ರಾಜ್ಯ

ಕಿರುತೆರೆ ಇತಿಹಾಸದಲ್ಲಿ ದಾಖಲೆ ಬರೆದ ‘ಪುಟ್ಟಕ್ಕನ ಮಕ್ಕಳು’| ವಾರದಲ್ಲೇ ಭರ್ಜರಿ ಟಿಆರ್ ಪಿ|

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿರುವ ‘ಪುಟ್ಟಕ್ಕನ ಮಕ್ಕಳು’ ಸೀರಿಯಲ್ ಅಪಾರ​ ಜನಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ​ ಗಿಟ್ಟಿಸಿಕೊಂಡಿರುವ ಟಿಆರ್​ಪಿ ಕಂಡು ಎಲ್ಲರೂ ಅಚ್ಚರಿ ಪಟ್ಟಿದ್ದಾರೆ. ಹಿರಿಯ ನಟಿ ಉಮಾಶ್ರಿ ನಟಿಸಿರುವ ಹೊಸ ಸೀರಿಯಲ್​ ‘ಪುಟ್ಟಕ್ಕನ ಮಕ್ಕಳು’ ಪ್ರಸಾರ ಆರಂಭಿಸಿರುವ ಈ ಧಾರಾವಾಹಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಟಿಆರ್​ಪಿ ವಿಚಾರದಲ್ಲಿ ಈ ಸೀರಿಯಲ್​ ದಾಖಲೆ ಬರೆದಿದೆ. ಕನ್ನಡ ಕಿರುತೆರೆ ಇತಿಹಾಸದಲ್ಲಿ ಬೇರೆ ಯಾವುದೇ ಧಾರಾವಾಹಿ ಪಡೆದುಕೊಳ್ಳದಷ್ಟು ಗ್ರ್ಯಾಂಡ್​ ಓಪನಿಂಗ್​ ಅನ್ನು ‘ಪುಟ್ಟಕ್ಕನ ಮಕ್ಕಳು’ ಸೀರಿಯಲ್​ ಪಡೆದುಕೊಂಡಿದೆ. […]

ಕಿರುತೆರೆ ಇತಿಹಾಸದಲ್ಲಿ ದಾಖಲೆ ಬರೆದ ‘ಪುಟ್ಟಕ್ಕನ ಮಕ್ಕಳು’| ವಾರದಲ್ಲೇ ಭರ್ಜರಿ ಟಿಆರ್ ಪಿ| Read More »

ಬೆಳ್ತಂಗಡಿ: ನಮಾಜ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಯುವಕನೊರ್ವ ಇದ್ದಕ್ಕಿದ್ದಂತೆ ತನ್ನ ಮನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯ ಜಾರಿಗೆ ಬೈಲ್ ನಲ್ಲಿ ನಡೆದಿದೆ. ಮೃತಪಟ್ಟ ಯುವಕ ಶಾಕಿರ್(24) ಎಂದು ತಿಳಿದು ಬಂದಿದೆ. ಎಂದಿನಂತೆ ಬೆಳಿಗ್ಗೆ ನಮಾಝ್ ಮಾಡಲು ಜಾರಿಗೆ ಬೈಲ್ ಮಸೀದಿಗೆ ತೆರಳಿದ್ದರು. ಮಸೀದಿಯಿಂದ ಬಂದ ಯುವಕ ತಾಯಿ ಬಳಿ ಸ್ವಲ್ಪ ಎದೆನೋವು ಇದೆ ಎಂದು ಹೇಳಿಕೊಂಡಿದ್ದರು. ತಾಯಿಯಲ್ಲಿ ನೋವಿನ ಬಗ್ಗೆ ತಿಳಿಸಿ ಒಂದಷ್ಟು ನಿಮಿಷಗಳ ಬಳಿಕ ದಿಢೀರ್ ಆಗಿ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ: ನಮಾಜ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಸಾವು Read More »

ಕರ್ನಾಟಕದಲ್ಲಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ| ಡಿ.31 ಕ್ಕೆ “ಕರ್ನಾಟಕ ಬಂದ್”

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಕನ್ನಡಿಗರು, ಕನ್ನಡ ನಾಡಿನ ಆಸ್ತಿಪಾಸ್ತಿ ಮೇಲೆ ಎಂಇಎಸ್ ದಬ್ಬಾಳಿಕೆ ಹಾಗೂ ಖಂಡಿಸಿ, ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಹೊಸ ವರ್ಷ ಮುನ್ನಾದಿನ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್: ಕರ್ನಾಟಕ, ಕನ್ನಡ ನಾಡು ನುಡಿಯ ಒಗ್ಗಟ್ಟಿಗೆ ಕನ್ನಡಿಗರು ಈ ಸಂದರ್ಭದಲ್ಲಿ ಒಟ್ಟಾಗಿ ಶಕ್ತಿಯನ್ನು ಪ್ರದರ್ಶಿಸಬೇಕು. 25ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಕನ್ನಡಿಗರೆಲ್ಲರೂ ನಮಗೆ ಬೆಂಬಲ ನೀಡಬೇಕು.

