ರಾಜ್ಯ

ಮೂಲ್ಕಿ | ಫೇಸ್‌ಬುಕ್‌ನಲ್ಲಿ ಇಸ್ರೇಲ್ ಪರ ಸಂದೇಶ; ಬೇಕರಿ ಮಾಲೀಕನ ಮೇಲೆ ಹಲ್ಲೆ- ಐವರು ಯುವಕರ ಬಂಧನ

ಮೂಲ್ಕಿ: ಫೇಸ್‌ಬುಕ್‌ನಲ್ಲಿ ಇಸ್ರೇಲ್ ಪರ ಸಂದೇಶ ಹಾಕಿದ ಕಾರಣಕ್ಕೆ ಬೇಕರಿಯಲ್ಲಿ ದಾಂಧಲೆ ನಡೆಸಿ, ಮಾಲೀಕನಿಗೆ ಹಲ್ಲೆ ಮಾಡಿದ ಆರೋಪದಲ್ಲಿ ಐವರು ಯುವಕರನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಘಟನಾ ವಿವರ: ಕಾರ್ನಾಡಿನ ಐಶಾನಿ ಬೇಕರಿ ನಡೆಸುತ್ತಿರುವ ಕುಂದಾಪುರ ಮೂಲದ ಸುರತ್ಕಲ್ ನಿವಾಸಿ ಯುವಕ ಫೇಸ್‌ಬುಕ್‌ನ ತನ್ನ ಖಾತೆಯಲ್ಲಿ, ಇಸ್ರೇಲ್ ಘಟನೆ ಬಗ್ಗೆ ಸಂದೇಶ ಹಾಕಿ ಪ್ಯಾಲಿಸ್ತೇನ್ ಉಗ್ರರ ವಿರುದ್ಧ ಕೈಗೊಂಡ ಕ್ರಮವನ್ನು ಬೆಂಬಲಿಸಿದ್ದರು. ಈ ಬಗ್ಗೆ ಆಕ್ರೋಶಗೊಂಡ ಸ್ಥಳೀಯ ಯುವಕರು ಬೇಕರಿಗೆ ನುಗ್ಗಿ ಬೆದರಿಕೆ ಹಾಕಿದ್ದಲ್ಲದೆ, ಯುವಕನಿಂದ ಕ್ಷಮೆ […]

ಮೂಲ್ಕಿ | ಫೇಸ್‌ಬುಕ್‌ನಲ್ಲಿ ಇಸ್ರೇಲ್ ಪರ ಸಂದೇಶ; ಬೇಕರಿ ಮಾಲೀಕನ ಮೇಲೆ ಹಲ್ಲೆ- ಐವರು ಯುವಕರ ಬಂಧನ Read More »

ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಮಾತು | ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ ಬಿಎಸ್ ವೈ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ಬದಲಾವಣೆ ಎಂಬ ವಿಚಾರದಲ್ಲಿ ರಾಜ್ಯ ರಾಜಕಾರಣ ಮುಳುಗಿ ಹೋದಂತಿದೆ. ಈ ಕುರಿತು ಸ್ವತ: ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಸ್ಥಾನಕ್ಕೆ ಕೆಲ ನಾಯಕರ ಹೆಸರು ಕೇಳಿಬರುತ್ತಿದೆ. ಪ್ರತಿನಿತ್ಯ ನನ್ನ ಬಳಿ ಬರುವವರ, ಜತೆಯಲ್ಲಿಯೇ ಇರುವವರ ಹೆಸರೇ ಕೇಳಿಬರುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಆಪ್ತ ಸಚಿವರ ಬಳಿ ಚರ್ಚೆ ವೇಳೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಜೂನ್ 7ರಂದು ಬಿಜೆಪಿ ಶಾಸಕಾಂಗ ಪಕ್ಷದ

ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಮಾತು | ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ ಬಿಎಸ್ ವೈ Read More »

