ರಾಜ್ಯ

ಚಂದ್ರದರ್ಶನ ಹಿನ್ನಲೆ; ನಾಳೆಯಿಂದ ಪವಿತ್ರ ರಂಜಾನ್ ಉಪವಾಸ ಆರಂಭ

ಸಮಗ್ರ ನ್ಯೂಸ್: ನಾಳೆಯಿಂದ ಮುಸ್ಲಿಂ ಭಾಂಧವರ ಪವಿತ್ರ ರಂಝಾನ್ ತಿಂಗಳು ಆರಂಭವಾಗಲಿದ್ದು, ಉಪವಾಸ ಆಚರಣೆಗೆ ಸಂಬಂಧಿಸಿದಂತೆ ಹಿಲಾಲ್ ಸಮಿತಿ ಕರೆನೀಡಿದೆ. ಇಂದು ರಂಜಾನ್ ಚಂದ್ರದರ್ಶನವಾದ ಕಾರಣ ಬೆಂಗಳೂರು, ದ.ಕ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ರವಿವಾರದಿಂದ (ಎ.3) ಉಪವಾಸ ಆಚರಣೆ ಮಾಡಲು ಹಿಲಾಲ್ ಸಮಿತಿ ಕರೆ ನೀಡಿದೆ. ಇಂದು ರಾತ್ರಿಯಿಂದಲೇ ತಾರಾವೀಹ್ ನಮಾಜ್ ಮಾಡುವಂತೆಯೂ ತಿಳಿಸಲಾಗಿದೆ.

ಚಂದ್ರದರ್ಶನ ಹಿನ್ನಲೆ; ನಾಳೆಯಿಂದ ಪವಿತ್ರ ರಂಜಾನ್ ಉಪವಾಸ ಆರಂಭ Read More »

ಪ್ರೇಯಸಿಯ ಬಂಧಮುಕ್ತಗೊಳಿಸಿ ವಿವಾಹವಾದ ಪ್ರಿಯಕರ| ಹಿಟ್ ಸಿನಿಮಾವನ್ನೇ ಮೀರಿಸುವ ಲವ್ ಸ್ಟೋರಿ|

ಸಮಗ್ರ ನ್ಯೂಸ್: ಪ್ರೀತಿಸಿ ಪೋಷಕರ ವಿರೋಧದ ನಡುವೆಯೂ ದಾಂಪತ್ಯಕ್ಕೆ ಕಾಲಿಟ್ಟಿರುವ ಜೋಡಿಗೆ ಹುಡುಗಿಯ ಪೋಷಕರಿಂದ ಜೀವ ಬೆದರಿಕೆಯಿದ್ದು, ರಕ್ಷಣೆ ಕೋರಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ‌ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಳಿ ಗ್ರಾಮದ ಯುವಕ ಯೋಗನಾಂದ್, ಕಬ್ಳಿ ಪಕ್ಕದ ಜಿ ಕೊಪ್ಪಲು ಗ್ರಾಮದ ಯುವತಿ ಇಬ್ಬರು ಕಡೂರು ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದ್ದರು. ಈ ಸಂದರ್ಭದಲ್ಲಿ ಯೋಗಾನಂದ್, ಯುವತಿ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಕಳೆದ ಎರಡು

ಪ್ರೇಯಸಿಯ ಬಂಧಮುಕ್ತಗೊಳಿಸಿ ವಿವಾಹವಾದ ಪ್ರಿಯಕರ| ಹಿಟ್ ಸಿನಿಮಾವನ್ನೇ ಮೀರಿಸುವ ಲವ್ ಸ್ಟೋರಿ| Read More »

ಸಿದ್ದಗಂಗಾ ಶ್ರೀಗಳ ಜಯಂತಿ ಕಾರ್ಯಕ್ರಮದಲ್ಲಿ‌ ತಮ್ಮ ಮಗುವಿಗೆ ‘ಶಿವಮಣಿ’ ಹೆಸರಿಟ್ಟ ಮುಸ್ಲಿಂ ದಂಪತಿ

