ರಾಜ್ಯ

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ| ವಿಷಯವಾರು ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು: ಕೊರೋನಾ ಸೋಂಕಿನ ನಡುವೆಯೂ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸೋದಕ್ಕೆ ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಇದೀಗ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಂತೆ ಮಾ. 28ರಿಂದ ಪರೀಕ್ಷೆ ಆರಂಭಗೊಂಡು, ಏಪ್ರಿಲ್ 11ರಂದು ಮುಕ್ತಾಯಗೊಳ್ಳಲಿದೆ. ಹೀಗಿದೆ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವಿಷಯವಾರು ವೇಳಾಪಟ್ಟಿ ದಿನಾಂಕ 28-03-2022ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, […]

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ| ವಿಷಯವಾರು ವೇಳಾಪಟ್ಟಿ ಇಲ್ಲಿದೆ Read More »

ಕೊರೊನಾ ಹಿನ್ನಲೆ: ಪ್ರೋ ಕಬಡ್ಡಿಯಲ್ಲಿ ಇಂದಿನಿಂದ ಜ.28ರ ವರೆಗೆ ಪ್ರತಿದಿನ ಒಂದೇ ಪಂದ್ಯ|

ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಪಂದ್ಯಾಟಕ್ಕೆ ಕೊರೊನಾ ಅಡ್ಡಿಯಾಗಿದ್ದು 2 ತಂಡದ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮಶಾಲ್ ಸ್ಪೋರ್ಟ್ಸ್ ಆಯೋಜಕತ್ವದಲ್ಲಿ ವಿವೋ ಪ್ರೊ ಕಬಡ್ಡಿ 8ನೇ ಆವೃತ್ತಿ ಬೆಂಗಳೂರಿನ ವೈಟ್‍ಫೀಲ್ಡ್‌ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ಹಾಗೂ ಕನ್ವೆನ್ಷನ್ ಸೆಂಟರ್‌ನಲ್ಲಿ ಕಠಿಣ ಬಯೋ ಬಬಲ್ ಮೂಲಕ ಟೂರ್ನಿ ನಡೆಯುತ್ತಿದೆ. ಆದರೆ ಇದೀಗ ಪಾಟ್ನಾ ಪೈರೇಟ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡದ ಕೆಲ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ 2 ತಂಡಗಳ ಕೆಲ ಪಂದ್ಯಗಳನ್ನು ಮುಂದೂಡಲಾಗಿದೆ.

ಕೊರೊನಾ ಹಿನ್ನಲೆ: ಪ್ರೋ ಕಬಡ್ಡಿಯಲ್ಲಿ ಇಂದಿನಿಂದ ಜ.28ರ ವರೆಗೆ ಪ್ರತಿದಿನ ಒಂದೇ ಪಂದ್ಯ| Read More »

ಶೈಕ್ಷಣಿಕ ಸಂಸ್ಥೆಗಳು ಧರ್ಮಾಚರಣೆಗಳ ಕೇಂದ್ರವಲ್ಲ| ಹಿಜಾಬ್ ಕುರಿತು ಶಿಕ್ಷಣ ಸಚಿವರ ಪ್ರತಿಕ್ರಿಯೆ|

ಬೆಂಗಳೂರು: ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜೊಂದರಲ್ಲಿ ಉದ್ಭವಿಸಿರುವ ‘ಹಿಜಾಬ್‌’ (ಶಿರವಸ್ತ್ರ) ವಿವಾದ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೂ ಸಮವಸ್ತ್ರ ಪರಿಚಯಿಸಬಹುದಾ? ಎಂಬ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಇಡಲು ಇಲಾಖೆ ಮುಂದಾಗಿದೆ. ಕೆಲವು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಈ ಕುರಿತು ಬೇಡಿಕೆ ಇಟ್ಟು ಮೂರು ವಾರಗಳಿಂದ ತರಗತಿಯಿಂದ ಹೊರಗೆ ಉಳಿದಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಈ ಕುರಿತು

ಶೈಕ್ಷಣಿಕ ಸಂಸ್ಥೆಗಳು ಧರ್ಮಾಚರಣೆಗಳ ಕೇಂದ್ರವಲ್ಲ| ಹಿಜಾಬ್ ಕುರಿತು ಶಿಕ್ಷಣ ಸಚಿವರ ಪ್ರತಿಕ್ರಿಯೆ| Read More »

ಈ ವರ್ಷ ಕೊರೊನಾ ಪಾಸ್ ಇಲ್ಲ| ಹತ್ತನೇ ತರಗತಿ ಪರೀಕ್ಷೆ ನಡೆಯುತ್ತೆ- ಸಚಿವ ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ.

