ರಾಜ್ಯ

ದೇಶದಲ್ಲಿ ರೂಪಾಂತರಿ ಒಮಿಕ್ರಾನ್ ವೈರಸ್ ಪತ್ತೆ| ಕರ್ನಾಟಕದ ಇಬ್ಬರಲ್ಲಿ ಸೋಂಕು ದೃಢ|

ನವದೆಹಲಿ: ದೇಶದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದ ಕೊರೊನಾ ಹೊಸ ರೂಪಾಂತರಿ ವೈರಸ್ ‘ಒಮಿಕ್ರಾನ್’ ರಾಜ್ಯದಲ್ಲಿ ಇಬ್ಬರಲ್ಲಿ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ದೃಢಪಡಿಸಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಈ ಮಾಹಿತಿ ನೀಡಿದ್ದು, ಭಾರತದಲ್ಲಿಯೇ ಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಆಫ್ರಿಕಾದಿಂದ ಬಂದಿದ್ದ ಇಬ್ಬರಲ್ಲಿ ಹೊಸ ರೂಪಾಂತರಿ ತಳಿ ಪತ್ತೆಯಾಗಿದೆ ಎಂದರು. 66 ವರ್ಷದ ವೃದ್ಧ ಹಾಗೂ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಕರ್ನಾಟಕದ ಮೂಲಕವೇ ಭಾರತಕ್ಕೆ ಒಮಿಕ್ರಾನ್ ಎಂಟ್ರಿಯಾಗಿದ್ದಾಗಿ […]

ದೇಶದಲ್ಲಿ ರೂಪಾಂತರಿ ಒಮಿಕ್ರಾನ್ ವೈರಸ್ ಪತ್ತೆ| ಕರ್ನಾಟಕದ ಇಬ್ಬರಲ್ಲಿ ಸೋಂಕು ದೃಢ| Read More »

ಬೆಂಗಳೂರು: ಹಿರಿಯ ನಟ ಶಿವರಾಂ ಗಂಭೀರ

ಬೆಂಗಳೂರು: ಮೆದುಳಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಹಿರಿಯ ನಟ ಶಿವರಾಂ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಹೊಸಕರೆ ಹಳ್ಳಿಗೆ ಕಾರಿನಲ್ಲಿ ಅವರು ಹೋಗಿದ್ದ ವೇಳೆ, ಈ ಘಟನೆ ಸಂಭವಿಸಿದೆ ಅನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಮೂಲಗಳ ಮಾಹಿತಿ ಪ್ರಕಾರ ಬಿದ್ದು ತಲೆಗೆ ತೀವ್ರವಾದ ಪೆಟ್ಟಾಗಿದೆ ಎಂದು ಹೇಳಲಾಗಿದೆ. 84 ವರ್ಷದ ಹಿರಿಯ ನಟ ಶಿವರಾಮ್​ ಅವರನ್ನು ವಿದ್ಯಾಪೀಠ ಸರ್ಕಲ್ ಬಳಿಯ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಆಸ್ಪತ್ರೆ ಮೂಲಗಳ ಪ್ರಕಾರ

ಬೆಂಗಳೂರು: ಹಿರಿಯ ನಟ ಶಿವರಾಂ ಗಂಭೀರ Read More »

2022 ರ ಸರ್ಕಾರಿ ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದ ಕರ್ನಾಟಕ|

2022ನೇ ಸಾಲಿಗೆ ಸರ್ಕಾರಿ ಸಿಬ್ಬಂದಿಗೆ ಕರ್ನಾಟಕ ಸರ್ಕಾರದಿಂದ ಅಧಿಕೃತ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ. ಕರ್ನಾಟಕ ಸರ್ಕಾರವು ನವೆಂಬರ್ 30ನೇ ತಾರೀಕಿನಂದು 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಲ್ಲ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರಗಳಂದು ಸರ್ಕಾರಿ ಸಿಬ್ಬಂದಿಗೆ ರಜಾ ಇರುತ್ತದೆ. ಅದನ್ನು ಹೊರತುಪಡಿಸಿದಂತೆ ಇರುವ ರಜಾ ದಿನಗಳು ಈ ಕೆಳಗಿನಂತಿವೆ: 15-1-2022: ಶನಿವಾರ- ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ ಹಬ್ಬ26-1-2022: ಬುಧವಾರ-