ಸಮಗ್ರ ನ್ಯೂಸ್: ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳ ತ್ರಿವಿಧ ದಾಸೋಹ ಇಡೀ ದೇಶಕ್ಕೆ ಜನಪ್ರಿಯ. ನಡೆದಾಡುವ ದೇವರೆಂದೇ ಜನಪ್ರಿಯರಾದವರು. ಏಪ್ರಿಲ್ 1ರಂದು ಅವರ 115ನೇ ಜಯಂತ್ಯೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದಲ್ಲಿ ಭಕ್ತಿಪೂರ್ವಕ ಕಾರ್ಯಕ್ರಮಗಳು ನಡೆದವು. ಈ ಕಾರ್ಯಕ್ರಮದಲ್ಲಿ ಕ್ಯಾತ್ಸಂದ್ರ ನಿವಾಸಿ ಶಾಹಿಸ್ತಾ ಮತ್ತು ಜಮೀರ್ ದಂಪತಿ ತಮ್ಮ ಮಗುವಿಗೆ ʼಶಿವಮಣಿʼ ಎಂದು ನಾಮಕರಣ ಮಾಡುವ ಮೂಲಕ ಸೌಹಾರ್ದ ಸಾರಿದ್ದು ವಿಶೇಷವಾಗಿತ್ತು. ರಾಜ್ಯದ ನಾನಾ ಭಾಗಗಳಿಂದ ಮಠಕ್ಕೆ ಬಂದಿದ್ದ ಮಕ್ಕಳಿಗೆ ನಾಮಕರಣ ಮಾಡುವುದರ ಜೊತೆಗೆ

ಸಿದ್ದಗಂಗಾ ಶ್ರೀಗಳ ಜಯಂತಿ ಕಾರ್ಯಕ್ರಮದಲ್ಲಿ‌ ತಮ್ಮ ಮಗುವಿಗೆ ‘ಶಿವಮಣಿ’ ಹೆಸರಿಟ್ಟ ಮುಸ್ಲಿಂ ದಂಪತಿ Read More »

ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ

ಸಮಗ್ರ ನ್ಯೂಸ್: ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಸೇವೆಗೆ ಸ್ವಯಂ ನಿವೃತ್ತಿ ಹೇಳಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಪ್ರಸ್ತುತ ರೈಲ್ವೆ ಇಲಾಖೆಯ ಎಡಿಜಿಪಿಯಾಗಿ ಭಾಸ್ಕರ್ ರಾವ್ ಕಾರ್ಯನಿರ್ವಹಿಸುತ್ತಿದ್ದರು. ಸ್ವಯಂ ನಿವೃತ್ತಿ ಕೋರಿ 2021ರ ಸೆಪ್ಟೆಂಬರ್ 16ರಂದು ಅವರು ಅರ್ಜಿ ಸಲ್ಲಿಸಿದ್ದರು. ನಿರ್ಧಾರ ಪುನರ್ಪರಿಶೀಲನೆ ಮಾಡುವಂತೆ ಕೇಂದ್ರ ಸರ್ಕಾರದಿಂದ ಅವಕಾಶ ನೀಡಲಾಗಿದ್ದು, ಗೃಹಸಚಿವಾಲಯವು ಸಂಬಂಧಿಸಿದ ಅಧಿಕಾರಿಯನ್ನು ಸಂಪರ್ಕಿಸಬೇಕಿತ್ತು. ಆದರೆ, 6 ತಿಂಗಳಾದರೂ ಸಚಿವಾಲಯದಿಂದ ಉತ್ತರ ಬಾರದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ

ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ Read More »

ಮಧ್ಯಾಹ್ನದ ಬಿಸಿಯೂಟಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು – ಸಿಎಂ ಬೊಮ್ಮಾಯಿ ಘೋಷಣೆ

