ರಾಜ್ಯ

ಮಳೆ ಅನಾಹುತ; ಸಿಡಿಲಿಗೆ ಯುವಕ ಬಲಿ, ಎತ್ತುಗಳು ಆಹುತಿ

ಸಮಗ್ರ ನ್ಯೂಸ್: ಮಳೆ ಅನಾಹುತದಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬಂಕನೇರಿ ಗ್ರಾಮದಲ್ಲಿ ನಡೆದಿದೆ. ನಾಗರಾಜ (22) ಮೃತಪಟ್ಟವರು. ಶೇಂಗಾ ಬೆಳೆಯ ಬಣವೆಗೆ ತಾಡಪಲ್ ಹೊದಿಸುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಅಲ್ಲದೇ, ಗಾಳಿ ಮಳೆಗೆ ಮನೆ ಪತ್ರಾಸ್​ಗಳು ಹಾರಿ ಹೋಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ವಿಜಯಪುರ ನಗರ, ಆಲಮಟ್ಟಿ, ತಾಳಿಕೋಟೆ ಸಿಂದಗಿ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಕಳೆದ […]

ಮಳೆ ಅನಾಹುತ; ಸಿಡಿಲಿಗೆ ಯುವಕ ಬಲಿ, ಎತ್ತುಗಳು ಆಹುತಿ Read More »

ಚಂದ್ರು ಹತ್ಯೆ ಪ್ರಕರಣ| ಸಿಐಡಿ‌ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಬೆಂಗಳೂರಿನ ಜೆ.ಜೆ. ನಗರದಲ್ಲಿ ಚಂದ್ರು ಕೊಲೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚಿಸಿದ್ದೇನೆ. ನಿನ್ನೆ ಡಿಜಿ, ಐಜಿಪಿ ಮತ್ತು ಕಮಿಷನರ್ ಕರೆದು ಮಾತನಾಡಿದ್ದೇನೆ. ಇಂದು ನಗರ ಪೊಲೀಸ್ ಆಯುಕ್ತರು ಸಿಐಡಿಗೆ ಚಂದ್ರು ಹತ್ಯೆ ಕೇಸ್ ಹಸ್ತಾಂತರ ಮಾಡಲಿದ್ದಾರೆ.ಆರೋಪ ಪ್ರತ್ಯಾರೋಪ ಏನೇ ಇರಲಿ ಸತ್ಯ ಹೊರಬರಲೇಬೇಕು ಎಂದು

ಚಂದ್ರು ಹತ್ಯೆ ಪ್ರಕರಣ| ಸಿಐಡಿ‌ ತನಿಖೆಗೆ ರಾಜ್ಯ ಸರ್ಕಾರ ಆದೇಶ Read More »

ಕರಾವಳಿ ಸೇರಿದಂತೆ ರಾಜ್ಯದ್ಯಂತ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ರಾಜ್ಯಾದ್ಯಂತ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಬೆಂಗಳೂರು, ಮೈಸೂರು, ಹಾಸನದಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ

ಕರಾವಳಿ ಸೇರಿದಂತೆ ರಾಜ್ಯದ್ಯಂತ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ Read More »

ಮಳೆ ಅವಾಂತರ: ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಮರ ಬಿದ್ದು ಜಖಂಗೊಂಡ ಯಾತ್ರಾರ್ಥಿಗಳ ಕಾರು|

ಸಮಗ್ರ ನ್ಯೂಸ್: ಅವಿಭಜಿತ ಸುಳ್ಯ ತಾಲೂಕಿನಲ್ಲಿ ಇಂದು ಸಂಜೆ ಭಾರೀ ಮಳೆ‌ಸುರಿದಿದ್ದು, ಮಳೆ ಅವಾಂತರಕ್ಕೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯಾತ್ರಾರ್ಥಿಗಳ ಕಾರು ಜಖಂಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಶನಿವಾರ ಸಂಜೆಯ ಬಾರೀ ಗುಡುಗು ಸಹಿತ ಗಾಳಿ ಮಳೆಗೆ ಕಾರೊಂದರ ಮೇಲೆ ಮರದ ರೆಂಬೆ ಮುರಿದು ಬಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದ ಬಳಿಯಲ್ಲಿ ಘಟನೆ ನಡೆದಿದ್ದು, ದಾವಣಗೆರೆಯಿಂದ ಯಾತ್ರಿಕರಾಗಿ ಬಂದಿರುವವರ ಕಾರು ಘಟನೆಯಲ್ಲಿ ಜಖಂಗೊಂಡಿರುವುದು ಎಂದು ತಿಳಿದುಬಂದಿದೆ. ಇಲ್ಲಿನ ಬೃಹತ್ ಮರದ ರೆಂಬೆ ಮುರಿದು