2022 ರ ಸರ್ಕಾರಿ ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದ ಕರ್ನಾಟಕ| Read More »

‘ಭಯಬೇಡ, ಎಚ್ಚರವಿರಲಿ’ – ಓಮಿಕ್ರಾನ್ ಡೆಲ್ಟಾದಷ್ಟು ಅಪಾಯಕಾರಿ ಅಲ್ಲ| ಸ್ಪಷ್ಟನೆ ನೀಡಿದ ವೈದ್ಯರು|

ನವದೆಹಲಿ : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ವೈರಸ್ ಡೆಲ್ಟಾ ರೂಪಾಂತರಕ್ಕಿಂತಲೂ ಹೆಚ್ಚು ಅಪಾಯಕಾರಿ ಅಲ್ಲ ಎಂದು ಉತ್ತರ ಪ್ರದೇಶ ಕೋವಿಡ್ ಸಲಹಾ ಸಮಿತಿಯ ಅಧ್ಯಕ್ಷ ಡಾ.ದಿಮನ್ ಹೇಳಿದ್ದಾರೆ. ವಿಶ್ವದ ಅನೇಕ ದೇಶಗಳು ಈಗಾಗಲೇ ಓಮಿಕ್ರಾನ್ ಭಯದಿಂದ ನಿರ್ಬಂಧಗಳನ್ನು ಹೇರಲು ತಯಾರಿ ನಡೆಸುತ್ತಿವೆ. ಈ ಸಮಯದಲ್ಲಿ, ಒಮಿಕ್ರಾನ್ ರೂಪಾಂತರದಿಂದ ಸೋಂಕಿಗೆ ಒಳಗಾದ ದಕ್ಷಿಣ ಆಫ್ರಿಕಾದ ವರದಿಗಳನ್ನು ತಾನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇನೆ ಎಂದು ದಿಮಾನ್ ಹೇಳಿದ್ದು, ವರದಿಗಳ ಪ್ರಕಾರ, ಒಮಿಕ್ರಾನ್ ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ಅಪಾಯಕಾರಿಯಲ್ಲ

‘ಭಯಬೇಡ, ಎಚ್ಚರವಿರಲಿ’ – ಓಮಿಕ್ರಾನ್ ಡೆಲ್ಟಾದಷ್ಟು ಅಪಾಯಕಾರಿ ಅಲ್ಲ| ಸ್ಪಷ್ಟನೆ ನೀಡಿದ ವೈದ್ಯರು| Read More »

ಶಾಲಾ ಕಾಲೇಜ್‍ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ: ಸಿಎಂ

ದಾವಣಗೆರೆ: ಓಮಿಕ್ರಾನ್ ವೈರಸ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದ್ದು ಆದರೆ ಶಾಲಾ ಕಾಲೇಜ್‍ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದೆ. ಹೊರ ದೇಶಗಳಿಂದ ಬಂದವರನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಈಗಾಗಲೇ ಕೇರಳದಿಂದ ಪ್ರತಿಯೊಬ್ಬರನ್ನ ಕೋವಿಡ್ ಟೆಸ್ಟ ಮಾಡಲಾಗುತ್ತಿದೆ. ಲಾಕ್‍ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ. ನಾವು ಈಗ ಮುನ್ನೆಚ್ಚರಿಕೆ

ಶಾಲಾ ಕಾಲೇಜ್‍ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ: ಸಿಎಂ Read More »