ಸಮಗ್ರ ನ್ಯೂಸ್: ಮಧ್ಯಾಹ್ಯದ ಬಿಸಿ ಊಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು ಇಡಲು ಸರ್ಕಾರ ಮುಂದಾಗುತ್ತದೆ. ಅವರು ಕಷ್ಟದಲ್ಲಿರುವವರಿಗೆ ಬದುಕು ಕಟ್ಟಿಕೊಡುತ್ತಿದ್ದರು. ಮಧ್ಯಾಹ್ನದ ಬಿಸಿಯೂಟದ ಯೋಜನೆಗೆ ಶಿವಕುಮಾರ ಸ್ವಾಮೀಜಿಗಳ ಹೆಸರನ್ನ ಇಡಲಾಗುವುದು. ಈ ಬಗ್ಗೆ ಆದೇಶ ಹೊರಡಿಸುತ್ತೇನೆ ಎಂದು ಕಾರ್ಯಕ್ರಮದಲ್ಲಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸ್ವಾಮೀಜಿಗಳು ಸುಮಾರು 88 ವರ್ಷ ಈ ಮಠದ ಸೇವೆ ಮಾಡಿದ್ದಾರೆ. ಇದು ದಾಖಲೆ. ಇಡಿ ದೇಶದಲ್ಲೇ ಈ ಕೆಲಸ ಯಾರು ಮಾಡಿಲ್ಲ. ಆ ದಾಖಲೆ ನಮ್ಮ‌ ಶಿವಕುಮಾರ ಸ್ವಾಮಿಗಳು ಮಾಡಿದ್ದಾರೆ. ಶ್ರೀಗಳು

ಮಧ್ಯಾಹ್ನದ ಬಿಸಿಯೂಟಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು – ಸಿಎಂ ಬೊಮ್ಮಾಯಿ ಘೋಷಣೆ Read More »

ರಾಜ್ಯದಲ್ಲಿ 6 ಸಾವಿರ ಕೋಟಿ ಹೂಡಿಕೆಗೆ ನಿರ್ಧರಿಸಿದ ಎಕ್ಸೈಡ್ ಇಂಡಸ್ಟ್ರೀಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ‌ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ. ಈ ವಿಚಾರವಾಗಿ ಗುರುವಾರದಂದು ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಎಕ್ಸೈಡ್ ಇಂಡಸ್ಟ್ರೀಸ್ ಬಂಡವಾಳ ಹೂಡಿಕೆ ಮಾಡುತ್ತಿರುವ ಪರಿಣಾಮ ರಾಜ್ಯದಲ್ಲಿ ಒಟ್ಟು 1200

ರಾಜ್ಯದಲ್ಲಿ 6 ಸಾವಿರ ಕೋಟಿ ಹೂಡಿಕೆಗೆ ನಿರ್ಧರಿಸಿದ ಎಕ್ಸೈಡ್ ಇಂಡಸ್ಟ್ರೀಸ್ Read More »

ಹರ್ಷ ಹತ್ಯೆ ಪ್ರಕರಣ| ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಈಶ್ವರಪ್ಪಗೆ ಸಂಕಷ್ಟ

ಸಮಗ್ರ ನ್ಯೂಸ್: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಶಿವಮೊಗ್ಗದಲ್ಲಿ ಕಳೆದ ಫೆ. 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ

ಹರ್ಷ ಹತ್ಯೆ ಪ್ರಕರಣ| ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಈಶ್ವರಪ್ಪಗೆ ಸಂಕಷ್ಟ Read More »

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ| 5 ಹಿರಿಯ ಸಾಹಿತಿಗಳಿಗೆ ಗೌರವ ಪುರಸ್ಕಾರ

