ರಾಜ್ಯ

ಒಂದೇ ವಾರದಲ್ಲಿ 5 ರೂ‌ ಹೆಚ್ಚಿಸಿಕೊಂಡ ಪೆಟ್ರೋಲ್| ಡೀಸೆಲ್ ದರದಲ್ಲೂ ಏರಿಕೆ

ಸಮಗ್ರ ಸಮಾಚಾರ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಕಳೆದ ಎಂಟು ದಿನಗಳಲ್ಲಿ 7ನೇ ಬಾರಿಗೆ ದರ ಏರಿಕೆ ಮಾಡಿವೆ. ಇದರೊಂದಿಗೆ ಈ ವಾರವೊಂದರಲ್ಲೇ ತೈಲ ದರ ಪ್ರತಿ ಲೀಟರ್‌ಗೆ ₹ 4.80 ರಷ್ಟು ಏರಿಕೆಯಾದಂತಾಗಿದೆ. ದಿನೇದಿನೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಿದ್ದು, ದೆಹಲಿಯಲ್ಲಿ ಪೆಟ್ರೋಲ್ ದರವನ್ನು 85 ಪೈಸೆ ಏರಿಕೆ ಮಾಡಲಾಗಿದೆ. ಪರಿಷ್ಕರಣೆ ನಂತರ ಒಂದು ಲೀಟರ್ ಪೆಟ್ರೋಲ್ 100.21 ರೂಪಾಯಿ ಆಗಿದೆ. ಡೀಸೆಲ್ ದರವನ್ನು 70 ಪೈಸೆ ಏರಿಕೆ ಮಾಡಲಾಗಿದ್ದು, ಒಂದು ಲೀಟರ್ […]

ಒಂದೇ ವಾರದಲ್ಲಿ 5 ರೂ‌ ಹೆಚ್ಚಿಸಿಕೊಂಡ ಪೆಟ್ರೋಲ್| ಡೀಸೆಲ್ ದರದಲ್ಲೂ ಏರಿಕೆ Read More »

ಮುಟ್ಟಾಳೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ ಆಧುನಿಕ ಭಗೀರಥ ಮಹಾಲಿಂಗ ನಾಯ್ಕ್

ಸಮಗ್ರ ನ್ಯೂಸ್: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ 2022 ಅನ್ನು ಪ್ರಧಾನ ಮಾಡಿದರು. ಈ ವೇಳೆ ಸುರಂಗ ಕೊರೆದು ಭಗೀರಥ ಪ್ರಯತ್ನದ ಮೂಲಕ ನೀರು ಹರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಅಮೈ ಮಹಾಲಿಂಗ ನಾಯ್ಕ್ ಅವರು ರಾಷ್ಟ್ರಪತಿಗಳಿಂದ ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದರು. ಈ ವೇಳೆ ಅವರು ಮುಟ್ಟಾಳೆ ಧರಿಸಿ ಆಗಮಿಸುವ ಮೂಲಕ ತುಳುನಾಡಿನ ಕೃಷಿ ಪರಂಪರೆಯನ್ನು ದೇಶ ವ್ಯಾಪ್ತಿ ಬಿಂಬಿಸಿದರು.

ಮುಟ್ಟಾಳೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ ಆಧುನಿಕ ಭಗೀರಥ ಮಹಾಲಿಂಗ ನಾಯ್ಕ್ Read More »

ಹಾಸನ: ಮಾಜಿ ಪ್ರಧಾನಿ ದೇವೆಗೌಡ ಪತ್ನಿ ಚೆನ್ನಮ್ಮಗೆ ಐಟಿ ಸಂಕಷ್ಟ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅವರಿಗೆ ಸಂಬಂಧಿಸಿದ ಆಸ್ತಿ ವಿವರದ ಬಗ್ಗೆ ಮಾಹಿತಿಯನ್ನು ನೀಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವಿಚಾರವನ್ನು ಅವರ ಪುತ್ರ ಮಾಜಿ ಸಚಿವ ಹೆಚ್ ಡಿ ರೇವಣ್ಣ ಕೂಡ ದೃಢಪಡಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ರೇವಣ್ಣ, ಐಟಿ ಅಧಿಕಾರಿಗಳು ನನ್ನ ತಾಯಿಗೆ ನೋಟಿಸ್ ನೀಡಿದ್ದಾರೆ. ಆಸ್ತಿ ವಿವರದ ಮಾಹಿತಿ ಕೋರಿದ್ದಾರೆ.

