ರಾಜ್ಯ

ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ| 40% ಆರೋಪದಲ್ಲಿ ಸಚಿವ ಸ್ಥಾನ ಕಳೆದುಕೊಂಡ ಬಿಜೆಪಿ ಕಟ್ಟಾಳು

ಸಮಗ್ರ ನ್ಯೂಸ್: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಸಂಬಂಧಿಸಿದಂತೆ ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಕ್ಕೆ ಕೆ.ಎಸ್. ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ, ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ತೆರಳಿ ಅಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದಕ್ಕೂ ಮೊದಲು ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಶುಕ್ರವಾರ ಸಿಎಂ ಭೇಟಿಯಾಗಿ ತಮ್ಮ ಸಚಿವ […]

ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ| 40% ಆರೋಪದಲ್ಲಿ ಸಚಿವ ಸ್ಥಾನ ಕಳೆದುಕೊಂಡ ಬಿಜೆಪಿ ಕಟ್ಟಾಳು Read More »

ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ವಿದಿವಶ

ಸಮಗ್ರ ನ್ಯೂಸ್: ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ(67) ವಿಧಿವಶರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮನೆಯಲ್ಲಿ ಬೆಳಗ್ಗೆ 6.45ಕ್ಕೆ ಹೃದಯಾಘಾತದಿಂದ ಕುಸಿದುಬಿದ್ದು ಜಿ.ವಿ.ಶ್ರೀರಾಮರೆಡ್ಡಿ ನಿಧನರಾಗಿದ್ದಾರೆ. ತಕ್ಷಣವೇ ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಪಿಐಎಂ ಪಕ್ಷದಿಂದ ಎರಡು ಭಾರಿ ಶಾಸಕರಾಗಿದ್ದ ಶ್ರೀರಾಮರೆಡ್ಡಿ ಪ್ರಗತಿಪರ ಶಾಸಕರೆಂದೇ ಖ್ಯಾತಿಯಾಗಿದ್ದರು. ಇತ್ತೀಚೆಗೆ CPIM ಪಕ್ಷ ತೊರೆದು ತಮ್ಮದೆ ಪ್ರಜಾ ಸಂಘರ್ಷ ಸಮಿತಿ ಸ್ಥಾಪನೆ ಮಾಡಿ, ಸಾಮಾಜಿಕ ಹೋರಾಟ ಆರಂಭಿಸಿದ್ದರು. ಸಮಾಜದ ಸುಧಾರಣೆಗಾಗಿ ತಮ್ಮನ್ನು ತಾವೇ ಅರ್ಪಿಸಿಕೊಂಡಿದ್ದ ಜಿ.ವಿ.ಎಸ್ ನಿಧನದಿಂದ ಅಪಾರ ಬೆಂಬಲಿಗರಲ್ಲಿ ದುಃಖ ಮಡುಗಟ್ಟಿದೆ.

ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ವಿದಿವಶ Read More »

ರಾಜ್ಯದ ಹಲವೆಡೆ ಮಳೆಯಬ್ಬರ| ಸಿಡಿಲಿಗೆ ಇಬ್ಬರು ಬಲಿ| ಎ.18ರವರೆಗೆ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ರಾತ್ರಿ ಭಾರೀ ಮಳೆಯಾಗಿದ್ದು, ಇಬ್ಬರು ರೈತರು ಸಿಡಿಲಿಗೆ ಬಲಿಯಾಗಿದ್ದಾರೆ. ಬೆಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ, ದ.ಕನ್ನಡ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುರುವಾರ ರಾತ್ರಿ ಭಾರೀ ಮಳೆಯಾಗಿದ್ದು, ಬೆಳಗಾವಿ ಜಿಲ್ಲೆಯ ತುಮ್ಮರ ಗುದ್ದಿ ಗ್ರಾಮದಲ್ಲಿ ಸಿಡಿಲು ಬಡಿದು ಭೀಮಪ್ಪ ಅಡಿವೆಪ್ಪ ಎಂಬುವರು ಸಾವನ್ನಪ್ಪಿದ್ದಾರೆ. ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಜಮೆರೆಮಸಾಬ ಸಾಹೇಬಲಾಲ ಜಾತಗಾರ ಎಂಬುವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲೂ

ರಾಜ್ಯದ ಹಲವೆಡೆ ಮಳೆಯಬ್ಬರ| ಸಿಡಿಲಿಗೆ ಇಬ್ಬರು ಬಲಿ| ಎ.18ರವರೆಗೆ ಆರೆಂಜ್ ಅಲರ್ಟ್ Read More »

ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆ.ಎಸ್.ಈಶ್ವರಪ್ಪ

ಸಮಗ್ರ ನ್ಯೂಸ್: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೇಯನ್ನು ಕೆ.ಎಸ್‌ ಈಶ್ವರಪ್ಪ ನೀಡಿದ್ದಾರೆ. ಈ ಬಗ್ಗೆ ಅವರು ಶಿವಮೊಗ್ಗದಲ್ಲಿ ನಡೆದ ಪ್ರೆಸ್‌ಮೀಟ್‌ನಲ್ಲಿ ಮಾಹಿತಿ ನೀಡಿದರು. ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ನಿನ್ನೆ ತಮ್ಮ ವಿರುದ್ದ ಕೇಳಿ ಬಂದಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ನಾನು ಯಾವುದೇ ಕಾರಣಕ್ಕೂ ನನ್ನ ರಾಜೀನಾಮೆಯನ್ನು ಸಚಿವ ಸ್ಥಾನಕ್ಕೆ ನೀಡೋದಿಲ್ಲ ಅಂತ ಹೇಳಿದ್ದರು, ಇದಲ್ಲದೇ ನಾನು ಇನ್ನೂ ಮೂರು ದಿನಗಳ ಕಾಲ ಮಾಧ್ಯಮಗಳ ಜೊತೆಗೆ ಮಾತನಾಡುವುದಿಲ್ಲ ಅಂತ ಹೇಳಿದ್ದರು,

ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆ.ಎಸ್.ಈಶ್ವರಪ್ಪ Read More »

ಕೋಮು ಸಾಮರಸ್ಯ ಬೆಸೆದ ಬೇಲೂರು ಚೆನ್ನಕೇಶವ ಸನ್ನಿಧಿ| ರಥೋತ್ಸವ ಸಮಯದಲ್ಲಿ ಕುರಾನ್ ಪಠಿಸಿದ ಮುಸ್ಲಿಂ ಬಾಂಧವರು|

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಿಜಾಬ್, ದೇವಸ್ಥಾನದಲ್ಲಿ ವ್ಯಾಪಾರ ನಿಷೇಧ ಹಾಗೂ ಇತರೆ ಹಲವು ವಿಷಯಗಳಲ್ಲಿ ಹಿಂದೂ- ಮುಸ್ಲಿಂ ನಡುವೆ ಧಾರ್ಮಿಕ ವೈಮನಸ್ಯದ ಸ್ಥಿತಿ ನಿರ್ಮಾಣವಾಗಿದೆ. ಹಿಂದೂ- ಮುಸ್ಲಿಂ ನಡುವೆ ಹಲವು ವಿವಾದಗಳ ನಡುವೆಯೂ ರಾಜ್ಯದ ಹಲವೆಡೆ ಎರಡೂ ಧರ್ಮಗಳ ಸಾಮರಸ್ಯ ಮತ್ತು ಸಹೋದರತ್ವ ಬಾಂಧವ್ಯ ಮೇಳೈಸಿದೆ. ಇಂತಹ ಮತ್ತೊಂದು ಸನ್ನಿವೇಶ ಹಾಸನ ಜಿಲ್ಲೆಯ ಬೇಲೂರಿನಲ್ಲಿ‌ ನಡೆದಿದ್ದು, ಇಲ್ಲಿನ‌ ಶ್ರೀ ಚನ್ನಕೇಶವಸ್ವಾಮಿ ರಥೋತ್ಸವದಲ್ಲಿ ನಡೆಯುವ ಕುರಾನ್ ಪಠಣವೂ ಒಂದಾಗಿದೆ. ವಿಶ್ವವಿಖ್ಯಾತ ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ಬ್ರಹ್ಮ ರಥೋತ್ಸವವು

ಕೋಮು ಸಾಮರಸ್ಯ ಬೆಸೆದ ಬೇಲೂರು ಚೆನ್ನಕೇಶವ ಸನ್ನಿಧಿ| ರಥೋತ್ಸವ ಸಮಯದಲ್ಲಿ ಕುರಾನ್ ಪಠಿಸಿದ ಮುಸ್ಲಿಂ ಬಾಂಧವರು| Read More »