ಮಳೆ ಅವಾಂತರ: ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಮರ ಬಿದ್ದು ಜಖಂಗೊಂಡ ಯಾತ್ರಾರ್ಥಿಗಳ ಕಾರು| Read More »

ಪುತ್ತೂರು ಜಾತ್ರೆಗೂ ತಟ್ಟಿದ ಧರ್ಮದ್ವೇಷ| ಅನ್ಯಮತೀಯರ ಅಟೋ ಬಳಸದಂತೆ ಕ್ಯಾಂಪೇನ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವಾಗ ಅನ್ಯಧರ್ಮೀಯರ ಕ್ಯಾಬ್ ಬಳಸದಂತೆ ಕರೆ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಮತ್ತೊಂದು ಅಭಿಯಾನ ಆರಂಭವಾಗಿದೆ. ಹತ್ತು ದಿನಗಳ ಕಾಲ ನಡೆಯುವ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ವೇಳೆ ಹಿಂದೂಗಳು ಭಗವಾ ಧ್ವಜ ಇರುವ ಹಿಂದೂಗಳ ಆಟೋವನ್ನು ಹೊರತುಪಡಿಸಿ ಇತರ ಆಟೋಗಳನ್ನು ಬಳಸದಂತೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ವ್ಯಾಪಾರ ನಿರ್ಬಂಧದ

ಪುತ್ತೂರು ಜಾತ್ರೆಗೂ ತಟ್ಟಿದ ಧರ್ಮದ್ವೇಷ| ಅನ್ಯಮತೀಯರ ಅಟೋ ಬಳಸದಂತೆ ಕ್ಯಾಂಪೇನ್ Read More »

ಮಂಗಳೂರು: ಡಿವೈಡರ್ ಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯೂ| ಸ್ಕೂಟಿ ಸವಾರೆ ಗಂಭೀರ

ಸಮಗ್ರ ನ್ಯೂಸ್: ಅತಿವೇಗದಿಂದ ಚಲಿಸುತ್ತಿದ್ದ ಬಿಎಂಡಬ್ಲ್ಯು ಕಾರು ಡಿವೈಡರ್ ಮೇಲಕ್ಕೆ ಹಾರಿ ಮತ್ತೊಂದು ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ಬಲ್ಲಾಳ್‌ಬಾಗ್‌ನಲ್ಲಿ ನಡೆದಿದೆ. ಬಿಎಂಡಬ್ಲ್ಯು ಕಾರು ಚಾಲಕ ಮದ್ಯ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ರಸ್ತೆ ದಾಟಲು ಡಿವೈಡರ್ ಮೇಲೆ ನಿಂತಿದ್ದ ಇನ್ನೋರ್ವ ಮಹಿಳೆಯು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಡಿವೈಡರ್ ಮೇಲಿಂದ ಹಾರಿ ರಸ್ತೆಯ ಇನ್ನೊಂದು ಬದಿಗೆ ಬರುತ್ತಿರುವ ಸಂಪೂರ್ಣ

ಮಂಗಳೂರು: ಡಿವೈಡರ್ ಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯೂ| ಸ್ಕೂಟಿ ಸವಾರೆ ಗಂಭೀರ Read More »

ಪ್ರಚೋದನಕಾರಿ ಹೇಳಿಕೆ; ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೆಲ ದಿನಗಳ ಹಿಂದೆ ನಗರದಲ್ಲಿ ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬುದಾಗಿ ಅವರ ವಿರುದ್ಧ ದೂರು ದಾಖಲಿಸುವಂತೆ ಕೋರ್ಟ್ ಮೊರೆ ಹೋಗಲಾಗಿತ್ತು. ಈ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್,

ಪ್ರಚೋದನಕಾರಿ ಹೇಳಿಕೆ; ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು Read More »

