ರಾಜ್ಯ

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ದೃಢ

ಬೆಂಗಳೂರು: ಸಚಿವ ಆಶೋಕ್ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಬಸವರಾಜ ಬೊಮ್ಮಾಯಿ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ್ದು, ಸಂಪರ್ಕಿತರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ. ನನ್ನ ಆರೋಗ್ಯ ಚೆನ್ನಾಗಿದೆ, ನಾನು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ ಆಗಿ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.ನನ್ನ ಆರೋಗ್ಯ ಚೆನ್ನಾಗಿದೆ, ನಾನು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ ಆಗಿ ಟೆಸ್ಟ್ ಮಾಡಿಸಿಕೊಳ್ಳಿ […]

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ದೃಢ Read More »

ಹುಟ್ಟಿದ ಏಳೇ ದಿನಕ್ಕೆ 2ಲಕ್ಷಕ್ಕೆ ಮಾರಾಟವಾಯ್ತು‌ ಟಗರು ಮರಿ|

ವಿಜಯಪುರ: ಕೇವಲ 7 ದಿನದ ಟಗರು ಮರಿಯೊಂದು ಬರೋಬ್ಬರಿ 2 ಲಕ್ಷ ರೂಪಾಯಿಗೆ ಮಾರಾಟವಾಗಿ ಜನರನ್ನು ಆಶ್ಚರ್ಯಕ್ಕೀಡು ಮಾಡಿದ ಘಟನೆ ಜಿಲ್ಲೆಯ ಇಂಡಿ ಇಂಡಿ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಪಟ್ಟಣದ ಟಗರು ಸಾಕಾಣಿಕೆದಾರ ಬಾನಪ್ಪ ಮಾಸ್ತರ್​ ಪೂಜಾರಿ ಅವರಿಗೆ ಸೇರಿದ 7 ದಿನದ ಟಗರು ಮರಿ ₹2 ಲಕ್ಷಕ್ಕೆ ಮಾರಾಟವಾಗಿದೆ.‌ ಈ ಟಗರು ಮರಿ ವಿಶೇಷ ತಳಿಯಾಗಿದ್ದಲ್ಲದೇ, ಇದು ಅದೃಷ್ಟದ ಸಂಕೇತ ಎಂದು ಹೇಳಲಾಗುತ್ತಿದೆ. ಮರಿ ಟಗರು ಜನಿಸಿದ ಕೇವಲ 7 ದಿನ ಮಾತ್ರ ಕಳೆದಿವೆ. ಈ

ಹುಟ್ಟಿದ ಏಳೇ ದಿನಕ್ಕೆ 2ಲಕ್ಷಕ್ಕೆ ಮಾರಾಟವಾಯ್ತು‌ ಟಗರು ಮರಿ| Read More »

ಕರ್ನಾಟಕ ಮತ್ತೆ ಕಂಪ್ಲೀಟ್ ಲಾಕ್!? ಮುನ್ಸೂಚನೆ ನೀಡಿದ ಗೃಹ‌ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂವನ್ನು ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದರೆ ಮತ್ತೆ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮುನ್ಸೂಚನೆ ನೀಡಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಸೋಂಕು ಹೆಚ್ಚಳವಾದರೆ ಮತ್ತೆ ಲಾಕ್ ಡೌನ್ ಮಾಡಬೇಕಾಗುತ್ತೆ. ತಿಂಗಳುಗಟ್ಟಲೇ ಲಾಕ್ ಡೌನ್ ಮಾಡಬೇಕಾದರೆ ಅದಕ್ಕೆ ಕಾಂಗ್ರೆಸ್ ಹೊಣೆಯಾಗಲಿದೆ.

ಕರ್ನಾಟಕ ಮತ್ತೆ ಕಂಪ್ಲೀಟ್ ಲಾಕ್!? ಮುನ್ಸೂಚನೆ ನೀಡಿದ ಗೃಹ‌ ಸಚಿವ ಅರಗ ಜ್ಞಾನೇಂದ್ರ Read More »

ನಳಿನ್ ಕುಮಾರ್ ಕಟೀಲಿಗೆ ಕೊರೊನಾ ದೃಢ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಈ ಹಿನ್ನೆಲೆ ಸರಣಿ ಟ್ವೀಟ್ ಮೂಲಕ ಕಟೀಲ್ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಳೀನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಇನ್ನೂ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಹೆಚ್ಚು ಆತಂಕ ಸೃಷ್ಟಿ ಮಾಡಿದೆ

ನಳಿನ್ ಕುಮಾರ್ ಕಟೀಲಿಗೆ ಕೊರೊನಾ ದೃಢ Read More »

ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ (ಚಂಪಾ) ವಿಧಿವಶ

ಬೆಂಗಳೂರು: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಟಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಥೀವ ಶರೀರವನ್ನು ಯಲಚೇನಹಳ್ಳಿ ಸಮೀಪದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಚಂಪಾ ಅವರಿಗೆ 85 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಚಂಪಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪರಿಷತ್ತಿನ ಮೂಲಗಳು

ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ (ಚಂಪಾ) ವಿಧಿವಶ Read More »

ವೀಕೆಂಡ್ ಕರ್ಪ್ಯೂ ಅಂತ್ಯ| ಸಹಜ ಸ್ಥಿತಿಯತ್ತ ಕರ್ನಾಟಕ|

ಬೆಂಗಳೂರು: ರಾಜ್ಯದಲ್ಲಿ ಕೊರೊನಾಗೆ ಕಡಿವಾಣ ಹಾಕಲು ಜಾರಿ ಮಾಡಿದ್ದ ಮೊದಲ ವಾರದ ವೀಕೆಂಡ್ ಕರ್ಫ್ಯೂ ಇಂದು ಬೆಳಗ್ಗೆ 5 ಗಂಟೆಗೆ ಅಂತ್ಯಗೊಂಡಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಆರಂಭವಾಗಿದ್ದ ವಾರಾಂತ್ಯ ಕರ್ಫ್ಯೂ ಇಂದು ಮುಂಜಾನೆ 5 ಗಂಟೆಗೆ ಅಂತ್ಯವಾಗಿದೆ. ಇಂದಿನಿಂದ ಶುಕ್ರವಾರ ರಾತ್ರಿವರೆಗೆ ಜನಜೀವನ ಸಹಜ ಸ್ಥಿತಿಯಲ್ಲಿ ಇರುತ್ತದೆ. ಆದರೆ ಈ ಅವಧಿಯಲ್ಲಿ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ದೈನಂದಿನ ಕರ್ಫ್ಯೂ ಇರಲಿದೆ. ಜನವರಿ 14 ರ

ವೀಕೆಂಡ್ ಕರ್ಪ್ಯೂ ಅಂತ್ಯ| ಸಹಜ ಸ್ಥಿತಿಯತ್ತ ಕರ್ನಾಟಕ| Read More »

ನಿಯಮ‌ ಉಲ್ಲಂಘಿಸಿದ ಕಾಂಗ್ರೆಸ್ ನಾಯಕರ ಮೇಲೆ ಕಾನೂನು ಕ್ರಮ – ಸಿ ಎಂ

ಬೆಂಗಳೂರು : ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಲಾಗಿದ್ದು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ಯಾಕೆ ಮಾಡುತ್ತಿದ್ದಾರೆ? 5 ವರ್ಷದ ಅಧಿಕಾರದಲ್ಲಿ ಡಿಪಿಆರ್ ಸಲ್ಲಿಸಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಡಿಪಿಆರ್ ಮಂಡಿಸಿಲ್ಲ. ಇದು ಚುನಾವಣೆ ಹಿನ್ನೆಯಲ್ಲಿ ರಾಜಕೀಯ ಪಾದಯಾತ್ರೆ. ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಲ್ಲವೆಂಬ

ನಿಯಮ‌ ಉಲ್ಲಂಘಿಸಿದ ಕಾಂಗ್ರೆಸ್ ನಾಯಕರ ಮೇಲೆ ಕಾನೂನು ಕ್ರಮ – ಸಿ ಎಂ Read More »