ಮೀಸೆ ತಿರುವುತ್ತಿರುವ ಬೇಸಿಗೆ ಮಳೆ| ಇನ್ನೂ ಮೂರ್ನಾಲ್ಕು ದಿನ ಸುರಿಯಲಿದೆ ವರ್ಷಧಾರೆ

ಸಮಗ್ರ ನ್ಯೂಸ್ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 16 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕರ್ನಾಟಕದ ಹಾವೇರಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ

ಮೀಸೆ ತಿರುವುತ್ತಿರುವ ಬೇಸಿಗೆ ಮಳೆ| ಇನ್ನೂ ಮೂರ್ನಾಲ್ಕು ದಿನ ಸುರಿಯಲಿದೆ ವರ್ಷಧಾರೆ Read More »

ಡಬಲ್ ಮಿರರ್, ಡಬಲ್ ಇಂಡಿಕೇಟರ್ ಇಲ್ದಿದ್ರೆ ಬೀಳುತ್ತೆ ದಂಡ| ಅಪಘಾತ ಕಡಿವಾಣಕ್ಕೆ ಹೊಸ ರೂಲ್ಸ್

ಸಮಗ್ರ ನ್ಯೂಸ್: ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಇನ್ಮುಂದೆ ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಇಲ್ಲದೆ ಹೊದರೆ 500 ರೂ.ದಂಡ ವಿಧಿಸಲು ಮುಂದಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಮುಂದಾಗಿದ್ದು, ಈಗ ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಮುಂದಿನ ವಾರದಿಂದಲೇ ಈ ನಿಯಮ ಜಾರಿಗೆ ಬರಲಿದೆ. ನಿಯಮ ಉಲ್ಲಂಘಿಸಿದರೆ 500 ರೂ. ದಂಡ ತೆರಬೇಕಾಗುತ್ತದೆ.

ಡಬಲ್ ಮಿರರ್, ಡಬಲ್ ಇಂಡಿಕೇಟರ್ ಇಲ್ದಿದ್ರೆ ಬೀಳುತ್ತೆ ದಂಡ| ಅಪಘಾತ ಕಡಿವಾಣಕ್ಕೆ ಹೊಸ ರೂಲ್ಸ್ Read More »

ಸಂತೋಷ್ ಆತ್ಮಹತ್ಯೆ ಹಿನ್ನಲೆ| ಅರುಣ್ ಸಿಂಗ್ ರಿಂದ ಹೈಕಮಾಂಡ್ ಗೆ ಗ್ರೌಂಡ್ ರಿಪೋರ್ಟ್; ಸಚಿವ ಈಶ್ವರಪ್ಪ ‌ತಲೆದಂಡ!?

ಸಮಗ್ರ‌ ನ್ಯೂಸ್: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಹೈಕಮಾಂಡ್ ಗೆ ರಿಪೋರ್ಟ್ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಯಾವುದೇ ಕ್ಷಣದಲ್ಲಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ರಾಜ್ಯ ಪ್ರವಾಸದಲ್ಲಿರುವ ಅರುಣ್ ಸಿಂಗ್ ಅವರು ಸಂತೋಷ್ ಪಾಟೀಲ್ ಆತ್ಮಹತ್ಯೆ, ಈಶ್ವರಪ್ಪ ವಿರುದ್ಧದ ಡೆತ್ ನೋಟ್ ಮತ್ತು ಕಾಂಗ್ರೆಸ್ ಡೆಡ್ ಲೈನ್ ಬಗ್ಗೆ ಹೈಕಮಾಂಡ್ ಗೆ ಮಾಹಿತಿ ರವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ರಾಜೀನಾಮೆ ನೀಡುವುದು ಪಕ್ಕಾ ಆಗಿದೆ. ಒಂದು

ಸಂತೋಷ್ ಆತ್ಮಹತ್ಯೆ ಹಿನ್ನಲೆ| ಅರುಣ್ ಸಿಂಗ್ ರಿಂದ ಹೈಕಮಾಂಡ್ ಗೆ ಗ್ರೌಂಡ್ ರಿಪೋರ್ಟ್; ಸಚಿವ ಈಶ್ವರಪ್ಪ ‌ತಲೆದಂಡ!? Read More »

