ರಾಜ್ಯ

ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ

ಮಾಣಿ: ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಟ್ಲದ ಮಾಣಿಯಲ್ಲಿ ನಡೆದಿದೆ. ಹುಸೇನ್ ಹಲ್ಲೆಗೊಳಗಾದ ಯುವಕ. ಅಂಗಡಿ ಕಟ್ಟಡವನ್ನು ಬಾಡಿಗೆಗೆ ಕೊಟ್ಟ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳು ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ Read More »

ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ರವರಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್‌ ಆಗಿದ್ದಾರೆ. ಈ ಕುರಿತು ಟ್ವಿಟ್‌ ಮೂಲಕ ಮಾಹಿತಿ ನೀಡಿದ ಸಚಿವರು ‘ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ.ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ರವರಿಗೆ ಕೊರೊನಾ ಸೋಂಕು Read More »

“ಆಗೋದಾದ್ರೆ ಕೆಲಸ ಮಾಡಿ, ಇಲ್ಲಾಂದ್ರೆ ಬೇರೆ ದಾರಿ ನೋಡಿಕೊಳ್ಳಿ” ಅತಿಥಿ ಉಪನ್ಯಾಸಕರ ವಿರುದ್ಧ ಗರಂ ಆದ ಶಿಕ್ಷಣ ಸಚಿವರು

ಬೆಂಗಳೂರು : ಕೋಲಾರದಲ್ಲಿ ಸಚಿವ ನಾಗೇಶ್‌ ಮತ್ತು ಅತಿಥಿ ಉಪನ್ಯಾಸಕರ ನಡುವೆ ವಾಗ್ವಾದ ನಡೆದಿದ್ದು, ಅತಿಥಿ ಉಪನ್ಯಾಸಕರ ವಿರುದ್ಧ ಗರಂ ಆಗಿದ್ದರೆ. ಕೋಲಾರ ಹೊರ ವಲಯದ ಹೆದ್ದಾರಿಯಲ್ಲಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಅರ್ಪಿಸಲು ಮುಂದಾದ, ಜಿಲ್ಲೆಯ ಅತಿಥಿ ಉಪನ್ಯಾಸಕರು ಈ ವೇಳೆಯಲ್ಲಿ, ಸಚಿವರ ಮುಂದೆ, ನಮಗೆ ವೇತವನ್ನ ಹೆಚ್ಚಳ ಮಾಡಿ, ನಾವು ಶೋಷಣೆಗೆ ಒಳಗಾಗಿದ್ದೇವೆ ಅಂಥ ಹೇಳಿಕೊಂಡರು. ಮನವಿಯನ್ನ ಕೇಳಿಸಿಕೊಳ್ಳುವ ವೇಳೆಯಲ್ಲಿ ಗರಂ ಆದ ಸಚಿವರು, ಮನವಿಕಾರರ ವಿರುದ್ದ ಕಿಡಿಕಾರಿ ನಿಮಗೆ ಶೋಷಣೆ ಅನ್ನುವ ಪದದ ಅರ್ಥ

“ಆಗೋದಾದ್ರೆ ಕೆಲಸ ಮಾಡಿ, ಇಲ್ಲಾಂದ್ರೆ ಬೇರೆ ದಾರಿ ನೋಡಿಕೊಳ್ಳಿ” ಅತಿಥಿ ಉಪನ್ಯಾಸಕರ ವಿರುದ್ಧ ಗರಂ ಆದ ಶಿಕ್ಷಣ ಸಚಿವರು Read More »

ಸಿಲಿಂಡರ್ ಬೆಲೆಯಲ್ಲಿ ಕಡಿತಕ್ಕೆ ಇಂಡಿಯನ್ ಆಯಿಲ್ ನಿರ್ಧಾರ

ನವದೆಹಲಿ : ಹೊಸ ವರ್ಷದಂದು ಇಂಡಿಯನ್ ಆಯಿಲ್ ಜನತೆಗೆ ಗುಡ್ ನ್ಯೂಸ್ ನೀಡಿದೆ. ಇಂಡಿಯನ್ ಆಯಿಲ್ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಕಡಿತಗೊಳಿಸಲು ನಿರ್ಧರಿಸಿದೆ. ಇದರಿಂದ ಜನತೆಗೆ ನೆಮ್ಮದಿ ದೊರೆಯಲಿದೆ. ಡಿಸೆಂಬರ್ ತಿಂಗಳ ಆರಂಭದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಡಿಸೆಂಬರ್ ನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 100 ರೂ. ಆದರೆ, ಆಗ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ ಎಂಬುದು ಜನರ ಪಾಲಿಗೆ ಸಮಾಧಾನದ ಸಂಗತಿಯಾಗಿತ್ತು. ವಾಣಿಜ್ಯ ಸಿಲಿಂಡರ್‌ಗಳ