ನೀರಿನ ಟ್ಯಾಂಕ್ ಗೆ ಬಿದ್ದ ಚಿರತೆಯ ರಕ್ಷಣೆ

ಕುಂದಾಪುರ:ಆಹಾರ ಹುಡುಕಿಕೊಂಡು ಬಂದು ನೀರಿನ ಟ್ಯಾಂಕ್ ಒಳಗೆ ಬಿದ್ದ ಚಿರತೆಯೊಂದನ್ನು ರಕ್ಷಿಸಲಾದ ಘಟನೆ ಮಂಗಳವಾರ ನಡೆದಿದೆ. ಕೊಡ್ಲಾಡಿಯ ಚಂದ್ರ ಶೆಟ್ಟಿಯವರ ಮನೆಯ ನೀರಿನ ಟ್ಯಾಂಕ್ ಗೆ ೫ ವರ್ಷದ ಗಂಡು ಚಿರತೆ ಮಂಗಳವಾರ ಮುಂಜಾನೆ ವೇಳೆಗೆ ಬಿದ್ದಿದೆ ಎನ್ನಲಾಗಿದ್ದು, ಮಧ್ಯಾಹ್ನ ಮನೆಯವರು ಗಮನಿಸಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿರತೆಯನ್ನು ಅರಣ್ಯಧಿಕಾರಿಗಳು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನೀರಿನ ಟ್ಯಾಂಕ್ ಗೆ ಬಿದ್ದ ಚಿರತೆಯ ರಕ್ಷಣೆ Read More »

ಕರುನಾಡಿನ ಬೀಗ ತೆರೆಯುವ ಕಾರ್ಯ ಸದ್ಯಕ್ಕಿಲ್ಲ | ಅಗತ್ಯ ಸಂಚಾರಕ್ಕೆ ಸಿಗಲಿದೆ ಅನುಮತಿ | ಹೋಮ್ ಐಸೋಲೇಶನ್ ಬದಲು ಟ್ರಯಾಸ್ ಸೆಂಟರ್

ಬೆಂಗಳೂರು: ಬಹುತೇಕ ನಿಯಂತ್ರಣದ ಹೊರತಾಗಿ, ಹೇರಲಾದ ಲಾಕ್ಡೌನ್ ತೆರವುಗೊಳಿಸಿದರೆ, ಮತ್ತೆ ಸಂಕಷ್ಟ ಎದುರಾದರೆ ಲಾಕ್ಡೌನ್ ಹೇರುವುದು ಕಠಿಣವಾಗಲಿದೆ ಎಂಬ ತಜ್ಞರ ಅಭಿಪ್ರಾಯದ ಮೇರೆಗೆ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಪ್ರಸ್ತುತ ಹೇರಲಾಗಿರುವ ಲಾಕ್​ಡೌನ್​ ತೆರವುಗೊಳಿಸುವ ಕಾರ್ಯ ಸದ್ಯಕ್ಕಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,000 ಹಾಗೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 500ಕ್ಕೆ ಇಳಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಅನ್‌ಲಾಕ್ ಮಾಡದಿರುವ ತೀರ್ಮಾನಿಸಲಾಗಿದ್ದು, ಇನ್ನಷ್ಟು

ಕರುನಾಡಿನ ಬೀಗ ತೆರೆಯುವ ಕಾರ್ಯ ಸದ್ಯಕ್ಕಿಲ್ಲ | ಅಗತ್ಯ ಸಂಚಾರಕ್ಕೆ ಸಿಗಲಿದೆ ಅನುಮತಿ | ಹೋಮ್ ಐಸೋಲೇಶನ್ ಬದಲು ಟ್ರಯಾಸ್ ಸೆಂಟರ್ Read More »

ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಚಾಮರಾಜನಗರ: ತಾಲೂಕಿನ ಪುಣಜನೂರು ಬಳಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ದೊಡ್ಡ ಮೂಡಹಳ್ಳಿ ಗ್ರಾಮದ ನಂದೀಶ್ ನಾಯಕ (36), ಗೋಡೆಮಡುವಿನ ದೊಡ್ಡಿಯ ರಂಗಸ್ವಾಮಿ ಬಂಧಿತರು. ಜಿಂಕೆ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸ್ಥಳೀಯ ವಲಯ ಅರಣ್ಯ ಅಧಿಕಾರಿಗಳು ನಂದೀಶ್ ನ ಮನೆಗೆ ದಾಳಿ ನಡೆಸಿದ್ದಾರೆ. ಆತನಲ್ಲಿ ಜಿಂಕೆ ಮಾಂಸದ ಮೂಲದ ಬಗ್ಗೆ ವಿಚಾರಿದಾಗ ಗೋಡೆಮಡುವಿನ ದೊಡ್ಡಿಯ ರಂಗಸ್ವಾಮಿಯಿಂದ ಖರೀದಿಸಿದ್ದಾಗಿ ತಿಳಿಸಿದ್ದಾನೆ. ನಂತರ ರಂಗಸ್ವಾಮಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿ ವಿಚಾರಿಸಿದಾಗ ಗೋಡೆಮಡುವಿನದೊಡ್ಡಿಯ ಹಳ್ಳದ

ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ Read More »

ಪಿಎಸ್ ಐ ತಲೆಯೊಳಗಿದ್ದವು 23 ವರ್ಷದ ಹಿಂದೆ ಒಳಹೊಕ್ಕ ಗುಂಡುಗಳು | ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ನಿಧನ

ಚಾಮರಾಜನಗರ: 23 ವರ್ಷಗಳ ಹಿಂದೆ ಕಾಡುಗಳ್ಳ ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ, ಚಾಮರಾಜನಗರ ಪಟ್ಟಣ ಠಾಣೆಯ ಅಪರಾಧ ವಿಭಾಗದ ಪಿಎಸ್ ಐ ಸಿದ್ದರಾಜನಾಯ್ಕ (59 ವ.) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವೀರಪ್ಪನ್ 1993 ರಲ್ಲಿ ಹೊಡೆದಿದ್ದ ಗುಂಡುಗಳನ್ನು ತಲೆ ಮತ್ತು ಕಣ್ಣಿನಲ್ಲಿ ಇಟ್ಟುಕೊಂಡೇ ಕಳೆದ 23 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಾ, ಜೀವನ ಸಾಗಿಸಿದ್ದ ಪಿಎಸ್ ಐ ನಿವೃತ್ತಿಗೆ ಕೇವಲ 5 ದಿನ ಬಾಕಿ ಇರುವಾಗ ನಿಧನರಾಗಿದ್ದಾರೆ. ಸಬ್ ಇನ್ಸ್​ಪೆಕ್ಟರ್ ಆಗಿದ್ದರೂ ದರ್ಪ, ಗತ್ತು ಪ್ರದರ್ಶಿಸದೇ ಜನರೊಂದಿಗೆ

ಪಿಎಸ್ ಐ ತಲೆಯೊಳಗಿದ್ದವು 23 ವರ್ಷದ ಹಿಂದೆ ಒಳಹೊಕ್ಕ ಗುಂಡುಗಳು | ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ನಿಧನ Read More »

ಅಹಿಂಸೆಯ ಪರಮಾವತಾರಿ ಬುದ್ಧ- ಜಗವೆಲ್ಲ ಮಲಗಿರಲು ಅವನೆದ್ದ

ಸಮಾಚಾರ.ಕಾಂ.ಮೇ26: ಇಂದು ಬುದ್ಧ ಪೂರ್ಣಿಮೆ. ಗೌತಮ ಬುದ್ಧನ ಜನ್ಮ ಆಚರಣೆ. ಬುದ್ಧನ ಜನ್ಮದಿನವನ್ನು ಬುದ್ಧ ಪೂರ್ಣಿಮಾ ಅಥವಾ ವೈಶಾಖಿ ಬುದ್ಧ ಪೂರ್ಣಿಮಾ ಅಥವಾ ವೆಸಾಕ್ ಎಂದೂ ಕರೆಯುತ್ತಾರೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಬುದ್ಧ ಜಯಂತಿ ವೈಶಾಖ್ ತಿಂಗಳಲ್ಲಿ ಹುಣ್ಣಿಮೆಯ ದಿನದಂದು ಬರುತ್ತದೆ (ಇದು ಸಾಮಾನ್ಯವಾಗಿ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಬರುತ್ತದೆ). ಬುದ್ಧನ 2583 ನೇ ಜನ್ಮ ದಿನಾಚರಣೆ ಏಷ್ಯನ್ ಲೂನಿಸೋಲಾರ್ ಕ್ಯಾಲೆಂಡರ್ ಅನ್ನು ಆಧರಿಸಿದೆ, ಅದಕ್ಕಾಗಿಯೇ ಪ್ರತಿವರ್ಷ ದಿನಾಂಕಗಳು ಬದಲಾಗುತ್ತವೆ. ಭಗವಾನ್ ಬುದ್ಧ (Gautam Buddha)ರಾಜಕುಮಾರ