ಈ ವರ್ಷ ಕೊರೊನಾ ಪಾಸ್ ಇಲ್ಲ| ಹತ್ತನೇ ತರಗತಿ ಪರೀಕ್ಷೆ ನಡೆಯುತ್ತೆ- ಸಚಿವ ನಾಗೇಶ್ Read More »

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌ ಬಂದಿತ್ತು. ಆಗಲೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಎರಡು ಡೋಸ್ ಕೋವಿಡ್ ಲಸಿಕೆ ಕೂಡ ದೇವೇಗೌಡರು ಪಡೆದಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಕೋವಿಡ್ ಪಾಸಿಟಿವ್ Read More »

ಕುಕ್ಕೆ: ಸರ್ಕಾರ ಒಪ್ಪಿದರೆ ಸೇವೆಗೆ ಅವಕಾಶ- ಡಿಸಿ

ಕುಕ್ಕೆಸುಬ್ರಹ್ಮಣ್ಯ: ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ, ಸೇವೆಗಳಿಗೆ ಬೇಡಿಕೆ ಇರುತ್ತದೆ. ಈ ನಿಟ್ಟಿನಲ್ಲಿ ಮುಂದಿನ ವಾರ ದೇವಸ್ಥಾನಗಳ ಆಡಳಿತ ಮಂಡಳಿ, ಅಧಿಕಾರಿಗಳು, ಜನಪ್ರತಿನಿಧಿಗಳ ಜತೆ ಸಭೆ ನಡೆಸಿ ಚರ್ಚಿಸುತ್ತೇವೆ. ಸರಕಾರ ಒಪ್ಪಿಗೆ ಸೂಚಿಸಿದಲ್ಲಿ ಮುಂದಿನ ವಾರದಿಂದ ಸೇವೆಗಳನ್ನು ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಕುಮಾರ್‌ ಜತೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕುಕ್ಕೆ: ಸರ್ಕಾರ ಒಪ್ಪಿದರೆ ಸೇವೆಗೆ ಅವಕಾಶ- ಡಿಸಿ Read More »

ರಾಜ್ಯದ ಜನತೆಗೆ ಮತ್ತೆ ಶಾಕ್ ಟ್ರೀಟ್ ಮೆಂಟ್ ನೀಡಲು ರೆಡಿಯಾದ ಸರ್ಕಾರ| ಬೆಲೆ ಏರಿಕೆ ಅನಿವಾರ್ಯ ಎಂದ ಸಚಿವ ಸುನಿಲ್‌ಕುಮಾರ್

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಇಂಧನ ಸಚಿವ ಸುನಿಲ್ ಕುಮಾರ್ ಬಿಗ್ ಶಾಕ್ ನೀಡಿದ್ದು, ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯ, ನಾವು ಕೆಲವೊಂದು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ. ಬೇರೆ ಬೇರೆ ಇಲಾಖೆಗಳಿಂದ 12 ಸಾವಿರ ಕೋಟಿ ರೂ. ಬರಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ ಸೇರಿ ಹಲವು ಇಲಾಖೆಗಳಿಂದ ಹಣ ಬಾಕಿ ಇದೆ. ಹೀಗಾಗಿ ವಿದ್ಯುತ್ ದರ ಏರಿಕೆ ಮಾಡಲಾಗುವುದು

ರಾಜ್ಯದ ಜನತೆಗೆ ಮತ್ತೆ ಶಾಕ್ ಟ್ರೀಟ್ ಮೆಂಟ್ ನೀಡಲು ರೆಡಿಯಾದ ಸರ್ಕಾರ| ಬೆಲೆ ಏರಿಕೆ ಅನಿವಾರ್ಯ ಎಂದ ಸಚಿವ ಸುನಿಲ್‌ಕುಮಾರ್ Read More »