ಕರ್ನಾಟಕದಲ್ಲಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ| ಡಿ.31 ಕ್ಕೆ “ಕರ್ನಾಟಕ ಬಂದ್” Read More »

ಮತಾಂತರ ನಿಷೇಧ ವಿಧೇಯಕ ಚರ್ಚೆ ಹಿನ್ನೆಲೆ| ಮಾಧ್ಯಮಗಳಿಗೆ ನಿರ್ಬಂಧ ಹೇರಿದ ಸ್ಪೀಕರ್ ಕಾಗೇರಿ|

ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣ ಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ಇಂದು ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣಸೌಧಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ಸುವರ್ಣಸೌಧದ ಒಳಗೆ ಬಿಡದಂತೆ ಸ್ಪೀಕರ್ ಕಾಗೇರಿ ಸೂಚನೆ ನೀಡಿದ್ದಾರೆ. ಸುವರ್ಣಸೌಧದ ಒಳಗೆ ಯಾವುದೇ ಗೇಟ್ ಗಳಿಂದಲೂ ಮಾಧ್ಯಮ ಪ್ರತಿನಿಧಿಗಳನ್ನು ಬಿಡದಂತೆ ಮಾರ್ಷೆಲ್ ಗಳಿಗೆ ಸ್ಪೀಕರ್ ಕಾಗೇರಿ ಅವರು ಸೂಚನೆ ನೀಡಿದ್ದಾರೆ.

ಮತಾಂತರ ನಿಷೇಧ ವಿಧೇಯಕ ಚರ್ಚೆ ಹಿನ್ನೆಲೆ| ಮಾಧ್ಯಮಗಳಿಗೆ ನಿರ್ಬಂಧ ಹೇರಿದ ಸ್ಪೀಕರ್ ಕಾಗೇರಿ| Read More »

‘ವಾರ್ ರೂಂ ಸ್ಥಾಪಿಸಿ, ಅಗತ್ಯವಿದ್ದರೆ ನೈಟ್ ಕರ್ಪ್ಯೂ ಮಾಡಿ’ – ರಾಜ್ಯಕ್ಕೆ ಕೇಂದ್ರದ ಸೂಚನೆ

ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಕಂಡು ಬಂದ ಹೊಸ ರೂಪಾಂತರ ಓಮಿಕ್ರಾನ್‌ ಡೆಲ್ಟಾಕ್ಕಿಂತ ಮೂರು ಪಟ್ಟು ಸಾಂಕ್ರಾಮಿಕವಾಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಿಂದಾಗಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ವಾರ್‌ ರೂಂ ಸ್ಥಾಪನೆ ಮಾಡುವ ಅಗತ್ಯವಿದೆ ಎಂದು ರಾಜ್ಯಗಳಿಗೆ ತಿಳಿಸಿರುವ ಕೇಂದ್ರ ಸರ್ಕಾರವು, ಹಲವಾರು ಅಗತ್ಯ ಕ್ರಮಗಳನ್ನು ಪಟ್ಟಿ ಮಾಡಿ ರಾಜ್ಯಗಳಿಗೆ ನೀಡಿದೆ. ಅಗತ್ಯವಿದ್ದರೆ ನೈಟ್‌ ಕರ್ಫ್ಯೂ ಅನ್ನು ಜಾರಿ ಮಾಡಿ ಎಂದು ಕೂಡಾ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ

‘ವಾರ್ ರೂಂ ಸ್ಥಾಪಿಸಿ, ಅಗತ್ಯವಿದ್ದರೆ ನೈಟ್ ಕರ್ಪ್ಯೂ ಮಾಡಿ’ – ರಾಜ್ಯಕ್ಕೆ ಕೇಂದ್ರದ ಸೂಚನೆ Read More »

ಇಂದಿನಿಂದ ಪ್ರೊ ಕಬಡ್ಡಿ ಕಲರವ| ಎರಡು ವರ್ಷಗಳ ಬಳಿಕ ತೊಡೆ ತಟ್ಟಲಿದ್ದಾರೆ ದೇಸಿ ಕ್ರೀಡಾ ಕಲಿಗಳು|