ಲೋಕಸಭೆಯಲ್ಲಿ ಕೃಷಿ ಕಾನೂನು ಮಸೂದೆ ರದ್ದು ಚರ್ಚೆಯಿಲ್ಲದೇ ಅಂಗೀಕಾರ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಮಂಡನೆ ಮಾಡಿದ ಸರ್ಕಾರ ಯಾವುದೇ ಚರ್ಚೆ ನಡೆಸದೆ ಅಂಗೀಕಾರ ಮಾಡಿದೆ. ವಿರೋಧ ಪಕ್ಷಗಳು ಕೃಷಿ ಕಾಯ್ದೆಗಳ ಅಪಾಯಗಳು ಬಗ್ಗೆ ಚರ್ಚೆ ಮಾಡಲು ಬಯಸಿದ್ದರು. ಅದಕ್ಕಾಗಿ ಪ್ರತಿಭಟನೆ ನಡೆಸಿದರು. ಅದರಿಂದ ಒಂದು ಗಂಟೆಗೂ ಹೆಚ್ಚು ಕಾಲ ಅಧಿವೇಶನವನ್ನು ಮುಂದೂಡಲಾಗಿತ್ತು. ಮಸೂದೆ ಕುರಿತು ಅವಕಾಶ ನೀಡದ ಸ್ಪೀಕರ್ ಓಂ ಬಿರ್ಲಾರವರು ಲೋಕಸಭೆಯಲ್ಲಿ ಅಂಗೀಕರಿಸಿದ್ದಾರೆ. ರಾಜ್ಯಸಭೆಯ ಅಧಿವೇಶನದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡೀಸ್‌ರವರಿಗೆ ಶ್ರಧ್ಧಾಂಜಲಿ

ಲೋಕಸಭೆಯಲ್ಲಿ ಕೃಷಿ ಕಾನೂನು ಮಸೂದೆ ರದ್ದು ಚರ್ಚೆಯಿಲ್ಲದೇ ಅಂಗೀಕಾರ Read More »

ಲಾಕ್ ಡೌನ್ ಕುರಿತು ಸುಳ್ಳುಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ- ಸಚಿವ ಡಾ| ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಬಗ್ಗೆ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ, ಈ ಬಗ್ಗೆ ಜನತೆ ಗಾಬರಿಪಡುವ ಅಗತ್ಯವಿಲ್ಲ , ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು, ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಕೋವಿಡ್ ರೂಪಾಂತರಿತ ಹೊಸ ತಳಿ ಒಮಿಕ್ರಾನ್ ವಿಚಾರವನ್ನು ಮುಂದಿಟ್ಟು ಲಾಕ್ ಡೌನ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗೊಂದಲಮಯ, ತಪ್ಪು

ಲಾಕ್ ಡೌನ್ ಕುರಿತು ಸುಳ್ಳುಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ- ಸಚಿವ ಡಾ| ಸುಧಾಕರ್ Read More »

ಓಮಿಕ್ರಾನ್ ಇಫೆಕ್ಟ್| ಶೀಘ್ರದಲ್ಲೇ ಮತ್ತಷ್ಟು ಇಳಿಕೆಯಾಗಲಿದೆ ಇಂಧನ‌ ದರ|

ಡಿಜಿಟಲ್ ಡೆಸ್ಕ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ರಿಲೀಫ್ ಸಿಗುವ ನಿರೀಕ್ಷೆಯಿದೆ. ಓಮಿಕ್ರಾನ್ ಪರಿಣಾಮ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 5 ರೂ.ವರೆಗೆ ಇಳಿಕೆಯಾಗಬಹುದು ಎನ್ನಲಾಗಿದೆ. ಜಾಗತಿಕ ಪರಿಸ್ಥಿತಿಯಿಂದಾಗಿ ಕಚ್ಚಾ ತೈಲದ ಬೆಲೆಯಲ್ಲಿ ದೊಡ್ಡ ಕುಸಿತದ ನಂತರ ಇಂಧನ ತಜ್ಞರು ಈ ಅಂದಾಜುಗಳನ್ನು ಮಾಡಿದ್ದಾರೆ. ಹೀಗಾಗಿ ಬೆಲೆ ಏರಿಕೆ ಬಿಸಿಯಲ್ಲಿರುವ ಗ್ರಾಹಕರಿಗೆ ಮತ್ತಷ್ಟು ಲಾಭ ದೊರಕುವ ಸಾಧ್ಯತೆ ಇದೆ. ಈ ನಡುವೆ ಕೊರೊನಾ ವೈರಸ್‌ನ ಹೊಸ ರೂಪಾಂತರವಾದ ಒಮಿಕ್ರಾನ್ ರೂಪಾಂತರದ ತಳಿ

