ರಾಜ್ಯ

ಪಿಯುಸಿ ಪರೀಕ್ಷೆ| ಧರ್ಮಸೂಚಕ ವಸ್ತ್ರ ಧರಿಸಿ ಪರೀಕ್ಷೆ ಬರೆಯುವಂತಿಲ್ಲ – ಸಚಿವ ಬಿ.ಸಿ‌ ನಾಗೇಶ್

ಸಮಗ್ರ ನ್ಯೂಸ್: ಏ.22 ರಿಂದ ಮೇ 18 ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯಾ ಪಿಯು ಕಾಲೇಜುಗಳಲ್ಲಿ ಎಸ್​ಡಿಎಂಸಿಗಳು ಸಮವಸ್ತ್ರ ನಿಗದಿಪಡಿಸಿದ್ದರೆ ಸಮವಸ್ತ್ರ ಧರಿಸಿಯೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದು ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಸಮವಸ್ತ್ರ ಇಲ್ಲದ ಕಡೆ ಯಾವುದೇ ಧರ್ಮವನ್ನು ಸಾಂಕೇತಿಸುವ ಉಡುಪು ಧರಿಸಿ ಬರುವಂತಿಲ್ಲ. ಹಾಗೇನಾದರೂ ಬಂದರೆ‌ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಪಿಯುಸಿ ಪರೀಕ್ಷೆ| ಧರ್ಮಸೂಚಕ ವಸ್ತ್ರ ಧರಿಸಿ ಪರೀಕ್ಷೆ ಬರೆಯುವಂತಿಲ್ಲ – ಸಚಿವ ಬಿ.ಸಿ‌ ನಾಗೇಶ್ Read More »

ಎ.22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ| ಹೀಗಿರಲಿದೆ ನಿಮ್ಮ ಪ್ರಶ್ನೆಪತ್ರಿಕೆ

ಸಮಗ್ರ ನ್ಯೂಸ್ : ಪದವಿಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಪರೀಕ್ಷೆಗೆ ಬಹು ಆಯ್ಕೆ ಪ್ರಶ್ನೆಗಳ ಸಂಖ್ಯೆ ಹೆಚ್ಚಿಸಿದ್ದು, ಈ ವರ್ಷ ಹೊಸರೂಪದಲ್ಲಿ ಪರೀಕ್ಷೆ ನಡೆಯಲಿದೆ. ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯು ಪರೀಕ್ಷೆ ಏ. 22ರಿಂದ ಮೇ 18ರವರೆಗೆ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ ಪ.ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದೆ. ಕೋವಿಡ್‌ ಕಾರಣಕ್ಕೆ ಕಳೆದ ವರ್ಷ ಪರೀಕ್ಷೆ ಇಲ್ಲದೆಯೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್​ ಮಾಡಲಾಗಿತ್ತು. ಆದರೆ ಈ ವರ್ಷ ಪರೀಕ್ಷೆ ನಡೆಸಲಾಗುತ್ತಿದ್ದು, ವಿದ್ಯಾಥಿಗಳಿಗೆ

ಎ.22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ| ಹೀಗಿರಲಿದೆ ನಿಮ್ಮ ಪ್ರಶ್ನೆಪತ್ರಿಕೆ Read More »

ವಿಜಯನಗರ: ಗಾಯಾಳುಗಳನ್ನು ಸಾಗಿಸಲು ತಮ್ಮ ಕಾರನ್ನೇ ಬಿಟ್ಟು ಕೊಟ್ಟ ಶೋಭಾ ಕರಂದ್ಲಾಜೆ| ಕೇಂದ್ರ ಸಚಿವೆಯ ನಡೆಗೆ ವ್ಯಾಪಕ ಮೆಚ್ಚುಗೆ

ಸಮಗ್ರ ನ್ಯೂಸ್: ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆ ಸಾಗಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಾನವೀಯತೆ ಮೆರೆದಿದ್ದಾರೆ. ವಿಜಯನಗರದ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಿಣಿಯಲ್ಲಿ ಭಾಗವಹಿಸಲು ಶೋಭಾ ಕರಂದ್ಲಾಜೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅಪಘಾತವಾಗಿರುವುದನ್ನು ಕಂಡಿದ್ದಾರೆ. ಈ ವೇಳೆ ಶೋಭಾ ಅವರು, ಕೂಡಲೇ ಕಾರು ನಿಲ್ಲಿಸಿ ತಮ್ಮ ಕಾರನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಬಿಟ್ಟು ಕೊಟ್ಟಿದ್ದಾರೆ. ಗಾಯಗೊಂಡಿದ್ದ ಸವಾರರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ, ತಮ್ಮ ವಾಹನದ ಮೂಲಕ