ಸಮಗ್ರ ನ್ಯೂಸ್: ಕರ್ನಾಟಕ ಸಾಹಿತ್ಯ ಅಕಾಡೆಮಿ 2021ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆ ಪರಿಗಣಿಸಿ 5 ಜನ ಹಿರಿಯ ಸಾಹಿತಿಗಳಿಗೆ ಗೌರವ ಪ್ರಶಸ್ತಿ ನೀಡಲಾಗಿದೆ. ಗೌರವ ಪ್ರಶಸ್ತಿ ಪುರಸ್ಕೃತರು: ಜಿನದತ್ತ ದೇಸಾಯಿ, ಡಾ. ನಾ. ಮೊಗಸಾಲೆ , ಡಾ. ಸರಸ್ವತಿ ಚಿಮ್ಮಲಗಿ, ಪ್ರೊ.ಬಸವರಾಜ ಕಲ್ಗುಡಿ, ಶ್ರೀ ಯಲ್ಲಪ್ಪ. ಕೆ.ಕೆ ಪುರ. 10 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021ನೇ ವರ್ಷದ ಸಾಹಿತ್ಯ ಶ್ರೀ ಪ್ರಶಸ್ತಿ ನೀಡುತ್ತಿದ್ದು, ಪ್ರಶಸ್ತಿ ವಿಜೇತರ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ| 5 ಹಿರಿಯ ಸಾಹಿತಿಗಳಿಗೆ ಗೌರವ ಪುರಸ್ಕಾರ Read More »

ಬೆಲೆಏರಿಕೆ ಬರೆ; ಕಾಂಗ್ರೆಸ್ ನಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ನಿರಂತರವಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ದೇಶಾದ್ಯಂತ ತಮಟೆ, ಗಂಟೆ ಬಾರಿಸಿ ಚಳವಳಿ ನಡೆಸಲಿದೆ. ಕಾಂಗ್ರೆಸ್ ಸಂಸದರು ವಿಜಯ್ ಚೌಕ್‌ನಿಂದ ಸಂಸತ್ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪೆಟ್ರೋಲ್ ಮೇಲೆ ೮೪ ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ ೭೮ ಪೈಸೆ ಏರಿಸಿದೆ. ನಿರಂತರವಾಗಿ ಪೆಟ್ರೋಲ್, ಡೀಸೆಲ್

ಬೆಲೆಏರಿಕೆ ಬರೆ; ಕಾಂಗ್ರೆಸ್ ನಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ Read More »

ಗ್ರಾಹಕರ ಜೇಬಿಗೆ ಕತ್ತರಿ| ಎ.1 ರಿಂದ ಹೊಟೇಲ್ ಊಟವೂ ದುಬಾರಿ

ಸಮಗ್ರ ನ್ಯೂಸ್: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಬರೆ ಬೀಳಲಿದೆ. ಅಡುಗೆ ಎಣ್ಣೆ, ಡೀಸೆಲ್, ಗ್ಯಾಸ್ ದರ ಹೆಚ್ಚಳ ಕಾರಣ ರಾಜ್ಯಾದ್ಯಂತ ಹೋಟೆಲ್ ಗಳಲ್ಲಿ ಏಪ್ರಿಲ್ 1 ರಿಂದ ಊಟ-ತಿಂಡಿ ದರ ಹೆಚ್ಚಳ ಮಾಡಲು ಮಾಲೀಕರು ನಿರ್ಧರಿಸಿದ್ದಾರೆ. ಅಡುಗೆ ಎಣ್ಣೆ 200 ರೂ.ಆಗಿದೆ. ಗ್ಯಾಸ್, ಡೀಸೆಲ್, ರೇಷನ್ ದರ ಕೂಡ ಹೆಚ್ಚಳವಾಗಿರುವುದರಿಂದ ಏಪ್ರಿಲ್ 1 ರಿಂದ ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಶೇಕಡ ಹತ್ತರಷ್ಟು ಹೆಚ್ಚಳವಾಗಲಿದೆ. ವಡೆ 25 ರೂಪಾಯಿ, ಪೂರಿ 50 ರೂಪಾಯಿಗೆ

ಗ್ರಾಹಕರ ಜೇಬಿಗೆ ಕತ್ತರಿ| ಎ.1 ರಿಂದ ಹೊಟೇಲ್ ಊಟವೂ ದುಬಾರಿ Read More »