ಓಮಿಕ್ರಾನ್ ಇಫೆಕ್ಟ್| ಶೀಘ್ರದಲ್ಲೇ ಮತ್ತಷ್ಟು ಇಳಿಕೆಯಾಗಲಿದೆ ಇಂಧನ‌ ದರ| Read More »

ಕೊರೊನಾ ಹೆಚ್ಚಳ ಹಿನ್ನಲೆ| ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಬ್ರೇಕ್|

ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್‌ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್‌ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ನಂತರ ಕರ್ನಾಟಕ ಸರ್ಕಾರವು ತನ್ನ ಸಲಹೆಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಸಮ್ಮೇಳನಗಳು, ವಿಚಾರಗೋಷ್ಠಿಗಳು, ಶೈಕ್ಷಣಿಕ ಕಾರ್ಯಕ್ರಮಗಳು ಇತ್ಯಾದಿಗಳನ್ನು ಎರಡು ತಿಂಗಳ

ಕೊರೊನಾ ಹೆಚ್ಚಳ ಹಿನ್ನಲೆ| ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಬ್ರೇಕ್| Read More »

ಒಮಿಕ್ರಾನ್ ಸೋಂಕಿನ ರೋಗ ಲಕ್ಷಣಗಳೇನು ಗೊತ್ತಾ..?

ಕೊರೊನಾ ವೈರಸ್ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಹೊಸ ಹೊಸ ರೂಪಾಂತರಗಳು ಆತಂಕಕ್ಕೆ ಕಾರಣವಾಗ್ತಿದೆ. ಡೆಲ್ಟಾ ವೈರಸ್ ಮೂಲಕ ಕೊರೊನಾ ಎರಡನೇ ಅಲೆ ಸಾಕಷ್ಟು ವಿನಾಶಕ್ಕೆ ಕಾರಣವಾಗಿತ್ತು, ಈಗ ಒಮಿಕ್ರಾನ್ ಮತ್ತೊಂದು ಅನಾಹುತಕ್ಕೆ ಮುನ್ನುಡಿ ಬರೆಯುತ್ತಿದೆ. ಒಮಿಕ್ರಾನ್ ರೂಪಾಂತರದ ಮೊದಲ ಪ್ರಕರಣ ದಕ್ಷಿಣ ಆಫ್ರಿಕಾದಲ್ಲಿ ವರದಿಯಾಗಿದೆ. ಹಾಂಕಾಂಗ್ ಮತ್ತು ಬೆಲ್ಜಿಯಂನಲ್ಲಿ ಇದೇ ರೀತಿಯ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಸಂಸ್ಥೆ ಇದ್ರ ಬಗ್ಗೆ ಎಚ್ಚರಿಕೆ ನೀಡಿದೆ. ಈ ರೂಪಾಂತರವು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತದೆ. ಈಗಾಗಲೇ ಚೇತರಿಸಿಕೊಂಡಿರುವ ಕೊರೊನಾ ರೋಗಿಗಳಲ್ಲಿ ಮರುಸೋಂಕಿನ

ಒಮಿಕ್ರಾನ್ ಸೋಂಕಿನ ರೋಗ ಲಕ್ಷಣಗಳೇನು ಗೊತ್ತಾ..? Read More »