ವಿಜಯನಗರ: ಗಾಯಾಳುಗಳನ್ನು ಸಾಗಿಸಲು ತಮ್ಮ ಕಾರನ್ನೇ ಬಿಟ್ಟು ಕೊಟ್ಟ ಶೋಭಾ ಕರಂದ್ಲಾಜೆ| ಕೇಂದ್ರ ಸಚಿವೆಯ ನಡೆಗೆ ವ್ಯಾಪಕ ಮೆಚ್ಚುಗೆ Read More »

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಮುನ್ಸೂಚನೆ…

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿದೆ.ಏಪ್ರಿಲ್ 18ರ ತನಕ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದೆ.ಏಪ್ರಿಲ್ 17, 18ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಕೋಲಾರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ,

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಮುನ್ಸೂಚನೆ… Read More »

ಕೆ.ಎಸ್ ಈಶ್ವರಪ್ಪ ಮನೆಗೆ ವಿವಿಧ ಸ್ವಾಮೀಜಿಗಳು ಭೇಟಿ ನೀಡಿ ಧೈರ್ಯ ತುಂಬಿದ ಮಠಾಧೀಶರು| ಸ್ವಾಮೀಜಿಗಳ ನಡೆಗೆ ವ್ಯಾಪಕ ಆಕ್ರೋಶ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮನೆಗೆ ಸ್ವಾಮೀಜಿಗಳು ಭೇಟಿ ನೀಡಿ, ಮಾಜಿ ಸಚಿವರಿಗೆ ಧೈರ್ಯ ತುಂಬಿದ್ದು, ಈ ಸುದ್ದಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಶಿವಮೊಗ್ಗದಲ್ಲಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಗೆ ಕಾಗಿನೆಲೆಯ ಪುರುಷೋತ್ತಮನಂದಪುರಿ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗದ ಈಶ್ವರನಂದಪುರಿ, ಸಹಿತ ಒಟ್ಟು 9 ಸ್ವಾಮೀಜಿಗಳು ಈಶ್ವರಪ್ಪ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ. ಸಂತೋಷ್ ಆತ್ಮಹತ್ಯೆ ಕೇಸ್‌ನಲ್ಲಿ ಈಶ್ವರಪ್ಪ ರಾಜೀನಾಮೆ ಹಿನ್ನೆಲೆ ಈಶ್ವರಪ್ಪಗೆ ಸ್ವಾಮೀಜಿಗಳು

ಕೆ.ಎಸ್ ಈಶ್ವರಪ್ಪ ಮನೆಗೆ ವಿವಿಧ ಸ್ವಾಮೀಜಿಗಳು ಭೇಟಿ ನೀಡಿ ಧೈರ್ಯ ತುಂಬಿದ ಮಠಾಧೀಶರು| ಸ್ವಾಮೀಜಿಗಳ ನಡೆಗೆ ವ್ಯಾಪಕ ಆಕ್ರೋಶ Read More »

ವಿವಾಹ ನೋಂದಣಿ ಅಧಿಕಾರಿಯಾಗಿ ಪಿಡಿಒಗಳ ನೇಮಕ; ಸರ್ಕಾರದಿಂದ ಅಧಿಕೃತ ಆದೇಶ

ಸಮಗ್ರ ನ್ಯೂಸ್: ಗ್ರಾಮ ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳನ್ನು ವಿವಾಹ ನೋಂದಣಿ ಅಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ವಿವಾಹ ದೃಢಪತ್ರ ಸಿಗಲಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸಿದ್ದು, ಮದುವೆ ನೋಂದಣಿ‌ ಅಧಿಕಾರವನ್ನ ನೀಡಲಾಗಿದೆ. ವಿವಾಹ ನೋಂದಣಿ ಮಾಡಿಸಿಕೊಳ್ಳಲು ತಾಲ್ಲೂಕು ಕೇಂದ್ರಗಳಿಗೆ ಬರಬೇಕಿತ್ತು. ಸರ್ಕಾರದ ಈ ಹೊಸ ತೀರ್ಮಾನದಿಂದಾಗಿ ಗ್ರಾಮ ಪಂಚಾಯತಿ ಕೇಂದ್ರ