ಅಹಿಂಸೆಯ ಪರಮಾವತಾರಿ ಬುದ್ಧ- ಜಗವೆಲ್ಲ ಮಲಗಿರಲು ಅವನೆದ್ದ Read More »

ನಾಳೆ ವರ್ಷದ ಮೊದಲ ಚಂದ್ರಗ್ರಹಣ | ಭಾರತದಲ್ಲಿ ಗೋಚರವಾಗುತ್ತಾ? ಹೇಗಿದೆ ಇದರ ಪ್ರಭಾವ..!!

ಬೆಂಗಳೂರು.ಮೇ 25. ನಾಳೆ.(ಮೇ.26) ಈ ವರ್ಷದಲ್ಲಿ ಗೋಚರವಾಗುವ ಮೊದಲ ಸೂಪರ್ ಚಂದ್ರ ಹಾಗೂ ಕೆಂಪು ಚಂದ್ರನನ್ನು ನೋಡಲು ಇಡೀ ಜಗತ್ತೇ ಸಜ್ಜಾಗಿದೆ. ಇದು ಆಗ್ನೇಯ ಏಷ್ಯಾದ ಪ್ರದೇಶಗಳಲ್ಲಿ, ಆಸ್ಟ್ರೇಲಿಯ, ಓಷಿಯಾನಿಯಾದ ಪ್ರದೇಶಗಳಲ್ಲಿ, ಅಲಾಸ್ಕಾ ಮತ್ತು ಕೆನಡಾದ ಹೆಚ್ಚಿನ ಭಾಗಗಳಲ್ಲಿ, ಯುಎಸ್‍ಎಯ ಬಹುಪಾಲು ಸ್ಥಳಗಳು, ಹವಾಯಿ, ಮೆಕ್ಸಿಕೊ ಮತ್ತು ಮಧ್ಯ ಅಮೆರಿಕಾ ಮತ್ತು ದಕ್ಷಿಣ ಅಮೆರಿಕದ ಬಹುಪಾಲು ಪ್ರದೇಶಗಳಲ್ಲಿ ಗೋಚರಿಸಲಿದೆ. ಈ ಅರೆನೆರಳಿನ ಗ್ರಹಣವು ಜಾಗತಿಕ ಕಾಲಮಾನದ ಪ್ರಕಾರ, 08:47:39ರಲ್ಲಿ (ಯುಟಿಸಿ) ಪ್ರಾರಂಭವಾಗಿ, ಮೇ 26 ರಂದು 13:49:44

ನಾಳೆ ವರ್ಷದ ಮೊದಲ ಚಂದ್ರಗ್ರಹಣ | ಭಾರತದಲ್ಲಿ ಗೋಚರವಾಗುತ್ತಾ? ಹೇಗಿದೆ ಇದರ ಪ್ರಭಾವ..!! Read More »

ಅದ್ಧೂರಿ ಮದುವೆಗೆ ಅಧಿಕಾರಿಗಳ ರೈಡ್ | ವಧುವನ್ನು ಬಿಟ್ಟು ವರ ಪರಾರಿ….!

