ರಾಜ್ಯ

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ ಹೊಸ ಅಲೆ| 8 ಪ್ರಕರಣಗಳು ಪತ್ತೆ

ಸಮಗ್ರ ನ್ಯೂಸ್: ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ 69, ಮಹಾರಾಷ್ಟ್ರ 44, ತಮಿಳುನಾಡು 34, ಗುಜರಾತ್, […]

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ ಹೊಸ ಅಲೆ| 8 ಪ್ರಕರಣಗಳು ಪತ್ತೆ Read More »

ಬೆಳ್ತಂಗಡಿ: ಆಕಾಂಕ್ಷ ಆತ್ಮಹತ್ಯೆ ಪ್ರಕರಣ| ಆರೋಪಿ ಬಿಜಿಲ್ ಮ್ಯಾಥ್ಯೂ ಬಂಧನ

ಸಮಗ್ರ ನ್ಯೂಸ್: ಆಕಾಂಕ್ಷ ಎಸ್‌. ನಾಯರ್ ಅವರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಕೇರಳ ಮೂಲದ ಪ್ರೊಫೆಸರ್ ಬಿಜಿಲ್ ಸಿ. ಮ್ಯಾಥ್ಯೂ ಅವರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆಕಾಂಕ್ಷ ಅವರ ಮೃತದೇಹ ಬುಧವಾರ ಧರ್ಮಸ್ಥಳ ತಲುಪಲಿದ್ದು, ಬೊಳಿಯಾರ್ ನ ಅವರ ಮನೆಯ ಬಳಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಿದ ಸಿವಿಲ್ ಸರ್ಕಾರಿ ಆಸ್ಪತ್ರೆ ವೈದ್ಯರು, ಶವವನ್ನು ಮನೆಯವರಿಗೆ ಹಸ್ತಾಂತರಿಸಿದ್ದಾರೆ. ದೆಹಲಿ

ಬೆಳ್ತಂಗಡಿ: ಆಕಾಂಕ್ಷ ಆತ್ಮಹತ್ಯೆ ಪ್ರಕರಣ| ಆರೋಪಿ ಬಿಜಿಲ್ ಮ್ಯಾಥ್ಯೂ ಬಂಧನ Read More »

ಕರಾವಳಿಯಲ್ಲಿ ಜೂ.1ರಿಂದ ಎರಡು ತಿಂಗಳು ಸಮುದ್ರ ಮೀನುಗಾರಿಕೆ ನಿಷೇಧ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ತೀರದಲ್ಲಿ ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ರೀತಿಯ ಯಾಂತ್ರೀಕೃತ ದೋಣಿಗಳ ಮೂಲಕ ಹಾಗೂ 10 ಹಾರ್ಸ್ ಪವರ್ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ನಡೆಸುವ ಮೀನುಗಾರಿಕಾ ಚಟುವಟಿಕೆಯನ್ನು ಜೂನ್‌ 1ರಿಂದ ಜುಲೈ 31ರವರೆಗೆ ನಿಷೇಧಿಸಲಾಗಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರ್ ಇಂಜಿನ್ ಹಾಗೂ ನಾಡದೋಣಿಗಳ ಮೂಲಕ ಮೀನುಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಮೀನುಗಾರಿಕೆ ನಿಷೇಧಿಸಿರುವ ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ

ಕರಾವಳಿಯಲ್ಲಿ ಜೂ.1ರಿಂದ ಎರಡು ತಿಂಗಳು ಸಮುದ್ರ ಮೀನುಗಾರಿಕೆ ನಿಷೇಧ Read More »

ಚುನಾವಣಾ ವೇಳೆ ಕೊಟ್ಟಿದ್ದ ಭರವಸೆಗಳನ್ನು ಎರಡು ವರ್ಷದಲ್ಲಿ ಈಡೇರಿಸಿದ್ದೇವೆ – ಸಿಎಂ

ಸಮಗ್ರ ನ್ಯೂಸ್: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಹೊಸದಾದ 30

ಚುನಾವಣಾ ವೇಳೆ ಕೊಟ್ಟಿದ್ದ ಭರವಸೆಗಳನ್ನು ಎರಡು ವರ್ಷದಲ್ಲಿ ಈಡೇರಿಸಿದ್ದೇವೆ – ಸಿಎಂ Read More »

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ| ನಟಿ ರನ್ಯಾ ರಾವ್ ಗೆ ಜಾಮೀನು

ಸಮಗ್ರ ನ್ಯೂಸ್: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ನಟಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದುಬೈನಿಂದ 12 ಕೋಟಿ ಮೌಲ್ಯದ 14 ಕೆ.ಜಿ ಚಿನ್ನ ಕಳ್ಳ ಸಾಗಣೆ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳಿಂದ ಅರಸ್ಟ್ ಆಗಿದ್ದ ನಟಿ ರನ್ಯಾರಾವ್‌ ಸೇರಿ ಮೂವರು ಆರೋಪಿಗಳಿಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮಾರ್ಚ್ 3ರಂದು ಬೆಂಗಳೂರಿಗೆ ಆಗಮಿಸಿದ್ದ ರನ್ಯಾರಾವ್​ರನ್ನು ಕಂದಾಯ ಗುಪ್ತಚರ ಅಧಿಕಾರಿಗಳು (ಡಿಆರ್‌ಐ)