ಸಿಲಿಂಡರ್ ಬೆಲೆಯಲ್ಲಿ ಕಡಿತಕ್ಕೆ ಇಂಡಿಯನ್ ಆಯಿಲ್ ನಿರ್ಧಾರ Read More »

ದ್ವಾದಶ ರಾಶಿಗಳ ವರ್ಷ ಭವಿಷ್ಯ

ಕಳೆದೆರಡು ವರ್ಷಗಳಿಂದ ಕೊರೊನಾ ಸಾಂಕ್ರಾಮಿಕವು ಜಗತ್ತನ್ನು ಕಂಗೆಡಿಸಿದೆ. ಇನ್ನೇನು ಕಡಿಮೆಯಾಯಿತು ಎನ್ನುವಷ್ಟರಲ್ಲಿ ಹೊಸ ರೂಪಾಂತರಿಗಳು ಪ್ರತ್ಯಕ್ಷವಾಗುತ್ತಿವೆ. 2022ರ ವರ್ಷ ಹೇಗಿರಬಹುದು? ಯಾವ ರಾಶಿಯವರಿಗೆ ಹೇಗಿದೆ? ಇಲ್ಲಿದೆ ಸಂಪೂರ್ಣ ‌ಮಾಹಿತಿ. ಮೇಷರಾಶಿ: ಈ ರಾಶಿಯವರಿಗೆ ಈ ವರ್ಷ ಶುಭ ಸುದ್ದಿಗಳು ಸಿಗಲಿದ್ದು, ಸ್ವಲ್ಪ ಹೆಚ್ಚಿನ ಪ್ರಯತ್ನ ಹಾಕುವ ಅವಶ್ಯಕತೆ ಇದೆ. ಕೆಲವೊಂದು ಗೊಂದಲದ ಸಮಯದಲ್ಲಿ ಕುಟುಂಬದ ಸದಸ್ಯರ ಸಲಹೆ ಕೇಳುವುದು ಬಹಳ ಮುಖ್ಯ. ಅವರ ಅನುಭವ ಮತ್ತು ಸಲಹೆ ನಿಮ್ಮ ಕಷ್ಟಗಳನ್ನು ದೂರ ಮಾಡುತ್ತದೆ. ನಿಮ್ಮ ಆಸೆ ಈ

ದ್ವಾದಶ ರಾಶಿಗಳ ವರ್ಷ ಭವಿಷ್ಯ Read More »

ಲೈಂಗಿಕ ಕ್ರೀಯೆ ಮತ್ತು ವೈವಾಹಿಕ ಹಕ್ಕನ್ನು ಪತ್ನಿಯ ಮೇಲೆ ಹೇರುವಂತಿಲ್ಲ| ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು​

ಗುಜರಾತ್ : ವೈವಾಹಿಕ ಸಂಬಂಧದ ಕುರಿತಂತೆ ಗುಜರಾತ್​ ಹೈಕೋರ್ಟ್ ಮಹತ್ವದ ತೀರ್ಪೋಂದನ್ನು ಗುಜರಾತ್​ ಹೈಕೋರ್ಟ್ ಪ್ರಕಟಿಸಿದೆ. ವೈವಾಹಿಕ ಹಕ್ಕುಗಳನ್ನು ಸ್ಥಾಪಿಸಲು ಹಾಗೂ ಲೈಂಗಿಕ ಕ್ರಿಯೆಗಳನ್ನು ನಡೆಸಲು ಪತ್ನಿಯನ್ನು ಒತ್ತಾಯಿಸಲು ಪತಿಗೆ ಯಾವುದೇ ಅಧಿಕಾರ ಇರೋದಿಲ್ಲ ಎಂದು ಹೇಳಿದೆ. ಗುಜರಾತ್​​ನ ಬನಸ್ಕಂದ ಜಿಲ್ಲೆಯ ಗ್ರಾಮವೊಂದರ ಮುಸ್ಲಿಂ ದಂಪತಿಯ ವೈವಾಹಿಕ ಸಂಬಂಧದ ಕುರಿತಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. 2015ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಈ ದಂಪತಿಗೆ ಓರ್ವ ಪುತ್ರ ಕೂಡ ಇದ್ದಾನೆ. ಮಹಿಳೆಯು ಪಾಲನ್​​ಪುರ