ವಿವಾಹ ನೋಂದಣಿ ಅಧಿಕಾರಿಯಾಗಿ ಪಿಡಿಒಗಳ ನೇಮಕ; ಸರ್ಕಾರದಿಂದ ಅಧಿಕೃತ ಆದೇಶ Read More »

ವಿವಾದಾತ್ಮಕ ಪೊಸ್ಟ್‌: ಹುಬ್ಬಳ್ಳಿಯಲ್ಲಿ ಗಲಾಟೆ, ಪರಿಸ್ಥಿತಿ ಉದ್ವಿಗ್ನ

ವಾಹನಗಳಿಗೆ ಕಲ್ಲು ತೂರಾಟ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ರಾತ್ರೋ ರಾತ್ರಿ ಮುತ್ತಿಗೆ ಹುಬ್ಬಳ್ಳಿ: ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ನಗರದಲ್ಲಿ

ವಿವಾದಾತ್ಮಕ ಪೊಸ್ಟ್‌: ಹುಬ್ಬಳ್ಳಿಯಲ್ಲಿ ಗಲಾಟೆ, ಪರಿಸ್ಥಿತಿ ಉದ್ವಿಗ್ನ Read More »

ಶಿವಮೊಗ್ಗ: ಹರ್ಷ ಕೊಲೆಗೆ ಪ್ರತೀಕಾರಕ್ಕೆ ಸಂಚು ರೂಪಿಸುತ್ತಿದ್ದ 10 ಮಂದಿ ಬಂಧನ

ಸಮಗ್ರ ನ್ಯೂಸ್: ಹರ್ಷ ಕೊಲೆಗೆ ಪ್ರತೀಕಾರವಾಗಿ ಮುಸ್ಲಿಂ ಯುವಕನ ಹತ್ಯೆಗೆ ಸ್ಕೆಚ್ ಹಾಕಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ ಶಿವಮೊಗ್ಗ ನಗರದ ಪೊಲೀಸರು, ರೌಡಿ ಶೀಟರ್ ಸೇರಿದಂತೆ 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷ ಹತ್ಯೆಯ ಬಳಿಕ, ಮತ್ತೊಂದು ಕೋಮುಗಲಭೆಗೆ ಸಂಚನ್ನು ರೌಡಿ ಶೀಟರ್ ಪ್ರವೀಣ್ ಅಂಡ್ ಟೀಂ ರೂಪಿಸಿತ್ತು ಎನ್ನಲಾಗಿದೆ. ಈ ಮಾಹಿತಿಯನ್ನು ತಿಳಿಯುತ್ತಿದ್ದಂತೆ ದೊಡ್ಡಪೇಟೆ ಠಾಣೆ ಪೊಲೀಸರು, ರೌಡಿ ಶೀಟರ್ ಪ್ರವೀಣ್ ಎಂಬಾತ ಸೇರಿದಂತೆ 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ

ಶಿವಮೊಗ್ಗ: ಹರ್ಷ ಕೊಲೆಗೆ ಪ್ರತೀಕಾರಕ್ಕೆ ಸಂಚು ರೂಪಿಸುತ್ತಿದ್ದ 10 ಮಂದಿ ಬಂಧನ Read More »

”ಕಾಮನ್ ಮ್ಯಾನ್” ಆಗಮನಕ್ಕೆ ಅಂಗಡಿ ಮುಂಗಟ್ಟು ಬಂದ್‌|ಸಿದ್ದರಾಮಯ್ಯ, ಯಡಿಯೂರಪ್ಪ ಭೇಟಿ ಕೊಟ್ಟಾಗಲೂ ಬಂದ್‌ ಆಗಿರಲಿಲ್ಲ| ಬಸವರಾಜ ಬೊಮ್ಮಾಯಿ ಆಗಮನಕ್ಕೆ ಯಾಕೆ?