ಡಯಾಲಿಸಿಸ್ ಚಿಕಿತ್ಸೆ| ವೆನ್ಲಾಕ್ ರಾಜ್ಯಕ್ಕೆ ಮೊದಲು|

ಮಂಗಳೂರು: ಪ್ರತಿದಿನ 80 ಮಂದಿ ರೋಗಿಗಳಿಗೆ ಡಯಾಲಿಸಿಸ್‌ ಸೌಲಭ್ಯ ಒದಗಿಸುವ ಮೂಲಕ ಮಂಗಳೂರಿನ ವೆನ್ಲಾಕ್‌ ಜಿಲ್ಲಾ ಆಸ್ಪತ್ರೆಯು ರಾಜ್ಯದಲ್ಲಿಯೇ ಮೊದಲ ಸ್ಥಾನದ ಹೆಗ್ಗಳಿಕೆಗೆ ಪಾತ್ರವಾಗಿದೆ. ದಿನವೊಂದಕ್ಕೆ 60 ಮಂದಿಗೆ ಡಯಾಲಿಸಿಸ್‌ ಸೌಲಭ್ಯ ನೀಡುವ ಮೂಲಕ ಎರಡನೇ ಸ್ಥಾನದಲ್ಲಿದ್ದ ಸರ್ಕಾರಿ ಆಸ್ಪತ್ರೆಯು ಈಗ ಇನ್ನಷ್ಟು ರೋಗಿಗಳಿಗೆ ಸೇವೆ ಒದಗಿಸಲು ಸಿದ್ಧವಾಗಿದೆ. ಪ್ರತಿನಿತ್ಯ 68 ಮಂದಿ ರೋಗಿಗಳಿಗೆ ಡಯಾಲಿಸಿಸ್‌ ಸೌಲಭ್ಯ ನೀಡುತ್ತಿದ್ದ ಬೆಂಗಳೂರಿನ ಕೆ.ಸಿ. ಜನರಲ್‌ ಆಸ್ಪತ್ರೆಯು ಈವರೆಗೆ ಮೊದಲ ಸ್ಥಾನದಲ್ಲಿತ್ತು, ಅದು ಈಗ ಎರಡನೇ ಸ್ಥಾನದಲ್ಲಿದೆ. ಮೂತ್ರ ಪಿಂಡದ

ಡಯಾಲಿಸಿಸ್ ಚಿಕಿತ್ಸೆ| ವೆನ್ಲಾಕ್ ರಾಜ್ಯಕ್ಕೆ ಮೊದಲು| Read More »

ಕಂದಾಯ ಸಚಿವ ಆರ್.ಅಶೋಕ್ ಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ಮೂರನೆ ಅಲೇ ನಿಧಾನವಾಗಿ ವಿಧಾನಸೌದಕ್ಕೂ ಆವರಿಸಿದ್ದು, ಕಂದಾಯ ಸಚಿವ ಆರ್.ಅಶೋಕ್ ಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಸದ್ಯ ಲಘು ರೋಗ ಲಕ್ಷಣಗಳಿರುವ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ ಅಶೋಕ್ ಇತ್ತೀಚೆಗಷ್ಟೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೆಲದಿನಗಳ ನಂತರ ಹೋಮ್ ಐಸೋಲೇಶನ್ ಗೆ ಒಳಗಾಗಲಿದ್ದಾರೆ. ಈ ಕುರಿತು ಆರ್ ಆಶೋಕ್ ಟ್ವೀಟ್ ಮಾಡಿದ್ದು ನನಗೆ ಕೋವಿಡ್ ದೃಢಪಟ್ಟಿದ್ದು ಆರೋಗ್ಯವಾಗಿ ಇದ್ದೇನೆ,

ಕಂದಾಯ ಸಚಿವ ಆರ್.ಅಶೋಕ್ ಗೆ ಕೋವಿಡ್ ಪಾಸಿಟಿವ್ Read More »

ವೀಕೆಂಡ್ ಕರ್ಪ್ಯೂನಿಂದ ನಷ್ಟಕ್ಕೊಳಗಾಗುವ 5 ಸಿನಿಮಾಗಳಿಗೆ ಪರಿಹಾರ ನೀಡುವಂತೆ ಸಿಎಂ ಗೆ ಫಿಲ್ಮ್ ಛೇಂಬರ್ ಮನವಿ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದುಪ್ಪಟ್ಟಾಗುತ್ತಿದೆ. ಇದರಿಂದ ಮತ್ತೆ ಕರ್ನಾಟಕದಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಕೆಲವು ದಿನಗಳ ಹಿಂದೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಇದರಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಸೀಟು ಭರ್ತಿ ಯಂತಹ ಕಠಿಣ ಮಾರ್ಗಸೂಚಿಯನ್ನೂ ಹೊರಡಿಸಿದೆ. ಈ ನಿಯಮಗಳು ಕನ್ನಡ ಚಿತ್ರರಂಗಕ್ಕೆ ಮಾರಕ ಎಂದು ಫಿಲ್ಮ್ ಚೇಂಬರ್ ಆತಂಕ ವ್ಯಕ್ತಪಡಿಸಿದೆ. ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡುತ್ತಿದ್ದಂತೆ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ತುರ್ತು

ವೀಕೆಂಡ್ ಕರ್ಪ್ಯೂನಿಂದ ನಷ್ಟಕ್ಕೊಳಗಾಗುವ 5 ಸಿನಿಮಾಗಳಿಗೆ ಪರಿಹಾರ ನೀಡುವಂತೆ ಸಿಎಂ ಗೆ ಫಿಲ್ಮ್ ಛೇಂಬರ್ ಮನವಿ Read More »