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ| ನಟಿ ರನ್ಯಾ ರಾವ್ ಗೆ ಜಾಮೀನು Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ವಿಚಾರಣೆ ಮುಗಿಸಿ ಮರಳುವ ವೇಳೆ ದರ್ಶನ್ ನ ಹೊಸ ನಂಬರ್ ಕೇಳಿ ಪಡಕೊಂಡ ಪವಿತ್ರಾ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 16 ಜನ ಆರೋಪಿಗಳು ಕೋರ್ಟ್‌ಗೆ ಹಾಜರಾದರು. ಈ ವೇಳೆ ಕೋರ್ಟ್ ವಿಚಾರಣೆ ಮುಗಿಯುವವರೆಗೆ ಗಪ್ ಚುಪ್ ಆಗಿದ್ದ ದರ್ಶನ್ ಮತ್ತು ಪವಿತ್ರಾ ಗೌಡ ಅವರು, ಕೊನೆಗೆ ವಿಚಾರಣೆ ಮುಗಿಸಿ ಹೊರಗೆ ಹೋಗುವಾಗ ನಟಿ ಪವಿತ್ರಾ ಕೈ ಹಿಡಿದು ಕೇಳಿದ್ದಕ್ಕೆ ತನ್ನ ಹೊಸ ನಂಬರ್ ಕೊಟ್ಟಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ 17 ಜನರನ್ನು

ರೇಣುಕಾಸ್ವಾಮಿ ಕೊಲೆ ಪ್ರಕರಣ| ವಿಚಾರಣೆ ಮುಗಿಸಿ ಮರಳುವ ವೇಳೆ ದರ್ಶನ್ ನ ಹೊಸ ನಂಬರ್ ಕೇಳಿ ಪಡಕೊಂಡ ಪವಿತ್ರಾ Read More »

ನಾಳೆ(ಮೇ.21) ಮದ್ಯದಂಗಡಿ ಬಂದ್

ಸಮಗ್ರ ನ್ಯೂಸ್: ಅಬಕಾರಿ ಸುಂಕ ಹಾಗೂ ಪರವಾನಗಿ ಶುಲ್ಕ ಹೆಚ್ಚಳಕ್ಕೆ ಮದ್ಯದಂಗಡಿ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಶುಲ್ಕ ಹೆಚ್ಚಿಸಿರುವ ಸರ್ಕಾರದ ಕ್ರಮ ಖಂಡಿಸಿ ರಾಜ್ಯದ ಸುಮಾರು 5000 ಮದ್ಯದಂಗಡಿಗಳ ಮಾಲೀಕರು ಮೇ 21 ರಂದು ಮದ್ಯದಂಗಡಿ ವ್ಯಾಪಾರ, ಡಿಪೊಗಳಿಂದ ಮದ್ಯ ಖರೀದಿ ಬಂದ್ ಮಾಡಲು ನಿರ್ಧರಿಸಿದ್ದಾರೆ. ಮದ್ಯದಂಗಡಿ ಮಾರಾಟ ಸ್ಥಗಿತಕ್ಕೂ ಮುನ್ನ ಅಂದರೆ ಮೇ 20 ರಂದು ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ. ಮೇ 15 ರಂದು ರಾಜ್ಯ ಸರ್ಕಾರವು ದೇಶಿಯ ಮದ್ಯ (ಐಎಂಎಲ್‌) ಹಾಗೂ ಬಿಯರ್

ನಾಳೆ(ಮೇ.21) ಮದ್ಯದಂಗಡಿ ಬಂದ್ Read More »

ಭಾರೀ ಮಳೆಯಾಗುವ ಸಂಭವ| ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದ ವಿವಿಧೆಡೆ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಆರು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’, ನಾಲ್ಕು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್‌’ ಘೋಷಿಸಿದೆ. ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಹಾವೇರಿ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ

ಭಾರೀ ಮಳೆಯಾಗುವ ಸಂಭವ| ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ Read More »

ಕರಾವಳಿಯಾದ್ಯಂತ ಭಾರೀ ಮಳೆ| ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆಯು 20, 21 ರಂದು ರೆಡ್ ಅಲರ್ಟ್, ಮೇ 22 ರಿಂದ 25 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ವೇಳೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಿಡಿಲು ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಕರಾವಳಿಯಾದ್ಯಂತ ಭಾರೀ ಮಳೆ| ರೆಡ್ ಅಲರ್ಟ್ ಘೋಷಣೆ Read More »

ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ನಾವೆಲ್ಲಿ ಹೇಳಿದೀವಿ? ಉಲ್ಟಾ ಹೊಡೆದ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ನಾವು ಎಲ್ಲಿಯೂ ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳೂ ಕೊಡ್ತೀವಿ ಅಂತ ಹೇಳಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರಿಗೆ ಗೃಹ ಲಕ್ಷ್ಮೀ ಹಣ ಯಾವಾಗ ಬರುತ್ತೆ ಎಂಬುದಾಗಿ ಪತ್ರಕರ್ತರೊಬ್ಬರು ಪ್ರಶ್ನಿಸಿದರು.ಆಗ ಮಾತನಾಡಿದ ಡಿಸಿಎಂ ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು. ನಾವು ದುಡ್ಡು ಕೊಡ್ತಾ ಇರಬೇಕು ಎಂದರು.

ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ನಾವೆಲ್ಲಿ ಹೇಳಿದೀವಿ? ಉಲ್ಟಾ ಹೊಡೆದ ಡಿಸಿಎಂ ಡಿ.ಕೆ ಶಿವಕುಮಾರ್ Read More »