ಲೈಂಗಿಕ ಕ್ರೀಯೆ ಮತ್ತು ವೈವಾಹಿಕ ಹಕ್ಕನ್ನು ಪತ್ನಿಯ ಮೇಲೆ ಹೇರುವಂತಿಲ್ಲ| ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು​ Read More »

ಮಡಿಕೇರಿ : ಸಂಘಕ್ಕೆ ಹಣ ಪಾವತಿಸಲು ತೆರಳಿದ ವ್ಯಕ್ತಿ ನಾಲ್ಕು ದಿನದ ಬಳಿಕ ಶವವಾಗಿ ಪತ್ತೆ ಅಪಹರಿಸಿ ಕೊಲೆ ಶಂಕೆ !!

ಮಡಿಕೇರಿ:- ಸಂಘವೊಂದಕ್ಕೆ ಹಣ ಪಾವತಿಸಲು ಹೋಗಿದ್ದ ವ್ಯಕ್ತಿಯೊಬ್ಬರು ನಾಲ್ಕು ದಿನಗಳ ಬಳಿಕ ಶವವಾಗಿ ಪತ್ತೆಯಾದ ಘಟನೆ ಮಡಿಕೇರಿ ತಾಲೂಕಿನ ಪಾಲೂರು ಗ್ರಾಮದಲ್ಲಿ ನಡೆದಿದೆ. ಮೂರ್ನಾಡು ನಿವಾಸಿ ಗಿರೀಶ್(38) ಎಂಬವರೇ ಮೃತಪಟ್ಟ ವ್ಯಕ್ತಿಯಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಮಾರು 6 ತಿಂಗಳ ಹಿಂದೆ ಪಾಲೂರು ವ್ಯಾಪ್ತಿಯಲ್ಲಿ ತೋಟ ಕೆಲಸ ಮಾಡುತ್ತಿದ್ದ ಗಿರೀಶ್, ನಂತರದ ದಿನಗಳಲ್ಲಿ ಮೂರ್ನಾಡು ಗ್ರಾಮದಲ್ಲೇ ನೆಲೆಸಿದ್ದರು. ಡಿ.27ರಂದು ಪಾಲೂರು ಗ್ರಾಮಕ್ಕೆ ತೆರಳಿದ ಗಿರೀಶ್ 1,200 ರೂ.ಗಳನ್ನು ಸಂಘವೊಂದಕ್ಕೆ ಪಾವತಿಸಿ ಪತ್ನಿಗೆ ಮೊಬೈಲ್ ಮೂಲಕ ಮಾಹಿತಿ

ಮಡಿಕೇರಿ : ಸಂಘಕ್ಕೆ ಹಣ ಪಾವತಿಸಲು ತೆರಳಿದ ವ್ಯಕ್ತಿ ನಾಲ್ಕು ದಿನದ ಬಳಿಕ ಶವವಾಗಿ ಪತ್ತೆ ಅಪಹರಿಸಿ ಕೊಲೆ ಶಂಕೆ !! Read More »

ತಳಮಟ್ಟದ ಜನರಿಗೆ ತಲುಪದ ಸವಲತ್ತು| ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಕ್ಲಾಸ್| ಭೂ ಮಾಫಿಯಾ ತೊದಗಿಸಿಕೊಂಡ ಡಿಸಿ ಗಳಿಗೆ ಖಡಕ್ ವಾರ್ನಿಂಗ್

