ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ| ವಿಷಯವಾರು ದಿನಾಂಕ ಬದಲು

ಸಮಗ್ರ ನ್ಯೂಸ್: ರಾಜ್ಯ ಪಿಯು ಬೋರ್ಡ್ ಈ ಹಿಂದೆ ಪ್ರಕಟಿಸಿದ್ದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ವಿವಿಧ ವಿಷಯಗಳ ಪರೀಕ್ಷೆ ದಿನಾಂಕ ಕೆಲ‌ ತಾಂತ್ರಿಕ ಕಾರಣಗಳಿಂದ ಬದಲಾವಣೆಯಾಗಿದೆ. ಈ ಮೊದಲು ತಿಳಿಸಿದಂತೆ ಏ. 22ರಿಂದ‌ ಮೇ 18ರವರೆಗೆ ಪರೀಕ್ಷೆ ನಡೆಯಲಿದ್ದು ವಿಷಯಗಳ ದಿನಾಂಕವಷ್ಟೆ ಬದಲಾಗಿದೆ ಎಂದು ಪಿಯು ಬೋರ್ಡ್ ಮಾಹಿತಿ ನೀಡಿದೆ. ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಈ ಬದಲಾವಣೆಯನ್ನು ವಿದ್ಯಾರ್ಥಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದೆ. ತಮ್ಮೆಲ್ಲರ ಗಮನಕ್ಕೆ ಈ ಹಿಂದೆ […]

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ| ವಿಷಯವಾರು ದಿನಾಂಕ ಬದಲು Read More »

ಮಡಿಕೇರಿ: ಧರ್ಮಸಂಘರ್ಷದ‌ ನಡುವೆ ಸಹಬಾಳ್ವೆಗಾಗಿ ದೇವಾಲಯದಲ್ಲಿ ಪ್ರಾರ್ಥಿಸಿದ ಮುಸ್ಲಿಂ ಮಹಿಳೆ!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಧರ್ಮಗಳ ಮಧ್ಯೆ ಹಲವು ದಿನಗಳಿಂದ ನಡೆಯುತ್ತಿರುವ ಸಂಘರ್ಷಗಳ ನಡುವೆ ಹಿಂದೂ, ಮುಸ್ಲಿಮರು ಭಾವೈಕ್ಯತೆಯಿಂದ ಒಟ್ಟಾಗಿ ಬಾಳುವಂತೆ ಮಾಡಿ ಎಂದು ಹಿಂದೂ ದೇವಾಲಯದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ವಿಶೇಷ ಪ್ರಾರ್ಥನೆ ಮಾಡಿದ ಅಪರೂಪದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ರಾಜ್ಯದಲ್ಲಿ ಹಿಜಾಬ್ ವಿವಾದದ ಬಳಿಕ ಹಿಂದೂ ದೇವಾಲಯಗಳ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಇದನ್ನು ಗಮನಿಸಿದ ಬಳಿಕ ಹಾವೇರಿ ಮೂಲದ ರಜಿಯಾ, ಮಡಿಕೇರಿ ನಗರದ ಮುನೇಶ್ವರ ದೇವಾಲಯದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಹಿಂದೂ-ಮುಸ್ಲಿಂ

ಮಡಿಕೇರಿ: ಧರ್ಮಸಂಘರ್ಷದ‌ ನಡುವೆ ಸಹಬಾಳ್ವೆಗಾಗಿ ದೇವಾಲಯದಲ್ಲಿ ಪ್ರಾರ್ಥಿಸಿದ ಮುಸ್ಲಿಂ ಮಹಿಳೆ! Read More »

ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಮ್ ಉಚ್ಚಿಲ್ ಪದಚ್ಯುತಿ

ಸಮಗ್ರ ನ್ಯೂಸ್: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಲಾಗಿದೆ. “ಶ್ರೀ ರಹೀಂ ಉಚ್ಚಿಲ್ ಅವರನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದೆ’ ಎಂದು ಕನ್ನಡ ಮತ್ತು ಸಾಹಿತ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್.ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ. ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿದುಬಂದಿಲ್ಲ.

ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಮ್ ಉಚ್ಚಿಲ್ ಪದಚ್ಯುತಿ Read More »

ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್)ದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಆಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲಡ್ಕದ ತನ್ನ ವಿದ್ಯಾಸಂಸ್ಥೆಯಲ್ಲಿದ್ದಾಗಲೇ ಪ್ರಭಾಕರ್ ಭಟ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇನ್ನು ಕೆಲ ಕಿಡಿಗೇಡಿಗಳು ಜಾಲತಾಣಗಳಲ್ಲಿ ಕಲ್ಲಡ್ಕರವರ ಕುರಿತು ಅಸಂಬದ್ಧ ಸುದ್ದಿಗಳನ್ನು ಹರಿಯ ಬಿಡುತ್ತಿದ್ದಾರೆ. ಜಾಲತಾಣಗಳಲ್ಲಿ ವಿಕೃತಿ ಮೆರೆಯುತ್ತಿರುವ ಈ ಕಿಡಿಗೇಡಿಗಳ ಕುರಿತು ನಿಗಾವಹಿಸಲಾಗಿದೆ ಎಂದು

ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ತಾಂತ್ರಿಕ ದೋಷ; ಬಾರ್ ಗಳಲ್ಲಿ ‌ಮದ್ಯ ಖಾಲಿ| ವೈನ್ ಮರ್ಚೆಂಟ್ ಗ್ರೂಪ್ ನಿಂದ ಪ್ರತಿಭಟನೆಗೆ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯದ ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳಲ್ಲಿ ಮದ್ಯ ಖಾಲಿಯಾಗಿರುವ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ನೂತನ ಸಾಫ್ಟ್​ವೇರ್​ ಅಪ್​ಡೇಟ್ ಆಗಿರುವ ಹಿನ್ನೆಲೆ ಬಿಲ್ ಮಾಡಲು ಆಗದೆ ಮದ್ಯ ಪೂರೈಕೆ ಆಗುತ್ತಿಲ್ಲ. ಕೆಎಸ್​​ಬಿಸಿಎಲ್​ನಿಂದ​ ಬಾರ್​ಗಳಿಗೆ ಮದ್ಯ ಪೂರೈಕೆಯಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ನಿನ್ನೆಯಿಂದ ರಾಜ್ಯದ ಎಣ್ಣೆ ಅಂಗಡಿಗಳಲ್ಲಿ ಸ್ಟಾಕ್ ಖಾಲಿಯಾಗಿದೆ. ಕೆಲ ಅಂಗಡಿಗಳಲ್ಲಿ ಅಲ್ಪ ಸ್ಪಲ್ಪ ಎಣ್ಣೆ ಇದೆ. ಇಂದು (ಏಪ್ರಿಲ್ 5) ಸಂಜೆ ವೇಳೆಗೆ ರಾಜ್ಯದ ಎಲ್ಲಾ ಅಂಗಡಿಗಳಲ್ಲಿ ಎಣ್ಣೆ ಸಂಪೂರ್ಣ ಖಾಲಿಯಾಗುವ ಸಾಧ್ಯತೆಯಿದೆ.

ತಾಂತ್ರಿಕ ದೋಷ; ಬಾರ್ ಗಳಲ್ಲಿ ‌ಮದ್ಯ ಖಾಲಿ| ವೈನ್ ಮರ್ಚೆಂಟ್ ಗ್ರೂಪ್ ನಿಂದ ಪ್ರತಿಭಟನೆಗೆ ನಿರ್ಧಾರ Read More »

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್| ಎಫ್.ಸಿ ಶುಲ್ಕ‌ 16 ಪಟ್ಟು ಹೆಚ್ಚಳ

ಸಮಗ್ರ ನ್ಯೂಸ್: ಹಳೆ ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. 15 ವರ್ಷ ಮೇಲ್ಪಟ್ಟ ಸಾರ್ವಜನಿಕ ಪ್ರಯಾಣಿಕ ವಾಹನಗಳ ಫಿಟ್ ನೆಸ್ ಸರ್ಟಿಫಿಕೆಟ್ ಪರಿಷ್ಕೃತ ಶುಲ್ಕವನ್ನು 16 ಪಟ್ಟು ಏರಿಕೆ ಮಾಡಲಾಗಿದೆ. ಖಾಸಗಿ ವಾಹನಗಳ ಆರ್.ಸಿ.ನವೀಕರಣ ಶುಲ್ಕ ಕೂಡ ಹೆಚ್ಚಳ ಮಾಡಲಾಗಿದೆ. ಟ್ರಾನ್ಸ್ಪೋರ್ಟ್ ವಾಹನಗಳಿಗೆ 8 ವರ್ಷಗಳವರೆಗೆ ಪ್ರತಿ ಎರಡು ವರ್ಷಕ್ಕೆ ಒಂದು ಸಲ ಫಿಟ್ನೆಸ್ ಸರ್ಟಿಫಿಕೇಟ್ ಮಾಡಿಸಬೇಕಿದೆ. 8 ವರ್ಷಗಳ ನಂತರ ವರ್ಷಕ್ಕೆ ಒಂದು ಸಲ ಫಿಟ್ನೆಸ್ ಸರ್ಟಿಫಿಕೇಟ್ ಕಡ್ಡಾಯವಾಗಿದೆ. ವಾಹನ ಗುಜರಿ ನೀತಿ ಜಾರಿಗೊಳಿಸಲು

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್| ಎಫ್.ಸಿ ಶುಲ್ಕ‌ 16 ಪಟ್ಟು ಹೆಚ್ಚಳ Read More »

ಇನ್ನೆರಡು ದಿನ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ| ಕರಾವಳಿಯಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 2 ದಿನ ಬೆಂಗಳೂರು, ಮೈಸೂರು,