ಈ ಶೈಕ್ಷಣಿಕ ವರ್ಷದಿಂದಲೇ ಪಠ್ಯದಲ್ಲಿ ಭಗವದ್ಗೀತೆ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ಈ ವರ್ಷದಿಂದ ಪಠ್ಯದಲ್ಲಿ ಭಗವದ್ಗೀತೆ ಬೋಧನೆಗೆ ತಯಾರಿ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ,ಶಾಲೆಗಳಲ್ಲಿ ನೈತಿಕ ಶಿಕ್ಷಣಕ್ಕೆ ಒತ್ತು ನೀಡುತ್ತೇವೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಭಗವದ್ಗೀತೆ, ರಾಮಾಯಣ, ಮಹಾಭಾರತ ಸೇರಿ ನೈತಿಕ ಕತೆ ಅಳವಡಿಸಲಾಗುತ್ತದೆ.ಭಗವದ್ಗೀತೆ ಧಾರ್ಮಿಕ ಆಚರಣೆಯಲ್ಲ, ಪೂಜಾ ವಿಧಾನವಲ್ಲ, ಜೀವನಕ್ಕೆ ಬೇಕಾದ ಮಾರ್ಗದರ್ಶನ ಅಡಗಿದೆ ಎಂದು ನಾಗೇಶ್​ ಹೇಳಿದ್ದಾರೆ.

ಈ ಶೈಕ್ಷಣಿಕ ವರ್ಷದಿಂದಲೇ ಪಠ್ಯದಲ್ಲಿ ಭಗವದ್ಗೀತೆ – ಸಚಿವ ಬಿ.ಸಿ ನಾಗೇಶ್ Read More »

ಕನ್ನಡ ಮತ್ತು ಸಂಸ್ಕ್ರತಿ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಗೆ ಕಲಾವಿದರಿಂದ ಆನ್‍ಲೈನ್ ಮೂಲಕ ನೋಂದಾವಣೆಗೆ ಸೂಚನೆ

ಸಮಗ್ರ ನ್ಯೂಸ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಾಹಿತಿಗಳು/ ಕಲಾವಿದರ ದತ್ತಾಂಶ ಸಂಗ್ರಹ ನೊಂದಣಿಯನ್ನು ಮಾ.31ರಂದು ಆರಂಭಿಸಿದ್ದು, ದತ್ತಾಂಶ ಸಂಗ್ರಹ ನೋಂದಣಿಗೆ ಅವಕಾಶ ನೀಡಲಾಗಿದೆ. ಪ್ರತಿಬಾರಿಯೂ ಕಲಾವಿರ ಮಾಹಿತಿಯನ್ನು ಪಡೆದುಕೊಳ್ಳಲು ಪರಾವಲಂಬಣೆ ಮಾಡಬೇಕಾಗಿರುತ್ತದೆ. ಈ ಕಲಾವಿದರ ದತ್ತಾಂಶ ಸಂಗ್ರಹದ ಪ್ರಕ್ರಿಯೆಯಿಂದ ರಾಜ್ಯದ ಕಲಾವಿದರ ಸಂಪೂರ್ಣ ಮಾಹಿತಿಯನ್ನು ದತ್ತಾಂಶ ರೂಪದಲ್ಲಿ ಸಂಗ್ರಹ ಮಾಡುವ ಈ ಅಭಿಯಾನ ಕಲಾವಿದರ ಸಮಗ್ರ ಮಾಹಿತಿ ಪೂರೈಸುವುದರಿಂದ ಇಲಾಖೆ ನೋಂದಣಿ ಮಾಡಿಕೊಳ್ಳಲು ಸೂಚಿಸಿದೆ. ದತ್ತಾಂಶ ಸಂಗ್ರಹ ರಾಜ್ಯದಾದ್ಯಂತ ಮತ್ತು ಹೊರರಾಜ್ಯಗಳು ಹಾಗೂ ಹೊರದೇಶಿಗಳಿಂದಲೂ ಕಲಾವಿದರು

ಕನ್ನಡ ಮತ್ತು ಸಂಸ್ಕ್ರತಿ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಗೆ ಕಲಾವಿದರಿಂದ ಆನ್‍ಲೈನ್ ಮೂಲಕ ನೋಂದಾವಣೆಗೆ ಸೂಚನೆ Read More »