ಹಾಸನ: ಮಾಜಿ ಪ್ರಧಾನಿ ದೇವೆಗೌಡ ಪತ್ನಿ ಚೆನ್ನಮ್ಮಗೆ ಐಟಿ ಸಂಕಷ್ಟ Read More »

ಹಿಜಾಬ್ ಗಾಗಿ ಭವಿಷ್ಯ ಶಿಕ್ಷಣಕ್ಕೆ ಸೆಡ್ಡು ಹೊಡೆದ ವಿದ್ಯಾರ್ಥಿಗಳು| ಎಸ್ಎಸ್ಎಲ್ ಸಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳೆಷ್ಟು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭ ಮಾಡಲಾಗಿದ್ದು, ರಾಜ್ಯದ ಹಲವು ವಿದ್ಯಾರ್ಥಿಗಳು ಹಿಜಾಬ್‌ ವಿಚಾರಕ್ಕೆ ಪಟ್ಟು ಹಿಡಿದು ಪರೀಕ್ಷೆಯನ್ನೇ ಬಹಿಷ್ಕಾರ ಮಾಡಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 39 ಮುಸ್ಲಿಂ ವಿದ್ಯಾರ್ಥಿನಿಯರು ಗೈರಾಗಿದ್ದು, ಪರೀಕ್ಷೆ ಬೇಡ, ಹಿಜಾಬ್‌ ಬೇಕೆಂದು ಪಟ್ಟು ಹಿಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್‌ ಪಟ್ಟಣದಲ್ಲಿ ವಿದ್ಯಾರ್ಥಿನಿ ಪರೀಕ್ಷಾ ಕೊಠಡಿಗೆ ಹಿಜಾಬ್‌ ಧರಿಸಿಯೇ ಬಂದಿದ್ದು, ಹಿಜಾಬ್‌ ತೆಗೆದಿಟ್ಟು ಪರೀಕ್ಷೆ ಬರೆಯುವಂತೆ ಅಧೀಕ್ಷಕರು ಸೂಚನೆ ನೀಡಿದ್ದಾರೆ.‌ ಏಕಾಏಕಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೇ ಬಹಿಷ್ಕಾರ ಮಾಡಿ ಮನೆಗೆ ತೆರಳಿದ್ದಾರೆ. ಒಟ್ಟು

ಹಿಜಾಬ್ ಗಾಗಿ ಭವಿಷ್ಯ ಶಿಕ್ಷಣಕ್ಕೆ ಸೆಡ್ಡು ಹೊಡೆದ ವಿದ್ಯಾರ್ಥಿಗಳು| ಎಸ್ಎಸ್ಎಲ್ ಸಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳೆಷ್ಟು ಗೊತ್ತಾ? Read More »

ಯುಗಾದಿಗೆ ಎಸ್ಕಾಂಗಳಿಂದ ಶಾಕ್ ಟ್ರೀಟ್ಮೆಂಟ್| ಎ.1ರಿಂದ ದರ ಹೆಚ್ಚಳಕ್ಕೆ‌ ನಿರ್ಧಾರ

ಸಮಗ್ರ ನ್ಯೂಸ್: ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳಕ್ಕೆ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರ ವಿದ್ಯುತ್ ಸರಬರಾಜು ಕಂಪನಿಗಳಿಂದ ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ. 2022-23ರ ಸಾಲಿನಲ್ಲಿ ಪ್ರತಿ ಯೂನಿಟ್‌ಗೆ 35 ರಿಂದ 45 ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೇ ಅಂತ ಬೆಸ್ಕಾಂ ತಾಂತ್ರಿಕ‌ ವಿಭಾಗದ ನಿರ್ದೇಶಕ ನಾಗಾರ್ಜುನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿ ಕೆಇಆರ್‌ಸಿ ದರ ಪರಿಷ್ಕರಣೆ ಮಾಡುತ್ತದೆ. ಈ ನಡುವೆ

ಯುಗಾದಿಗೆ ಎಸ್ಕಾಂಗಳಿಂದ ಶಾಕ್ ಟ್ರೀಟ್ಮೆಂಟ್| ಎ.1ರಿಂದ ದರ ಹೆಚ್ಚಳಕ್ಕೆ‌ ನಿರ್ಧಾರ Read More »