ಇನ್ನೆರಡು ದಿನ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ| ಕರಾವಳಿಯಲ್ಲಿ ಎಲ್ಲೋ ಅಲರ್ಟ್ ಘೋಷಣೆ Read More »

ಬಿಸಿಯೂಟ ಸಿಬ್ಬಂದಿಗೆ ಬಿಗ್ ಶಾಕ್| 60 ವರ್ಷ ದಾಟಿದ್ರೆ ಕೆಲಸದಿಂದ ವಜಾ!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಶಾಲಾ ಅಡುಗೆ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌ ನೀಡಿದ್ದು, ಕಡ್ಡಾಯವಾಗಿ ಕರ್ತವ್ಯದಿಂದ ತೆಗೆಯುವಂತೆ ಆದೇಶ ಹೊರಡಿಸಿದೆ. 2003-04ರಿಂದ ಬಿಸಿಯೂಟ ಯೋಜನೆ ಆರಂಭವಾಗಿದ್ದು 60 ವರ್ಷ ಮೀರಿದ್ರೂ, ಆರೋಗ್ಯವಾಗಿದ್ದರೆ ಮಾನವೀಯತೆ ದೃಷ್ಟಿಯಿಂದ ಕೆಲಸದಲ್ಲಿ ಮುಂದುವರಿಸಿಕೊಂಡು ಬರಲು ಅವಕಾಶ ನೀಡಿತ್ತು. ಆದರೆ, ಸಧ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, 60 ವರ್ಷ

ಬಿಸಿಯೂಟ ಸಿಬ್ಬಂದಿಗೆ ಬಿಗ್ ಶಾಕ್| 60 ವರ್ಷ ದಾಟಿದ್ರೆ ಕೆಲಸದಿಂದ ವಜಾ! Read More »

ಹಿಜಾಬ್, ಹಲಾಲ್ ಬಳಿಕ ಮಸೀದಿ ಧ್ವನಿವರ್ಧಕ ಕಿರಿಕ್

ಸಮಗ್ರ ನ್ಯೂಸ್: ಹಿಜಾಬ್ ಆಯ್ತು, ಹಲಾಲ್ ಆಯ್ತು, ಈಗ ಮಸೀದಿಗಳ ಮೇಲಿನ ಧ್ವನಿವರ್ಧಕಗಳಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಆಂದೋಲಾ ಶ್ರೀ ಆಗ್ರಹಿಸಿದ್ದಾರೆ. ರಾಜ್ಯದಲ್ಲಿನ ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ‘ನಾನು ಪ್ರಾರ್ಥನೆ ವಿರೋಧಿಸುವುದಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥಿಸಬಹುದು. ಆದರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಿದ್ದನ್ನು ಮೈಕ್‌ನಲ್ಲಿ ಪ್ರಸಾರ ಮಾಡುವುದು ಸರಿಯಲ್ಲ. ಹೀಗಾಗಿ ಸರ್ಕಾರ ಕೂಡಲೇ ಮಸೀದಿಯಿಂದ ಧ್ವನಿವರ್ಧಕ

ಹಿಜಾಬ್, ಹಲಾಲ್ ಬಳಿಕ ಮಸೀದಿ ಧ್ವನಿವರ್ಧಕ ಕಿರಿಕ್ Read More »

ಹರ್ಷ ಕೊಲೆ ಕೋಮು ಗಲಭೆ ಸೃಷ್ಟಿಸುವ ಹುನ್ನಾರ – ಎನ್ಐಎ

ಸಮಗ್ರ ನ್ಯೂಸ್ : ಶಿವಮೊಗ್ಗದಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಾಥಮಿಕ ವರದಿ ನೀಡಿದ್ದು, ಹರ್ಷ ಕೊಲೆ ಹಿಂದೆ ಕೋಮು ಗಲಭೆಯ ಹುನ್ನಾರವಿತ್ತು ಎಂದು ತಿಳಿಸಿದೆ. ಹರ್ಷ ಹತ್ಯೆ ಹಿಂದೆ ಸಮಾಜದ ಸ್ವಾಸ್ಥ್ಯ ಕದಡುವ ಉದ್ದೇಶ ಅಡಗಿತ್ತು. ಈ ಮೂಲಕ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ಅಡಗಿತ್ತು ಎಂದು ಎನ್ ಐ ಎ ವರದಿಯಲ್ಲಿ ಬಹಿರಂಗವಾಗಿದೆ. ಪ್ರಕರಣ ಸಂಬಂಧ ಈಗಾಗಲೇ 10 ಆರೋಪಿಗಳನ್ನು ಬಂಧಿಸಲಾಗಿದೆ. ಹರ್ಷ ಹತ್ಯೆ ನಡೆದಿರುವುದು

ಹರ್ಷ ಕೊಲೆ ಕೋಮು ಗಲಭೆ ಸೃಷ್ಟಿಸುವ ಹುನ್ನಾರ – ಎನ್ಐಎ Read More »