ಹುಬ್ಬಳ್ಳಿ: ಸೈಯದ್ ವೆಡ್ಸ್ ಸ್ನೇಹಾ; ಲವ್ ಜಿಹಾದ್ ಗೆ ಪುಲ್ ಸ್ಟಾಪ್| ಆತನೊಂದಿಗೇ ಬಾಳುವೆ ಎಂದ ಯುವತಿ

ಸಮಗ್ರ ನ್ಯೂಸ್:: ಮುಸ್ಲಿಂ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಯುವತಿ, ‘ನಾನು ಮತ್ತೆ ಮನೆಗೆ ವಾಪಸ್ ಹೋಗುವುದಿಲ್ಲ. ಪತಿ ಜೊತೆಯೇ ಬದುಕುತ್ತೇನೆ. ನನ್ನ ಪಾಡಿಗೆ ಬಿಟ್ಟಬಿಡಿ’ ಎಂದು, ತಮ್ಮ ಅಂತರ ಧರ್ಮೀಯ ಪ್ರೇಮ ವಿವಾಹದ ಸುತ್ತ ಎದ್ದಿದ್ದ ‘ಲವ್ ಜಿಹಾದ್’ ಆರೋಪಕ್ಕೆ ತೆರೆ ಎಳೆದರು. ನಗರದ ಹಳೇ ಹುಬ್ಬಳ್ಳಿಯ ಮುಸ್ಲಿಂ ಯುವಕ ಇಬ್ರಾಹಿಂ ಸೈಯದ್ ಅವರನ್ನು ಉಣಕಲ್‌ನ ಹಿಂದೂ ಯುವತಿ ಸ್ನೇಹಾ ಢಮಾಮಘರ ಅವರು, ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಫೆ. 11ರಂದು ಮದುವೆಯಾಗಿದ್ದರು. ವಿಷಯ ತಿಳಿದು ಕುಟುಂಬದವರು, ಸ್ಥಳೀಯ

ಹುಬ್ಬಳ್ಳಿ: ಸೈಯದ್ ವೆಡ್ಸ್ ಸ್ನೇಹಾ; ಲವ್ ಜಿಹಾದ್ ಗೆ ಪುಲ್ ಸ್ಟಾಪ್| ಆತನೊಂದಿಗೇ ಬಾಳುವೆ ಎಂದ ಯುವತಿ Read More »

ಕರಾವಳಿ, ಮಲೆನಾಡಿನ ಹಲವೆಡೆ ಭಾರೀ ಮಳೆ ನಿರೀಕ್ಷೆ| 4 ದಿನ ಮುಂದುವರಿಯಲಿದೆ ವರ್ಷಧಾರೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 11 ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ

ಕರಾವಳಿ, ಮಲೆನಾಡಿನ ಹಲವೆಡೆ ಭಾರೀ ಮಳೆ ನಿರೀಕ್ಷೆ| 4 ದಿನ ಮುಂದುವರಿಯಲಿದೆ ವರ್ಷಧಾರೆ Read More »

ಮತ್ತೆ ಬೆಚ್ಚಿಬಿದ್ದ ಶಿವಮೊಗ್ಗ| ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನ ಮೇಲೆ ಮಾರಣಾಂತಿಕ ದಾಳಿ|

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮಾಸುವ ಮುನ್ನವೇ ಶಿವಮೊಗ್ಗ ನಗರದಲ್ಲಿ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮಧು (21) ಎಂಬಾತನ ಮೇಲೆ ಅನ್ಯಕೋಮಿನ 6 ಯುವಕರ ತಂಡ ಹಲ್ಲೆ ನಡೆಸಿದ್ದಾರೆ. ಹೂವಿನ ವ್ಯಾಪಾರಿಯಾಗಿರುವ ಮಧು, ಮಂಡ್ಲಿ ಬಡಾವಣೆಯಲ್ಲಿ ಹೂವು ವಿತರಣೆಗೆ ಹೋಗಿದ್ದಾನೆ. ಈ ವೇಳೆ ಲಾಂಗು-ಮಚ್ಚು ಝಳಪಿಸುತ್ತ ಓಡಿಸಿಕೊಂಡು ಬಂದ ಅನ್ಯಕೋಮಿನ ಯುವಕರು

ಮತ್ತೆ ಬೆಚ್ಚಿಬಿದ್ದ ಶಿವಮೊಗ್ಗ| ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನ ಮೇಲೆ ಮಾರಣಾಂತಿಕ ದಾಳಿ| Read More »