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ರದ್ದು

ಬೆಂಗಳೂರು: ವಿಕೆಂಡ್ ಕರ್ಫ್ಯೂಗೆ ವ್ಯಕ್ತವಾಗಿರುವ ಜನಾಕ್ರೋಶ ಮತ್ತು ಅಪಸ್ವರದ ಕಾರಣದಿಂದಾಗಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡಲಾಗಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಉನ್ನತಮಟ್ಟದ ಸಭೆಯಲ್ಲಿ, ವೀಕೆಂಡ್ ಕರ್ಫ್ಯೂ ರದ್ದತಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದೇ ವೇಳೆ, ನೈಟ್ ಕರ್ಫ್ಯೂ ಅವಧಿಯನ್ನು ಕಡಿತ ಮಾಡಲಾಗಿದೆ. ರಾತ್ರಿ 11ರಿಂದ ರಾತ್ರಿ ನೈಟ್ ಕರ್ಫ್ಯೂ ಶುರುವಾಗಿ ಬೆಳಗಿನ ಜಾವ ಐದಕ್ಕೆ ಅಂತ್ಯವಾಗಲಿದೆ. ಆದರೆ ಹೋಟೆಲ್ ರೆಸ್ಟೋರೆಂಟ್ಗಳಲ್ಲಿ ಈಗಿರುವ 50-50 ನಿಯಮಗಳನ್ನು ಮಾತ್ರ ಮುಂದುವರೆಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ರದ್ದು Read More »

ವೀಕೆಂಡ್ ಕರ್ಪ್ಯೂ ಕುರಿತು ಇಂದು ಸಿಎಂ ಸಭೆ| ‌ ಮಧ್ಯಾಹ್ನ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಮಧ್ಯಾಹ್ನದ ವೇಳೆಗೆ ಹೊಸ ಮಾರ್ಗಸೂಚಿ ಜಾರಿಯಾಗುವ ಸಾಧ್ಯತೆಯಿದೆ. ವೀಕೆಂಡ್ ಕರ್ಫ್ಯೂ ಕೈಬಿಡಬೇಕೆಂಬ ಒತ್ತಾಯ ತೀವ್ರವಾಗಿರುವ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಜನಸಾಮಾನ್ಯರು

ವೀಕೆಂಡ್ ಕರ್ಪ್ಯೂ ಕುರಿತು ಇಂದು ಸಿಎಂ ಸಭೆ| ‌ ಮಧ್ಯಾಹ್ನ ಹೊಸ ಮಾರ್ಗಸೂಚಿ ಪ್ರಕಟ Read More »

ಸುಳ್ಯ: ನ್ಯಾಯಾಂಗ ಇತಿಹಾಸದಲ್ಲೇ ಮೊದಲಬಾರಿಗೆ 4 ಪ್ರಕರಣಗಳು ಇತ್ಯರ್ಥ| ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾ| ಸೋಮಶೇಖರ್

ಸುಳ್ಯ: ಇತಿಹಾಸದಲ್ಲಿ ಪ್ರಥಮ ಬಾರಿಗೆ ನ್ಯಾಯಾಲಯದಲ್ಲಿ ಒಂದೇ ದಿನ ನಾಲ್ಕು ಪ್ರಕರಣಗಳಲ್ಲಿ ಆರೊಪಿಗಳಿಗೆ ಶಿಕ್ಷೆ ವಿಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನ್ಯಾಯಾಲಯ ತೀರ್ಪು ನೀಡಿ ಐತಿಹಾಸಿಕ ಹೆಜ್ಜೆ ಇರಿಸಿದೆ. ಪ್ರಕರಣ 1:ಸುಳ್ಯ ತಾ| ಕೊಡಿಯಾಲ ಗ್ರಾಮದ ಕಲ್ಪಡಬೈಲು ಪಟ್ಟೆ ಎಂಬಲ್ಲಿಯ ರಾಧಾಕಷ್ಣ ರೈ ಎಂಬವರು ತನ್ನ ಮನೆಯಲ್ಲಿ ಅಕ್ರಮವಾಗಿ ಮದ್ಯದ ಬಾಟಲಿ ಗಳನ್ನು ಇರಿಸಿಕೊಂಡು ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಶೇಖರಿಸಿ ಇಟ್ಟುಕೊಂಡಿದ್ದಾರೆ ಎಂಬುದಾಗಿ ಆಗಿನ

ಸುಳ್ಯ: ನ್ಯಾಯಾಂಗ ಇತಿಹಾಸದಲ್ಲೇ ಮೊದಲಬಾರಿಗೆ 4 ಪ್ರಕರಣಗಳು ಇತ್ಯರ್ಥ| ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾ| ಸೋಮಶೇಖರ್ Read More »