‘ಪದೇ ಪದೇ ಹೇಳುವ ಅಭ್ಯಾಸ ನನಗಿಲ್ಲ, ಕಾಲಮಿತಿಯೊಳಗೆ ಕೆಲಸ ಮಾಡಿ’ – ಅಧಿಕಾರಿಗಳಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ತಾಕೀತು
ಸಮಗ್ರ ನ್ಯೂಸ್ ಡೆಸ್ಕ್: ‘ಒಂದು ಕೆಲಸವನ್ನು ಮಾಡುವಂತೆ ಅಥವಾ ಆದೇಶವನ್ನು ಪಾಲಿಸುವಂತೆ ಒಂದು ಬಾರಿ ಮಾತ್ರ ಹೇಳುವ ಸ್ವಭಾವ ನನ್ನದು. ಅದೇ ಕೆಲಸವನ್ನು ಮಾಡುವಂತೆ ಅಥವಾ ಆದೇಶವನ್ನು ಪಾಲಿಸುವಂತೆ ಎರಡನೇ ಬಾರಿ ನೆನಪಿಸುವ ಅಭ್ಯಾಸ ನನಗಿಲ್ಲ. ಹಾಗಾಗಿ ಅಧಿಕಾರಿ, ಸಿಬ್ಬಂದಿಗಳೆಲ್ಲರೂ ಕಾಲಮಿತಿಯೊಳಗೆ ಕೆಲಸ ಮಾಡಬೇಕು’ ಎಂದು ದ.ಕ.ಜಿಲ್ಲಾ ನೂತನ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು. ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ […]