ಬೆಂಗಳೂರು: ರಾಜ್ಯದ ಜನರಿಗೆ ಮೂಲ ಸೌಕರ್ಯ ಗಳನ್ನು ಸರಿಯಾದ ಸಮಯಕ್ಕೆ ತಲುಪಿಸುವಲ್ಲಿ ಜಿಲ್ಲಾಧಿಕಾರಿಗಳ ವಿಫಲತೆ ಕಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಂಡಾಂಡಮಂಡಲವಾಗಿದ್ದಾರೆ. ಜೊತೆಗೆ ಭೂ ಮಾಫಿಯಗಳಲ್ಲಿ ಭಾಗಿಯಾಗುತ್ತಿರುವ ರಾಜ್ಯದ ಕೆಲವು ಜಿಲ್ಲಾಧಿಕಾರಿಗಳಿಗೆ ಪರೋಕ್ಷವಾಗಿ ಎಚ್ಚರಿಕೆ ರವಾನಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿ ಸೇರಿದಂತೆ ಜನರ ಮತ್ತು ಸರ್ಕಾರದ ನಡುವಿನ ಬಹುಮುಖ್ಯ ಕೊಂಡಿ ಜಿಲ್ಲಾಧಿಕಾರಿಗಳು. ಹೀಗಿರುವಾಗ ನೀವು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ನೀವು ಉತ್ತಮವಾಗಿ ಕೆಲಸ ಮಾಡಿದರೆ ಮಾತ್ರ ಸರ್ಕಾರಕ್ಕೆ ಉತ್ತಮ ಹೆಸರು ಬರುತ್ತದೆ. ಹೀಗಾಗಿ ಬಾಸಿಸಂ ಬಿಟ್ಟು ತಳಮಟ್ಟದಲ್ಲಿ

ತಳಮಟ್ಟದ ಜನರಿಗೆ ತಲುಪದ ಸವಲತ್ತು| ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಕ್ಲಾಸ್| ಭೂ ಮಾಫಿಯಾ ತೊದಗಿಸಿಕೊಂಡ ಡಿಸಿ ಗಳಿಗೆ ಖಡಕ್ ವಾರ್ನಿಂಗ್ Read More »

ವರ್ಷಾರಂಭದ ಎರಡು ದಿನ ರಾಜ್ಯದಲ್ಲಿ “ವರ್ಷಧಾರೆ” ಸಾಧ್ಯತೆ| ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವೆಡೆ ಜ.1 ಮತ್ತು 2ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಮೂಲಕ ಹೊಸ ವರ್ಷದ ಮೊದಲ ದಿನವೇ ಇಳೆಗೆ ವರ್ಷಧಾರೆ ಬರಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೊಡಗು ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಎರಡು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಬೀಳುವುದಿಲ್ಲ.

ವರ್ಷಾರಂಭದ ಎರಡು ದಿನ ರಾಜ್ಯದಲ್ಲಿ “ವರ್ಷಧಾರೆ” ಸಾಧ್ಯತೆ| ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

ಹಿಜಾಬ್ ಧರಿಸಿದ ಕಾರಣಕ್ಕೆ 6 ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ನಿಲ್ಲಿಸಿದ ಕಾಲೇಜು ಮುಖ್ಯಸ್ಥರು

ಉಡುಪಿ : ಹಿಜಾಬ್ ಹಾಕಿದ್ದಾರೆ ಎಂಬ ಕಾರಣಕ್ಕೆ 6 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರ ಹಾಕಿರುವ ಘಟನೆ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಹಿಂದು ಧರ್ಮದಲ್ಲಿ ಕುಂಕುಮ ಇಡುವಂತೆ ಮುಸ್ಲಿಂ ಧರ್ಮದಲ್ಲಿ ಹಿಜಾಬ್ ಹಾಕುತ್ತೇವೆ. ಇದಕ್ಕೆ ಇಲ್ಲಿ ವಿರೋಧಿಸಿದ್ದಾರೆ. ಸರಕಾರಿ ಶಾಲೆಯಲ್ಲಿಯೇ ಈ ರೀತಿಯಲ್ಲಿ ತಾರತಮ್ಯ ಮಾಡುತ್ತಿದ್ದಾರೆ. ಇದ್ಯಾವ ಸಮಾನತೆ ಎಂದು ವಿದ್ಯಾರ್ಥಿನಿಯರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಹಿಜಾಬ್ ಧರಿಸುವುದು ನಮ್ಮ ಸಂಸ್ಕೃತಿ. ನಮಗೆ ಹಿಜಾಬ್ ಧರಿಸಲು ಅನುಮತಿ ನೀಡಿ, ನಮಗೆ

ಹಿಜಾಬ್ ಧರಿಸಿದ ಕಾರಣಕ್ಕೆ 6 ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ನಿಲ್ಲಿಸಿದ ಕಾಲೇಜು ಮುಖ್ಯಸ್ಥರು Read More »