ಕಡೂರು: ಲಾಕ್ಡೌನ್ ನಡುವೆ ನಡೆಯುತ್ತಿದ್ದ ಅದ್ಧೂರಿ ಮದುವೆಗೆ ದಾಳಿ ನಡೆದಿದ್ದು, ಅಧಿಕಾರಿಗಳನ್ನು ನೋಡಿದ ವರ ವಧುವನ್ನು ಮಂಟಪದಲ್ಲಿಯೇ ಬಿಟ್ಟು ಪರಾರಿಯಾದ ಪ್ರಸಂಗ ತಾಲೂಕಿನ ಕರಿಕಲ್ಲಳ್ಳಿಯಲ್ಲಿ ನಡೆದಿದೆ. ಕೋವಿಡ್ ಹರಡುವಿಕೆ ತಡೆಯುವ ಹಿನ್ನಲೆಯಲ್ಲಿ ಹೇರಿದ್ದ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜಿಸಲಾಗಿತ್ತು. ಶಾಸ್ತ್ರೊತ್ತರಗಳು ಸರಾಗವಾಗಿ ನಡೆಯುತ್ತಿರುವಾಗಲೇ ಕಲ್ಯಾಣ ಮಂಟಪಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಅಧಿಕಾರಿಗಳನ್ನು ನೋಡುತ್ತಲೇ ವರ ಸೇರಿದಂತೆ ಜನರು ಸ್ಥಳದಿಂದ ತೆರಳಿದ್ದಾರೆ. ಮದುವೆಗೆ ಕೇವಲ 10 ಜನರಿಗೆ ಅನುಮತಿ ಪಡೆದು ನೂರಾರು ಜನರನ್ನು ಸೇರಿಸಲಾಗಿತ್ತು. ಸ್ಥಳಕ್ಕೆ ಜೋಡಿಹೋಚಿಹಳ್ಳಿ

ಅದ್ಧೂರಿ ಮದುವೆಗೆ ಅಧಿಕಾರಿಗಳ ರೈಡ್ | ವಧುವನ್ನು ಬಿಟ್ಟು ವರ ಪರಾರಿ….! Read More »

ಮಡಿಕೇರಿ | ಕೊರೋನಾ ಆಸ್ಪತ್ರೆಯ ಮೊಬೈಲ್ ಕಳ್ಳ ಅರೆಸ್ಟ್!

ಮಡಿಕೇರಿ: ಪುಟ್ಟ ಬಾಲಕಿಯೊಬ್ಬಳು ಕೋವಿಡ್ ನಿಂದಾಗಿ ತನ್ನ ತಾಯಿಯನ್ನು ಕಳೆದುಕೊಂಡು ಜಿಲ್ಲಾಡಳಿತ ಹಾಗೂ ಶಾಸಕರಿಗೆ ಪತ್ರ ಬರೆದು ಆಸ್ಪತ್ರೆಯಲ್ಲಿ ಕಳೆದುಹೋಗಿರುವ ನನ್ನ ತಾಯಿಯ ನೆನಪುಗಳು ಇರುವ ಮೊಬೈಲ್‌ ಪೋನ್‌‌‌ ಅನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಳು. ಇದು ವೈರಲ್ ಆಗಿದ್ದು, ಎಲ್ಲರ ಮನ ಮಿಡಿದಿತ್ತು. ಇದೀಗ ಕೊರೊನಾ ಕೇಂದ್ರದಿಂದ ಮೊಬೈಲ್ ಎಗರಿಸುತ್ತಿದ್ದಂತ ಕಳ್ಳ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಮಡಿಕೇರಿಯ ಕೊರೋನಾ ಆಸ್ಪತ್ರೆಯಲ್ಲಿ ಅನೇಕರ ಮೊಬೈಲ್ ಕಳ್ಳತನವಾಗುತ್ತಿದ್ದು, ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ಕೂಡ ದಾಖಲಾಗಿದ್ದವು. ಅದರಲ್ಲಿಯೂ

ಮಡಿಕೇರಿ | ಕೊರೋನಾ ಆಸ್ಪತ್ರೆಯ ಮೊಬೈಲ್ ಕಳ್ಳ ಅರೆಸ್ಟ್! Read More »