ಸಮಗ್ರ ನ್ಯೂಸ್: ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ್ದ ಮುಖ್ಯಮಂತ್ರಿಗೆ ಜೀರೊ ಟ್ರಾಫಿಕ್ಸ್‌ ಕಲ್ಪಿಸಲು ಗದಗ ವೀರೇಶ್ವರ ಪುಣ್ಯಾಶ್ರಮದ ಆವರಣದಲ್ಲಿನ ಹೂ, ಹಣ್ಣು, ಕಾಯಿ ಮಾರಾಟ ಮಾಡುತ್ತಿದ್ದ ಸಣ್ಣಪುಟ್ಟ ಅಂಗಡಿಗಳನ್ನು ಪೊಲೀಸರು ಮುಚ್ಚಿಸಿದ್ದು ಜನರ ಆಕ್ರೋಶಕ್ಕೆ ಕಾರಣವಾಯಿತು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ನಗರಕ್ಕೆ ಭೇಟಿ ನೀಡಿದ್ದರು. ಮೊದಲಿಗೆ ತೋಂಟದಾರ್ಯ ಲಿಂಗೈಕ್ಯ ಸಿದ್ದಲಿಂಗ ಮಹಾಸ್ವಾಮಿ ಐಕ್ಯ ಮಂಟಪ ಕಟ್ಟಡ ಉದ್ಘಾಟನೆ ಮಾಡಿದರು. ನಂತರ ವೀರೇಶ್ವರ ಪುಣ್ಯಾಶ್ರಮದ ಪುಟ್ಟರಾಜ ಕವಿಗವಾಯಿಗಳ ಮಠಕ್ಕೆ ಭೇಟಿ ನೀಡಿದರು.

”ಕಾಮನ್ ಮ್ಯಾನ್” ಆಗಮನಕ್ಕೆ ಅಂಗಡಿ ಮುಂಗಟ್ಟು ಬಂದ್‌|ಸಿದ್ದರಾಮಯ್ಯ, ಯಡಿಯೂರಪ್ಪ ಭೇಟಿ ಕೊಟ್ಟಾಗಲೂ ಬಂದ್‌ ಆಗಿರಲಿಲ್ಲ| ಬಸವರಾಜ ಬೊಮ್ಮಾಯಿ ಆಗಮನಕ್ಕೆ ಯಾಕೆ? Read More »

ಮಂಗಳೂರು :ಎಬಿವಿಪಿ ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮಳನ|ಕಾನೂನು ವಿದ್ಯಾರ್ಥಿ ರಾಷ್ಟ್ರದ ಸಮಸ್ಯೆಗಳಿಗೆ ಮಿಡಿಯಬೇಕು – ಸುಭಾಶ್ ಆಡಿ

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಹೋರಾಟಕ್ಕಾಗಿ ಭಾರತದ ವಿಶ್ವದರ್ಜೆಯ ವಕೀಲರು ಸರ್ವಸ್ವವನ್ನು ಮುಡಿಪಿಟ್ಟು ದುಡಿದಿದ್ದಾರೆ. ಅವರೆಲ್ಲರ ಪರಿಶ್ರಮದಿಂದ ಸಂವಿಧಾನ ಮತ್ತು ಅತ್ಯಂತ ಬೃಹತ್ ಪ್ರಜಾಪ್ರಭುತ್ವದ ರಾಷ್ಟ್ರ ನಿರ್ಮಾಣ ಸಾಧ್ಯವಾಗಿದೆ. ಕಾನೂನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಿರಿಯರ ಆದರ್ಶಗಳನ್ನು ಪಾಲಿಸುತ್ತಾ ಇಂದಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಸುಭಾಶ್ ಆಡಿ ಹೇಳಿದರು. ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಯೋಜಿಸಿದ ಎರಡು ದಿನದ ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮೇಳನವನ್ನು

ಮಂಗಳೂರು :ಎಬಿವಿಪಿ ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮಳನ|ಕಾನೂನು ವಿದ್ಯಾರ್ಥಿ ರಾಷ್ಟ್ರದ ಸಮಸ್ಯೆಗಳಿಗೆ ಮಿಡಿಯಬೇಕು – ಸುಭಾಶ್ ಆಡಿ Read More »