ಬೆಂಗಳೂರು: ಕೊರೊನಾ ಕಾರಣದಿಂದ ಎರಡು ವರ್ಷಗಳ ಕಾಲ ಸ್ಥಗಿತಗೊಂಡಿದ್ದ ಪ್ರೋ ಕಬಡ್ಡಿ ಲೀಗ್‌ ಇಂದಿನಿಂದ ಪ್ರಾರಂಭವಾಗಲಿದೆ. ಈ ಬಾರಿಯ ಎಲ್ಲಾ 137 ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿದೆ. ಪ್ರತಿತಂಡವೂ 22 ಪಂದ್ಯಗಳನ್ನು ಆಡಲಿದ್ದು, ಅಗ್ರ ತಂಡಗಳು ಮಾತ್ರ ಫ್ಲೇ ಆಫ್‌ ಗೆ ಪ್ರವೇಶ ಪಡೆಯಲಿದೆ. ಕಳೆದ ಬಾರಿ ನಡೆದ ಪಂದ್ಯಾವಳಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದ ಬೆಂಗಳೂರು ಬುಲ್ಸ್‌ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ನಿರೀಕ್ಷೆ ಹೊಂದಿದೆ. ಮೊದಲ ದಿನ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದ್ದು, ಬೆಂಗಳೂರು ಹಾಗೂ ಯು

ಇಂದಿನಿಂದ ಪ್ರೊ ಕಬಡ್ಡಿ ಕಲರವ| ಎರಡು ವರ್ಷಗಳ ಬಳಿಕ ತೊಡೆ ತಟ್ಟಲಿದ್ದಾರೆ ದೇಸಿ ಕ್ರೀಡಾ ಕಲಿಗಳು| Read More »

ಹೊಸ ವರ್ಷಾಚರಣೆ, ಕ್ರಿಸ್ಮಸ್ ಹಬ್ಬ ಆಚರಣೆಗೆ ಹೊಸ ಮಾರ್ಗಸೂಚಿ| ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್ ನಲ್ಲಿ ಎನೇನಿದೆ ಗೊತ್ತಾ?

ಬೆಂಗಳೂರು: ಕರೊನಾ, ಒಮಿಕ್ರಾನ್‌ ಭೀತಿಯ ನಡುವೆ ಮತ್ತೊಂದು ಹೊಸ ವರ್ಷ ಕಾಲಿಡುತ್ತಿದೆ. ಕಳೆದ ವರ್ಷದಂತೆಯೇ ನೂತನ ವರ್ಷದ ಆಚರಣೆಗೆ ಈ ಬಾರಿಯೂ ಬ್ರೇಕ್‌ ಹಾಕಲಾಗಿದೆ. ಕ್ಷಣಕ್ಷಣಕ್ಕೂ ಕರೊನಾ ಜತೆ ಒಮಿಕ್ರಾನ್‌ ಭೀತಿ ಕಾಡುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ಆಚರಣೆಗೆ ಕೆಲವೊಂದು ಕಟ್ಟುನಿಟ್ಟಿನ ನಿಯಮ ಮಾಡಲಾಗಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಲವೊಂದು ಮಾಹಿತಿ ನೀಡಿದ್ದಾರೆ. ತಜ್ಞರ ಜತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ನಂತರ ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆಗೆ ಕೆಲವೊಂದು ಷರತ್ತುಗಳನ್ನು

ಹೊಸ ವರ್ಷಾಚರಣೆ, ಕ್ರಿಸ್ಮಸ್ ಹಬ್ಬ ಆಚರಣೆಗೆ ಹೊಸ ಮಾರ್ಗಸೂಚಿ| ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್ ನಲ್ಲಿ ಎನೇನಿದೆ ಗೊತ್ತಾ? Read More »

ಕಾರಿಂಜೇಶ್ವರ ತಪ್ಪಲಿನಲ್ಲಿ ಅಕ್ರಮ ಗಣಿಗಾರಿಕೆ| ಸೂಕ್ತ ಕ್ರಮಕ್ಕೆ ಸಚಿವ ಅಂಗಾರ ಸೂಚನೆ|

ಬಂಟ್ವಾಳ. ತಾಲೂಕಿನ ಕಾವಳಮುಡೂರು ಗ್ರಾಮದ ಕಾರಿಂಜೇಶ್ವರ ದೇವಸ್ಥಾನ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಸ್ಥಳಕ್ಕೆ ಈಗಾಗಲೇ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಸ್ಥಾನದ ಸುತ್ತಲಿನ ಜಾಗದಲ್ಲಿ ಎರಡು ಕ್ರಶರ್ ಹಾಗೂ ಎರಡು ಕಲ್ಲು ಕ್ವಾರಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಲ್ಲದೇ ಗುತ್ತಿಗೆ ಪ್ರದೇಶದ ಹೊರಭಾಗದಲ್ಲಿ ಅಕ್ರಮ ಕಲ್ಲು ಸಾಗಾಣಿಕೆ ಮಾಡಿರುವುದರಿಂದ

