಿದರು . ರಾಯಚೂರು ಜಿಲ್ಲೆಯ ಸಜ್ಜಲಗುಡ್ಡ ಸುಕ್ಷೇತ್ರದ ಈ ಹಾಡನ್ನು ಕಡಬದ ಶಶಿ

ಸುಕ್ಷೇತ್ರ ಸಜ್ಜಲಗುಡ್ಡದ ಸಜ್ಜಲಾಂಬೆ ಶರಣಮ್ಮ ದೇವಿ ಭಕ್ತಿಗೀತೆ ಮ್ಯೂಸಿಕ್ ಆಲ್ಬಮ್ ಬಿಡುಗಡೆ Read More »

ಸಿಡಿಲಾಘಾತ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಪ್ರಮುಖ ಮಾಹಿತಿ

ಸಮಗ್ರ ಡಿಜಿಟಲ್ ಡೆಸ್ಕ್: ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ, ಅದರಿಂದಾಗುವ ಸಾವು ನೋವುಗಳನ್ನು ತಪ್ಪಿಸಬಹುದು. ಸಿಡಿಲಿನಿಂದ ರಕ್ಷಣೆ_ಹೇಗೆ ಸಾಧ್ಯ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಸಿಡಿಲಿನಿಂದ ಸಾವು ನೋವು ಸಂಭವಿಸಿದ ಪ್ರಕರಣಗಳು ಇತ್ತೀಚೆಗೆ ಅಧಿಕವಾಗುತ್ತಿದೆ. ಮಳೆ, ಬಿರುಗಾಳಿ, ಗುಡುಗು ಸಹಿತ ಮಳೆಯು ಬೆಂಗಳೂರು ಹಾಗೂ ರಾಜ್ಯದ ವಿವಿಧ ಕಡೆಗಳಲ್ಲಿ ಆಗುತ್ತಿರುವುದರಿಂದ ಅವಘಡಗಳು ಹೆಚ್ಚಾಗಿದೆ. ಮಳೆಯಿಂದ ಉಂಟಾಗುತ್ತಿರುವ ಹಾನಿಯ ಬಗ್ಗೆ ತಿಳಿದಿರಬೇಕಾದ ಅಗತ್ಯವಿದೆ. ಸಿಡಿಲಿನಿಂದ ಮನುಷ್ಯರು ಮಾತ್ರ ಅಲ್ಲದೆ ವಿವಿಧ ಪಶು, ಪ್ರಾಣಿಗಳು

ಸಿಡಿಲಾಘಾತ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಪ್ರಮುಖ ಮಾಹಿತಿ Read More »

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ| ಕರಾವಳಿಯ ಉಭಯ ಜಿಲ್ಲೆಗಳಲ್ಲಿ ನಿಷೇದಾಜ್ಞೆ ಜಾರಿ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆ ಎ. 22ರಿಂದ ಮೇ 18ರವರೆಗೆ ನಡೆಯಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31,308 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ 12 ಸರಕಾರಿ, 23 ಅನುದಾನಿತ ಮತ್ತು 16 ಅನುದಾನ ರಹಿತ ಕಾಲೇಜುಗಳ ಸಹಿತ ಒಟ್ಟು 51 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅವುಗಳಿಗೆ 14 ಮಂದಿ ರೂಟ್‌ ಆಫೀಸರ್‌ಗಳನ್ನು ನೇಮಕ ಮಾಡಲಾಗಿದೆ. 15,652 ಬಾಲಕರು ಹಾಗೂ 15,656 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ| ಕರಾವಳಿಯ ಉಭಯ ಜಿಲ್ಲೆಗಳಲ್ಲಿ ನಿಷೇದಾಜ್ಞೆ ಜಾರಿ Read More »

ಸುಳ್ಯ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ‌ ಟಿ.ಜಿ ಮುಡೂರು ವಿಧಿವಶ

ಸಮಗ್ರ ನ್ಯೂಸ್: ಹಿರಿಯ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟಿ.ಜಿ ಮುಡೂರು(95) ಇಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನಾಡಿನ ಅಗ್ರಮಾನ್ಯ ಸಾಹಿತಿಯಾಗಿದ್ದ ಮುಡೂರುರವರು ತಮ್ಮ ಇಳಿವಯಸ್ಸಿನಲ್ಲೂ ಅತ್ಯಂತ ಲವಲವಿಕೆಯಿಂದ ಇದ್ದರು. ಅಧ್ಯಾಪಕರಾಗಿ, ಸಾಹಿತಿಯಾಗಿ, ಸಂಘಟಕರಾಗಿ ಗುರುತಿಸಿಕೊಂಡಿದ್ದ ಮುಡೂರುರವರಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅರೆಭಾಷೆ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ. ಕಾಡಮಲ್ಲಿಗೆ, ಹೊಸತು ಕಟ್ಟು, ಅಬ್ಬಿಯ ಮಡಿಲು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಟಿ.ಜಿ ಮುಡೂರುರವರ ನಿಧನಕ್ಕೆ ಸಾಹಿತ್ಯ ಕ್ಷೇತ್ರ ಕಂಬನಿ ಮಿಡಿದಿದೆ.

ಸುಳ್ಯ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ‌ ಟಿ.ಜಿ ಮುಡೂರು ವಿಧಿವಶ Read More »

ಎ.23ರ ವರೆಗೆ ಭಾರೀ ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಈ ಮಳೆ ಸದ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳಲ್ಲಿ ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಏಪ್ರಿಲ್ 21ರ ವರೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಆಲಿ ಕಲ್ಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನು ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ

ಎ.23ರ ವರೆಗೆ ಭಾರೀ ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮುನ್ಸೂಚನೆ Read More »