ವಿದ್ಯಾರ್ಥಿಯೊಂದಿಗೆ ಸಂಸಾರ ತೂಗಿದ ಶಿಕ್ಷಕಿ!; 17ರ ಬಾಲಕನೊಂದಿಗೆ ಮದುವೆಯಾದ ಟೀಚರಮ್ಮ|

ಸಮಗ್ರ ನ್ಯೂಸ್: ಗುರುವೆಂದರೆ ಮಕ್ಕಳಿಗೆ ಸರಿ-ತಪ್ಪುಗಳ ವಿವೇಚನೆಯ ಪಾಠ ಮಾಡುತ್ತಾ ಬದುಕಿನ ದಾರಿ ತೋರುವ ದೇವರು. ಆದರೆ ಇಲ್ಲೊಬ್ಬ ಶಿಕ್ಷಕಿ ಮಾಡಬಾರದ್ದು ಮಾಡಿ ಜೈಲು ಸೇರಿದ್ದಾಳೆ. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಬ್ಬನನ್ನು ಪ್ರೀತಿಸಿ ಬೇರೆಡೆಗೆ ಕರೆದೊಯ್ದು ದೇವಸ್ಥಾನದಲ್ಲಿ ಮದ್ವೆ ಆಗಿದ್ದಾಳೆ! ಹೌದು, ಇಂತಹದ್ದೊಂದು ವಿಲಕ್ಷಣ ಘಟನೆ ನಡೆದದ್ದು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ. ವಿದ್ಯಾರ್ಥಿಯನ್ನು ಕರೆದೊಯ್ದು ಮದ್ವೆಯಾದ ಶಿಕ್ಷಕಿ ಹೆಸರು ಶರ್ಮಿಳಾ. ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಳು. 11ನೇ ತರಗತಿ ಓದುತ್ತಿದ್ದ 17 ವರ್ಷದ ಬಾಲಕ ಮಾರ್ಚ್​ 5ರಂದು ಕಾಲೇಜಿಗೆ ಹೋದವ

ವಿದ್ಯಾರ್ಥಿಯೊಂದಿಗೆ ಸಂಸಾರ ತೂಗಿದ ಶಿಕ್ಷಕಿ!; 17ರ ಬಾಲಕನೊಂದಿಗೆ ಮದುವೆಯಾದ ಟೀಚರಮ್ಮ| Read More »

ಹಿಜಾಬ್ ವಿವಾದ; ದಿಢೀರ್ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಸಮನ್ವಯ ಸಮಿತಿ| ಹೈಕೋರ್ಟ್ ತೀರ್ಪು ವಿರೋಧಿಸಿ ಘೋಷಣೆ|

ಸಮಗ್ರ ನ್ಯೂಸ್ : ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಅಹಿತಕರ ಘಟನೆಗಳಿಗೆ ಕಾರಣವಾಗಿದ್ದ ಹಿಜಾಬ್ ಬಗ್ಗೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪು ವಿರೋಧಿಸಿ ಮಂಗಳೂರಿನಲ್ಲಿ ವಿದ್ಯಾರ್ಥಿ ಸಮನ್ವಯ ಸಮಿತಿ ಹೆಸರಿನ ವಿದ್ಯಾರ್ಥಿಗಳ ತಂಡವೊಂದು ಮಾ 25 ರಂದು ಸಂಜೆ ದಿಢೀರ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ 100ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ನಗರದ ಕ್ಲಾಕ್‌ ಟವರ್‌ ಬಳಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದು, ನ್ಯಾಯಕ್ಕಾಗಿ ಅಗ್ರಹಿಸುತ್ತಿದ್ದ ಅವರು ‘ಅಲ್ಲಾಹೋ ಅಕ್ಬರ್‌’ ಘೋಷಣೆಯನ್ನು

ಹಿಜಾಬ್ ವಿವಾದ; ದಿಢೀರ್ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಸಮನ್ವಯ ಸಮಿತಿ| ಹೈಕೋರ್ಟ್ ತೀರ್ಪು ವಿರೋಧಿಸಿ ಘೋಷಣೆ| Read More »

ಮಾ.28ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ| ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ – ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ

ಸಮಗ್ರ ನ್ಯೂಸ್: ಮಾರ್ಚ್ 28ರಿಂದ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಗಳನ್ನು ಆಫ್‌ಲೈನ್‌ನಲ್ಲಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಹಿಜಾಬ್‌ ವಿವಾದ ಪಸರಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕೈಗೊಳ್ಳಲಾಗಿದೆ ಎಂದು ಹೇಳಿದರು ವಿದ್ಯಾರ್ಥಿಗಳು ಹಿಜಾಬ್ ಧರಿಸಿ

ಮಾ.28ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ| ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ – ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ Read More »

ನಾನು ಮಂಚಕ್ಕೆ ಮಹಿಳೆಯರನ್ನ ನೇರವಾಗಿ ಕರೀತೀನಿ | ನಾಲಿಗೆ ಹರಿಬಿಟ್ಟ ಖ್ಯಾತ ನಟ

ಸಮಗ್ರ ನ್ಯೂಸ್: ಮಲಯಾಳಂನ ಜನಪ್ರಿಯ ನಟ ವಿನಾಯಕನ್ ಅವರು ಲೈಂಗಿಕ ಸಂಬಂಧದ ಬಗ್ಗೆ ಮಾತನಾಡುವ ಮೂಲಕ ವಿವಾದವೊಂದನ್ನು ಸೃಷ್ಟಿ ಮಾಡಿದ್ದಾರೆ. ಮೀಟೂ ಚಳುವಳಿಯನ್ನು ನಾನು ಅರ್ಥಮಾಡಿಕೊಂಡಿಲ್ಲ, ಅದರ ಅರ್ಥ ಮಹಿಳೆಯರನ್ನು ದೈಹಿಕ ಸಂಬಂಧದ ಬಗ್ಗೆ ಕೇಳುವುದೇ ಎಂದು ಹೇಳುವ ಮೂಲಕ ಮಹಿಳೆಯರ ಕೆಂಗಣ್ಣಿಗೆ ವಿನಾಯಕನ್​ ಗುರಿಯಾಗಿದ್ದಾರೆ. ತಮಿಳಿನಲ್ಲಿ ‘ತಿಮಿರು’, ‘ಸಿರುತೈ’, ‘ಮರಿಯಾನ್’ ಮುಂತಾದ ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳನ್ನು ನಿರ್ವಹಿಸುವಲ್ಲಿ ವಿನಾಯಕನ್​ ಹೆಸರುವಾಸಿಯಾಗಿದ್ದಾರೆ. ಅಲ್ಲದೆ, ತಮ್ಮ ತವರು ಕೇರಳದಲ್ಲಿ ಗಾಯಕ ಮತ್ತು ಸಂಗೀತ ಸಂಯೋಜಕರಾಗಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸುವುದರ

ನಾನು ಮಂಚಕ್ಕೆ ಮಹಿಳೆಯರನ್ನ ನೇರವಾಗಿ ಕರೀತೀನಿ | ನಾಲಿಗೆ ಹರಿಬಿಟ್ಟ ಖ್ಯಾತ ನಟ Read More »

ಏಕರೂಪ ನಾಗರಿಕ ನೀತಿ ಜಾರಿಗೊಳಿಸಿದ ಉತ್ತರಾಖಂಡ| ಸಂಹಿತೆಗೆ ಸಚಿವ ಸಂಪುಟ ಅಸ್ತು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದಿರುವುದಾಗಿ‌ ಉತ್ತರಾಖಂಡದ ಸಿಎಂ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿತ್ತು ಎನ್ನಲಾಗಿದೆ.‌ ಇದೀಗ ಅಧಿಕಾರಕ್ಕೆ ಬಂದ ತಕ್ಷಣ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಪುಷ್ಕರ್‌ ಸಿಂಗ್‌ ಧಾಮಿ ಈ ಘೋಷಣೆ ಮಾಡಿದ್ದಾರೆ. ಸಂಪುಟ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಅವರು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಿರ್ಧರಿಸಿದ್ದೇವೆ.

ಏಕರೂಪ ನಾಗರಿಕ ನೀತಿ ಜಾರಿಗೊಳಿಸಿದ ಉತ್ತರಾಖಂಡ| ಸಂಹಿತೆಗೆ ಸಚಿವ ಸಂಪುಟ ಅಸ್ತು Read More »