ಕಾರಿಂಜೇಶ್ವರ ತಪ್ಪಲಿನಲ್ಲಿ ಅಕ್ರಮ ಗಣಿಗಾರಿಕೆ| ಸೂಕ್ತ ಕ್ರಮಕ್ಕೆ ಸಚಿವ ಅಂಗಾರ ಸೂಚನೆ| Read More »

ಮತ್ತೆ ಉಲ್ಬಣಿಸುತ್ತಿರುವ ಕೊರೊನಾ| ಸಿಎಂ ನೇತ್ರತ್ವದಲ್ಲಿ ತುರ್ತು ಸಭೆ| ಕರ್ನಾಟಕದಲ್ಲಿ ಮುಂದಿನ ವಾರದಿಂದ ನೈಟ್ ಕರ್ಪ್ಯೂ?

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತುರ್ತು ಸಭೆ ಕರೆದಿದ್ದಾರೆ. ಇಂದು ಮಧ್ಯಾಹ್ನ 2.45ಕ್ಕೆ ಸುವರ್ಣಸೌಧದಲ್ಲಿ ಸಭೆ ನಡೆಸಲಿರುವ ಸಿಎಂ, ಒಮಿಕ್ರಾನ್​ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಕೋವಿಡ್ ವ್ಯಾಕ್ಸಿನೇಷನ್‌ ಡ್ರೈವ್ ಮತ್ತಷ್ಟು ವೇಗ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈಗಾಗಲೇ ರಾಜ್ಯದಲ್ಲಿ 90.06% ಜನರು ಮೊದಲ ಡೋಸ್​ ಲಸಿಕೆ ಪಡೆದಿದ್ದಾರೆ. ಎರಡನೇ ಡೋಸ್ ಹಾಕಿಸದವರಿಗೆ ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ಸೂಚನೆ ನೀಡಲಿರುವ ರಾಜ್ಯ ಸರ್ಕಾರ, ಕ್ರಿಸ್‌ಮಸ್

ಮತ್ತೆ ಉಲ್ಬಣಿಸುತ್ತಿರುವ ಕೊರೊನಾ| ಸಿಎಂ ನೇತ್ರತ್ವದಲ್ಲಿ ತುರ್ತು ಸಭೆ| ಕರ್ನಾಟಕದಲ್ಲಿ ಮುಂದಿನ ವಾರದಿಂದ ನೈಟ್ ಕರ್ಪ್ಯೂ? Read More »

ಪೊಲೀಸ್ ನೇಮಕಾತಿ| ಮಂಗಳಮುಖಿಯರಿಗೂ ಅವಕಾಶ ನೀಡಿದ ಇಲಾಖೆ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ತೃತೀಯ ಲಿಂಗಿಗಳೂ ಕೆಲಸ ಮಾಡಬಹುದು! ಇಲಾಖೆಯ ಪ್ರತಿ ವಿಭಾಗದಲ್ಲಿಯೂ ಮಂಗಳಮುಖಿಯರಿಗೆ ಶೇ.1 ಮೀಸಲಾತಿ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ತೃತೀಯ ಲಿಂಗಿಗಳ ಬಹುದಿನದ ಕನಸು ನನಸಾಗುತ್ತಿದ್ದು, ಕರ್ನಾಟಕದಲ್ಲಿ ಇವರಿಗೀಗ ಸುವರ್ಣ ಅವಕಾಶ ಸಿಕ್ಕಿದೆ. ಇದೇ ಮೊದಲ ಬಾರಿಗೆ ಲೈಂಗಿಕ ಅಲ್ಪಸಂಖ್ಯಾತರಿಗೆ ಪೊಲೀಸ್​ ಕೆಲಸಕ್ಕೆ ಅರ್ಜಿ ಸಲ್ಲಿಸುವಂತೆ ಕರ್ನಾಟಕ ಪೊಲೀಸ್ ಇಲಾಖೆ ಆಹ್ವಾನಿಸಿದೆ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಡಿ.20ರಿಂದ 2022ರ ಜನವರಿ 18ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆ. ಮಾಹಿತಿಕೆ ಇಲಾಖಾ

ಪೊಲೀಸ್ ನೇಮಕಾತಿ| ಮಂಗಳಮುಖಿಯರಿಗೂ ಅವಕಾಶ ನೀಡಿದ ಇಲಾಖೆ Read More »